Homeಕರ್ನಾಟಕಶೀಘ್ರದಲ್ಲೇ ರಾಜ್ಯಕ್ಕೆ ಅಮಿತ್‌ ಶಾ ಭೇಟಿ: BJP ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕುತ್ತು, ಸಿಎಂ ಬದಲಾವಣೆ ಸಾಧ್ಯತೆ?

ಶೀಘ್ರದಲ್ಲೇ ರಾಜ್ಯಕ್ಕೆ ಅಮಿತ್‌ ಶಾ ಭೇಟಿ: BJP ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕುತ್ತು, ಸಿಎಂ ಬದಲಾವಣೆ ಸಾಧ್ಯತೆ?

- Advertisement -
- Advertisement -

2023 ರಲ್ಲಿ ನಡೆಯುವ ರಾಜ್ಯ ವಿಧಾನಸಭಾ ಚುನಾವಣೆಯ ಮೇಲೆ ಕಣ್ಣಿಟ್ಟಿರುವ ಬಿಜೆಪಿ ಸದ್ಯದಲ್ಲೇ ಸಚಿವ ಸಂಪುಟ ಪುನರ್‍ರಚನೆಗೆ ಮುಂದಾಗಿದೆ ಎಂದು ಹೇಳಲಾಗಿದೆ. ಇದರ ಜೊತೆಜೊತಗೆ ಮುಖ್ಯಮಂತ್ರಿ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷರ ಬದಲಾವಣೆಯ ಬಗ್ಗೆಗಿನ ಸುದ್ದಿಗಳು ಕೂಡಾ ಬಿಜೆಪಿ ವಲಯದಲ್ಲಿ ಹರಿದಾಡುತ್ತಿದೆ. ಹೊಸ ಸಚಿವ ಸಂಪುಟದಲ್ಲಿ 10ಕ್ಕೂ ಹೆಚ್ಚು ಹೊಸ ಮತ್ತು ಯುವ ಮುಖಗಳಿಗೆ ಅವಕಾಶ ಕಲ್ಪಿಸಲು ಚಿಂತಿಸಲಾಗುತ್ತಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಡೆಕ್ಕನ್‌ ಹೆರಾಲ್ಡ್‌ ವರದಿ ಮಡಿದೆ. ಬಿಜೆಪಿಯು ಇದೇ ತಂತ್ರವನ್ನು ಗುಜರಾತ್ ಮತ್ತು ಉತ್ತರ ಪ್ರದೇಶದಲ್ಲಿ ಅನುಸರಿಸಿತ್ತು.

ಮೂಲಗಳ ಪ್ರಕಾರ, ಈ ವಾರದ 8-9 ಕ್ಕೆ ಗೃಹ ಸಚಿವ ಅಮಿತ್‌ ಶಾ ರಾಜ್ಯಕ್ಕೆ ಭೇಟಿ ನೀಡುವ ಬಗ್ಗೆ ನಿಗದಿಯಾಗಿತ್ತು. ಆದರೆ ಇದೀಗ ಅದು ರದ್ದಾಗಿದ್ದು, ಜನವರಿ 18-19 ರ ವೇಳೆಗೆ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಈ ಭೇಟಿಯಲ್ಲಿ ಪ್ರಮುಖ ಮೂರು ವಿಚಾರಗಳ ಬಗ್ಗೆ ಅವರು ಸಭೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ:ದ್ವೇಷ ಭಾಷಣ: ವಿವಾದಿತ ಕಾಳಿಚರಣ್ ಸ್ವಾಮಿಯನ್ನು ವಶಕ್ಕೆ ಪಡೆದ ಮಹಾರಾಷ್ಟ್ರ ಪೊಲೀಸರು

“ಅಮಿತ್‌ ಶಾ ಅವರ ಸಭೆಯಲ್ಲಿ ಪ್ರಮುಖ ಮೂರು ವಿಚಾರಗಳ ಬಗ್ಗೆ ಚರ್ಚೆ ನಡೆಯಲಿದೆ. ಮೊದಲನೆಯದಾಗಿ ಸಂಪುಟ ಪುನರ್‍ರಚನೆ, ಎರಡನೆಯದ್ದಾಗಿ ಮುಖ್ಯಮಂತ್ರಿ ಬದಲಾವಣೆ, ಮೂರನೆಯದ್ದಾಗಿ ರಾಜ್ಯ ಬಿಜೆಪಿ ಅಧ್ಯಕ್ಷರ ಬದಲಾವಣೆ. ಈ ಸಭೆಯಲ್ಲಿ ಸಂಪುಟ ಪುನರ್‍ರಚನೆ ಬಗ್ಗೆ ಒಪ್ಪಿಗೆ ಸಿಕ್ಕರೆ ಮುಖ್ಯಮಂತ್ರಿ ಬದಲಾವಣೆ ಆಗುವುದಿಲ್ಲ. ಇಲ್ಲವೆಂದರೆ ಮುಖ್ಯಮಂತ್ರಿ ಬಲದಲಾವಣೆ ಸಾಧ್ಯತೆ ಇದೆ” ಎಂದು ಮೂಲವೊಂದು ನಾನುಗೌರಿ.ಕಾಂಗೆ ಹೇಳಿದೆ.

ಒಟ್ಟಿನಲ್ಲಿ ಬಿಜೆಪಿಯ ಎಲ್ಲಾ ರಾಜಕೀಯ ಬದಲಾವಣೆಗಳು ಸಂಕ್ರಾಂತಿ ಹಬ್ಬದ ನಂತರ ನಿರೀಕ್ಷಿಸಲಾಗಿದೆ. ಒಂದು ವೇಳೆ ಸಚಿವ ಸಂಪುಟ ಪುನರ್‍ರಚನೆ ನಡೆದರೆ 2023 ರ ಚುನಾವಣೆಯವರೆಗೆ ಬೊಮ್ಮಾಯಿ ಅವರ ಸ್ಥಾನ ಭದ್ರವಾಗಿ ಇರಲಿದೆ ಎಂದು ಮೂಲಗಳು ಹೇಳುತ್ತವೆ. ರಾಜ್ಯದಲ್ಲಿ ಇತ್ತೀಚೆಗೆ ನಡೆದ ಸ್ಥಳೀಯ ಸಂಸ್ಥೆ ಚುನಾವಣೆ ಮತ್ತು ಪರಿಷತ್‌ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನಡೆ ಆಗಿರುವ ಹಿನ್ನಲೆಯಲ್ಲಿ ಈ ಎಲ್ಲಾ ಬೆಳವಣಿಗೆ ನಡೆಯುತ್ತಿದೆ ಎಂದು ಹೇಳಲಾಗಿದೆ.

ರಾಜ್ಯದಲ್ಲಿ ಪಕ್ಷದ ಸಂಘಟನೆ ಬಗ್ಗೆ ನಿಷ್ಕ್ರಿಯವಾಗಿರುವ ಸಚಿವರನ್ನು ವಜಾಗೊಳಿಸಲು ಬಿಜೆಪಿ ಕೇಂದ್ರ ನಾಯಕತ್ವ ಮುಂದಾಗಿದೆ. ಸಿಎಂ ವಿರುದ್ಧ ಇರುವ ಕೆಲವು ಹಿರಿಯ ಸಚಿವರನ್ನೂ ಸಂಪುಟದಿಂದ ಕೈಬಿಡುವ ಸಾಧ್ಯತೆ ಇದೆ ಎಂದು ಡೆಕ್ಕನ್‌ ಹೆರಾಲ್ಡ್‌ ಹೇಳಿದೆ.

ಇದನ್ನೂ ಓದಿ:ವೀಕೆಂಡ್‌ ಕರ್ಫ್ಯೂ: ಹೊಸ ಕೊರೊನಾ ಮಾರ್ಗಸೂಚಿಯಲ್ಲಿ ಏನೇನಿದೆ?

ಇತ್ತೀಚೆಗೆ ನಡೆದ ಬಿಜೆಪಿಯ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲೂ ಒಬ್ಬ ಹಿರಿಯ ಸಚಿವನಿಗೆ ಎಚ್ಚರಿಕೆ ನೀಡಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಬೊಮ್ಮಾಯಿ ಅವರೇ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅವರಿಗೆ ದೂರು ನೀಡಿದ್ದರು. ಇಷ್ಟೇ ಅಲ್ಲದೆ ವಿರೋಧ ಪಕ್ಷದ ನಾಯಕರೊಂದಿಗೆ ‘ಹೊಂದಾಣಿಕೆ’ ಇರುವ ಮಂತ್ರಿಗಳ ಬಗ್ಗೆ ಕೂಡಾ ಕೇಂದ್ರ ನಾಯಕತ್ವವು ಅತೃಪ್ತಿಯಲ್ಲಿದೆ ಎಂದು ಮೂಲಗಳು ಹೇಳುತ್ತವೆ ಎಂದು DH ವರದಿ ಮಾಡಿದೆ.

“ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಕೊನೆವರೆಗೂ ಯಾರೂ ಬಿಟ್ಟುಕೊಡುವುದಿಲ್ಲ. ಯಾಕೆಂದರೆ ಒಂದು ವೇಳೆ ಅದು ಬಹಿರಂಗವಾದರೆ ಆಡಳಿತ ಯಂತ್ರ ಕುಸಿದು ಬಿದ್ದು, ಮುಖ್ಯಮಂತ್ರಿಯ ಅಧಿಕಾರಕ್ಕೆ ಮನ್ನಣೆ ಸಿಗುವುದಿಲ್ಲ, ಹೀಗಾಗಿ ಕೊನೆವರೆಗೂ ಅದನ್ನು ಬಹಿರಂಗವಾಗಿ ಹೇಳುವುದಿಲ್ಲ. ಕಳೆದ ಬಾರಿ ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸುವಾಗ ಕೂಡಾ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ಕೊನೆವರೆಗೂ ಸಿಎಂ ಬದಲಾವಣೆ ಇಲ್ಲ ಎಂದೇ ಹೇಳಿದ್ದರು. ಆದರೆ ಕೊನೆಗೆ ಸಿಎಂ ಬದಲಾವಣೆ ಆಗಿತ್ತಲ್ಲವೇ” ಎಂದು ನಾನುಗೌರಿ.ಕಾಂ ಜೊತೆ ರಾಜಕೀಯ ವಿಶ್ಲೇಷಕರೊಬ್ಬರು ಹೇಳಿದ್ದಾರೆ.

ಮುಂದಿನ ಚುನಾವಣೆಯಲ್ಲಿ ಪಕ್ಷವು ತನ್ನ ಸ್ಥಾನವನ್ನು ಹೆಚ್ಚಿಸಲು ಉತ್ಸುಕವಾಗಿರುವುದರಿಂದ, ಪ್ರಾದೇಶಿಕ ಅಸಮತೋಲನದ ಬಗ್ಗೆ ಎದ್ದಿರುವ ಆರೋಪಗಳನ್ನು ಪರಿಹರಿಸಲು ಸಂಪುಟ ಪುನರ್‍ರಚನೆಗೆ ಪ್ರಯತ್ನಿಸುತ್ತಿದೆ. ಇದಲ್ಲದೆ, ಸತತ ಚುನಾವಣೆಗಳಲ್ಲಿ ಬಿಜೆಪಿಯನ್ನು ಬೆಂಬಲಿಸಿದ ಸಮುದಾಯಗಳ ಪ್ರತಿನಿಧಿಗಳಿಗೆ ಸಂಪುಟದಲ್ಲಿ ಅವಕಾಶ ಕಲ್ಪಿಸಲಾಗುವುದು ಎಂದು ಮೂಲಗಳನ್ನು ಉಲ್ಲೇಖಿಸಿ DH ವರದಿ ತಿಳಿದೆ.

ಇದನ್ನೂ ಓದಿ:ಕಥುವಾ ಅತ್ಯಾಚಾರ ಪ್ರಕರಣ: ಮತ್ತೊಬ್ಬ ಅಪರಾಧಿ ಬಿಡುಗಡೆ, ಆತಂಕದಲ್ಲಿ ಸಂತ್ರಸ್ತ ಕುಟುಂಬ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...