Homeಕರ್ನಾಟಕಶೀಘ್ರದಲ್ಲೇ ರಾಜ್ಯಕ್ಕೆ ಅಮಿತ್‌ ಶಾ ಭೇಟಿ: BJP ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕುತ್ತು, ಸಿಎಂ ಬದಲಾವಣೆ ಸಾಧ್ಯತೆ?

ಶೀಘ್ರದಲ್ಲೇ ರಾಜ್ಯಕ್ಕೆ ಅಮಿತ್‌ ಶಾ ಭೇಟಿ: BJP ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕುತ್ತು, ಸಿಎಂ ಬದಲಾವಣೆ ಸಾಧ್ಯತೆ?

- Advertisement -
- Advertisement -

2023 ರಲ್ಲಿ ನಡೆಯುವ ರಾಜ್ಯ ವಿಧಾನಸಭಾ ಚುನಾವಣೆಯ ಮೇಲೆ ಕಣ್ಣಿಟ್ಟಿರುವ ಬಿಜೆಪಿ ಸದ್ಯದಲ್ಲೇ ಸಚಿವ ಸಂಪುಟ ಪುನರ್‍ರಚನೆಗೆ ಮುಂದಾಗಿದೆ ಎಂದು ಹೇಳಲಾಗಿದೆ. ಇದರ ಜೊತೆಜೊತಗೆ ಮುಖ್ಯಮಂತ್ರಿ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷರ ಬದಲಾವಣೆಯ ಬಗ್ಗೆಗಿನ ಸುದ್ದಿಗಳು ಕೂಡಾ ಬಿಜೆಪಿ ವಲಯದಲ್ಲಿ ಹರಿದಾಡುತ್ತಿದೆ. ಹೊಸ ಸಚಿವ ಸಂಪುಟದಲ್ಲಿ 10ಕ್ಕೂ ಹೆಚ್ಚು ಹೊಸ ಮತ್ತು ಯುವ ಮುಖಗಳಿಗೆ ಅವಕಾಶ ಕಲ್ಪಿಸಲು ಚಿಂತಿಸಲಾಗುತ್ತಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಡೆಕ್ಕನ್‌ ಹೆರಾಲ್ಡ್‌ ವರದಿ ಮಡಿದೆ. ಬಿಜೆಪಿಯು ಇದೇ ತಂತ್ರವನ್ನು ಗುಜರಾತ್ ಮತ್ತು ಉತ್ತರ ಪ್ರದೇಶದಲ್ಲಿ ಅನುಸರಿಸಿತ್ತು.

ಮೂಲಗಳ ಪ್ರಕಾರ, ಈ ವಾರದ 8-9 ಕ್ಕೆ ಗೃಹ ಸಚಿವ ಅಮಿತ್‌ ಶಾ ರಾಜ್ಯಕ್ಕೆ ಭೇಟಿ ನೀಡುವ ಬಗ್ಗೆ ನಿಗದಿಯಾಗಿತ್ತು. ಆದರೆ ಇದೀಗ ಅದು ರದ್ದಾಗಿದ್ದು, ಜನವರಿ 18-19 ರ ವೇಳೆಗೆ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಈ ಭೇಟಿಯಲ್ಲಿ ಪ್ರಮುಖ ಮೂರು ವಿಚಾರಗಳ ಬಗ್ಗೆ ಅವರು ಸಭೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ:ದ್ವೇಷ ಭಾಷಣ: ವಿವಾದಿತ ಕಾಳಿಚರಣ್ ಸ್ವಾಮಿಯನ್ನು ವಶಕ್ಕೆ ಪಡೆದ ಮಹಾರಾಷ್ಟ್ರ ಪೊಲೀಸರು

“ಅಮಿತ್‌ ಶಾ ಅವರ ಸಭೆಯಲ್ಲಿ ಪ್ರಮುಖ ಮೂರು ವಿಚಾರಗಳ ಬಗ್ಗೆ ಚರ್ಚೆ ನಡೆಯಲಿದೆ. ಮೊದಲನೆಯದಾಗಿ ಸಂಪುಟ ಪುನರ್‍ರಚನೆ, ಎರಡನೆಯದ್ದಾಗಿ ಮುಖ್ಯಮಂತ್ರಿ ಬದಲಾವಣೆ, ಮೂರನೆಯದ್ದಾಗಿ ರಾಜ್ಯ ಬಿಜೆಪಿ ಅಧ್ಯಕ್ಷರ ಬದಲಾವಣೆ. ಈ ಸಭೆಯಲ್ಲಿ ಸಂಪುಟ ಪುನರ್‍ರಚನೆ ಬಗ್ಗೆ ಒಪ್ಪಿಗೆ ಸಿಕ್ಕರೆ ಮುಖ್ಯಮಂತ್ರಿ ಬದಲಾವಣೆ ಆಗುವುದಿಲ್ಲ. ಇಲ್ಲವೆಂದರೆ ಮುಖ್ಯಮಂತ್ರಿ ಬಲದಲಾವಣೆ ಸಾಧ್ಯತೆ ಇದೆ” ಎಂದು ಮೂಲವೊಂದು ನಾನುಗೌರಿ.ಕಾಂಗೆ ಹೇಳಿದೆ.

ಒಟ್ಟಿನಲ್ಲಿ ಬಿಜೆಪಿಯ ಎಲ್ಲಾ ರಾಜಕೀಯ ಬದಲಾವಣೆಗಳು ಸಂಕ್ರಾಂತಿ ಹಬ್ಬದ ನಂತರ ನಿರೀಕ್ಷಿಸಲಾಗಿದೆ. ಒಂದು ವೇಳೆ ಸಚಿವ ಸಂಪುಟ ಪುನರ್‍ರಚನೆ ನಡೆದರೆ 2023 ರ ಚುನಾವಣೆಯವರೆಗೆ ಬೊಮ್ಮಾಯಿ ಅವರ ಸ್ಥಾನ ಭದ್ರವಾಗಿ ಇರಲಿದೆ ಎಂದು ಮೂಲಗಳು ಹೇಳುತ್ತವೆ. ರಾಜ್ಯದಲ್ಲಿ ಇತ್ತೀಚೆಗೆ ನಡೆದ ಸ್ಥಳೀಯ ಸಂಸ್ಥೆ ಚುನಾವಣೆ ಮತ್ತು ಪರಿಷತ್‌ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನಡೆ ಆಗಿರುವ ಹಿನ್ನಲೆಯಲ್ಲಿ ಈ ಎಲ್ಲಾ ಬೆಳವಣಿಗೆ ನಡೆಯುತ್ತಿದೆ ಎಂದು ಹೇಳಲಾಗಿದೆ.

ರಾಜ್ಯದಲ್ಲಿ ಪಕ್ಷದ ಸಂಘಟನೆ ಬಗ್ಗೆ ನಿಷ್ಕ್ರಿಯವಾಗಿರುವ ಸಚಿವರನ್ನು ವಜಾಗೊಳಿಸಲು ಬಿಜೆಪಿ ಕೇಂದ್ರ ನಾಯಕತ್ವ ಮುಂದಾಗಿದೆ. ಸಿಎಂ ವಿರುದ್ಧ ಇರುವ ಕೆಲವು ಹಿರಿಯ ಸಚಿವರನ್ನೂ ಸಂಪುಟದಿಂದ ಕೈಬಿಡುವ ಸಾಧ್ಯತೆ ಇದೆ ಎಂದು ಡೆಕ್ಕನ್‌ ಹೆರಾಲ್ಡ್‌ ಹೇಳಿದೆ.

ಇದನ್ನೂ ಓದಿ:ವೀಕೆಂಡ್‌ ಕರ್ಫ್ಯೂ: ಹೊಸ ಕೊರೊನಾ ಮಾರ್ಗಸೂಚಿಯಲ್ಲಿ ಏನೇನಿದೆ?

ಇತ್ತೀಚೆಗೆ ನಡೆದ ಬಿಜೆಪಿಯ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲೂ ಒಬ್ಬ ಹಿರಿಯ ಸಚಿವನಿಗೆ ಎಚ್ಚರಿಕೆ ನೀಡಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಬೊಮ್ಮಾಯಿ ಅವರೇ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅವರಿಗೆ ದೂರು ನೀಡಿದ್ದರು. ಇಷ್ಟೇ ಅಲ್ಲದೆ ವಿರೋಧ ಪಕ್ಷದ ನಾಯಕರೊಂದಿಗೆ ‘ಹೊಂದಾಣಿಕೆ’ ಇರುವ ಮಂತ್ರಿಗಳ ಬಗ್ಗೆ ಕೂಡಾ ಕೇಂದ್ರ ನಾಯಕತ್ವವು ಅತೃಪ್ತಿಯಲ್ಲಿದೆ ಎಂದು ಮೂಲಗಳು ಹೇಳುತ್ತವೆ ಎಂದು DH ವರದಿ ಮಾಡಿದೆ.

“ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಕೊನೆವರೆಗೂ ಯಾರೂ ಬಿಟ್ಟುಕೊಡುವುದಿಲ್ಲ. ಯಾಕೆಂದರೆ ಒಂದು ವೇಳೆ ಅದು ಬಹಿರಂಗವಾದರೆ ಆಡಳಿತ ಯಂತ್ರ ಕುಸಿದು ಬಿದ್ದು, ಮುಖ್ಯಮಂತ್ರಿಯ ಅಧಿಕಾರಕ್ಕೆ ಮನ್ನಣೆ ಸಿಗುವುದಿಲ್ಲ, ಹೀಗಾಗಿ ಕೊನೆವರೆಗೂ ಅದನ್ನು ಬಹಿರಂಗವಾಗಿ ಹೇಳುವುದಿಲ್ಲ. ಕಳೆದ ಬಾರಿ ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸುವಾಗ ಕೂಡಾ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ಕೊನೆವರೆಗೂ ಸಿಎಂ ಬದಲಾವಣೆ ಇಲ್ಲ ಎಂದೇ ಹೇಳಿದ್ದರು. ಆದರೆ ಕೊನೆಗೆ ಸಿಎಂ ಬದಲಾವಣೆ ಆಗಿತ್ತಲ್ಲವೇ” ಎಂದು ನಾನುಗೌರಿ.ಕಾಂ ಜೊತೆ ರಾಜಕೀಯ ವಿಶ್ಲೇಷಕರೊಬ್ಬರು ಹೇಳಿದ್ದಾರೆ.

ಮುಂದಿನ ಚುನಾವಣೆಯಲ್ಲಿ ಪಕ್ಷವು ತನ್ನ ಸ್ಥಾನವನ್ನು ಹೆಚ್ಚಿಸಲು ಉತ್ಸುಕವಾಗಿರುವುದರಿಂದ, ಪ್ರಾದೇಶಿಕ ಅಸಮತೋಲನದ ಬಗ್ಗೆ ಎದ್ದಿರುವ ಆರೋಪಗಳನ್ನು ಪರಿಹರಿಸಲು ಸಂಪುಟ ಪುನರ್‍ರಚನೆಗೆ ಪ್ರಯತ್ನಿಸುತ್ತಿದೆ. ಇದಲ್ಲದೆ, ಸತತ ಚುನಾವಣೆಗಳಲ್ಲಿ ಬಿಜೆಪಿಯನ್ನು ಬೆಂಬಲಿಸಿದ ಸಮುದಾಯಗಳ ಪ್ರತಿನಿಧಿಗಳಿಗೆ ಸಂಪುಟದಲ್ಲಿ ಅವಕಾಶ ಕಲ್ಪಿಸಲಾಗುವುದು ಎಂದು ಮೂಲಗಳನ್ನು ಉಲ್ಲೇಖಿಸಿ DH ವರದಿ ತಿಳಿದೆ.

ಇದನ್ನೂ ಓದಿ:ಕಥುವಾ ಅತ್ಯಾಚಾರ ಪ್ರಕರಣ: ಮತ್ತೊಬ್ಬ ಅಪರಾಧಿ ಬಿಡುಗಡೆ, ಆತಂಕದಲ್ಲಿ ಸಂತ್ರಸ್ತ ಕುಟುಂಬ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಅಮೇಥಿಯಲ್ಲಿ ‘ಅಬ್ ಕಿ ಬಾರ್ ರಾಬರ್ಟ್ ವಾದ್ರಾ’ ಪೋಸ್ಟರ್; ಪ್ರಿಯಾಂಕಾ ಪತಿ ಸ್ಪರ್ಧೆಗೆ ಹೆಚ್ಚಿದ...

0
2019ರ ಲೋಕಸಭಾ ಚುನಾವಣೆ ಸೋಲಿನ ನಂತರ ರಾಹುಲ್ ಗಾಂಧಿ ತಮ್ಮ ಕ್ಷೇತ್ರವನ್ನು ಅಮೇಥಿಯಿಂದ ಕೇರಳದ ವಯನಾಡಿಗೆ ಸ್ಥಳಾಂತರಿಸಿದ್ದಾರೆ. ಆದರೆ, ಬಿಜೆಪಿ ಹಾಲಿ ಸಂಸದೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುವ ಕಾಂಗ್ರೆಸ್ ಅಭ್ಯರ್ಥಿ ಯಾರು...