Homeಮುಖಪುಟಸರ್ಕಾರದ 40% ಕಮಿಷನ್ ಭ್ರಷ್ಟಾಚಾರಕ್ಕೆ ಅಮಿತ್ ಶಾ ಅಧಿಕೃತ ಒಪ್ಪಿಗೆ: ಸಿದ್ದರಾಮಯ್ಯ ಟೀಕೆ

ಸರ್ಕಾರದ 40% ಕಮಿಷನ್ ಭ್ರಷ್ಟಾಚಾರಕ್ಕೆ ಅಮಿತ್ ಶಾ ಅಧಿಕೃತ ಒಪ್ಪಿಗೆ: ಸಿದ್ದರಾಮಯ್ಯ ಟೀಕೆ

- Advertisement -
- Advertisement -

ರಾಜ್ಯದ 40% ಕಮಿಷನ್ ಭ್ರಷ್ಟಾಚಾರಕ್ಕೆ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್‌ರವರು ಅಧಿಕೃತ ಒಪ್ಪಿಗೆಯ ಮುದ್ರೆಯೊತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, “ಪಿಎಸ್‌ಐ ಹಗರಣದಲ್ಲಿ ಸರ್ಕಾರ, ಮಂತ್ರಿಗಳು ಮತ್ತು ಅಧಿಕಾರಿಗಳು ಭಾಗಿಯಾಗಿದ್ದಾರೆ. ಸುಮಾರು ರೂ. 300 ಕೋಟಿಗೂ ಅಧಿಕ ಭ್ರಷ್ಟಾಚಾರ ನಡೆದಿದೆ. ಆದ್ದರಿಂದ ಸಿಐಡಿ ತನಿಖೆಯಲ್ಲಿ ನ್ಯಾಯ ಸಿಗುವುದಿಲ್ಲ ಹಾಗಾಗಿ ಹೈಕೋರ್ಟ್ ನ ಹಾಲಿ ನ್ಯಾಯಾಧೀಶರ ಮೇಲುಸ್ತುವಾರಿಯಲ್ಲಿ ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು” ಎಂದು ಒತ್ತಾಯಿಸಿದರು.

ಇದು 40% ಕಮಿಷನ್ ಸರ್ಕಾರ ಎಂಬುದು ಜಗಜ್ಜಾಹಿರಾತಾಗಿದೆ. ಸರ್ಕಾರಿ ಕಾಮಗಾರಿಗಳಿಗೆ 40% ಕಮಿಷನ್ ಕೊಡಬೇಕು ಎಂದು ಗುತ್ತಿಗೆದಾರರ ಸಂಘದವರು, ಸ್ವಾಮೀಜಿಗಳು ಹೇಳಿದ್ದಾರೆ. ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರು ಕಮಿಷನ್ ಕಿರುಕುಳಕ್ಕೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಗೋಶಾಲೆಯ ಮೇವು ಖರೀದಿಗೆ, ಬಿಬಿಎಂಪಿ ಕಾಮಗಾರಿಗಳಿಗೂ 40% ಕಮಿಷನ್ ಕೊಡಬೇಕು. ಈ ಸರ್ಕಾರದ ಭ್ರಷ್ಟಾಚಾರಕ್ಕೆ ಕೇಂದ್ರ ಸರ್ಕಾರ ಎಲ್ಲ ರೀತಿಯ ನೆರವು ನೀಡುತ್ತಿದೆ ಎಂದು ಕಿಡಿಕಾರಿದ್ದಾರೆ.

ಮೋದಿಯವರು ಕಳೆದ ಚುನಾವಣೆ ಸಮಯದಲ್ಲಿ ನಮ್ಮ ಸರ್ಕಾರವನ್ನು ಹತ್ತು ಪರ್ಸೆಂಟ್ ಸರ್ಕಾರ ಎಂದು ಆಧಾರ ರಹಿತ ಆರೋಪ ಮಾಡಿದ್ದರು. 7/6/2021 ರಲ್ಲಿ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಕೆಂಪಣ್ಣನವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಾಜ್ಯ ಸರ್ಕಾರದ ಕಮಿಷನ್ ಕಿರುಕುಳದ ಬಗ್ಗೆ ಪತ್ರ ಬರೆದಿದ್ದಾರೆ. ಇದಾಗಿ ಸುಮಾರು ಹತ್ತು ತಿಂಗಳಾದ್ರೂ ಈ ವರೆಗೆ ಮೋದಿ ಅವರು ತನಿಖೆಯನ್ನು ನಡೆಸಿಲ್ಲ, ರಾಜ್ಯ ಸರ್ಕಾರದಿಂದ ವರದಿ ಪಡೆಯುವ ಕೆಲಸವನ್ನು ಮಾಡಿಲ್ಲ. ಈಗ ಪ್ರಧಾನಿಗಳು ಈ ಸರ್ಕಾರಕ್ಕೆ 40% ಕಮಿಷನ್ ಪಡೆಯಲು ಪರವಾನಗಿ ಕೊಟ್ಟಿದ್ದಾರ? “ನ ಖಾವೂಂಗಾ, ನ ಖಾನೇದೂಂಗ” ಎಂದು ಹೇಳಿ ಜನರ ಕಣ್ಣೊರೆಸುತ್ತಾ, ಭ್ರಷ್ಟಾಚಾರಕ್ಕೆ ಪ್ರಧಾನಿಗಳು ಬೆಂಬಲವಾಗಿ ನಿಂತಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿ: ಅಶ್ವತ್ಥ ನಾರಾಯಣ್ ಮಲ್ಲೇಶ್ವರಂನಲ್ಲಿ ಗುಳಂ ನಾರಾಯಣ ಎಂದು ಖ್ಯಾತಿ ಪಡೆದಿದ್ದಾರೆ: ಬಿ.ಕೆ ಹರಿಪ್ರಸಾದ್ ಆರೋಪ

ಪಿಎಸ್‌ಐ ನೇಮಕಾತಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಸರ್ಕಾರವೇ ಒಪ್ಪಿಕೊಂಡು ಪರೀಕ್ಷೆ ರದ್ದು ಮಾಡಿ, ಮರು ಪರೀಕ್ಷೆ ಮಾಡುವುದಾಗಿ ಹೇಳಿದೆ. ಸರ್ಕಾರ ಭಾಗಿಯಾಗದೆ ಇಂಥದ್ದೊಂದು ಭ್ರಷ್ಟಾಚಾರ ಮಾಡಲು ಸಾಧ್ಯವಾಗಲ್ಲ. ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಅಶ್ವಥ್ ನಾರಾಯಣ ಅವರ ಪಾತ್ರವಿರುವುದು ಸ್ಪಷ್ಟವಾಗಿ ಕಾಣುತ್ತಿದೆ. ಪರೀಕ್ಷೆಯಲ್ಲಿ 5 ನೇ ರ್ಯಾಂಕ್ ಬಂದಿರುವ ದರ್ಶನ್ ಗೌಡ ಹಾಗೂ 10ನೇ ರ್ಯಾಂಕ್ ಬಂದಿರುವ ನಾಗೇಶ್ ಗೌಡ ಎಂಬುವವರು ಅಶ್ವಥ್ ನಾರಾಯಣ ಅವರ ಸಂಬಂಧಿಕರು. ಈ ಇಬ್ಬರನ್ನು ವಿಚಾರಣೆಗೆ ಕರೆದು ಬಿಟ್ಟು ಕಳಿಸಿದ್ದಾರೆ. ಉಳಿದವರ ಬಂಧನವಾಗಿದೆ, ಈ ಇಬ್ಬರ ಬಂಧನ ಯಾಕೆ ಆಗಿಲ್ಲ? ಅಶ್ವಥ್ ನಾರಾಯಣ ಅವರ ಮೇಲೆ ಭ್ರಷ್ಟಾಚಾರದ ತೂಗುಗತ್ತಿ ನೇತಾಡುತ್ತಿದೆ. ಕೂಡಲೆ ಅವರನ್ನು ಸಂಪುಟದಿಂದ ವಜಾ ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಭಾಜಪ ಅಂದ್ರೆ ಭ್ರಷ್ಟಾಚಾರ ಜನತಾ ಪಾರ್ಟಿ…. ಇನ್ನೇನು ಹೇಳಲು ಸಾಧ್ಯ…

  2. Ayyo… Rasma Raama… Hindu.. Hindu… Antha helikonde… Janarannu thappu daarigeledu sarkaaravannu darode maadtha ideyalla swami….!…. Yellaru seri kitthogeyabekaagide brastarannu.

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...