Homeಮುಖಪುಟಅಮಿತ್ ಶಾ ಹೇಳಿಕೆ ಬಿಜೆಪಿಯ ಹಳೆಯ ಮನಸ್ಥಿತಿಯ ಪ್ರತಿಬಿಂಬ - ಅಂಬೇಡ್ಕರ್ ಮೊಮ್ಮಗ ಪ್ರಕಾಶ್ ಅಂಬೇಡ್ಕರ್

ಅಮಿತ್ ಶಾ ಹೇಳಿಕೆ ಬಿಜೆಪಿಯ ಹಳೆಯ ಮನಸ್ಥಿತಿಯ ಪ್ರತಿಬಿಂಬ – ಅಂಬೇಡ್ಕರ್ ಮೊಮ್ಮಗ ಪ್ರಕಾಶ್ ಅಂಬೇಡ್ಕರ್

- Advertisement -
- Advertisement -

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಂವಿಧಾನದ ಪಿತಾಮಹನ ಕುರಿತು ನೀಡಿರುವ ಹೇಳಿಕೆಯು ಬಿಜೆಪಿಯ ಅದೇ ಹಳೆಯ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ ಎಂದು ಬಾಬಾಸಾಹೇಬ್ ಅಂಬೇಡ್ಕರ್ ಅವರ ಮೊಮ್ಮಗ ಪ್ರಕಾಶ್ ಅಂಬೇಡ್ಕರ್ ಬುಧವಾರ ಆರೋಪಿಸಿದ್ದಾರೆ. “ಭಾರತದ ಸಂವಿಧಾನದ 75 ವರ್ಷಗಳ ಅದ್ಭುತ ಪಯಣ” ಎಂಬ ಎರಡು ದಿನಗಳ ಚರ್ಚೆಯ ಮುಕ್ತಾಯದಲ್ಲಿ ರಾಜ್ಯಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಈ ವೇಳೆ ಅಮಿತ್ ಶಾ ಅವರು ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ್ದರು. ಅಮಿತ್ ಶಾ ಹೇಳಿಕೆ

ರಾಜ್ಯಸಭೆಯಲ್ಲಿ ಮಾತನಾಡಿದ್ದ ಅಮಿತ್ ಶಾ ಅವರು, “ಅಭಿ ಏಕ್ ಫ್ಯಾಶನ್ ಹೋ ಗಯಾ ಹೈ – ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್. ಇತ್ನಾ ನಾಮ್ ಅಗರ್ ಭಗವಾನ್ ಕಾ ಲೇತೆ ತೋ ಸಾತ್ ಜನ್ಮೋನ್ ತಕ್ ಸ್ವರ್ಗ್ ಮಿಲ್ ಜಾತಾ” (ಈ ಒಂದು ಫ್ಯಾಶನ್ ಆಗಿ ಹೋಗಿದೆ. ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್… ಇಷ್ಟು ಬಾರಿ ಭಗವಂತನ ಹೆಸರನ್ನು ಹೇಳಿದ್ದರೆ, ಏಳು ಜನ್ಮಕ್ಕೂ ಸ್ವರ್ಗ ಸಿಗುತ್ತಿತ್ತು) ಎಂದು ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಬಿಜೆಪಿ ಅಸ್ತಿತ್ವಕ್ಕೆ ಬರುವ ಮೊದಲು, ಅದರ ಪೂರ್ವಜರಾದ ಜನಸಂಘ ಮತ್ತು ಆರೆಸ್ಸೆಸ್ ಸಂವಿಧಾನವನ್ನು ಅಂಗೀಕರಿಸುವಾಗ ಬಾಬಾಸಾಹೇಬ್ ಅವರನ್ನು ವಿರೋಧಿಸಿದ್ದವು” ಎಂದು ವಂಚಿತ್ ಬಹುಜನ ಅಘಾಡಿ ಮುಖ್ಯಸ್ಥ ಪ್ರಕಾಶ್ ಅಂಬೇಡ್ಕರ್ ಪುಣೆಯಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ. ಅಮಿತ್ ಶಾ ಅವರ ಹೇಳಿಕೆಯು ಬಿಜೆಪಿಯ ಅದೇ ಹಳೆಯ ಮನಸ್ಥಿತಿಯನ್ನು ಮುನ್ನೆಲೆಗೆ ತಂದಿದೆ ಎಂದು ಅವರು ಹೇಳಿದ್ದಾರೆ.

ಅವರ ಹೇಳಿಕೆಯಲ್ಲಿ ಹೊಸದೇನೂ ಇಲ್ಲ, ಅವರಿಗೆ ತಮ್ಮ ಹಳೆಯ ಯೋಜನೆಗಳನ್ನು ಕಾರ್ಯಗತಗೊಳಿಸಲು ಸಾಧ್ಯವಾಗುತ್ತಿಲ್ಲ. ಅದು ಕಾಂಗ್ರೆಸ್‌ನಿಂದಾಗಿ ಅಲ್ಲ, ಬದಲಾಗಿ ಬಾಬಾಸಾಹೇಬ್ ಅಂಬೇಡ್ಕರ್ ಅವರ ಕಾರಣದಿಂದ ಅವರಿಗೆ ಅದು ಸಾಧ್ಯವಾಗುತ್ತಿಲ್ಲ ಎಂದು ಪ್ರಕಾಶ್ ಅಂಬೇಡ್ಕರ್ ಹೇಳಿದ್ದಾರೆ. ಅಮಿತ್ ಶಾ ಹೇಳಿಕೆ

ಇದೇ ವೇಳೆ, ಪರ್ಭಾನಿ ನಗರದಲ್ಲಿ ನಡೆದ ಸಂವಿಧಾನದ ಪ್ರತಿಕೃತಿಯನ್ನು ಅವಮಾನಿಸಿದ ಪ್ರಕರಣದ ವೇಳೆ ಭುಗಿಲೆದ್ದ ಹಿಂಸಾಚಾರದಲ್ಲಿ ಬಂಧಿತನಾಗಿ, ನ್ಯಾಯಾಂಗ ಬಂಧನದಲ್ಲಿದ್ದಾಗ ಮರಣ ಹೊಂದಿದ ಸೋಮನಾಥ ಸೂರ್ಯವಂಶಿಯ ಕುಟುಂಬಕ್ಕೆ 1 ಕೋಟಿ ರೂಪಾಯಿ ಪರಿಹಾರ ನೀಡಬೇಕು ಎಂದು ಪ್ರಕಾಶ್ ಅಂಬೇಡ್ಕರ್ ಒತ್ತಾಯಿಸಿದ್ದಾರೆ.

ಈ ನಡುವೆ, ಅಂಬೇಡ್ಕರ್ ಅವರನ್ನು ಅವಮಾನ ಮಾಡಿರುವ ಅಮಿತ್ ಶಾ ಅವರು ತಮ್ಮ ಕೃತ್ಯಕ್ಕೆ ಕ್ಷಮೆಯಾಚಿಸುವಂತೆ ಒತ್ತಾಯಿಸಿ ಇಂಡಿಯಾ ಒಕ್ಕೂಟದ ಹಲವಾರು ಸಂಸದರು ಸಂಸತ್ತಿನ ಆವರಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಅಮಿತ್ ಶಾ ಅವರು ಸಾರ್ವಜನಿಕವಾಗಿ ಮತ್ತು ಸಂಸತ್ತಿನಲ್ಲಿ ಕ್ಷಮೆಯಾಚಿಸಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ.

“ಪರ್ಭಾನಿಯಲ್ಲಿ ನಡೆದ ಹಿಂಸಾಚಾರವು ಗೋದ್ರಾದಂತಹ ಪರಿಸ್ಥಿತಿಯನ್ನು ಸೃಷ್ಟಿಸುವ ಪ್ರಯತ್ನವಾಗಿದೆ” ಎಂದು ಅವರು ಆರೋಪಿಸಿದ್ದಾರೆ. ಈ ಹಿಂಸಾಚಾರವು ಇಬ್ಬರು ಮರಾಠ ನಾಯಕರ ನಡುವಿನ ವಿವಾದದ ಪರಿಣಾಮವಾಗಿದೆ ಎಂದು ಅವರು ಹೇಳಿದ್ದು, ಅಪರಾಧಿಗಳನ್ನು ಬಹಿರಂಗಪಡಿಸಲು ಸತ್ಯಶೋಧನಾ ಸಮಿತಿಯನ್ನು ರಚಿಸುವುದಾಗಿ ಘೋಷಿಸಿದ್ದಾರೆ.

ಲೋಕಸಭೆಯಲ್ಲಿ ಏಕಕಾಲಕ್ಕೆ ಚುನಾವಣೆಗೆ ಕಾರ್ಯವಿಧಾನವನ್ನು ಪರಿಚಯಿಸುವ ಮಸೂದೆಗಳ ಅಂಗೀಕಾರವು ರಾಜಕೀಯ ಪಕ್ಷಗಳ ಅಂತ್ಯವನ್ನು ಅರ್ಥೈಸುತ್ತದೆ ಎಂದು ಅವರು ಹೇಳಿದ್ದಾರೆ. “ಕಾಂಗ್ರೆಸ್‌ಗೆ ಈ ಮಸೂದೆಗಳ ಬಗ್ಗೆ ಗಟ್ಟಿ ನಿಲುವು ತೆಗೆದುಕೊಳ್ಳಲು ಕೇವಲ ಐದರಿಂದ ಆರು ದಿನಗಳು ಮಾತ್ರ ಇವೆ. ನಿಲುವು ತೆಗೆದುಕೊಳ್ಳಲು ವಿಫಲವಾದರೆ ಮತ್ತು ಮಸೂದೆಗಳ ಅಂಗೀಕಾರವಾದರೆ ರಾಜಕೀಯ ಪಕ್ಷಗಳ ಅಂತ್ಯ ಎಂದರ್ಥ. ಶರದ್ ಪವಾರ್ ನೇತೃತ್ವದ ಎನ್‌ಸಿಪಿಯ ನಿಲುವು ಇದರಲ್ಲಿ ನಿರ್ಣಾಯಕವಾಗಿದೆ” ಎಂದು ಪ್ರಕಾಶ್ ಅಂಬೇಡ್ಕರ್ ಹೇಳಿದ್ದಾರೆ.

ಇದನ್ನೂ ಓದಿ: ಅಂಬೇಡ್ಕರ್‌ಗೆ ಅವಮಾನ | ಅಮಿತ್ ಶಾ ವಿರುದ್ಧ ಟಿಎಂಸಿಯಿಂದ ಹಕ್ಕುಚ್ಯುತಿ ನೋಟಿಸ್

ಅಂಬೇಡ್ಕರ್‌ಗೆ ಅವಮಾನ | ಅಮಿತ್ ಶಾ ವಿರುದ್ಧ ಟಿಎಂಸಿಯಿಂದ ಹಕ್ಕುಚ್ಯುತಿ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನಾಚಿಕೆಗೇಡು ಅಂದ್ರೇನು ನಾನು ಹೇಳ್ತೇನೆ’: ಅಮೆರಿಕ ವ್ಯಾಪಾರ ಒಪ್ಪಂದ, ಎಪ್‌ಸ್ಟೀನ್ ಫೈಲ್ಸ್ ಉಲ್ಲೇಖಿಸಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಎಐ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಶರ್ಟ್‌ ಬಿಚ್ಚಿ ಪ್ರತಿಭಟಿಸಿದ್ದನ್ನು 'ಗಲೀಜು, ನಾಚಿಕೆಗೇಡು'ಎಂದಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ವಿಪಕ್ಷ ನಾಯಕ ರಾಹುಲ್ ಗಾಂಧಿ ತಿರುಗೇಟು ನೀಡಿದ್ದಾರೆ. ವಿಡಿಯೋ ಮೂಲಕ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, "ಪ್ರಧಾನಿ...

ಜಾರ್ಖಂಡ್ | ಏರ್ ಆಂಬ್ಯುಲೆನ್ಸ್ ಪತನ : ರೋಗಿ, ವೈದ್ಯ ಸೇರಿ 7 ಮಂದಿ ಸಾವು

ರಾಂಚಿಯಿಂದ ದೆಹಲಿಗೆ ತೆರಳುತ್ತಿದ್ದ ಏರ್ ಆಂಬ್ಯುಲೆನ್ಸ್ ಜಾರ್ಖಂಡ್‌ನ ಛಾತ್ರಾ ಜಿಲ್ಲೆಯಲ್ಲಿ ಸೋಮವಾರ (ಫೆ.24) ಪತನಗೊಂಡಿದ್ದು, ಅದರಲ್ಲಿದ್ದ ಎಲ್ಲಾ ಏಳು ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ರೆಡ್‌ಬರ್ಡ್‌ ಏರ್ವೇಸ್ ಪ್ರೈವೆಟ್ ಲಿಮಿಟೆಡ್ ಎಂಬ ಸಂಸ್ಥೆ ನಿರ್ವಹಣೆ...

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...