Homeಮುಖಪುಟಮುಸ್ಲಿಂ ಮೀಸಲಾತಿ ರದ್ದು ಕುರಿತು ಅಮಿತ್ ಷಾ ಹೇಳಿಕೆ; ಸುಪ್ರೀಂಕೋರ್ಟ್ ಗರಂ

ಮುಸ್ಲಿಂ ಮೀಸಲಾತಿ ರದ್ದು ಕುರಿತು ಅಮಿತ್ ಷಾ ಹೇಳಿಕೆ; ಸುಪ್ರೀಂಕೋರ್ಟ್ ಗರಂ

‘ಮೀಸಲಾತಿ ರದ್ದು ಪ್ರಕರಣ ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆಯಲ್ಲಿದ್ದರೂ ಅಮಿತ್ ಷಾ ಇದರ ಕುರಿತು ಮಾತನಾಡುತ್ತಿದ್ದಾರೆ’

- Advertisement -
- Advertisement -

ಕರ್ನಾಟಕದಲ್ಲಿ ಮುಸ್ಲಿಂ ಒಬಿಸಿ ಮೀಸಲಾತಿ ವಿಷಯದ ಕುರಿತು ಜವಾಬ್ದಾರಿಯುತ ಸ್ಥಾನದಲ್ಲಿರುವವರು ಸಾರ್ವಜನಿಕವಾಗಿ ನೀಡುತ್ತಿರುವ ಅಭಿಪ್ರಾಯಗಳಿಗೆ ಸುಪ್ರೀಂ ಕೋರ್ಟ್ ಮಂಗಳವಾರ ಅಸಮ್ಮತಿ ಸೂಚಿಸಿದೆ. ಮುಸ್ಲಿಂ ಮೀಸಲಾತಿ ರದ್ದು ಪ್ರಕರಣವನ್ನು ನ್ಯಾಯಾಲಯ ಆಲಿಸುತ್ತಿದ್ದು, ತೀರ್ಪು ಬಾಕಿ ಉಳಿದಿದೆ.

ಕರ್ನಾಟಕ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಈ ವಿಷಯದ ಕುರಿತು ನೀಡುತ್ತಿರುವ ಹೇಳಿಕೆಗಳ ಕುರಿತು ಹಿರಿಯ ವಕೀಲ ದುಷ್ಯಂತ್ ದವೆ ಅವರು ನ್ಯಾಯಪೀಠದ ಗಮನ ಸೆಳೆದರು.

ನ್ಯಾಯಮೂರ್ತಿಗಳಾದ ಕೆ.ಎಂ.ಜೋಸೆಫ್, ಬಿ.ವಿ.ನಾಗರತ್ನ ಮತ್ತು ನ್ಯಾಯಮೂರ್ತಿ ಅಹ್ಸಾನುದ್ದೀನ್ ಅಮಾನುಲ್ಲಾ ಅವರನ್ನೊಳಗೊಂಡ ಪೀಠವು, ಇಂತಹ ಸಾರ್ವಜನಿಕ ಹೇಳಿಕೆಗಳ ಬಗ್ಗೆ ಮೌಖಿಕವಾಗಿ ಅಸಮಾಧಾನ ವ್ಯಕ್ತಪಡಿಸಿತು.

ಇತರ ಹಿಂದುಳಿದ ವರ್ಗದಲ್ಲಿ ಮುಸ್ಲಿಮರಿಗೆ ಇದ್ದ 4% ಮೀಸಲಾತಿಯನ್ನು ರದ್ದುಗೊಳಿಸುವ ಕರ್ನಾಟಕ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಅರ್ಜಿದಾರರ ಪರವಾಗಿ ದವೆ ಹಾಜರಿದ್ದಾರೆ.

“ಮುಸ್ಲಿಮರಿಗೆ ಇದ್ದ ಮೀಸಲಾತಿಯನ್ನು ಹಿಂತೆಗೆದುಕೊಳ್ಳಲಾಗಿದೆ ಎಂದು ಗೌರವಾನ್ವಿತ ಗೃಹ ಸಚಿವರನ್ನು ಹೊರತುಪಡಿಸಿ ಬೇರೆ ಯಾರೂ ಹೇಳಿಕೆ ನೀಡುತ್ತಿಲ್ಲ” ಎಂದು ದವೆ ಹೇಳಿದ್ದಾರೆ. ಭಾರತದ ಸಾಲಿಸಿಟರ್ ಜನರಲ್ ಈಗಾಗಲೇ ನ್ಯಾಯಾಲಯದ ಮುಂದೆ ತಮ್ಮ ನಿರ್ಧಾರವನ್ನು ಪ್ರಕಟಿಸಿದ್ದು, ಇದನ್ನು ಸದ್ಯಕ್ಕೆ ಜಾರಿಗೊಳಿಸುವುದಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ನ್ಯಾಯಾಲಯಕ್ಕೆ ನೀಡಿದ ಭರವಸೆಯ ಹೊರತಾಗಿಯೂ ಇಂತಹ ಹೇಳಿಕೆಗಳನ್ನು ನೀಡುವುದು ನ್ಯಾಯಾಂಗ ನಿಂದನೆಯಾಗುತ್ತದೆ ಎಂದು ಹಿರಿಯ ವಕೀಲ ದವೆ ಗಮನ ಸೆಳೆದಿದ್ದಾರೆ. “ಇದು ನ್ಯಾಯಾಂಗ ನಿಂದನೆಯಾಗಿದೆ. ಅವರು (ಅಮಿತ್‌ ಷಾ) ಬಿಜೆಪಿ ಸರ್ಕಾರವನ್ನು ಪ್ರತಿನಿಧಿಸುತ್ತಾರೆ. ಕರ್ನಾಟಕದಲ್ಲಿ ಬಿಜೆಪಿ ಸರ್ಕಾರವಿದೆ” ಎಂದು ದವೆ ತಿಳಿಸಿದ್ದಾರೆ.

ಆಶ್ಚರ್ಯ ವ್ಯಕ್ತಪಡಿಸಿದ ನ್ಯಾಯಮೂರ್ತಿ ನಾಗರತ್ನ ಅವರು, “ನೀವು ಹೇಳುತ್ತಿರುವುದು ನಿಜವಾಗಿದ್ದರೆ, ಈ ವಿಷಯವು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಯಲ್ಲಿರುವಾಗ, ಯಾರಾದರೂ ಅಂತಹ ಹೇಳಿಕೆಗಳನ್ನು ಏಕೆ ನೀಡುತ್ತಿದ್ದಾರೆಂದು ನಾವು ಆಶ್ಚರ್ಯ ಪಡುತ್ತೇವೆ” ಎಂದಿದ್ದಾರೆ. ಅದಕ್ಕೆ ಪ್ರತಿಕ್ರಿಯಿಸಿರುವ ದವೆ, “ನಾವು ಮುಸ್ಲಿಂ ಮೀಸಲಾತಿಯನ್ನು ಹಿಂತೆಗೆದುಕೊಂಡಿದ್ದೇವೆ ಎಂದು ಅವರು ಹೆಮ್ಮೆಯಿಂದ ಹೇಳುತ್ತಿದ್ದಾರೆ” ಎಂದು ತಿಳಿಸಿದ್ದಾರೆ.

ನಂತರ ಮಧ್ಯಪ್ರವೇಶಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, “ಹೇಳಿಕೆಯ ವಿಷಯ ಮತ್ತು ಸಂದರ್ಭದ ಬಗ್ಗೆ ಪೀಠಕ್ಕೆ ತಿಳಿಸಲಾಗಿಲ್ಲ” ಎಂದು ವಾದಿಸಿದ್ದಾರೆ.

ಸಾಲಿಸಿಟರ್ ಜನರಲ್, “ನಾನು ಇಲ್ಲಿ ರಾಜಕೀಯ ಮಾಡಲು ಬಯಸುವುದಿಲ್ಲ. ಅವರು (ದವೆ) ಅಪ್ಲಿಕೇಶನ್ ತೋರಿಸಬಹುದು. ಯಾವ ಹೇಳಿಕೆಯನ್ನು ಆರೋಪಿಸಲಾಗಿದೆ ಎಂದು ನಮಗೆ ತಿಳಿದಿಲ್ಲ” ಎಂದಿದ್ದಾರೆ.

“ಮುಸ್ಲಿಮರಿಗೆ ನೀಡಲಾಗಿರುವ 4% ಮೀಸಲಾತಿ ಅಸಾಂವಿಧಾನಿಕ ಎಂದು ಅಮಿತ್ ಷಾ ಹೇಳಿದ್ದಾರೆ. ಬಿಜೆಪಿ ಅದನ್ನು ತೆಗೆದುಹಾಕಿದೆ ಎಂದು ಪ್ರಚಾರ ಮಾಡುತ್ತಿದ್ದಾರೆ” ಎಂದು ದವೆ ತಿಳಿಸಿದ್ದಾರೆ.

ನ್ಯಾಯಮೂರ್ತಿ ಜೋಸೆಫ್ ಪ್ರತಿಕ್ರಿಯಿಸಿ, “ನ್ಯಾಯಾಲಯದ ವಿಚಾರಣೆಗೆ ಒಳಪಟ್ಟಿದ್ದ ಪಡಿತರ ಆದೇಶವನ್ನು ಸಮರ್ಥಿಸಲು ಪತ್ರಿಕಾಗೋಷ್ಠಿಯನ್ನು ನಡೆಸಿದ್ದಕ್ಕಾಗಿ ಪಶ್ಚಿಮ ಬಂಗಾಳ ಸಿಎಂ ಅವರನ್ನು ನ್ಯಾಯಾಂಗ ನಿಂದನೆ ಅಡಿಯಲ್ಲಿ 1971ರಲ್ಲಿ ಬಂಧಿಸಲಾಗಿತ್ತು” ಎಂದು ನೆನಪಿಸಿದ್ದಾರೆ.

ಮೀಸಲಾತಿಗೆ ತಡೆ ನೀಡಿದ್ದ ಸುಪ್ರೀಂಕೋರ್ಟ್

ಕರ್ನಾಟಕ ರಾಜ್ಯ ಸರ್ಕಾರವು 2ಬಿ ಮೀಸಲಾತಿ ರದ್ದು ಮಾಡಿದ ಆದೇಶಕ್ಕೆ ಏಪ್ರಿಲ್‌ 25ರಂದು ಸುಪ್ರೀಂಕೋರ್ಟ್ ತಡೆ ನೀಡಿತ್ತು.

ಕರ್ನಾಟಕದಲ್ಲಿ ಸುಮಾರು ನಾಲ್ಕು ದಶಕಗಳಿಂದ 2ಬಿ ಕೆಟಗರಿ ಅಡಿಯಲ್ಲಿ ಮುಸ್ಲಿಮರಿಗೆ ಶೇ. 4ರಷ್ಟು ಮೀಸಲಾತಿ ನೀಡಲಾಗುತ್ತಿತ್ತು. ಆದರೆ ಇತ್ತೀಚೆಗೆ ರಾಜ್ಯ ಸರ್ಕಾರ ಮುಸ್ಲಿಮರ 2ಬಿ ಮೀಸಲಾತಿ ರದ್ದುಪಡಿಸಿ ಆ 4% ಅನ್ನು ಒಕ್ಕಲಿಗ ಮತ್ತು ಲಿಂಗಾಯತರಿಗೆ ತಲಾ ಶೇ. 2ರಷ್ಟು ಮೀಸಲಾತಿ ಹಂಚಿಕೆ ಮಾಡಿತ್ತು. ಅದರ ಬದಲು ಮುಸ್ಲಿಮರಿಗೆ ಇಡಬ್ಲೂಎಸ್ ಕೋಟಾದಲ್ಲಿ ಮೀಸಲಾತಿ ನೀಡಲಾಗುವುದು ಎಂದು ತಿಳಿಸಿತ್ತು.

ಸರ್ಕಾರದ ಈ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಕೆ ಎಂ ಜೋಸೆಫ್‌ ಅವರ ನೇತೃತ್ವದ ಪೀಠ ರಾಜ್ಯ ಸರ್ಕಾರದ ಆದೇಶಕ್ಕೆ ತಡೆ ನೀಡಿತ್ತು. ತಡೆಯಾಜ್ಞೆ ನೀಡಿ, ಮುಂದಿನ ವಿಚಾರಣೆಯನ್ನು ಮೇ 09ಕ್ಕೆ ಮುಂದೂಡಿತ್ತು.

ಇದನ್ನೂ ಓದಿರಿ: ‘ಎದ್ದೇಳು ಕರ್ನಾಟಕ’ ತಂಡದ ಮೇಲೆ ಬಿಜೆಪಿ ಗೂಂಡಾಗಳಿಂದ ಹಲ್ಲೆ; ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....