Homeಮುಖಪುಟಮುಸ್ಲಿಂ ಮೀಸಲಾತಿ ರದ್ದು ಕುರಿತು ಅಮಿತ್ ಷಾ ಹೇಳಿಕೆ; ಸುಪ್ರೀಂಕೋರ್ಟ್ ಗರಂ

ಮುಸ್ಲಿಂ ಮೀಸಲಾತಿ ರದ್ದು ಕುರಿತು ಅಮಿತ್ ಷಾ ಹೇಳಿಕೆ; ಸುಪ್ರೀಂಕೋರ್ಟ್ ಗರಂ

‘ಮೀಸಲಾತಿ ರದ್ದು ಪ್ರಕರಣ ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆಯಲ್ಲಿದ್ದರೂ ಅಮಿತ್ ಷಾ ಇದರ ಕುರಿತು ಮಾತನಾಡುತ್ತಿದ್ದಾರೆ’

- Advertisement -
- Advertisement -

ಕರ್ನಾಟಕದಲ್ಲಿ ಮುಸ್ಲಿಂ ಒಬಿಸಿ ಮೀಸಲಾತಿ ವಿಷಯದ ಕುರಿತು ಜವಾಬ್ದಾರಿಯುತ ಸ್ಥಾನದಲ್ಲಿರುವವರು ಸಾರ್ವಜನಿಕವಾಗಿ ನೀಡುತ್ತಿರುವ ಅಭಿಪ್ರಾಯಗಳಿಗೆ ಸುಪ್ರೀಂ ಕೋರ್ಟ್ ಮಂಗಳವಾರ ಅಸಮ್ಮತಿ ಸೂಚಿಸಿದೆ. ಮುಸ್ಲಿಂ ಮೀಸಲಾತಿ ರದ್ದು ಪ್ರಕರಣವನ್ನು ನ್ಯಾಯಾಲಯ ಆಲಿಸುತ್ತಿದ್ದು, ತೀರ್ಪು ಬಾಕಿ ಉಳಿದಿದೆ.

ಕರ್ನಾಟಕ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಈ ವಿಷಯದ ಕುರಿತು ನೀಡುತ್ತಿರುವ ಹೇಳಿಕೆಗಳ ಕುರಿತು ಹಿರಿಯ ವಕೀಲ ದುಷ್ಯಂತ್ ದವೆ ಅವರು ನ್ಯಾಯಪೀಠದ ಗಮನ ಸೆಳೆದರು.

ನ್ಯಾಯಮೂರ್ತಿಗಳಾದ ಕೆ.ಎಂ.ಜೋಸೆಫ್, ಬಿ.ವಿ.ನಾಗರತ್ನ ಮತ್ತು ನ್ಯಾಯಮೂರ್ತಿ ಅಹ್ಸಾನುದ್ದೀನ್ ಅಮಾನುಲ್ಲಾ ಅವರನ್ನೊಳಗೊಂಡ ಪೀಠವು, ಇಂತಹ ಸಾರ್ವಜನಿಕ ಹೇಳಿಕೆಗಳ ಬಗ್ಗೆ ಮೌಖಿಕವಾಗಿ ಅಸಮಾಧಾನ ವ್ಯಕ್ತಪಡಿಸಿತು.

ಇತರ ಹಿಂದುಳಿದ ವರ್ಗದಲ್ಲಿ ಮುಸ್ಲಿಮರಿಗೆ ಇದ್ದ 4% ಮೀಸಲಾತಿಯನ್ನು ರದ್ದುಗೊಳಿಸುವ ಕರ್ನಾಟಕ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಅರ್ಜಿದಾರರ ಪರವಾಗಿ ದವೆ ಹಾಜರಿದ್ದಾರೆ.

“ಮುಸ್ಲಿಮರಿಗೆ ಇದ್ದ ಮೀಸಲಾತಿಯನ್ನು ಹಿಂತೆಗೆದುಕೊಳ್ಳಲಾಗಿದೆ ಎಂದು ಗೌರವಾನ್ವಿತ ಗೃಹ ಸಚಿವರನ್ನು ಹೊರತುಪಡಿಸಿ ಬೇರೆ ಯಾರೂ ಹೇಳಿಕೆ ನೀಡುತ್ತಿಲ್ಲ” ಎಂದು ದವೆ ಹೇಳಿದ್ದಾರೆ. ಭಾರತದ ಸಾಲಿಸಿಟರ್ ಜನರಲ್ ಈಗಾಗಲೇ ನ್ಯಾಯಾಲಯದ ಮುಂದೆ ತಮ್ಮ ನಿರ್ಧಾರವನ್ನು ಪ್ರಕಟಿಸಿದ್ದು, ಇದನ್ನು ಸದ್ಯಕ್ಕೆ ಜಾರಿಗೊಳಿಸುವುದಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ನ್ಯಾಯಾಲಯಕ್ಕೆ ನೀಡಿದ ಭರವಸೆಯ ಹೊರತಾಗಿಯೂ ಇಂತಹ ಹೇಳಿಕೆಗಳನ್ನು ನೀಡುವುದು ನ್ಯಾಯಾಂಗ ನಿಂದನೆಯಾಗುತ್ತದೆ ಎಂದು ಹಿರಿಯ ವಕೀಲ ದವೆ ಗಮನ ಸೆಳೆದಿದ್ದಾರೆ. “ಇದು ನ್ಯಾಯಾಂಗ ನಿಂದನೆಯಾಗಿದೆ. ಅವರು (ಅಮಿತ್‌ ಷಾ) ಬಿಜೆಪಿ ಸರ್ಕಾರವನ್ನು ಪ್ರತಿನಿಧಿಸುತ್ತಾರೆ. ಕರ್ನಾಟಕದಲ್ಲಿ ಬಿಜೆಪಿ ಸರ್ಕಾರವಿದೆ” ಎಂದು ದವೆ ತಿಳಿಸಿದ್ದಾರೆ.

ಆಶ್ಚರ್ಯ ವ್ಯಕ್ತಪಡಿಸಿದ ನ್ಯಾಯಮೂರ್ತಿ ನಾಗರತ್ನ ಅವರು, “ನೀವು ಹೇಳುತ್ತಿರುವುದು ನಿಜವಾಗಿದ್ದರೆ, ಈ ವಿಷಯವು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಯಲ್ಲಿರುವಾಗ, ಯಾರಾದರೂ ಅಂತಹ ಹೇಳಿಕೆಗಳನ್ನು ಏಕೆ ನೀಡುತ್ತಿದ್ದಾರೆಂದು ನಾವು ಆಶ್ಚರ್ಯ ಪಡುತ್ತೇವೆ” ಎಂದಿದ್ದಾರೆ. ಅದಕ್ಕೆ ಪ್ರತಿಕ್ರಿಯಿಸಿರುವ ದವೆ, “ನಾವು ಮುಸ್ಲಿಂ ಮೀಸಲಾತಿಯನ್ನು ಹಿಂತೆಗೆದುಕೊಂಡಿದ್ದೇವೆ ಎಂದು ಅವರು ಹೆಮ್ಮೆಯಿಂದ ಹೇಳುತ್ತಿದ್ದಾರೆ” ಎಂದು ತಿಳಿಸಿದ್ದಾರೆ.

ನಂತರ ಮಧ್ಯಪ್ರವೇಶಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, “ಹೇಳಿಕೆಯ ವಿಷಯ ಮತ್ತು ಸಂದರ್ಭದ ಬಗ್ಗೆ ಪೀಠಕ್ಕೆ ತಿಳಿಸಲಾಗಿಲ್ಲ” ಎಂದು ವಾದಿಸಿದ್ದಾರೆ.

ಸಾಲಿಸಿಟರ್ ಜನರಲ್, “ನಾನು ಇಲ್ಲಿ ರಾಜಕೀಯ ಮಾಡಲು ಬಯಸುವುದಿಲ್ಲ. ಅವರು (ದವೆ) ಅಪ್ಲಿಕೇಶನ್ ತೋರಿಸಬಹುದು. ಯಾವ ಹೇಳಿಕೆಯನ್ನು ಆರೋಪಿಸಲಾಗಿದೆ ಎಂದು ನಮಗೆ ತಿಳಿದಿಲ್ಲ” ಎಂದಿದ್ದಾರೆ.

“ಮುಸ್ಲಿಮರಿಗೆ ನೀಡಲಾಗಿರುವ 4% ಮೀಸಲಾತಿ ಅಸಾಂವಿಧಾನಿಕ ಎಂದು ಅಮಿತ್ ಷಾ ಹೇಳಿದ್ದಾರೆ. ಬಿಜೆಪಿ ಅದನ್ನು ತೆಗೆದುಹಾಕಿದೆ ಎಂದು ಪ್ರಚಾರ ಮಾಡುತ್ತಿದ್ದಾರೆ” ಎಂದು ದವೆ ತಿಳಿಸಿದ್ದಾರೆ.

ನ್ಯಾಯಮೂರ್ತಿ ಜೋಸೆಫ್ ಪ್ರತಿಕ್ರಿಯಿಸಿ, “ನ್ಯಾಯಾಲಯದ ವಿಚಾರಣೆಗೆ ಒಳಪಟ್ಟಿದ್ದ ಪಡಿತರ ಆದೇಶವನ್ನು ಸಮರ್ಥಿಸಲು ಪತ್ರಿಕಾಗೋಷ್ಠಿಯನ್ನು ನಡೆಸಿದ್ದಕ್ಕಾಗಿ ಪಶ್ಚಿಮ ಬಂಗಾಳ ಸಿಎಂ ಅವರನ್ನು ನ್ಯಾಯಾಂಗ ನಿಂದನೆ ಅಡಿಯಲ್ಲಿ 1971ರಲ್ಲಿ ಬಂಧಿಸಲಾಗಿತ್ತು” ಎಂದು ನೆನಪಿಸಿದ್ದಾರೆ.

ಮೀಸಲಾತಿಗೆ ತಡೆ ನೀಡಿದ್ದ ಸುಪ್ರೀಂಕೋರ್ಟ್

ಕರ್ನಾಟಕ ರಾಜ್ಯ ಸರ್ಕಾರವು 2ಬಿ ಮೀಸಲಾತಿ ರದ್ದು ಮಾಡಿದ ಆದೇಶಕ್ಕೆ ಏಪ್ರಿಲ್‌ 25ರಂದು ಸುಪ್ರೀಂಕೋರ್ಟ್ ತಡೆ ನೀಡಿತ್ತು.

ಕರ್ನಾಟಕದಲ್ಲಿ ಸುಮಾರು ನಾಲ್ಕು ದಶಕಗಳಿಂದ 2ಬಿ ಕೆಟಗರಿ ಅಡಿಯಲ್ಲಿ ಮುಸ್ಲಿಮರಿಗೆ ಶೇ. 4ರಷ್ಟು ಮೀಸಲಾತಿ ನೀಡಲಾಗುತ್ತಿತ್ತು. ಆದರೆ ಇತ್ತೀಚೆಗೆ ರಾಜ್ಯ ಸರ್ಕಾರ ಮುಸ್ಲಿಮರ 2ಬಿ ಮೀಸಲಾತಿ ರದ್ದುಪಡಿಸಿ ಆ 4% ಅನ್ನು ಒಕ್ಕಲಿಗ ಮತ್ತು ಲಿಂಗಾಯತರಿಗೆ ತಲಾ ಶೇ. 2ರಷ್ಟು ಮೀಸಲಾತಿ ಹಂಚಿಕೆ ಮಾಡಿತ್ತು. ಅದರ ಬದಲು ಮುಸ್ಲಿಮರಿಗೆ ಇಡಬ್ಲೂಎಸ್ ಕೋಟಾದಲ್ಲಿ ಮೀಸಲಾತಿ ನೀಡಲಾಗುವುದು ಎಂದು ತಿಳಿಸಿತ್ತು.

ಸರ್ಕಾರದ ಈ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಕೆ ಎಂ ಜೋಸೆಫ್‌ ಅವರ ನೇತೃತ್ವದ ಪೀಠ ರಾಜ್ಯ ಸರ್ಕಾರದ ಆದೇಶಕ್ಕೆ ತಡೆ ನೀಡಿತ್ತು. ತಡೆಯಾಜ್ಞೆ ನೀಡಿ, ಮುಂದಿನ ವಿಚಾರಣೆಯನ್ನು ಮೇ 09ಕ್ಕೆ ಮುಂದೂಡಿತ್ತು.

ಇದನ್ನೂ ಓದಿರಿ: ‘ಎದ್ದೇಳು ಕರ್ನಾಟಕ’ ತಂಡದ ಮೇಲೆ ಬಿಜೆಪಿ ಗೂಂಡಾಗಳಿಂದ ಹಲ್ಲೆ; ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...