Homeಮುಖಪುಟಅಮಿತಾಬ್ ಬಚ್ಚನ್ ಅಭಿನಯದ ಚಿತ್ರ ಬಿಡುಗಡೆಗೆ ನಿಷೇಧ; ತೆರವು ಅರ್ಜಿ ವಜಾಗೊಳಿಸಿದ ಸುಪ್ರೀಂ!

ಅಮಿತಾಬ್ ಬಚ್ಚನ್ ಅಭಿನಯದ ಚಿತ್ರ ಬಿಡುಗಡೆಗೆ ನಿಷೇಧ; ತೆರವು ಅರ್ಜಿ ವಜಾಗೊಳಿಸಿದ ಸುಪ್ರೀಂ!

ಸ್ಲಮ್ ಸಾಕರ್ (ಫುಟ್‌ಬಾಲ್) ಎನ್‌ಜಿಒ ಸಂಸ್ಥಾಪಕ ವಿಜಯ್ ಬಾರ್ಸೆ ಅವರ ಜೀವನವನ್ನು ಆಧರಿಸಿದ ಈ ಚಿತ್ರವನ್ನು ಇದೇ ತಿಂಗಳು ಒಟಿಟಿ ಪ್ಲಾಟ್‌ಫಾರ್ಮ್ ಅಮೆಜಾನ್ ಪ್ರೈಮ್‌ನಲ್ಲಿ ಬಿಡುಗಡೆ ಮಾಡಲು ನಿರ್ಧರಿಸಲಾಗಿತ್ತು

- Advertisement -
- Advertisement -

ಅಮಿತಾಬ್ ಬಚ್ಚನ್ ಅಭಿನಯದ ‘ಝುಂಡ್’ ಚಲನಚಿತ್ರ ಬಿಡುಗಡೆಯ ಮೇಲಿನ ತಡೆಯಾಜ್ಞೆಯನ್ನು ತೆಗೆದುಹಾಕಲು ಸುಪ್ರೀಂ ಕೋರ್ಟ್ ಬುಧವಾರ ನಿರಾಕರಿಸಿದೆ. ಚಿತ್ರದ ಬಿಡುಗಡೆಯನ್ನು ತಡೆಹಿಡಿಯುವಂತೆ ತೆಲಂಗಾಣ ಹೈಕೋರ್ಟ್ ನೀಡಿದ ಆದೇಶದ ವಿರುದ್ಧ ಸುಪ್ರೀಂನಲ್ಲಿ ಮೇಲ್ಮನವಿಯನ್ನು ಸಲ್ಲಿಸಲಾಗಿತ್ತು.

ಚಲನಚಿತ್ರ ತಡೆಗೆ ಸಂಬಂಧಿಸಿದಂತೆ ಅಕ್ಟೋಬರ್ 19 ರಂದು ತೆಲಂಗಾಣ ಹೈಕೋರ್ಟ್‌ ನೀಡಿದ್ದ ಆದೇಶದ ವಿರುದ್ಧ ಸೂಪರ್ ಕ್ಯಾಸೆಟ್ಸ್ ಇಂಡಸ್ಟ್ರೀಸ್ (ಟಿ ಸೀರಿಸ್) ಸಲ್ಲಿಸಿದ್ದ ಮೇಲ್ಮನವಿಯನ್ನು ಮುಖ್ಯ ನ್ಯಾಯಮೂರ್ತಿ ಎಸ್‌ಎ ಬೊಬ್ಡೆ ಮತ್ತು ನ್ಯಾಯಮೂರ್ತಿಗಳಾದ ಎ.ಎಸ್.ಬೋಪಣ್ಣ ಮತ್ತು ವಿ ರಾಮಸುಬ್ರಮಣಿಯನ್ ಅವರ ನ್ಯಾಯಪೀಠ ವಜಾಗೊಳಿಸಿದೆ.

ಸ್ಲಮ್ ಸಾಕರ್ (ಫುಟ್‌ಬಾಲ್) ಎನ್‌ಜಿಒ ಸಂಸ್ಥಾಪಕ ವಿಜಯ್ ಬಾರ್ಸೆ ಅವರ ಜೀವನವನ್ನು ಆಧರಿಸಿದ ಈ ಚಿತ್ರವನ್ನು ಇದೇ ತಿಂಗಳು ಒಟಿಟಿ ಪ್ಲಾಟ್‌ಫಾರ್ಮ್ ಅಮೆಜಾನ್ ಪ್ರೈಮ್‌ನಲ್ಲಿ ಬಿಡುಗಡೆ ಮಾಡಲು ನಿರ್ಧರಿಸಲಾಗಿತ್ತು.

ಇದನ್ನೂ ಓದಿ: ಮನುಸ್ಮೃತಿ ಸುಟ್ಟಿದ್ದು ಏಕೆಂದು ವಿವರಿಸಿದ ಅಮಿತಾಬ್ ಬಚ್ಚನ್ ವಿರುದ್ಧ FIR!

ಇದನ್ನು ಈ ಮೊದಲು ಮೇ ತಿಂಗಳಲ್ಲಿ ಬಿಡುಗಡೆ ಮಾಡಲು ನಿರ್ಧರಿಸಲಾಗಿತ್ತು. ಆದರೆ ಕೊರೊನಾ ಸಾಂಕ್ರಾಮಿಕ ರೋಗದಿಂದಾಗಿ ಅದು ತೆರೆಗೆ ಬರಲಿಲ್ಲ.

ಈ ಚಲನಚಿತ್ರ ನಿರ್ಮಾಪಕರ ವಿರುದ್ಧ ಹಕ್ಕುಸ್ವಾಮ್ಯ ಉಲ್ಲಂಘನೆ ಮಾಡಿದ್ದಾರೆ ಎಂದು ಹೈದರಾಬಾದ್ ಮೂಲದ ಕಿರುಚಿತ್ರ ನಿರ್ಮಾಪಕ ನಂದಿ ಚಿನ್ನಿ ಕುಮಾರ್ ಆರೋಪಿಸಿದ್ದಾರೆ.

ವಿಚಾರಣೆಯ ಸಮಯದಲ್ಲಿ, ಸುಪ್ರೀಂ ಕೋರ್ಟ್ ಇದು ಆಸಕ್ತಿದಾಯಕ ಪ್ರಕರಣವೆಂದು ಗಮನಿಸಿದ್ದು, ಆರು ತಿಂಗಳೊಳಗೆ ವಿಚಾರಣೆ ಪೂರ್ಣಗೊಳ್ಳಲಿದೆ ಎಂದು ನಿರ್ದೇಶಿಸಿದೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ನಟ ಅಮಿತಾಬ್ ಬಚ್ಚನ್‌ ದಾವೂದ್ ಇಬ್ರಾಹಿಂನನ್ನು ಭೇಟಿ ಆಗಿದ್ದು ನಿಜವೆ?

“ಚಲನಚಿತ್ರ ತಯಾರಕರ ಪರ ಹಾಜರಾದ ವಕೀಲರು, ಆರು ತಿಂಗಳಲ್ಲಿ ಚಲನಚಿತ್ರವು ನಿಷ್ಪ್ರಯೋಜಕವಾಗಲಿದೆ. ದೂರು ಸಲ್ಲಿಸಿರುವ ವ್ಯಕ್ತಿಗೆ ಹಣ ಪಾವತಿಸುವುದಾಗಿಯೂ ಒಪ್ಪಿದ್ದೇವೆ. ಇಬ್ಬರ ನಡುವೆ 1.3 ಕೋಟಿ ರೂ.ಗಳ ಮೊತ್ತದ ಒಪ್ಪಂದವಾಗಿದೆ. ಆದರೆ ಈಗ ಅವರು ಒಪ್ಪಂದಕ್ಕೆ ಬದ್ಧರಾಗಿಲ್ಲ” ಎಂದು ಹೇಳಿದರು.

“ಉತ್ಪಾದನೆ, ವಿತರಣೆ, ಮಾರುಕಟ್ಟೆ ಮತ್ತು ಪ್ರಚಾರದಲ್ಲಿ ತಾವು ಗಣನೀಯ ಮೊತ್ತವನ್ನು ಹೂಡಿಕೆ ಮಾಡಿದ್ದೇವೆ. ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ವ್ಯಾಪಕ ಪ್ರಮಾಣದಲ್ಲಿ ಪ್ರಸಾರವಾಗಲಿರುವ ಈ ಚಿತ್ರದ ಬಗ್ಗೆ ತೃತೀಯ ವ್ಯಕ್ತಿಯ ಹಕ್ಕು ಸ್ವಾಮ್ಯಗಳನ್ನೂ ಸಹ ಸೃಷ್ಟಿಸಿದ್ದೇವೆ. ಈಗ ಚಿತ್ರ ಬಿಡುಗಡೆಯಾಗಿಲ್ಲ ಎಂದರೆ ನಿರ್ಮಾಪಕರಿಗೆ ದೊಡ್ಡ ಆರ್ಥಿಕ ಹೊರೆಯಾಗಲಿದೆ” ಎಂದು ಟಿ ಸೀರೀಸ್‌ ನ್ಯಾಯಾಲಯಕ್ಕೆ ಸಲ್ಲಿಸಿದ ಮನವಿಯಲ್ಲಿ ತಿಳಿಸಿದೆ.


ಇದನ್ನೂ ಓದಿ: ಬಹುಜನ ಭಾರತ: ಬಾಬಾಸಾಹೇಬರು ಮನುಸ್ಮೃತಿಯನ್ನು ಸುಟ್ಟಿದ್ದು ಸುಳ್ಳೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...