Homeಮುಖಪುಟಅಮಿತಾಬ್ ಬಚ್ಚನ್ ಅಭಿನಯದ ಚಿತ್ರ ಬಿಡುಗಡೆಗೆ ನಿಷೇಧ; ತೆರವು ಅರ್ಜಿ ವಜಾಗೊಳಿಸಿದ ಸುಪ್ರೀಂ!

ಅಮಿತಾಬ್ ಬಚ್ಚನ್ ಅಭಿನಯದ ಚಿತ್ರ ಬಿಡುಗಡೆಗೆ ನಿಷೇಧ; ತೆರವು ಅರ್ಜಿ ವಜಾಗೊಳಿಸಿದ ಸುಪ್ರೀಂ!

ಸ್ಲಮ್ ಸಾಕರ್ (ಫುಟ್‌ಬಾಲ್) ಎನ್‌ಜಿಒ ಸಂಸ್ಥಾಪಕ ವಿಜಯ್ ಬಾರ್ಸೆ ಅವರ ಜೀವನವನ್ನು ಆಧರಿಸಿದ ಈ ಚಿತ್ರವನ್ನು ಇದೇ ತಿಂಗಳು ಒಟಿಟಿ ಪ್ಲಾಟ್‌ಫಾರ್ಮ್ ಅಮೆಜಾನ್ ಪ್ರೈಮ್‌ನಲ್ಲಿ ಬಿಡುಗಡೆ ಮಾಡಲು ನಿರ್ಧರಿಸಲಾಗಿತ್ತು

- Advertisement -
- Advertisement -

ಅಮಿತಾಬ್ ಬಚ್ಚನ್ ಅಭಿನಯದ ‘ಝುಂಡ್’ ಚಲನಚಿತ್ರ ಬಿಡುಗಡೆಯ ಮೇಲಿನ ತಡೆಯಾಜ್ಞೆಯನ್ನು ತೆಗೆದುಹಾಕಲು ಸುಪ್ರೀಂ ಕೋರ್ಟ್ ಬುಧವಾರ ನಿರಾಕರಿಸಿದೆ. ಚಿತ್ರದ ಬಿಡುಗಡೆಯನ್ನು ತಡೆಹಿಡಿಯುವಂತೆ ತೆಲಂಗಾಣ ಹೈಕೋರ್ಟ್ ನೀಡಿದ ಆದೇಶದ ವಿರುದ್ಧ ಸುಪ್ರೀಂನಲ್ಲಿ ಮೇಲ್ಮನವಿಯನ್ನು ಸಲ್ಲಿಸಲಾಗಿತ್ತು.

ಚಲನಚಿತ್ರ ತಡೆಗೆ ಸಂಬಂಧಿಸಿದಂತೆ ಅಕ್ಟೋಬರ್ 19 ರಂದು ತೆಲಂಗಾಣ ಹೈಕೋರ್ಟ್‌ ನೀಡಿದ್ದ ಆದೇಶದ ವಿರುದ್ಧ ಸೂಪರ್ ಕ್ಯಾಸೆಟ್ಸ್ ಇಂಡಸ್ಟ್ರೀಸ್ (ಟಿ ಸೀರಿಸ್) ಸಲ್ಲಿಸಿದ್ದ ಮೇಲ್ಮನವಿಯನ್ನು ಮುಖ್ಯ ನ್ಯಾಯಮೂರ್ತಿ ಎಸ್‌ಎ ಬೊಬ್ಡೆ ಮತ್ತು ನ್ಯಾಯಮೂರ್ತಿಗಳಾದ ಎ.ಎಸ್.ಬೋಪಣ್ಣ ಮತ್ತು ವಿ ರಾಮಸುಬ್ರಮಣಿಯನ್ ಅವರ ನ್ಯಾಯಪೀಠ ವಜಾಗೊಳಿಸಿದೆ.

ಸ್ಲಮ್ ಸಾಕರ್ (ಫುಟ್‌ಬಾಲ್) ಎನ್‌ಜಿಒ ಸಂಸ್ಥಾಪಕ ವಿಜಯ್ ಬಾರ್ಸೆ ಅವರ ಜೀವನವನ್ನು ಆಧರಿಸಿದ ಈ ಚಿತ್ರವನ್ನು ಇದೇ ತಿಂಗಳು ಒಟಿಟಿ ಪ್ಲಾಟ್‌ಫಾರ್ಮ್ ಅಮೆಜಾನ್ ಪ್ರೈಮ್‌ನಲ್ಲಿ ಬಿಡುಗಡೆ ಮಾಡಲು ನಿರ್ಧರಿಸಲಾಗಿತ್ತು.

ಇದನ್ನೂ ಓದಿ: ಮನುಸ್ಮೃತಿ ಸುಟ್ಟಿದ್ದು ಏಕೆಂದು ವಿವರಿಸಿದ ಅಮಿತಾಬ್ ಬಚ್ಚನ್ ವಿರುದ್ಧ FIR!

ಇದನ್ನು ಈ ಮೊದಲು ಮೇ ತಿಂಗಳಲ್ಲಿ ಬಿಡುಗಡೆ ಮಾಡಲು ನಿರ್ಧರಿಸಲಾಗಿತ್ತು. ಆದರೆ ಕೊರೊನಾ ಸಾಂಕ್ರಾಮಿಕ ರೋಗದಿಂದಾಗಿ ಅದು ತೆರೆಗೆ ಬರಲಿಲ್ಲ.

ಈ ಚಲನಚಿತ್ರ ನಿರ್ಮಾಪಕರ ವಿರುದ್ಧ ಹಕ್ಕುಸ್ವಾಮ್ಯ ಉಲ್ಲಂಘನೆ ಮಾಡಿದ್ದಾರೆ ಎಂದು ಹೈದರಾಬಾದ್ ಮೂಲದ ಕಿರುಚಿತ್ರ ನಿರ್ಮಾಪಕ ನಂದಿ ಚಿನ್ನಿ ಕುಮಾರ್ ಆರೋಪಿಸಿದ್ದಾರೆ.

ವಿಚಾರಣೆಯ ಸಮಯದಲ್ಲಿ, ಸುಪ್ರೀಂ ಕೋರ್ಟ್ ಇದು ಆಸಕ್ತಿದಾಯಕ ಪ್ರಕರಣವೆಂದು ಗಮನಿಸಿದ್ದು, ಆರು ತಿಂಗಳೊಳಗೆ ವಿಚಾರಣೆ ಪೂರ್ಣಗೊಳ್ಳಲಿದೆ ಎಂದು ನಿರ್ದೇಶಿಸಿದೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ನಟ ಅಮಿತಾಬ್ ಬಚ್ಚನ್‌ ದಾವೂದ್ ಇಬ್ರಾಹಿಂನನ್ನು ಭೇಟಿ ಆಗಿದ್ದು ನಿಜವೆ?

“ಚಲನಚಿತ್ರ ತಯಾರಕರ ಪರ ಹಾಜರಾದ ವಕೀಲರು, ಆರು ತಿಂಗಳಲ್ಲಿ ಚಲನಚಿತ್ರವು ನಿಷ್ಪ್ರಯೋಜಕವಾಗಲಿದೆ. ದೂರು ಸಲ್ಲಿಸಿರುವ ವ್ಯಕ್ತಿಗೆ ಹಣ ಪಾವತಿಸುವುದಾಗಿಯೂ ಒಪ್ಪಿದ್ದೇವೆ. ಇಬ್ಬರ ನಡುವೆ 1.3 ಕೋಟಿ ರೂ.ಗಳ ಮೊತ್ತದ ಒಪ್ಪಂದವಾಗಿದೆ. ಆದರೆ ಈಗ ಅವರು ಒಪ್ಪಂದಕ್ಕೆ ಬದ್ಧರಾಗಿಲ್ಲ” ಎಂದು ಹೇಳಿದರು.

“ಉತ್ಪಾದನೆ, ವಿತರಣೆ, ಮಾರುಕಟ್ಟೆ ಮತ್ತು ಪ್ರಚಾರದಲ್ಲಿ ತಾವು ಗಣನೀಯ ಮೊತ್ತವನ್ನು ಹೂಡಿಕೆ ಮಾಡಿದ್ದೇವೆ. ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ವ್ಯಾಪಕ ಪ್ರಮಾಣದಲ್ಲಿ ಪ್ರಸಾರವಾಗಲಿರುವ ಈ ಚಿತ್ರದ ಬಗ್ಗೆ ತೃತೀಯ ವ್ಯಕ್ತಿಯ ಹಕ್ಕು ಸ್ವಾಮ್ಯಗಳನ್ನೂ ಸಹ ಸೃಷ್ಟಿಸಿದ್ದೇವೆ. ಈಗ ಚಿತ್ರ ಬಿಡುಗಡೆಯಾಗಿಲ್ಲ ಎಂದರೆ ನಿರ್ಮಾಪಕರಿಗೆ ದೊಡ್ಡ ಆರ್ಥಿಕ ಹೊರೆಯಾಗಲಿದೆ” ಎಂದು ಟಿ ಸೀರೀಸ್‌ ನ್ಯಾಯಾಲಯಕ್ಕೆ ಸಲ್ಲಿಸಿದ ಮನವಿಯಲ್ಲಿ ತಿಳಿಸಿದೆ.


ಇದನ್ನೂ ಓದಿ: ಬಹುಜನ ಭಾರತ: ಬಾಬಾಸಾಹೇಬರು ಮನುಸ್ಮೃತಿಯನ್ನು ಸುಟ್ಟಿದ್ದು ಸುಳ್ಳೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...