Homeಮುಖಪುಟಅಮಿತಾಬ್ ಬಚ್ಚನ್ ಅಭಿನಯದ ಚಿತ್ರ ಬಿಡುಗಡೆಗೆ ನಿಷೇಧ; ತೆರವು ಅರ್ಜಿ ವಜಾಗೊಳಿಸಿದ ಸುಪ್ರೀಂ!

ಅಮಿತಾಬ್ ಬಚ್ಚನ್ ಅಭಿನಯದ ಚಿತ್ರ ಬಿಡುಗಡೆಗೆ ನಿಷೇಧ; ತೆರವು ಅರ್ಜಿ ವಜಾಗೊಳಿಸಿದ ಸುಪ್ರೀಂ!

ಸ್ಲಮ್ ಸಾಕರ್ (ಫುಟ್‌ಬಾಲ್) ಎನ್‌ಜಿಒ ಸಂಸ್ಥಾಪಕ ವಿಜಯ್ ಬಾರ್ಸೆ ಅವರ ಜೀವನವನ್ನು ಆಧರಿಸಿದ ಈ ಚಿತ್ರವನ್ನು ಇದೇ ತಿಂಗಳು ಒಟಿಟಿ ಪ್ಲಾಟ್‌ಫಾರ್ಮ್ ಅಮೆಜಾನ್ ಪ್ರೈಮ್‌ನಲ್ಲಿ ಬಿಡುಗಡೆ ಮಾಡಲು ನಿರ್ಧರಿಸಲಾಗಿತ್ತು

- Advertisement -
- Advertisement -

ಅಮಿತಾಬ್ ಬಚ್ಚನ್ ಅಭಿನಯದ ‘ಝುಂಡ್’ ಚಲನಚಿತ್ರ ಬಿಡುಗಡೆಯ ಮೇಲಿನ ತಡೆಯಾಜ್ಞೆಯನ್ನು ತೆಗೆದುಹಾಕಲು ಸುಪ್ರೀಂ ಕೋರ್ಟ್ ಬುಧವಾರ ನಿರಾಕರಿಸಿದೆ. ಚಿತ್ರದ ಬಿಡುಗಡೆಯನ್ನು ತಡೆಹಿಡಿಯುವಂತೆ ತೆಲಂಗಾಣ ಹೈಕೋರ್ಟ್ ನೀಡಿದ ಆದೇಶದ ವಿರುದ್ಧ ಸುಪ್ರೀಂನಲ್ಲಿ ಮೇಲ್ಮನವಿಯನ್ನು ಸಲ್ಲಿಸಲಾಗಿತ್ತು.

ಚಲನಚಿತ್ರ ತಡೆಗೆ ಸಂಬಂಧಿಸಿದಂತೆ ಅಕ್ಟೋಬರ್ 19 ರಂದು ತೆಲಂಗಾಣ ಹೈಕೋರ್ಟ್‌ ನೀಡಿದ್ದ ಆದೇಶದ ವಿರುದ್ಧ ಸೂಪರ್ ಕ್ಯಾಸೆಟ್ಸ್ ಇಂಡಸ್ಟ್ರೀಸ್ (ಟಿ ಸೀರಿಸ್) ಸಲ್ಲಿಸಿದ್ದ ಮೇಲ್ಮನವಿಯನ್ನು ಮುಖ್ಯ ನ್ಯಾಯಮೂರ್ತಿ ಎಸ್‌ಎ ಬೊಬ್ಡೆ ಮತ್ತು ನ್ಯಾಯಮೂರ್ತಿಗಳಾದ ಎ.ಎಸ್.ಬೋಪಣ್ಣ ಮತ್ತು ವಿ ರಾಮಸುಬ್ರಮಣಿಯನ್ ಅವರ ನ್ಯಾಯಪೀಠ ವಜಾಗೊಳಿಸಿದೆ.

ಸ್ಲಮ್ ಸಾಕರ್ (ಫುಟ್‌ಬಾಲ್) ಎನ್‌ಜಿಒ ಸಂಸ್ಥಾಪಕ ವಿಜಯ್ ಬಾರ್ಸೆ ಅವರ ಜೀವನವನ್ನು ಆಧರಿಸಿದ ಈ ಚಿತ್ರವನ್ನು ಇದೇ ತಿಂಗಳು ಒಟಿಟಿ ಪ್ಲಾಟ್‌ಫಾರ್ಮ್ ಅಮೆಜಾನ್ ಪ್ರೈಮ್‌ನಲ್ಲಿ ಬಿಡುಗಡೆ ಮಾಡಲು ನಿರ್ಧರಿಸಲಾಗಿತ್ತು.

ಇದನ್ನೂ ಓದಿ: ಮನುಸ್ಮೃತಿ ಸುಟ್ಟಿದ್ದು ಏಕೆಂದು ವಿವರಿಸಿದ ಅಮಿತಾಬ್ ಬಚ್ಚನ್ ವಿರುದ್ಧ FIR!

ಇದನ್ನು ಈ ಮೊದಲು ಮೇ ತಿಂಗಳಲ್ಲಿ ಬಿಡುಗಡೆ ಮಾಡಲು ನಿರ್ಧರಿಸಲಾಗಿತ್ತು. ಆದರೆ ಕೊರೊನಾ ಸಾಂಕ್ರಾಮಿಕ ರೋಗದಿಂದಾಗಿ ಅದು ತೆರೆಗೆ ಬರಲಿಲ್ಲ.

ಈ ಚಲನಚಿತ್ರ ನಿರ್ಮಾಪಕರ ವಿರುದ್ಧ ಹಕ್ಕುಸ್ವಾಮ್ಯ ಉಲ್ಲಂಘನೆ ಮಾಡಿದ್ದಾರೆ ಎಂದು ಹೈದರಾಬಾದ್ ಮೂಲದ ಕಿರುಚಿತ್ರ ನಿರ್ಮಾಪಕ ನಂದಿ ಚಿನ್ನಿ ಕುಮಾರ್ ಆರೋಪಿಸಿದ್ದಾರೆ.

ವಿಚಾರಣೆಯ ಸಮಯದಲ್ಲಿ, ಸುಪ್ರೀಂ ಕೋರ್ಟ್ ಇದು ಆಸಕ್ತಿದಾಯಕ ಪ್ರಕರಣವೆಂದು ಗಮನಿಸಿದ್ದು, ಆರು ತಿಂಗಳೊಳಗೆ ವಿಚಾರಣೆ ಪೂರ್ಣಗೊಳ್ಳಲಿದೆ ಎಂದು ನಿರ್ದೇಶಿಸಿದೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ನಟ ಅಮಿತಾಬ್ ಬಚ್ಚನ್‌ ದಾವೂದ್ ಇಬ್ರಾಹಿಂನನ್ನು ಭೇಟಿ ಆಗಿದ್ದು ನಿಜವೆ?

“ಚಲನಚಿತ್ರ ತಯಾರಕರ ಪರ ಹಾಜರಾದ ವಕೀಲರು, ಆರು ತಿಂಗಳಲ್ಲಿ ಚಲನಚಿತ್ರವು ನಿಷ್ಪ್ರಯೋಜಕವಾಗಲಿದೆ. ದೂರು ಸಲ್ಲಿಸಿರುವ ವ್ಯಕ್ತಿಗೆ ಹಣ ಪಾವತಿಸುವುದಾಗಿಯೂ ಒಪ್ಪಿದ್ದೇವೆ. ಇಬ್ಬರ ನಡುವೆ 1.3 ಕೋಟಿ ರೂ.ಗಳ ಮೊತ್ತದ ಒಪ್ಪಂದವಾಗಿದೆ. ಆದರೆ ಈಗ ಅವರು ಒಪ್ಪಂದಕ್ಕೆ ಬದ್ಧರಾಗಿಲ್ಲ” ಎಂದು ಹೇಳಿದರು.

“ಉತ್ಪಾದನೆ, ವಿತರಣೆ, ಮಾರುಕಟ್ಟೆ ಮತ್ತು ಪ್ರಚಾರದಲ್ಲಿ ತಾವು ಗಣನೀಯ ಮೊತ್ತವನ್ನು ಹೂಡಿಕೆ ಮಾಡಿದ್ದೇವೆ. ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ವ್ಯಾಪಕ ಪ್ರಮಾಣದಲ್ಲಿ ಪ್ರಸಾರವಾಗಲಿರುವ ಈ ಚಿತ್ರದ ಬಗ್ಗೆ ತೃತೀಯ ವ್ಯಕ್ತಿಯ ಹಕ್ಕು ಸ್ವಾಮ್ಯಗಳನ್ನೂ ಸಹ ಸೃಷ್ಟಿಸಿದ್ದೇವೆ. ಈಗ ಚಿತ್ರ ಬಿಡುಗಡೆಯಾಗಿಲ್ಲ ಎಂದರೆ ನಿರ್ಮಾಪಕರಿಗೆ ದೊಡ್ಡ ಆರ್ಥಿಕ ಹೊರೆಯಾಗಲಿದೆ” ಎಂದು ಟಿ ಸೀರೀಸ್‌ ನ್ಯಾಯಾಲಯಕ್ಕೆ ಸಲ್ಲಿಸಿದ ಮನವಿಯಲ್ಲಿ ತಿಳಿಸಿದೆ.


ಇದನ್ನೂ ಓದಿ: ಬಹುಜನ ಭಾರತ: ಬಾಬಾಸಾಹೇಬರು ಮನುಸ್ಮೃತಿಯನ್ನು ಸುಟ್ಟಿದ್ದು ಸುಳ್ಳೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...