Homeಮುಖಪುಟ’ಅಮಿತಾಬ್, ಅಕ್ಷಯ್‌ಗೆ ಮೋದಿ ಸರ್ಕಾರದ ವಿರುದ್ಧ ಮಾತನಾಡಲು ಧೈರ್ಯವಿಲ್ಲವೇ?’

’ಅಮಿತಾಬ್, ಅಕ್ಷಯ್‌ಗೆ ಮೋದಿ ಸರ್ಕಾರದ ವಿರುದ್ಧ ಮಾತನಾಡಲು ಧೈರ್ಯವಿಲ್ಲವೇ?’

ಸದ್ಯ ಮುಂಬೈಯಲ್ಲಿ ಪೆಟ್ರೋಲ್‌ಗೆ ಲೀಟರ್‌ಗೆ. 96.32 ರೂಪಾಯಿ ಮತ್ತು ಡೀಸೆಲ್ 87.32 ರೂಪಾಯಿಗೆ ಏರಿದೆ.

- Advertisement -
- Advertisement -

ಪೆಟ್ರೋಲ್, ಡೀಸೆಲ್ ಬೆಲೆಗಳ ಏರಿಕೆ ಬಗ್ಗೆ ಕೇಂದ್ರ ಸರ್ಕಾರವನ್ನು ಒಂದು ಕಾಲದಲ್ಲಿ ಟೀಕಿಸಿದ್ದ ಸೆಲೆಬ್ರಿಟಿಗಳು, ಹಿಂದಿಗಿಂತಲೂ ಈಗ ದರ ಹೆಚ್ಚಾಗಿದ್ದರೂ ಮೌನ ವಹಿಸಿರುವವರ ವಿರುದ್ಧ ಮಹಾರಾಷ್ಟ್ರ ಕಾಂಗ್ರೆಸ್ ಗುರುವಾರ (ಫೆ.18) ಕಠಿಣ ನಿಲುವು ತೆಗೆದುಕೊಂಡಿದೆ.

ಅಮಿತಾಬ್ ಬಚ್ಚನ್ ಮತ್ತು ಅಕ್ಷಯ್ ಕುಮಾರ್ ಅವರಂತಹ ನಟರನ್ನು ಒಳಗೊಂಡ ಚಲನಚಿತ್ರಗಳ ಪ್ರದರ್ಶನ ಮತ್ತು ಚಲನಚಿತ್ರಗಳ ಚಿತ್ರೀಕರಣವನ್ನು ಮಹಾರಾಷ್ಟ್ರದಲ್ಲಿ ನಿಲ್ಲಿಸುವುದಾಗಿ ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ನಾನಾ ಪಟೋಲೆ ಎಚ್ಚರಿಕೆ ನೀಡಿದ್ದಾರೆ.

“ಮನಮೋಹನ್ ಸಿಂಗ್ ಅವಧಿಯಲ್ಲಿ ನಟ ಅಮಿತಾಬ್ ಬಚ್ಚನ್ ಮತ್ತು ಅಕ್ಷಯ್ ಕುಮಾರ್ ಅವರಂತಹ ಜನರು ಇಂಧನ ಬೆಲೆಗಳ ಬಗ್ಗೆ ಟ್ವೀಟ್ ಮಾಡುತ್ತಿದ್ದರು. ಈಗ ಹೆಚ್ಚುತ್ತಿರುವ ಇಂಧನ ಬೆಲೆಗಳು ಸಾಮಾನ್ಯ ಜನರನ್ನು ಹಿಂಸಿಸುತ್ತಿವೆ. ಆದರೆ ಇಂದು ಈ ನಟರೆಲ್ಲಾ ಮೌನವಾಗಿದ್ದಾರೆ. “ಸರ್ವಾಧಿಕಾರಿ ಮೋದಿ ಸರ್ಕಾರ”ದ ವಿರುದ್ಧ ಮಾತನಾಡಲು ಅವರಿಗೆ ಧೈರ್ಯವಿಲ್ಲವೇ?” ಎಂದು ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ನಾನಾ ಪಟೋಲೆ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ: ಸರ್ಕಾರದ ವಿರುದ್ದ ಎಳ್ಳು ನೀರು ಬಿಡುವ ಅಭಿಯಾನ

ಸದ್ಯ ಮುಂಬೈಯಲ್ಲಿ ಪೆಟ್ರೋಲ್‌ಗೆ ಲೀಟರ್‌ಗೆ. 96.32 ರೂಪಾಯಿ ಮತ್ತು ಡೀಸೆಲ್ 87.32 ರೂಪಾಯಿಗೆ ಏರಿದೆ.

“ಮಹಾರಾಷ್ಟ್ರದಲ್ಲಿ, ಅಮಿತಾಬ್ ಬಚ್ಚನ್ ಅಥವಾ ಅಕ್ಷಯ್ ಕುಮಾರ್ ಒಳಗೊಂಡ ಚಿತ್ರಗಳ ಚಿತ್ರೀಕರಣಕ್ಕೆ ನಾವು ಅವಕಾಶ ನೀಡುವುದಿಲ್ಲ. ಒಂದೋ ನೀವು ನರೇಂದ್ರ ಮೋದಿ ಸರ್ಕಾರದ ರಾಷ್ಟ್ರ ವಿರೋಧಿ ನೀತಿಗಳ ವಿರುದ್ಧ ಮಾತನಾಡಿ ಇಲ್ಲವಾದರೇ ನಿಮ್ಮ ಚಲನಚಿತ್ರಗಳ ಚಿತ್ರೀಕರಣವನ್ನು ಅನ್ನು ನಾವು ನಿಲ್ಲಿಸುತ್ತೇವೆ” ಎಂದು ಎಚ್ಚರಿಕೆ ನೀಡಿದ್ದಾರೆ.

ಮತ್ತೊಂದೆಡೆ, ರಾಜ್ಯದಲ್ಲಿ ಆಡಳಿತ ಪಕ್ಷ ಹೊರಡಿಸಿರುವ ಎಚ್ಚರಿಕೆ ಹಿನ್ನೆಲೆಯಲ್ಲಿ ಬಿಜೆಪಿ ಈ ನಟರಿಗೆ ಬೆಂಬಲ ನೀಡಿದೆ. ರಾಜ್ಯ ಬಿಜೆಪಿ ನಾಯಕ ಸುಧೀರ್ ಮುಂಗಂತಿವಾರ್ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ.

“ಕಾಂಗ್ರೆಸ್ ಆತ್ಮವು ಸರ್ವಾಧಿಕಾರವಾಗಿದ್ದು, ಅದು ಪ್ರಜಾಪ್ರಭುತ್ವದ ಮುಖವಾಡವನ್ನು ಧರಿಸಿತ್ತು. ಕಾಂಗ್ರೆಸ್ ಕಚೇರಿ ಅಕ್ಬರ್ ರಸ್ತೆಯಲ್ಲಿರುವುದರಿಂದ, ಅವರು ಅಕ್ಬರ್‌ನ ಹಾದಿಯಲ್ಲಿ ಮಾತ್ರ ನಡೆಯುತ್ತಾರೆ. ಅಮಿತಾಬ್ ಬಚ್ಚನ್ ಅವರ ಬೆದರಿಕೆಗಳ ಬಗ್ಗೆ ಚಿಂತಿಸಬೇಕಾಗಿಲ್ಲ. ಶೋಲೆ ಚಿತ್ರದಲ್ಲಿ ಗಬ್ಬರ್ ಸಿಂಗ್ ಅವರಿಂದ ಇದೇ ರೀತಿಯ ಬೆದರಿಕೆಗಳನ್ನು ಅವರು ಎದುರಿಸಿದ್ದರು” ಎಂದು ಮುಂಗಂತಿವಾರ್ ಹೇಳಿದ್ದಾರೆ.


ಇದನ್ನೂ ಓದಿ: ಪಂಜಾಬ್: ಬಟಿಂಡಾದಲ್ಲಿ 53 ವರ್ಷಗಳ ಬಳಿಕ ಮೇಯರ್ ಸ್ಥಾನ ಕಾಂಗ್ರೆಸ್‌ಗೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

Karnataka SIR : ನಿರ್ದೋಷಿ ಜನರೇಕೆ ದಾಖಲೆಗಾಗಿ ಅಲೆದಾಡಬೇಕು? ಲಾಜಿಕಲ್ ಡಿಸ್ಕ್ರಿಪೆನ್ಸಿ ನೋಟಿಸ್‌ಗೆ ನಾಗರಿಕ ಸಂಘಟನೆಗಳ ಆಕ್ಷೇಪ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಭಾಗವಾಗಿ ಮತದಾರರಿಗೆ ನೋಟಿಸ್ ನೀಡಲು ಮುಂದಾಗಿರುವ ಚುನಾವಣಾ ಆಯೋಗದ ಕ್ರಮವನ್ನು ನಾಗರಿಕ ಸಂಘಟನೆಗಳು ತೀವ್ರವಾಗಿ ವಿರೋಧಿಸಿವೆ. ಆಗಸ್ಟ್ 25ರಂದು ಎಸ್‌ಐಆರ್‌ಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗದ...

ಮಳೆಯೇ ಇಲ್ಲದೆ ನೇಪಾಳದಲ್ಲಿ ಸಂಭವಿಸಿದ ಭೀಕರ ಪ್ರವಾಹಕ್ಕೆ ಕಾರಣವೇನು?

ನೇಪಾಳ-ಟಿಬೆಟ್ ಗಡಿಭಾಗದ ಹಿಮಾಲಯ ಪ್ರದೇಶದಲ್ಲಿ ಹಿಮನದಿ ಇದ್ದಕ್ಕಿದ್ದಂತೆ ಕರಗಿ ಕುಸಿದ ಪರಿಣಾಮ ಭೀಕರ ಪ್ರವಾಹ ಉಂಟಾಗಿದೆ. ಈ ವಿಕೋಪದಲ್ಲಿ ಇದುವರೆಗೆ 160ಕ್ಕೂ ಹೆಚ್ಚು ಜನರು ಮೃತಪಟ್ಟಿರುವುದು ದೃಢಪಟ್ಟಿದ್ದು, 800ಕ್ಕೂ ಹೆಚ್ಚು ವಿದೇಶಿ ಪ್ರವಾಸಿಗರು...

ರಾಹುಲ್ ಗಾಂಧಿ ಅವರ ‘ಛಾತ್ರೋನ್ ಕೀ ಗೂಂಜ್’ಗೆ ಹೇಳಿಕೆಗಳ ಫ್ಯಾಕ್ಟ್-ಚೆಕ್: ಬಿಜೆಪಿಯಿಂದ ‘ಜೂಠ್ ಕೀ ಗೂಂಜ್’ ವೆಬ್‌ಸೈಟ್ ಆರಂಭ

ಲೋಕಸಭೆ ವಿಪಕ್ಷ ನಾಯಕ, ಕಾಂಗ್ರೆಸ್‌ ಸಂಸದ ರಾಹುಲ್ ಗಾಂಧಿ ಅವರ 'ಛಾತ್ರೋನ್ ಕೀ ಗೂಂಜ್' ಅಭಿಯಾನದ ವೇಳೆ ನೀಡಲಾದ ಹೇಳಿಕೆಗಳನ್ನು ಫ್ಯಾಕ್ಟ್-ಚೆಕ್ (ಸತ್ಯಾಸತ್ಯತೆ ಪರಿಶೀಲನೆ) ಮಾಡುವ ವೆಬ್‌ಸೈಟ್‌ ಒಂದನ್ನು ಉಲ್ಲೇಖಿಸಿರುವ ಬಿಜೆಪಿ, "ರಾಹುಲ್...

101 ತಾಲ್ಲೂಕುಗಳನ್ನು ಬರಪೀಡಿತ ಎಂದು ಅಧಿಕೃತವಾಗಿ ಘೋಷಿಸಿದ ರಾಜ್ಯ ಸರ್ಕಾರ

ಮಳೆ ಕೊರತೆಯಿಂದ ತತ್ತರಿಸಿರುವ ಕರ್ನಾಟಕದಲ್ಲಿ ತೀವ್ರ ಬರ ಪರಿಸ್ಥಿತಿ ನಿರ್ಮಾಣವಾಗಿದ್ದು, ಮೊದಲ ಹಂತದಲ್ಲಿ 101 ತಾಲ್ಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಅಧಿಕೃತವಾಗಿ ಘೋಷಿಸಿದೆ. ಬರ ನಿರ್ವಹಣೆ ಮತ್ತು ಪರಿಹಾರ ಕಾರ್ಯಗಳಿಗಾಗಿ ಸರ್ಕಾರವು ₹350...

ಕೊಟ್ಟ ಭರವಸೆ ಈಡೇರಿಸದ ಕೇಂದ್ರ ಸರ್ಕಾರ: ಸೆಪ್ಟೆಂಬರ್ 5ರಂದು ಸಿಜೆಪಿಯಿಂದ ದೆಹಲಿಯಲ್ಲಿ ಶಾಂತಿಯುತ ಮೆರವಣಿಗೆ

ಜುಲೈ 25ರಂದು ದೇಶದ ಯುವಜನತೆಗೆ ನೀಡಿದ್ದ ಭರವಸೆಗಳನ್ನು ಈಡೇರಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ), ಸೆಪ್ಟೆಂಬರ್ 5ರಂದು ರಾಷ್ಟ್ರ ರಾಜಧಾನಿಯಲ್ಲಿ ಶಾಂತಿಯುತ ಪ್ರತಿಭಟನಾ ಮೆರವಣಿಗೆ ನಡೆಸುವುದಾಗಿ...

Karnataka SIR : ಮತಹರಣದ ವಿರುದ್ಧ ಕಾನೂನು ಸಮರಕ್ಕೆ ಮುಂದಾದ ನಾಗರಿಕ ಸಂಘಟನೆಗಳು

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಉಂಟಾದ ಮತಹರಣದ ವಿರುದ್ಧ ಕಾನೂನು ಸಮರ ನಡೆಸಲು ನಾಗರಿಕ ಸಂಘಟನೆಗಳು ಮುಂದಾಗಿವೆ. ಆಗಸ್ಟ್ 25ರಂದು ಎಸ್‌ಐಆರ್‌ಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗದ ವಿರುದ್ದ...

ಬೆಂಗಳೂರು ನ್ಯಾಷನಲ್ ಲಾ ಸ್ಕೂಲ್ ಘಟಿಕೋತ್ಸವ ರದ್ದು: ಸಿಜೆಐ, ಬಾರ್ ಕೌನ್ಸಿಲ್ ಮುಖ್ಯಸ್ಥರ ಆಹ್ವಾನಕ್ಕೆ ವಿದ್ಯಾರ್ಥಿಗಳ ತೀವ್ರ ವಿರೋಧ!

ಬೆಂಗಳೂರು: ದೇಶದ ಪ್ರತಿಷ್ಠಿತ ಕಾನೂನು ಶಿಕ್ಷಣ ಸಂಸ್ಥೆಯಾದ ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿ (NLSIU), ತನ್ನ 34ನೇ ವಾರ್ಷಿಕ ಘಟಿಕೋತ್ಸವ ಸಮಾರಂಭವನ್ನು ದಿಢೀರ್ ರದ್ದುಗೊಳಿಸಿದೆ. ಸೆಪ್ಟೆಂಬರ್ 12 ರಂದು...

ತಮಿಳುನಾಡು| ದಲಿತ ಯುವಕನ ಲಾಕಪ್ ಡೆತ್ ಪ್ರಕರಣ; ಆರು ಜನ ಪೊಲೀಸರ ವಿರುದ್ಧ ಪ್ರಕರಣ ದಾಖಲು

ಕಲೆದ ಮಾರ್ಚ್‌ನಲ್ಲಿ ತಮಿಳುನಾಡಿನ ಶಿವಗಂಗೈ ಜಿಲ್ಲೆಯಲ್ಲಿ ನಡೆಸಿದ್ದ 26 ವರ್ಷದ ದಲಿತ ಯುವಕ ಆಕಾಶ್ ಡೆಲಿಸನ್ ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿ-ಸಿಐಡಿ ಸಲ್ಲಿಸಿರುವ ದೋಷಾರೋಪಣೆ ಪಟ್ಟಿಯಲ್ಲಿ (ಚಾರ್ಜ್‌ಶೀಟ್), ಆರೋಪಿಗಳಾದ ಆರು ಮಂದಿ...

Karnataka SIR | ಡಿಲೀಟ್ ಪಟ್ಟಿಯಲ್ಲಿ ಅಂದಾಜು 52 ಲಕ್ಷ ಅರ್ಹ ಮತದಾರರಿದ್ದಾರೆ : ನಾಗರಿಕ ಸಂಘಟನೆಗಳಿಂದ ಗಂಭೀರ ಆರೋಪ

ಕರ್ನಾಟಕದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ ಮತದಾರರ ಪಟ್ಟಿಯಿಂದ ಈಗಾಗಲೇ ಹೊರಗಿಟ್ಟಿರುವ 1.08 ಕೋಟಿ (1,07,96,415) ಮತದಾರರ ಪೈಕಿ ಅಂದಾಜು 52 ಲಕ್ಷ ಮಂದಿ ಅರ್ಹರಿದ್ದಾರೆ ಎಂದು ನಾಗರಿಕ ಸಂಘಟನೆಗಳು ಗಂಭೀರ...

ನೇಪಾಳದಲ್ಲಿ ಜಲಪ್ರಳಯ: 300 ಭಾರತೀಯರು ಸೇರಿ 1,500 ಮಂದಿ ನಾಪತ್ತೆ, ಸಾವಿನ ಸಂಖ್ಯೆ 165ಕ್ಕೆ ಏರಿಕೆ

ನೇಪಾಳ ಮತ್ತು ಟಿಬೆಟ್‌ನಲ್ಲಿ ಸಂಭವಿಸಿದ ಭೀಕರ ಪ್ರವಾಹ ಹಾಗೂ ಭೂಕುಸಿತದ ನಂತರ ಸುಮಾರು 1,500 ಜನರು ಕಾಣೆಯಾಗಿದ್ದಾರೆ. ಈ ಪ್ರವಾಹದಲ್ಲಿ 300ಕ್ಕೂ ಹೆಚ್ಚು ಭಾರತೀಯರು ನಾಪತ್ತೆಯಾಗಿದ್ದಾರೆ ಎಂದು ನೇಪಾಳದ ವಿದೇಶಾಂಗ ಸಚಿವ ಶಿಶಿರ್...