Homeಮುಖಪುಟ’ಅಮಿತಾಬ್, ಅಕ್ಷಯ್‌ಗೆ ಮೋದಿ ಸರ್ಕಾರದ ವಿರುದ್ಧ ಮಾತನಾಡಲು ಧೈರ್ಯವಿಲ್ಲವೇ?’

’ಅಮಿತಾಬ್, ಅಕ್ಷಯ್‌ಗೆ ಮೋದಿ ಸರ್ಕಾರದ ವಿರುದ್ಧ ಮಾತನಾಡಲು ಧೈರ್ಯವಿಲ್ಲವೇ?’

ಸದ್ಯ ಮುಂಬೈಯಲ್ಲಿ ಪೆಟ್ರೋಲ್‌ಗೆ ಲೀಟರ್‌ಗೆ. 96.32 ರೂಪಾಯಿ ಮತ್ತು ಡೀಸೆಲ್ 87.32 ರೂಪಾಯಿಗೆ ಏರಿದೆ.

- Advertisement -
- Advertisement -

ಪೆಟ್ರೋಲ್, ಡೀಸೆಲ್ ಬೆಲೆಗಳ ಏರಿಕೆ ಬಗ್ಗೆ ಕೇಂದ್ರ ಸರ್ಕಾರವನ್ನು ಒಂದು ಕಾಲದಲ್ಲಿ ಟೀಕಿಸಿದ್ದ ಸೆಲೆಬ್ರಿಟಿಗಳು, ಹಿಂದಿಗಿಂತಲೂ ಈಗ ದರ ಹೆಚ್ಚಾಗಿದ್ದರೂ ಮೌನ ವಹಿಸಿರುವವರ ವಿರುದ್ಧ ಮಹಾರಾಷ್ಟ್ರ ಕಾಂಗ್ರೆಸ್ ಗುರುವಾರ (ಫೆ.18) ಕಠಿಣ ನಿಲುವು ತೆಗೆದುಕೊಂಡಿದೆ.

ಅಮಿತಾಬ್ ಬಚ್ಚನ್ ಮತ್ತು ಅಕ್ಷಯ್ ಕುಮಾರ್ ಅವರಂತಹ ನಟರನ್ನು ಒಳಗೊಂಡ ಚಲನಚಿತ್ರಗಳ ಪ್ರದರ್ಶನ ಮತ್ತು ಚಲನಚಿತ್ರಗಳ ಚಿತ್ರೀಕರಣವನ್ನು ಮಹಾರಾಷ್ಟ್ರದಲ್ಲಿ ನಿಲ್ಲಿಸುವುದಾಗಿ ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ನಾನಾ ಪಟೋಲೆ ಎಚ್ಚರಿಕೆ ನೀಡಿದ್ದಾರೆ.

“ಮನಮೋಹನ್ ಸಿಂಗ್ ಅವಧಿಯಲ್ಲಿ ನಟ ಅಮಿತಾಬ್ ಬಚ್ಚನ್ ಮತ್ತು ಅಕ್ಷಯ್ ಕುಮಾರ್ ಅವರಂತಹ ಜನರು ಇಂಧನ ಬೆಲೆಗಳ ಬಗ್ಗೆ ಟ್ವೀಟ್ ಮಾಡುತ್ತಿದ್ದರು. ಈಗ ಹೆಚ್ಚುತ್ತಿರುವ ಇಂಧನ ಬೆಲೆಗಳು ಸಾಮಾನ್ಯ ಜನರನ್ನು ಹಿಂಸಿಸುತ್ತಿವೆ. ಆದರೆ ಇಂದು ಈ ನಟರೆಲ್ಲಾ ಮೌನವಾಗಿದ್ದಾರೆ. “ಸರ್ವಾಧಿಕಾರಿ ಮೋದಿ ಸರ್ಕಾರ”ದ ವಿರುದ್ಧ ಮಾತನಾಡಲು ಅವರಿಗೆ ಧೈರ್ಯವಿಲ್ಲವೇ?” ಎಂದು ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ನಾನಾ ಪಟೋಲೆ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ: ಸರ್ಕಾರದ ವಿರುದ್ದ ಎಳ್ಳು ನೀರು ಬಿಡುವ ಅಭಿಯಾನ

ಸದ್ಯ ಮುಂಬೈಯಲ್ಲಿ ಪೆಟ್ರೋಲ್‌ಗೆ ಲೀಟರ್‌ಗೆ. 96.32 ರೂಪಾಯಿ ಮತ್ತು ಡೀಸೆಲ್ 87.32 ರೂಪಾಯಿಗೆ ಏರಿದೆ.

“ಮಹಾರಾಷ್ಟ್ರದಲ್ಲಿ, ಅಮಿತಾಬ್ ಬಚ್ಚನ್ ಅಥವಾ ಅಕ್ಷಯ್ ಕುಮಾರ್ ಒಳಗೊಂಡ ಚಿತ್ರಗಳ ಚಿತ್ರೀಕರಣಕ್ಕೆ ನಾವು ಅವಕಾಶ ನೀಡುವುದಿಲ್ಲ. ಒಂದೋ ನೀವು ನರೇಂದ್ರ ಮೋದಿ ಸರ್ಕಾರದ ರಾಷ್ಟ್ರ ವಿರೋಧಿ ನೀತಿಗಳ ವಿರುದ್ಧ ಮಾತನಾಡಿ ಇಲ್ಲವಾದರೇ ನಿಮ್ಮ ಚಲನಚಿತ್ರಗಳ ಚಿತ್ರೀಕರಣವನ್ನು ಅನ್ನು ನಾವು ನಿಲ್ಲಿಸುತ್ತೇವೆ” ಎಂದು ಎಚ್ಚರಿಕೆ ನೀಡಿದ್ದಾರೆ.

ಮತ್ತೊಂದೆಡೆ, ರಾಜ್ಯದಲ್ಲಿ ಆಡಳಿತ ಪಕ್ಷ ಹೊರಡಿಸಿರುವ ಎಚ್ಚರಿಕೆ ಹಿನ್ನೆಲೆಯಲ್ಲಿ ಬಿಜೆಪಿ ಈ ನಟರಿಗೆ ಬೆಂಬಲ ನೀಡಿದೆ. ರಾಜ್ಯ ಬಿಜೆಪಿ ನಾಯಕ ಸುಧೀರ್ ಮುಂಗಂತಿವಾರ್ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ.

“ಕಾಂಗ್ರೆಸ್ ಆತ್ಮವು ಸರ್ವಾಧಿಕಾರವಾಗಿದ್ದು, ಅದು ಪ್ರಜಾಪ್ರಭುತ್ವದ ಮುಖವಾಡವನ್ನು ಧರಿಸಿತ್ತು. ಕಾಂಗ್ರೆಸ್ ಕಚೇರಿ ಅಕ್ಬರ್ ರಸ್ತೆಯಲ್ಲಿರುವುದರಿಂದ, ಅವರು ಅಕ್ಬರ್‌ನ ಹಾದಿಯಲ್ಲಿ ಮಾತ್ರ ನಡೆಯುತ್ತಾರೆ. ಅಮಿತಾಬ್ ಬಚ್ಚನ್ ಅವರ ಬೆದರಿಕೆಗಳ ಬಗ್ಗೆ ಚಿಂತಿಸಬೇಕಾಗಿಲ್ಲ. ಶೋಲೆ ಚಿತ್ರದಲ್ಲಿ ಗಬ್ಬರ್ ಸಿಂಗ್ ಅವರಿಂದ ಇದೇ ರೀತಿಯ ಬೆದರಿಕೆಗಳನ್ನು ಅವರು ಎದುರಿಸಿದ್ದರು” ಎಂದು ಮುಂಗಂತಿವಾರ್ ಹೇಳಿದ್ದಾರೆ.


ಇದನ್ನೂ ಓದಿ: ಪಂಜಾಬ್: ಬಟಿಂಡಾದಲ್ಲಿ 53 ವರ್ಷಗಳ ಬಳಿಕ ಮೇಯರ್ ಸ್ಥಾನ ಕಾಂಗ್ರೆಸ್‌ಗೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...