Homeಮುಖಪುಟ’ಅಮಿತಾಬ್, ಅಕ್ಷಯ್‌ಗೆ ಮೋದಿ ಸರ್ಕಾರದ ವಿರುದ್ಧ ಮಾತನಾಡಲು ಧೈರ್ಯವಿಲ್ಲವೇ?’

’ಅಮಿತಾಬ್, ಅಕ್ಷಯ್‌ಗೆ ಮೋದಿ ಸರ್ಕಾರದ ವಿರುದ್ಧ ಮಾತನಾಡಲು ಧೈರ್ಯವಿಲ್ಲವೇ?’

ಸದ್ಯ ಮುಂಬೈಯಲ್ಲಿ ಪೆಟ್ರೋಲ್‌ಗೆ ಲೀಟರ್‌ಗೆ. 96.32 ರೂಪಾಯಿ ಮತ್ತು ಡೀಸೆಲ್ 87.32 ರೂಪಾಯಿಗೆ ಏರಿದೆ.

- Advertisement -
- Advertisement -

ಪೆಟ್ರೋಲ್, ಡೀಸೆಲ್ ಬೆಲೆಗಳ ಏರಿಕೆ ಬಗ್ಗೆ ಕೇಂದ್ರ ಸರ್ಕಾರವನ್ನು ಒಂದು ಕಾಲದಲ್ಲಿ ಟೀಕಿಸಿದ್ದ ಸೆಲೆಬ್ರಿಟಿಗಳು, ಹಿಂದಿಗಿಂತಲೂ ಈಗ ದರ ಹೆಚ್ಚಾಗಿದ್ದರೂ ಮೌನ ವಹಿಸಿರುವವರ ವಿರುದ್ಧ ಮಹಾರಾಷ್ಟ್ರ ಕಾಂಗ್ರೆಸ್ ಗುರುವಾರ (ಫೆ.18) ಕಠಿಣ ನಿಲುವು ತೆಗೆದುಕೊಂಡಿದೆ.

ಅಮಿತಾಬ್ ಬಚ್ಚನ್ ಮತ್ತು ಅಕ್ಷಯ್ ಕುಮಾರ್ ಅವರಂತಹ ನಟರನ್ನು ಒಳಗೊಂಡ ಚಲನಚಿತ್ರಗಳ ಪ್ರದರ್ಶನ ಮತ್ತು ಚಲನಚಿತ್ರಗಳ ಚಿತ್ರೀಕರಣವನ್ನು ಮಹಾರಾಷ್ಟ್ರದಲ್ಲಿ ನಿಲ್ಲಿಸುವುದಾಗಿ ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ನಾನಾ ಪಟೋಲೆ ಎಚ್ಚರಿಕೆ ನೀಡಿದ್ದಾರೆ.

“ಮನಮೋಹನ್ ಸಿಂಗ್ ಅವಧಿಯಲ್ಲಿ ನಟ ಅಮಿತಾಬ್ ಬಚ್ಚನ್ ಮತ್ತು ಅಕ್ಷಯ್ ಕುಮಾರ್ ಅವರಂತಹ ಜನರು ಇಂಧನ ಬೆಲೆಗಳ ಬಗ್ಗೆ ಟ್ವೀಟ್ ಮಾಡುತ್ತಿದ್ದರು. ಈಗ ಹೆಚ್ಚುತ್ತಿರುವ ಇಂಧನ ಬೆಲೆಗಳು ಸಾಮಾನ್ಯ ಜನರನ್ನು ಹಿಂಸಿಸುತ್ತಿವೆ. ಆದರೆ ಇಂದು ಈ ನಟರೆಲ್ಲಾ ಮೌನವಾಗಿದ್ದಾರೆ. “ಸರ್ವಾಧಿಕಾರಿ ಮೋದಿ ಸರ್ಕಾರ”ದ ವಿರುದ್ಧ ಮಾತನಾಡಲು ಅವರಿಗೆ ಧೈರ್ಯವಿಲ್ಲವೇ?” ಎಂದು ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ನಾನಾ ಪಟೋಲೆ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ: ಸರ್ಕಾರದ ವಿರುದ್ದ ಎಳ್ಳು ನೀರು ಬಿಡುವ ಅಭಿಯಾನ

ಸದ್ಯ ಮುಂಬೈಯಲ್ಲಿ ಪೆಟ್ರೋಲ್‌ಗೆ ಲೀಟರ್‌ಗೆ. 96.32 ರೂಪಾಯಿ ಮತ್ತು ಡೀಸೆಲ್ 87.32 ರೂಪಾಯಿಗೆ ಏರಿದೆ.

“ಮಹಾರಾಷ್ಟ್ರದಲ್ಲಿ, ಅಮಿತಾಬ್ ಬಚ್ಚನ್ ಅಥವಾ ಅಕ್ಷಯ್ ಕುಮಾರ್ ಒಳಗೊಂಡ ಚಿತ್ರಗಳ ಚಿತ್ರೀಕರಣಕ್ಕೆ ನಾವು ಅವಕಾಶ ನೀಡುವುದಿಲ್ಲ. ಒಂದೋ ನೀವು ನರೇಂದ್ರ ಮೋದಿ ಸರ್ಕಾರದ ರಾಷ್ಟ್ರ ವಿರೋಧಿ ನೀತಿಗಳ ವಿರುದ್ಧ ಮಾತನಾಡಿ ಇಲ್ಲವಾದರೇ ನಿಮ್ಮ ಚಲನಚಿತ್ರಗಳ ಚಿತ್ರೀಕರಣವನ್ನು ಅನ್ನು ನಾವು ನಿಲ್ಲಿಸುತ್ತೇವೆ” ಎಂದು ಎಚ್ಚರಿಕೆ ನೀಡಿದ್ದಾರೆ.

ಮತ್ತೊಂದೆಡೆ, ರಾಜ್ಯದಲ್ಲಿ ಆಡಳಿತ ಪಕ್ಷ ಹೊರಡಿಸಿರುವ ಎಚ್ಚರಿಕೆ ಹಿನ್ನೆಲೆಯಲ್ಲಿ ಬಿಜೆಪಿ ಈ ನಟರಿಗೆ ಬೆಂಬಲ ನೀಡಿದೆ. ರಾಜ್ಯ ಬಿಜೆಪಿ ನಾಯಕ ಸುಧೀರ್ ಮುಂಗಂತಿವಾರ್ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ.

“ಕಾಂಗ್ರೆಸ್ ಆತ್ಮವು ಸರ್ವಾಧಿಕಾರವಾಗಿದ್ದು, ಅದು ಪ್ರಜಾಪ್ರಭುತ್ವದ ಮುಖವಾಡವನ್ನು ಧರಿಸಿತ್ತು. ಕಾಂಗ್ರೆಸ್ ಕಚೇರಿ ಅಕ್ಬರ್ ರಸ್ತೆಯಲ್ಲಿರುವುದರಿಂದ, ಅವರು ಅಕ್ಬರ್‌ನ ಹಾದಿಯಲ್ಲಿ ಮಾತ್ರ ನಡೆಯುತ್ತಾರೆ. ಅಮಿತಾಬ್ ಬಚ್ಚನ್ ಅವರ ಬೆದರಿಕೆಗಳ ಬಗ್ಗೆ ಚಿಂತಿಸಬೇಕಾಗಿಲ್ಲ. ಶೋಲೆ ಚಿತ್ರದಲ್ಲಿ ಗಬ್ಬರ್ ಸಿಂಗ್ ಅವರಿಂದ ಇದೇ ರೀತಿಯ ಬೆದರಿಕೆಗಳನ್ನು ಅವರು ಎದುರಿಸಿದ್ದರು” ಎಂದು ಮುಂಗಂತಿವಾರ್ ಹೇಳಿದ್ದಾರೆ.


ಇದನ್ನೂ ಓದಿ: ಪಂಜಾಬ್: ಬಟಿಂಡಾದಲ್ಲಿ 53 ವರ್ಷಗಳ ಬಳಿಕ ಮೇಯರ್ ಸ್ಥಾನ ಕಾಂಗ್ರೆಸ್‌ಗೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...

ಉಪವಾಸ ಕೊನೆಗೊಳಿಸಲು ನಿರಾಕರಿಸಿದ ಸೋನಮ್ ವಾಂಗ್‌ಚುಕ್ : 19ನೇ ದಿನವೂ ಮುಂದುವರಿದ ಸತ್ಯಾಗ್ರಹ; ಇನ್ನಷ್ಟು ಹದಗೆಟ್ಟ ಆರೋಗ್ಯ

ರಾಜಕೀಯ ನಾಯಕರು, ಬೆಂಬಲಿಗರು ಮತ್ತು ಕಾನೂನು ಮಧ್ಯಸ್ಥಿಕೆಗಳ ಮೂಲಕ ಪದೇ ಪದೇ ಮನವಿ ಮಾಡಿಕೊಂಡಿದ್ದರೂ ಸಹ, ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರು ತಮ್ಮ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೊನೆಗೊಳಿಸಲು ನಿರಾಕರಿಸಿದ್ದಾರೆ. ಸರ್ಕಾರದ ಕಡೆಯಿಂದ...

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...