Homeಮುಖಪುಟ’ಅಮಿತಾಬ್, ಅಕ್ಷಯ್‌ಗೆ ಮೋದಿ ಸರ್ಕಾರದ ವಿರುದ್ಧ ಮಾತನಾಡಲು ಧೈರ್ಯವಿಲ್ಲವೇ?’

’ಅಮಿತಾಬ್, ಅಕ್ಷಯ್‌ಗೆ ಮೋದಿ ಸರ್ಕಾರದ ವಿರುದ್ಧ ಮಾತನಾಡಲು ಧೈರ್ಯವಿಲ್ಲವೇ?’

ಸದ್ಯ ಮುಂಬೈಯಲ್ಲಿ ಪೆಟ್ರೋಲ್‌ಗೆ ಲೀಟರ್‌ಗೆ. 96.32 ರೂಪಾಯಿ ಮತ್ತು ಡೀಸೆಲ್ 87.32 ರೂಪಾಯಿಗೆ ಏರಿದೆ.

- Advertisement -
- Advertisement -

ಪೆಟ್ರೋಲ್, ಡೀಸೆಲ್ ಬೆಲೆಗಳ ಏರಿಕೆ ಬಗ್ಗೆ ಕೇಂದ್ರ ಸರ್ಕಾರವನ್ನು ಒಂದು ಕಾಲದಲ್ಲಿ ಟೀಕಿಸಿದ್ದ ಸೆಲೆಬ್ರಿಟಿಗಳು, ಹಿಂದಿಗಿಂತಲೂ ಈಗ ದರ ಹೆಚ್ಚಾಗಿದ್ದರೂ ಮೌನ ವಹಿಸಿರುವವರ ವಿರುದ್ಧ ಮಹಾರಾಷ್ಟ್ರ ಕಾಂಗ್ರೆಸ್ ಗುರುವಾರ (ಫೆ.18) ಕಠಿಣ ನಿಲುವು ತೆಗೆದುಕೊಂಡಿದೆ.

ಅಮಿತಾಬ್ ಬಚ್ಚನ್ ಮತ್ತು ಅಕ್ಷಯ್ ಕುಮಾರ್ ಅವರಂತಹ ನಟರನ್ನು ಒಳಗೊಂಡ ಚಲನಚಿತ್ರಗಳ ಪ್ರದರ್ಶನ ಮತ್ತು ಚಲನಚಿತ್ರಗಳ ಚಿತ್ರೀಕರಣವನ್ನು ಮಹಾರಾಷ್ಟ್ರದಲ್ಲಿ ನಿಲ್ಲಿಸುವುದಾಗಿ ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ನಾನಾ ಪಟೋಲೆ ಎಚ್ಚರಿಕೆ ನೀಡಿದ್ದಾರೆ.

“ಮನಮೋಹನ್ ಸಿಂಗ್ ಅವಧಿಯಲ್ಲಿ ನಟ ಅಮಿತಾಬ್ ಬಚ್ಚನ್ ಮತ್ತು ಅಕ್ಷಯ್ ಕುಮಾರ್ ಅವರಂತಹ ಜನರು ಇಂಧನ ಬೆಲೆಗಳ ಬಗ್ಗೆ ಟ್ವೀಟ್ ಮಾಡುತ್ತಿದ್ದರು. ಈಗ ಹೆಚ್ಚುತ್ತಿರುವ ಇಂಧನ ಬೆಲೆಗಳು ಸಾಮಾನ್ಯ ಜನರನ್ನು ಹಿಂಸಿಸುತ್ತಿವೆ. ಆದರೆ ಇಂದು ಈ ನಟರೆಲ್ಲಾ ಮೌನವಾಗಿದ್ದಾರೆ. “ಸರ್ವಾಧಿಕಾರಿ ಮೋದಿ ಸರ್ಕಾರ”ದ ವಿರುದ್ಧ ಮಾತನಾಡಲು ಅವರಿಗೆ ಧೈರ್ಯವಿಲ್ಲವೇ?” ಎಂದು ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ನಾನಾ ಪಟೋಲೆ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ: ಸರ್ಕಾರದ ವಿರುದ್ದ ಎಳ್ಳು ನೀರು ಬಿಡುವ ಅಭಿಯಾನ

ಸದ್ಯ ಮುಂಬೈಯಲ್ಲಿ ಪೆಟ್ರೋಲ್‌ಗೆ ಲೀಟರ್‌ಗೆ. 96.32 ರೂಪಾಯಿ ಮತ್ತು ಡೀಸೆಲ್ 87.32 ರೂಪಾಯಿಗೆ ಏರಿದೆ.

“ಮಹಾರಾಷ್ಟ್ರದಲ್ಲಿ, ಅಮಿತಾಬ್ ಬಚ್ಚನ್ ಅಥವಾ ಅಕ್ಷಯ್ ಕುಮಾರ್ ಒಳಗೊಂಡ ಚಿತ್ರಗಳ ಚಿತ್ರೀಕರಣಕ್ಕೆ ನಾವು ಅವಕಾಶ ನೀಡುವುದಿಲ್ಲ. ಒಂದೋ ನೀವು ನರೇಂದ್ರ ಮೋದಿ ಸರ್ಕಾರದ ರಾಷ್ಟ್ರ ವಿರೋಧಿ ನೀತಿಗಳ ವಿರುದ್ಧ ಮಾತನಾಡಿ ಇಲ್ಲವಾದರೇ ನಿಮ್ಮ ಚಲನಚಿತ್ರಗಳ ಚಿತ್ರೀಕರಣವನ್ನು ಅನ್ನು ನಾವು ನಿಲ್ಲಿಸುತ್ತೇವೆ” ಎಂದು ಎಚ್ಚರಿಕೆ ನೀಡಿದ್ದಾರೆ.

ಮತ್ತೊಂದೆಡೆ, ರಾಜ್ಯದಲ್ಲಿ ಆಡಳಿತ ಪಕ್ಷ ಹೊರಡಿಸಿರುವ ಎಚ್ಚರಿಕೆ ಹಿನ್ನೆಲೆಯಲ್ಲಿ ಬಿಜೆಪಿ ಈ ನಟರಿಗೆ ಬೆಂಬಲ ನೀಡಿದೆ. ರಾಜ್ಯ ಬಿಜೆಪಿ ನಾಯಕ ಸುಧೀರ್ ಮುಂಗಂತಿವಾರ್ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ.

“ಕಾಂಗ್ರೆಸ್ ಆತ್ಮವು ಸರ್ವಾಧಿಕಾರವಾಗಿದ್ದು, ಅದು ಪ್ರಜಾಪ್ರಭುತ್ವದ ಮುಖವಾಡವನ್ನು ಧರಿಸಿತ್ತು. ಕಾಂಗ್ರೆಸ್ ಕಚೇರಿ ಅಕ್ಬರ್ ರಸ್ತೆಯಲ್ಲಿರುವುದರಿಂದ, ಅವರು ಅಕ್ಬರ್‌ನ ಹಾದಿಯಲ್ಲಿ ಮಾತ್ರ ನಡೆಯುತ್ತಾರೆ. ಅಮಿತಾಬ್ ಬಚ್ಚನ್ ಅವರ ಬೆದರಿಕೆಗಳ ಬಗ್ಗೆ ಚಿಂತಿಸಬೇಕಾಗಿಲ್ಲ. ಶೋಲೆ ಚಿತ್ರದಲ್ಲಿ ಗಬ್ಬರ್ ಸಿಂಗ್ ಅವರಿಂದ ಇದೇ ರೀತಿಯ ಬೆದರಿಕೆಗಳನ್ನು ಅವರು ಎದುರಿಸಿದ್ದರು” ಎಂದು ಮುಂಗಂತಿವಾರ್ ಹೇಳಿದ್ದಾರೆ.


ಇದನ್ನೂ ಓದಿ: ಪಂಜಾಬ್: ಬಟಿಂಡಾದಲ್ಲಿ 53 ವರ್ಷಗಳ ಬಳಿಕ ಮೇಯರ್ ಸ್ಥಾನ ಕಾಂಗ್ರೆಸ್‌ಗೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕ್ಯೂಬಾ ಎಂದರೆ ಫಿಡೆಲ್, ಅಮೆರಿಕದ ಕುತಂತ್ರದ ವಿರುದ್ಧ ಪುಟ್ಟ ರಾಷ್ಟ್ರ ಕ್ಯೂಬಾದ ಸುದೀರ್ಘ ಕ್ರಾಂತಿ

ಆಗಸ್ಟ್ 13, 2026 ರಂದು ಕ್ಯೂಬಾ ತನ್ನ ಕ್ರಾಂತಿಕಾರಿ ನಾಯಕ, ಕಮಾಂಡರ್-ಇನ್-ಚೀಫ್ ಫಿಡೆಲ್ ಕ್ಯಾಸ್ಟ್ರೋ ರೂಜ್ ಅವರ ಜನ್ಮ ಶತಮಾನೋತ್ಸವವನ್ನು ಆಚರಿಸುತ್ತಿದೆ. ಐದು ದಶಕಗಳ ಕಾಲ ದೇಶವನ್ನು ಮುನ್ನಡೆಸಿದ ನಾಯಕನ ಶಾಶ್ವತ ಸಿದ್ಧಾಂತಗಳು...

‘ರೋಹಿತ್ ಕಾಯ್ದೆ’ ಜಾರಿಗೆ ಆಗ್ರಹ: ಚಾಲ್ತಿಯಲ್ಲಿರುವ ಅಧಿವೇಶನದಲ್ಲೇ ವಿಧೇಯಕ ಮಂಡಿಸಲು ಸರ್ಕಾರಕ್ಕೆ ‘ರೋಹಿತ್ ಕಾಯ್ದೆಗಾಗಿ ಜನಾಂದೋಲನ’ ಸಂಘಟನೆ ಒತ್ತಾಯ

ಬೆಂಗಳೂರು: ದೇಶದ ಉನ್ನತ ಶಿಕ್ಷಣ ಸಂಸ್ಥೆಗಳು ಹಾಗೂ ವಿಶ್ವವಿದ್ಯಾಲಯಗಳಲ್ಲಿ ದಲಿತ ಮತ್ತು ಆದಿವಾಸಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಾಂಸ್ಥಿಕ ಜಾತಿ ತಾರತಮ್ಯ, ಕಿರುಕುಳ ಹಾಗೂ ವಂಚನೆಯನ್ನು ತಡೆಗಟ್ಟಲು ಅತ್ಯಂತ ನಿರ್ಣಾಯಕವಾಗಿರುವ 'ಕರ್ನಾಟಕ ರೋಹಿತ್ ವೇಮುಲಾ...

SIR: ತೆಲಂಗಾಣ ಸರ್ಕಾರ ಮತದಾರರಿಗೆ ನೀಡಿದ್ದ FRC ಯನ್ನು , ನಿರಾಕರಿಸಿದ ಕೇಂದ್ರ ಚುನಾವಣಾ ಆಯೋಗ

ಮತದಾರರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ತೆಲಂಗಾಣ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿದ್ದ ‘ಫ್ಯಾಮಿಲಿ ರಿಜಿಸ್ಟರ್ ಸರ್ಟಿಫಿಕೇಟ್’ (FRC) ಅನ್ನು ಮತದಾರರ ದಾಖಲೆಯನ್ನಾಗಿ ಸ್ವೀಕರಿಸಲು ಕೇಂದ್ರ ಚುನಾವಣಾ ಆಯೋಗ ನಿರಾಕರಿಸಿದೆ. FRC...

ಬಿಹಾರ| ಗ್ರಾಮ ತೊರೆಯಿರಿ ಅಥವಾ ‘ಘರ್ ವಾಪ್ಸಿ’ಯಾಗಿ; ಹಿಂದುತ್ವ ಗುಂಪಿನಿಂದ ಕ್ರೈಸ್ತ ಕಟುಂಬಗಳಿಗೆ ಬೆದರಿಕೆ

ಬಿಹಾರದ ಭಾಗಲ್ಪುರ ಜಿಲ್ಲೆಯ ಗೋಪಾಲಪುರ ಗ್ರಾಮದ 42 ಕ್ರಿಶ್ಚಿಯನ್ ಕುಟುಂಬಗಳಿಗೆ ಹಿಂದುತ್ವ ಗುಂಪಿನ ಸದಸ್ಯರು ಬೆದರಿಕೆ ಹಾಕಿದ್ದಾರೆ ಎಂದು 'ಕ್ಲಾರಿಯನ್ ಇಂಡಿಯಾ' ನ್ಯೂಸ್‌ ಪೋರ್ಟ್ಲ್ ವರದಿ ಮಾಡಿದೆ. 'ಘರ್ ವಾಪ್ಸಿ'ಯಾಗಿ ಅಥವಾ ಗ್ರಾಮ...

ಭೂಮಾನಂದ ಹತ್ಯೆ: ಕೊಲೆಗಾರರ ಪರ ನಿಂತ ‘ವಾಲ್ಮೀಕಿ ನಾಯಕ ಸಂಘ’ದ ವಿರುದ್ಧ ಆಕ್ರೋಶ: ಆಗಸ್ಟ್ 15ಕ್ಕೆ ಕಪ್ಪುಪಟ್ಟಿ ಪ್ರದರ್ಶನ, ಬೈಕ್ ರ್ಯಾಲಿಗೆ ಕರೆ

ರಾಯಚೂರು: ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ಬಹುಜನ ಮುಖಂಡ ಭೂಮಾನಂದ ಅವರ ಬರ್ಬರ ಕಗ್ಗೋಲೆಯನ್ನು ಖಂಡಿಸಿ, ಕೊಲೆಗಡುಕರ ಪರವಾಗಿ ನಿಂತಿರುವ ಸಂಘಟನೆಗಳು ಹಾಗೂ ಮೌನ ವಹಿಸಿರುವ ಜನಪ್ರತಿನಿಧಿಗಳ ವಿರುದ್ಧ 'ಬಹುಜನ ಮುಖಂಡ ಭೂಮಾನಂದನ...

SIR ಅವಾಂತರ: ನಟ ಪ್ರಕಾಶ್ ರಾಜ್ ಹೆಸರೇ ವೋಟರ್ ಲಿಸ್ಟ್‌ನಿಂದ ನಾಪತ್ತೆ, ನಾಳೆ ಬೆಂಗಳೂರಲ್ಲಿ ಮಹತ್ವದ ಪತ್ರಿಕಾಗೋಷ್ಠಿ

ರಾಜ್ಯದಲ್ಲಿ ನಡೆಯುತ್ತಿರುವ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯ ಅವಾಂತರಗಳು ದಿನಕ್ಕೊಂದು ಹೊಸ ತಿರುವು ಪಡೆದುಕೊಳ್ಳುತ್ತಿದ್ದು, ಇದೀಗ ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ಹೆಸರೇ ಮತದಾರರ ಪಟ್ಟಿಯಿಂದ ನಾಪತ್ತೆಯಾಗಿದೆ. ವರ್ಷಗಳಿಂದ ಮತದಾನ...

ಹಳೆ ಮತದಾರರಲ್ಲಿ ಫಾರ್ಮ್ ನಂ.6 ಕೇಳುವುದೇ ಕಾನೂನು ಬಾಹಿರ; ಚುನಾವಣಾ ಆಯೋಗದ ನಿಯಮಗಳಿಗೆ ವಿರುದ್ಧ!

"ASDDO ಪಟ್ಟಿಯಲ್ಲಿ ಹೆಸರು ಬಂದಿದ್ದರೆ ಹೆದರಿಕೊಳ್ಳುವ ಅವಶ್ಯಕತೆ ಇಲ್ಲ, ಫಾರ್ಮ್ ನಂ.6 ಸಲ್ಲಿಸುವ ಮೂಲಕ ದಾಖಲೆಗಳನ್ನು ನೀಡಿ ಹೊಸದಾಗಿ ಮತದಾರರ ಪಟ್ಟಿಗೆ ಹೆಸರು ಸೇರಿಸಬಹುದು" ಎಂದು ಚುನಾವಣಾ ಆಯೋಗ ಹೇಳುತ್ತಿದೆ. ಆದರೆ, ಹಳೆ...

SIR: ಅರ್ಹ ಮತದಾರರನ್ನು ಹೊರಗಿಟ್ಟು 1,848 ಹೊಸ ಮತಗಟ್ಟೆ ಸ್ಥಾಪಿಸಲು ಮುಂದಾದ ಚುನಾವಣಾ ಆಯೋಗ

ಒಂದೆಡೆ ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ (SIR) ಹೆಸರಿನಲ್ಲಿ ಲಕ್ಷಾಂತರ ಅರ್ಹ ಮತದಾರರ ಹೆಸರುಗಳು ಡಿಲೀಟ್‌ ಆಗುವ ಭೀತಿ ಎದುರಾಗಿದ್ದರೆ, ಇನ್ನೊಂದೆಡೆ ರಾಜ್ಯದಲ್ಲಿ ಹೊಸದಾಗಿ 1,848 ಹೆಚ್ಚುವರಿ ಮತಗಟ್ಟೆಗಳನ್ನು ಸ್ಥಾಪಿಸಲು ಕೇಂದ್ರ ಚುನಾವಣಾ...

ದಲಿತ ನಾಯಕ ಮಲ್ಲಿಕಾರ್ಜುನ ಖರ್ಗೆ ಭಾಷಣದ ಬೆನ್ನಲ್ಲೇ ವೇದಿಕೆ ‘ಶುದ್ಧೀಕರಣ’: ಕೇಂದ್ರ ಸರ್ಕಾರ ಹಾಗೂ ಬಿಜೆಪಿಗೆ ಪ್ರತಿಪಕ್ಷಗಳ ತೀವ್ರ ತರಾಟೆ 

ಉತ್ತರಾಖಂಡದ ನೈನಿತಾಲ್ ಜಿಲ್ಲೆಯ ಹಲ್ದ್ವಾನಿಯಲ್ಲಿರುವ ರಾಮ್‌ಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಕೆಲವೇ ದಿನಗಳಲ್ಲಿ, ಬಲಪಂಥೀಯ...

ನೀಟ್ ಪೇಪರ್ ಲೀಕ್ ಪ್ರಕರಣದ ಚಾರ್ಜ್ ಶೀಟ್ ಲೀಕ್ : ಕೋರ್ಟ್ ಕಳವಳ

ನೀಟ್ ಯುಜಿ- 2026ರ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ವಿಚಾರಣೆಗಾಗಿ ಸ್ಥಾಪಿಸಲಾದ ವಿಶೇಷ ಫಾಸ್ಟ್ ಟ್ರ್ಯಾಕ್ (ಶೀಘ್ರ ಗತಿ) ನ್ಯಾಯಾಲಯವು, 13 ಆರೋಪಿಗಳ ವಿರುದ್ಧ ಕೇಂದ್ರೀಯ ತನಿಖಾ ದಳ (ಸಿಬಿಐ) ಸಲ್ಲಿಸಿರುವ ದೋಷಾರೋಪ...