Homeಮುಖಪುಟ’ಅಮಿತಾಬ್, ಅಕ್ಷಯ್‌ಗೆ ಮೋದಿ ಸರ್ಕಾರದ ವಿರುದ್ಧ ಮಾತನಾಡಲು ಧೈರ್ಯವಿಲ್ಲವೇ?’

’ಅಮಿತಾಬ್, ಅಕ್ಷಯ್‌ಗೆ ಮೋದಿ ಸರ್ಕಾರದ ವಿರುದ್ಧ ಮಾತನಾಡಲು ಧೈರ್ಯವಿಲ್ಲವೇ?’

ಸದ್ಯ ಮುಂಬೈಯಲ್ಲಿ ಪೆಟ್ರೋಲ್‌ಗೆ ಲೀಟರ್‌ಗೆ. 96.32 ರೂಪಾಯಿ ಮತ್ತು ಡೀಸೆಲ್ 87.32 ರೂಪಾಯಿಗೆ ಏರಿದೆ.

- Advertisement -
- Advertisement -

ಪೆಟ್ರೋಲ್, ಡೀಸೆಲ್ ಬೆಲೆಗಳ ಏರಿಕೆ ಬಗ್ಗೆ ಕೇಂದ್ರ ಸರ್ಕಾರವನ್ನು ಒಂದು ಕಾಲದಲ್ಲಿ ಟೀಕಿಸಿದ್ದ ಸೆಲೆಬ್ರಿಟಿಗಳು, ಹಿಂದಿಗಿಂತಲೂ ಈಗ ದರ ಹೆಚ್ಚಾಗಿದ್ದರೂ ಮೌನ ವಹಿಸಿರುವವರ ವಿರುದ್ಧ ಮಹಾರಾಷ್ಟ್ರ ಕಾಂಗ್ರೆಸ್ ಗುರುವಾರ (ಫೆ.18) ಕಠಿಣ ನಿಲುವು ತೆಗೆದುಕೊಂಡಿದೆ.

ಅಮಿತಾಬ್ ಬಚ್ಚನ್ ಮತ್ತು ಅಕ್ಷಯ್ ಕುಮಾರ್ ಅವರಂತಹ ನಟರನ್ನು ಒಳಗೊಂಡ ಚಲನಚಿತ್ರಗಳ ಪ್ರದರ್ಶನ ಮತ್ತು ಚಲನಚಿತ್ರಗಳ ಚಿತ್ರೀಕರಣವನ್ನು ಮಹಾರಾಷ್ಟ್ರದಲ್ಲಿ ನಿಲ್ಲಿಸುವುದಾಗಿ ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ನಾನಾ ಪಟೋಲೆ ಎಚ್ಚರಿಕೆ ನೀಡಿದ್ದಾರೆ.

“ಮನಮೋಹನ್ ಸಿಂಗ್ ಅವಧಿಯಲ್ಲಿ ನಟ ಅಮಿತಾಬ್ ಬಚ್ಚನ್ ಮತ್ತು ಅಕ್ಷಯ್ ಕುಮಾರ್ ಅವರಂತಹ ಜನರು ಇಂಧನ ಬೆಲೆಗಳ ಬಗ್ಗೆ ಟ್ವೀಟ್ ಮಾಡುತ್ತಿದ್ದರು. ಈಗ ಹೆಚ್ಚುತ್ತಿರುವ ಇಂಧನ ಬೆಲೆಗಳು ಸಾಮಾನ್ಯ ಜನರನ್ನು ಹಿಂಸಿಸುತ್ತಿವೆ. ಆದರೆ ಇಂದು ಈ ನಟರೆಲ್ಲಾ ಮೌನವಾಗಿದ್ದಾರೆ. “ಸರ್ವಾಧಿಕಾರಿ ಮೋದಿ ಸರ್ಕಾರ”ದ ವಿರುದ್ಧ ಮಾತನಾಡಲು ಅವರಿಗೆ ಧೈರ್ಯವಿಲ್ಲವೇ?” ಎಂದು ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ನಾನಾ ಪಟೋಲೆ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ: ಸರ್ಕಾರದ ವಿರುದ್ದ ಎಳ್ಳು ನೀರು ಬಿಡುವ ಅಭಿಯಾನ

ಸದ್ಯ ಮುಂಬೈಯಲ್ಲಿ ಪೆಟ್ರೋಲ್‌ಗೆ ಲೀಟರ್‌ಗೆ. 96.32 ರೂಪಾಯಿ ಮತ್ತು ಡೀಸೆಲ್ 87.32 ರೂಪಾಯಿಗೆ ಏರಿದೆ.

“ಮಹಾರಾಷ್ಟ್ರದಲ್ಲಿ, ಅಮಿತಾಬ್ ಬಚ್ಚನ್ ಅಥವಾ ಅಕ್ಷಯ್ ಕುಮಾರ್ ಒಳಗೊಂಡ ಚಿತ್ರಗಳ ಚಿತ್ರೀಕರಣಕ್ಕೆ ನಾವು ಅವಕಾಶ ನೀಡುವುದಿಲ್ಲ. ಒಂದೋ ನೀವು ನರೇಂದ್ರ ಮೋದಿ ಸರ್ಕಾರದ ರಾಷ್ಟ್ರ ವಿರೋಧಿ ನೀತಿಗಳ ವಿರುದ್ಧ ಮಾತನಾಡಿ ಇಲ್ಲವಾದರೇ ನಿಮ್ಮ ಚಲನಚಿತ್ರಗಳ ಚಿತ್ರೀಕರಣವನ್ನು ಅನ್ನು ನಾವು ನಿಲ್ಲಿಸುತ್ತೇವೆ” ಎಂದು ಎಚ್ಚರಿಕೆ ನೀಡಿದ್ದಾರೆ.

ಮತ್ತೊಂದೆಡೆ, ರಾಜ್ಯದಲ್ಲಿ ಆಡಳಿತ ಪಕ್ಷ ಹೊರಡಿಸಿರುವ ಎಚ್ಚರಿಕೆ ಹಿನ್ನೆಲೆಯಲ್ಲಿ ಬಿಜೆಪಿ ಈ ನಟರಿಗೆ ಬೆಂಬಲ ನೀಡಿದೆ. ರಾಜ್ಯ ಬಿಜೆಪಿ ನಾಯಕ ಸುಧೀರ್ ಮುಂಗಂತಿವಾರ್ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ.

“ಕಾಂಗ್ರೆಸ್ ಆತ್ಮವು ಸರ್ವಾಧಿಕಾರವಾಗಿದ್ದು, ಅದು ಪ್ರಜಾಪ್ರಭುತ್ವದ ಮುಖವಾಡವನ್ನು ಧರಿಸಿತ್ತು. ಕಾಂಗ್ರೆಸ್ ಕಚೇರಿ ಅಕ್ಬರ್ ರಸ್ತೆಯಲ್ಲಿರುವುದರಿಂದ, ಅವರು ಅಕ್ಬರ್‌ನ ಹಾದಿಯಲ್ಲಿ ಮಾತ್ರ ನಡೆಯುತ್ತಾರೆ. ಅಮಿತಾಬ್ ಬಚ್ಚನ್ ಅವರ ಬೆದರಿಕೆಗಳ ಬಗ್ಗೆ ಚಿಂತಿಸಬೇಕಾಗಿಲ್ಲ. ಶೋಲೆ ಚಿತ್ರದಲ್ಲಿ ಗಬ್ಬರ್ ಸಿಂಗ್ ಅವರಿಂದ ಇದೇ ರೀತಿಯ ಬೆದರಿಕೆಗಳನ್ನು ಅವರು ಎದುರಿಸಿದ್ದರು” ಎಂದು ಮುಂಗಂತಿವಾರ್ ಹೇಳಿದ್ದಾರೆ.


ಇದನ್ನೂ ಓದಿ: ಪಂಜಾಬ್: ಬಟಿಂಡಾದಲ್ಲಿ 53 ವರ್ಷಗಳ ಬಳಿಕ ಮೇಯರ್ ಸ್ಥಾನ ಕಾಂಗ್ರೆಸ್‌ಗೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...