Homeಮುಖಪುಟ’ಅಮಿತಾಬ್, ಅಕ್ಷಯ್‌ಗೆ ಮೋದಿ ಸರ್ಕಾರದ ವಿರುದ್ಧ ಮಾತನಾಡಲು ಧೈರ್ಯವಿಲ್ಲವೇ?’

’ಅಮಿತಾಬ್, ಅಕ್ಷಯ್‌ಗೆ ಮೋದಿ ಸರ್ಕಾರದ ವಿರುದ್ಧ ಮಾತನಾಡಲು ಧೈರ್ಯವಿಲ್ಲವೇ?’

ಸದ್ಯ ಮುಂಬೈಯಲ್ಲಿ ಪೆಟ್ರೋಲ್‌ಗೆ ಲೀಟರ್‌ಗೆ. 96.32 ರೂಪಾಯಿ ಮತ್ತು ಡೀಸೆಲ್ 87.32 ರೂಪಾಯಿಗೆ ಏರಿದೆ.

- Advertisement -
- Advertisement -

ಪೆಟ್ರೋಲ್, ಡೀಸೆಲ್ ಬೆಲೆಗಳ ಏರಿಕೆ ಬಗ್ಗೆ ಕೇಂದ್ರ ಸರ್ಕಾರವನ್ನು ಒಂದು ಕಾಲದಲ್ಲಿ ಟೀಕಿಸಿದ್ದ ಸೆಲೆಬ್ರಿಟಿಗಳು, ಹಿಂದಿಗಿಂತಲೂ ಈಗ ದರ ಹೆಚ್ಚಾಗಿದ್ದರೂ ಮೌನ ವಹಿಸಿರುವವರ ವಿರುದ್ಧ ಮಹಾರಾಷ್ಟ್ರ ಕಾಂಗ್ರೆಸ್ ಗುರುವಾರ (ಫೆ.18) ಕಠಿಣ ನಿಲುವು ತೆಗೆದುಕೊಂಡಿದೆ.

ಅಮಿತಾಬ್ ಬಚ್ಚನ್ ಮತ್ತು ಅಕ್ಷಯ್ ಕುಮಾರ್ ಅವರಂತಹ ನಟರನ್ನು ಒಳಗೊಂಡ ಚಲನಚಿತ್ರಗಳ ಪ್ರದರ್ಶನ ಮತ್ತು ಚಲನಚಿತ್ರಗಳ ಚಿತ್ರೀಕರಣವನ್ನು ಮಹಾರಾಷ್ಟ್ರದಲ್ಲಿ ನಿಲ್ಲಿಸುವುದಾಗಿ ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ನಾನಾ ಪಟೋಲೆ ಎಚ್ಚರಿಕೆ ನೀಡಿದ್ದಾರೆ.

“ಮನಮೋಹನ್ ಸಿಂಗ್ ಅವಧಿಯಲ್ಲಿ ನಟ ಅಮಿತಾಬ್ ಬಚ್ಚನ್ ಮತ್ತು ಅಕ್ಷಯ್ ಕುಮಾರ್ ಅವರಂತಹ ಜನರು ಇಂಧನ ಬೆಲೆಗಳ ಬಗ್ಗೆ ಟ್ವೀಟ್ ಮಾಡುತ್ತಿದ್ದರು. ಈಗ ಹೆಚ್ಚುತ್ತಿರುವ ಇಂಧನ ಬೆಲೆಗಳು ಸಾಮಾನ್ಯ ಜನರನ್ನು ಹಿಂಸಿಸುತ್ತಿವೆ. ಆದರೆ ಇಂದು ಈ ನಟರೆಲ್ಲಾ ಮೌನವಾಗಿದ್ದಾರೆ. “ಸರ್ವಾಧಿಕಾರಿ ಮೋದಿ ಸರ್ಕಾರ”ದ ವಿರುದ್ಧ ಮಾತನಾಡಲು ಅವರಿಗೆ ಧೈರ್ಯವಿಲ್ಲವೇ?” ಎಂದು ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ನಾನಾ ಪಟೋಲೆ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ: ಸರ್ಕಾರದ ವಿರುದ್ದ ಎಳ್ಳು ನೀರು ಬಿಡುವ ಅಭಿಯಾನ

ಸದ್ಯ ಮುಂಬೈಯಲ್ಲಿ ಪೆಟ್ರೋಲ್‌ಗೆ ಲೀಟರ್‌ಗೆ. 96.32 ರೂಪಾಯಿ ಮತ್ತು ಡೀಸೆಲ್ 87.32 ರೂಪಾಯಿಗೆ ಏರಿದೆ.

“ಮಹಾರಾಷ್ಟ್ರದಲ್ಲಿ, ಅಮಿತಾಬ್ ಬಚ್ಚನ್ ಅಥವಾ ಅಕ್ಷಯ್ ಕುಮಾರ್ ಒಳಗೊಂಡ ಚಿತ್ರಗಳ ಚಿತ್ರೀಕರಣಕ್ಕೆ ನಾವು ಅವಕಾಶ ನೀಡುವುದಿಲ್ಲ. ಒಂದೋ ನೀವು ನರೇಂದ್ರ ಮೋದಿ ಸರ್ಕಾರದ ರಾಷ್ಟ್ರ ವಿರೋಧಿ ನೀತಿಗಳ ವಿರುದ್ಧ ಮಾತನಾಡಿ ಇಲ್ಲವಾದರೇ ನಿಮ್ಮ ಚಲನಚಿತ್ರಗಳ ಚಿತ್ರೀಕರಣವನ್ನು ಅನ್ನು ನಾವು ನಿಲ್ಲಿಸುತ್ತೇವೆ” ಎಂದು ಎಚ್ಚರಿಕೆ ನೀಡಿದ್ದಾರೆ.

ಮತ್ತೊಂದೆಡೆ, ರಾಜ್ಯದಲ್ಲಿ ಆಡಳಿತ ಪಕ್ಷ ಹೊರಡಿಸಿರುವ ಎಚ್ಚರಿಕೆ ಹಿನ್ನೆಲೆಯಲ್ಲಿ ಬಿಜೆಪಿ ಈ ನಟರಿಗೆ ಬೆಂಬಲ ನೀಡಿದೆ. ರಾಜ್ಯ ಬಿಜೆಪಿ ನಾಯಕ ಸುಧೀರ್ ಮುಂಗಂತಿವಾರ್ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ.

“ಕಾಂಗ್ರೆಸ್ ಆತ್ಮವು ಸರ್ವಾಧಿಕಾರವಾಗಿದ್ದು, ಅದು ಪ್ರಜಾಪ್ರಭುತ್ವದ ಮುಖವಾಡವನ್ನು ಧರಿಸಿತ್ತು. ಕಾಂಗ್ರೆಸ್ ಕಚೇರಿ ಅಕ್ಬರ್ ರಸ್ತೆಯಲ್ಲಿರುವುದರಿಂದ, ಅವರು ಅಕ್ಬರ್‌ನ ಹಾದಿಯಲ್ಲಿ ಮಾತ್ರ ನಡೆಯುತ್ತಾರೆ. ಅಮಿತಾಬ್ ಬಚ್ಚನ್ ಅವರ ಬೆದರಿಕೆಗಳ ಬಗ್ಗೆ ಚಿಂತಿಸಬೇಕಾಗಿಲ್ಲ. ಶೋಲೆ ಚಿತ್ರದಲ್ಲಿ ಗಬ್ಬರ್ ಸಿಂಗ್ ಅವರಿಂದ ಇದೇ ರೀತಿಯ ಬೆದರಿಕೆಗಳನ್ನು ಅವರು ಎದುರಿಸಿದ್ದರು” ಎಂದು ಮುಂಗಂತಿವಾರ್ ಹೇಳಿದ್ದಾರೆ.


ಇದನ್ನೂ ಓದಿ: ಪಂಜಾಬ್: ಬಟಿಂಡಾದಲ್ಲಿ 53 ವರ್ಷಗಳ ಬಳಿಕ ಮೇಯರ್ ಸ್ಥಾನ ಕಾಂಗ್ರೆಸ್‌ಗೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...