Homeಮುಖಪುಟ’ಅಮಿತಾಬ್, ಅಕ್ಷಯ್‌ಗೆ ಮೋದಿ ಸರ್ಕಾರದ ವಿರುದ್ಧ ಮಾತನಾಡಲು ಧೈರ್ಯವಿಲ್ಲವೇ?’

’ಅಮಿತಾಬ್, ಅಕ್ಷಯ್‌ಗೆ ಮೋದಿ ಸರ್ಕಾರದ ವಿರುದ್ಧ ಮಾತನಾಡಲು ಧೈರ್ಯವಿಲ್ಲವೇ?’

ಸದ್ಯ ಮುಂಬೈಯಲ್ಲಿ ಪೆಟ್ರೋಲ್‌ಗೆ ಲೀಟರ್‌ಗೆ. 96.32 ರೂಪಾಯಿ ಮತ್ತು ಡೀಸೆಲ್ 87.32 ರೂಪಾಯಿಗೆ ಏರಿದೆ.

- Advertisement -
- Advertisement -

ಪೆಟ್ರೋಲ್, ಡೀಸೆಲ್ ಬೆಲೆಗಳ ಏರಿಕೆ ಬಗ್ಗೆ ಕೇಂದ್ರ ಸರ್ಕಾರವನ್ನು ಒಂದು ಕಾಲದಲ್ಲಿ ಟೀಕಿಸಿದ್ದ ಸೆಲೆಬ್ರಿಟಿಗಳು, ಹಿಂದಿಗಿಂತಲೂ ಈಗ ದರ ಹೆಚ್ಚಾಗಿದ್ದರೂ ಮೌನ ವಹಿಸಿರುವವರ ವಿರುದ್ಧ ಮಹಾರಾಷ್ಟ್ರ ಕಾಂಗ್ರೆಸ್ ಗುರುವಾರ (ಫೆ.18) ಕಠಿಣ ನಿಲುವು ತೆಗೆದುಕೊಂಡಿದೆ.

ಅಮಿತಾಬ್ ಬಚ್ಚನ್ ಮತ್ತು ಅಕ್ಷಯ್ ಕುಮಾರ್ ಅವರಂತಹ ನಟರನ್ನು ಒಳಗೊಂಡ ಚಲನಚಿತ್ರಗಳ ಪ್ರದರ್ಶನ ಮತ್ತು ಚಲನಚಿತ್ರಗಳ ಚಿತ್ರೀಕರಣವನ್ನು ಮಹಾರಾಷ್ಟ್ರದಲ್ಲಿ ನಿಲ್ಲಿಸುವುದಾಗಿ ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ನಾನಾ ಪಟೋಲೆ ಎಚ್ಚರಿಕೆ ನೀಡಿದ್ದಾರೆ.

“ಮನಮೋಹನ್ ಸಿಂಗ್ ಅವಧಿಯಲ್ಲಿ ನಟ ಅಮಿತಾಬ್ ಬಚ್ಚನ್ ಮತ್ತು ಅಕ್ಷಯ್ ಕುಮಾರ್ ಅವರಂತಹ ಜನರು ಇಂಧನ ಬೆಲೆಗಳ ಬಗ್ಗೆ ಟ್ವೀಟ್ ಮಾಡುತ್ತಿದ್ದರು. ಈಗ ಹೆಚ್ಚುತ್ತಿರುವ ಇಂಧನ ಬೆಲೆಗಳು ಸಾಮಾನ್ಯ ಜನರನ್ನು ಹಿಂಸಿಸುತ್ತಿವೆ. ಆದರೆ ಇಂದು ಈ ನಟರೆಲ್ಲಾ ಮೌನವಾಗಿದ್ದಾರೆ. “ಸರ್ವಾಧಿಕಾರಿ ಮೋದಿ ಸರ್ಕಾರ”ದ ವಿರುದ್ಧ ಮಾತನಾಡಲು ಅವರಿಗೆ ಧೈರ್ಯವಿಲ್ಲವೇ?” ಎಂದು ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ನಾನಾ ಪಟೋಲೆ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ: ಸರ್ಕಾರದ ವಿರುದ್ದ ಎಳ್ಳು ನೀರು ಬಿಡುವ ಅಭಿಯಾನ

ಸದ್ಯ ಮುಂಬೈಯಲ್ಲಿ ಪೆಟ್ರೋಲ್‌ಗೆ ಲೀಟರ್‌ಗೆ. 96.32 ರೂಪಾಯಿ ಮತ್ತು ಡೀಸೆಲ್ 87.32 ರೂಪಾಯಿಗೆ ಏರಿದೆ.

“ಮಹಾರಾಷ್ಟ್ರದಲ್ಲಿ, ಅಮಿತಾಬ್ ಬಚ್ಚನ್ ಅಥವಾ ಅಕ್ಷಯ್ ಕುಮಾರ್ ಒಳಗೊಂಡ ಚಿತ್ರಗಳ ಚಿತ್ರೀಕರಣಕ್ಕೆ ನಾವು ಅವಕಾಶ ನೀಡುವುದಿಲ್ಲ. ಒಂದೋ ನೀವು ನರೇಂದ್ರ ಮೋದಿ ಸರ್ಕಾರದ ರಾಷ್ಟ್ರ ವಿರೋಧಿ ನೀತಿಗಳ ವಿರುದ್ಧ ಮಾತನಾಡಿ ಇಲ್ಲವಾದರೇ ನಿಮ್ಮ ಚಲನಚಿತ್ರಗಳ ಚಿತ್ರೀಕರಣವನ್ನು ಅನ್ನು ನಾವು ನಿಲ್ಲಿಸುತ್ತೇವೆ” ಎಂದು ಎಚ್ಚರಿಕೆ ನೀಡಿದ್ದಾರೆ.

ಮತ್ತೊಂದೆಡೆ, ರಾಜ್ಯದಲ್ಲಿ ಆಡಳಿತ ಪಕ್ಷ ಹೊರಡಿಸಿರುವ ಎಚ್ಚರಿಕೆ ಹಿನ್ನೆಲೆಯಲ್ಲಿ ಬಿಜೆಪಿ ಈ ನಟರಿಗೆ ಬೆಂಬಲ ನೀಡಿದೆ. ರಾಜ್ಯ ಬಿಜೆಪಿ ನಾಯಕ ಸುಧೀರ್ ಮುಂಗಂತಿವಾರ್ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ.

“ಕಾಂಗ್ರೆಸ್ ಆತ್ಮವು ಸರ್ವಾಧಿಕಾರವಾಗಿದ್ದು, ಅದು ಪ್ರಜಾಪ್ರಭುತ್ವದ ಮುಖವಾಡವನ್ನು ಧರಿಸಿತ್ತು. ಕಾಂಗ್ರೆಸ್ ಕಚೇರಿ ಅಕ್ಬರ್ ರಸ್ತೆಯಲ್ಲಿರುವುದರಿಂದ, ಅವರು ಅಕ್ಬರ್‌ನ ಹಾದಿಯಲ್ಲಿ ಮಾತ್ರ ನಡೆಯುತ್ತಾರೆ. ಅಮಿತಾಬ್ ಬಚ್ಚನ್ ಅವರ ಬೆದರಿಕೆಗಳ ಬಗ್ಗೆ ಚಿಂತಿಸಬೇಕಾಗಿಲ್ಲ. ಶೋಲೆ ಚಿತ್ರದಲ್ಲಿ ಗಬ್ಬರ್ ಸಿಂಗ್ ಅವರಿಂದ ಇದೇ ರೀತಿಯ ಬೆದರಿಕೆಗಳನ್ನು ಅವರು ಎದುರಿಸಿದ್ದರು” ಎಂದು ಮುಂಗಂತಿವಾರ್ ಹೇಳಿದ್ದಾರೆ.


ಇದನ್ನೂ ಓದಿ: ಪಂಜಾಬ್: ಬಟಿಂಡಾದಲ್ಲಿ 53 ವರ್ಷಗಳ ಬಳಿಕ ಮೇಯರ್ ಸ್ಥಾನ ಕಾಂಗ್ರೆಸ್‌ಗೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ: ಕಣ್ಣೂರು ದಂತ ಕಾಲೇಜಿನಲ್ಲಿ ದಲಿತ ಬಿಡಿಎಸ್ ವಿದ್ಯಾರ್ಥಿ ಆತ್ಮಹತ್ಯೆ, ಕ್ರೂರ ಜಾತಿ ನಿಂದನೆ, ಅವಮಾನ ಆರೋಪ

ಕೇರಳದಲ್ಲಿ ನಡೆದ ಜಾತಿ ಆಧಾರಿತ ಕಿರುಕುಳದ ಆಘಾತಕಾರಿ ಪ್ರಕರಣದಲ್ಲಿ, ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ.   ಆರ್‌.ಎಲ್ ನಿತಿನ್ ರಾಜ್ ಅವರ ಕುಟುಂಬವು...

ಜಬ್ಬಾರ್​ರನ್ನು ಎಂಎಲ್‌ಸಿ ಮಾಡಿದ್ದು ನಾವು, ಪಕ್ಷದ ಅನ್ನ ತಿಂದ ಮೇಲೆ ಕೆಲಸ ಮಾಡಬೇಕಿತ್ತು : ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜನರ ಪ್ರತಿಕ್ರಿಯೆ ಚೆನ್ನಾಗಿತ್ತು, ನಾವು ಗೆಲುವು ಸಾಧಿಸುತ್ತೇವೆ ಎಂಬ ವಿಶ್ವಾಸವಿದೆ. ನಮ್ಮ ಮತದಾರ ಬಂಧುಗಳು ಉತ್ತಮವಾಗಿ ಮತದಾನ ಮಾಡಿದ್ದಾರೆ. ಒಳ್ಳೆಯ ಅಂತರದಲ್ಲಿ ಕಾಂಗ್ರೆಸ್‌ ಪಕ್ಷ ಗೆಲ್ಲುತ್ತೆ,...

ಧಾರವಾಡ: ಯುವ ಕಾಂಗ್ರೆಸ್ ನಾಯಕ ಫೈರೋಜ್ ಖಾನ್ ಪಠಾಣ್ ಹತ್ಯೆ; ಮೂವರು ಆರೋಪಿಗಳ ಬಂಧನ

ಧಾರವಾಡದಲ್ಲಿ ಶುಕ್ರವಾರ ತಡರಾತ್ರಿ ಯುವ ಕಾಂಗ್ರೆಸ್ ನಾಯಕನೊಬ್ಬನನ್ನು ಅವರ ನಿವಾಸದೊಳಗೆ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ನಗರದಾದ್ಯಂತ ಆಘಾತದ ಅಲೆಗಳನ್ನು ಸೃಷ್ಟಿಸಿದೆ. ಮೃತ ವ್ಯಕ್ತಿಯನ್ನು ಫೈರೋಜ್ ಖಾನ್ ಪಠಾಣ್ (34) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ,...

ಮಧ್ಯಪ್ರದೇಶದ ಕಟ್ನಿಯಲ್ಲಿ ಮಹಾರಾಷ್ಟ್ರಕ್ಕೆ ರೈಲಿನಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ 163 ಅಪ್ರಾಪ್ತ ಬಾಲಕರ ರಕ್ಷಣೆ; 8 ಮಂದಿ ಬಂಧನ

ಕಟ್ನಿ: ಬಿಹಾರದಿಂದ ಮಹಾರಾಷ್ಟ್ರಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎನ್ನಲಾದ 163 ಅಪ್ರಾಪ್ತ ಬಾಲಕರನ್ನು ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ಎಕ್ಸ್‌ಪ್ರೆಸ್ ರೈಲಿನಿಂದ ರೈಲ್ವೆ ಪೊಲೀಸರು ರಕ್ಷಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಆರು ರಿಂದ 13 ವರ್ಷದೊಳಗಿನ...

ನಗರಪಾಲಿಕೆ ಚುನಾವಣೆಯಲ್ಲಿ ನಮಗೆ ಅಧಿಕಾರಕ್ಕೆ ಬರಲು ಒಂದು ಅವಕಾಶ ನೀಡಿ: ಬೆಂಗಳೂರಿಗರಿಗೆ ಎಚ್‌.ಡಿ ಕುಮಾರಸ್ವಾಮಿ ಮನವಿ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಡಿಯಲ್ಲಿರುವ ಐದು ಮಹಾನಗರ ಪಾಲಿಕೆಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವ ಮೂಲಕ ಅಧಿಕಾರಕ್ಕೆ ಬರುವ ಅವಕಾಶ ನೀಡುವಂತೆ ದೇವೇಗೌಡ ನೇತೃತ್ವದ ಜೆಡಿಎಸ್ ಶನಿವಾರ ಬೆಂಗಳೂರಿನ ಜನರನ್ನು...

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿ.ಕೆ ಶಿವಕುಮಾರ್; ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ಸಮಿತಿ ವಿಸರ್ಜನೆ

ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗಕ್ಕೆ ನೀಡಿದ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಂಗೀಕರಿಸಿದ್ದಾರೆ, ಜೊತೆಗೆ ಅಲ್ಪಸಂಖ್ಯಾತ ಘಟಕ ಸಮಿತಿಯನ್ನೂ ವಿಸರ್ಜಿಸಿದ್ದಾರೆ ಎಂದು ವರದಿಯಾಗಿದೆ. ಕೆಪಿಸಿಸಿ ಅಲ್ಪಸಂಖ್ಯಾತ...

‘ಯುದ್ಧ ಭುಗಿಲೆದ್ದು ಪಾಕಿಸ್ತಾನ ಶಾಂತಿ ಸ್ಥಾಪಿಸಲು ವಿಫಲವಾದರೆ, ಇಸ್ರೇಲ್ ಮೇಲೆ ದಾಳಿ ಮಾಡುವುದು ನಮ್ಮ ಕರ್ತವ್ಯ’: ಟರ್ಕಿ ಅಧ್ಯಕ್ಷ ಎರ್ಡೋಗನ್

ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಇಸ್ರೇಲ್ ವಿರುದ್ಧ ತೀಕ್ಷ್ಣ ಎಚ್ಚರಿಕೆ ನೀಡಿದ್ದು, ನಡೆಯುತ್ತಿರುವ ಸಂಘರ್ಷವನ್ನು ಶಮನಗೊಳಿಸಲು ರಾಜತಾಂತ್ರಿಕ ಪ್ರಯತ್ನಗಳು ವಿಫಲವಾದರೆ ಸಂಭಾವ್ಯ ಕ್ರಮ ಕೈಗೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಕಠಿಣ ಪದಗಳ ಹೇಳಿಕೆಯಲ್ಲಿ,...

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನ

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ (92) ಅವರು ಭಾನುವಾರ (ಏ.12) ನಿಧನರಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯ ಡಾ. ಪ್ರತೀತ್ ಸಮ್ದಾನಿ...

‘ಸಂವಿಧಾನವನ್ನು ಕೊನೆಗೊಳಿಸುವುದು ಆರ್‌ಎಸ್‌ಎಸ್-ಬಿಜೆಪಿಯ ಮುಖ್ಯ ಉದ್ದೇಶ’: ರಾಹುಲ್ ಗಾಂಧಿ ಆರೋಪ

ನವದೆಹಲಿ: ಆರ್‌ಎಸ್‌ಎಸ್ - ಬಿಜೆಪಿ ವಿರುದ್ಧ ಭಾನುವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಭಾರತದಲ್ಲಿ ಎಲ್ಲರನ್ನೂ ಸಮಾನರು ಎಂದು ಪರಿಗಣಿಸಲು ಬಯಸದ ಕಾರಣ ಸಂವಿಧಾನವನ್ನು ಕೊನೆಗೊಳಿಸುವುದು ಅವರ ಮುಖ್ಯ...

ಗಾಝಾಗೆ ಜೀವರಕ್ಷಕ ನೆರವಿಗಾಗಿ ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ನೌಕಾಯಾನ; ನಾಗರಿಕರ ರಕ್ಷಣೆಗೆ ಕರೆ ನೀಡಿದ ಯುನೈಟೆಡ್ ಸ್ಟಾಫ್ ಫಾರ್ ಗಾಝಾ

ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ಭಾನುವಾರ ನೌಕಾಯಾನ ಮಾಡಲು ಸಿದ್ಧವಾಗುತ್ತಿದ್ದಂತೆ, ಗಾಝಾದ ಯುನೈಟೆಡ್ ಸ್ಟಾಫ್ ಅಂತರರಾಷ್ಟ್ರೀಯ ಕಾನೂನಿನ ಅಡಿಯಲ್ಲಿ ಕಾರ್ಯಾಚರಣೆಯಲ್ಲಿರುವ ನಾಗರಿಕರ ರಕ್ಷಣೆಗಾಗಿ ಕರೆ ನೀಡಿತು ಮತ್ತು ಗಾಝಾಗೆ ಮಾನವೀಯ ನೆರವು ಪ್ರಯತ್ನಗಳಿಗೆ ಬೆಂಬಲವನ್ನು...