Homeಮುಖಪುಟ’ಅಮಿತಾಬ್, ಅಕ್ಷಯ್‌ಗೆ ಮೋದಿ ಸರ್ಕಾರದ ವಿರುದ್ಧ ಮಾತನಾಡಲು ಧೈರ್ಯವಿಲ್ಲವೇ?’

’ಅಮಿತಾಬ್, ಅಕ್ಷಯ್‌ಗೆ ಮೋದಿ ಸರ್ಕಾರದ ವಿರುದ್ಧ ಮಾತನಾಡಲು ಧೈರ್ಯವಿಲ್ಲವೇ?’

ಸದ್ಯ ಮುಂಬೈಯಲ್ಲಿ ಪೆಟ್ರೋಲ್‌ಗೆ ಲೀಟರ್‌ಗೆ. 96.32 ರೂಪಾಯಿ ಮತ್ತು ಡೀಸೆಲ್ 87.32 ರೂಪಾಯಿಗೆ ಏರಿದೆ.

- Advertisement -
- Advertisement -

ಪೆಟ್ರೋಲ್, ಡೀಸೆಲ್ ಬೆಲೆಗಳ ಏರಿಕೆ ಬಗ್ಗೆ ಕೇಂದ್ರ ಸರ್ಕಾರವನ್ನು ಒಂದು ಕಾಲದಲ್ಲಿ ಟೀಕಿಸಿದ್ದ ಸೆಲೆಬ್ರಿಟಿಗಳು, ಹಿಂದಿಗಿಂತಲೂ ಈಗ ದರ ಹೆಚ್ಚಾಗಿದ್ದರೂ ಮೌನ ವಹಿಸಿರುವವರ ವಿರುದ್ಧ ಮಹಾರಾಷ್ಟ್ರ ಕಾಂಗ್ರೆಸ್ ಗುರುವಾರ (ಫೆ.18) ಕಠಿಣ ನಿಲುವು ತೆಗೆದುಕೊಂಡಿದೆ.

ಅಮಿತಾಬ್ ಬಚ್ಚನ್ ಮತ್ತು ಅಕ್ಷಯ್ ಕುಮಾರ್ ಅವರಂತಹ ನಟರನ್ನು ಒಳಗೊಂಡ ಚಲನಚಿತ್ರಗಳ ಪ್ರದರ್ಶನ ಮತ್ತು ಚಲನಚಿತ್ರಗಳ ಚಿತ್ರೀಕರಣವನ್ನು ಮಹಾರಾಷ್ಟ್ರದಲ್ಲಿ ನಿಲ್ಲಿಸುವುದಾಗಿ ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ನಾನಾ ಪಟೋಲೆ ಎಚ್ಚರಿಕೆ ನೀಡಿದ್ದಾರೆ.

“ಮನಮೋಹನ್ ಸಿಂಗ್ ಅವಧಿಯಲ್ಲಿ ನಟ ಅಮಿತಾಬ್ ಬಚ್ಚನ್ ಮತ್ತು ಅಕ್ಷಯ್ ಕುಮಾರ್ ಅವರಂತಹ ಜನರು ಇಂಧನ ಬೆಲೆಗಳ ಬಗ್ಗೆ ಟ್ವೀಟ್ ಮಾಡುತ್ತಿದ್ದರು. ಈಗ ಹೆಚ್ಚುತ್ತಿರುವ ಇಂಧನ ಬೆಲೆಗಳು ಸಾಮಾನ್ಯ ಜನರನ್ನು ಹಿಂಸಿಸುತ್ತಿವೆ. ಆದರೆ ಇಂದು ಈ ನಟರೆಲ್ಲಾ ಮೌನವಾಗಿದ್ದಾರೆ. “ಸರ್ವಾಧಿಕಾರಿ ಮೋದಿ ಸರ್ಕಾರ”ದ ವಿರುದ್ಧ ಮಾತನಾಡಲು ಅವರಿಗೆ ಧೈರ್ಯವಿಲ್ಲವೇ?” ಎಂದು ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ನಾನಾ ಪಟೋಲೆ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ: ಸರ್ಕಾರದ ವಿರುದ್ದ ಎಳ್ಳು ನೀರು ಬಿಡುವ ಅಭಿಯಾನ

ಸದ್ಯ ಮುಂಬೈಯಲ್ಲಿ ಪೆಟ್ರೋಲ್‌ಗೆ ಲೀಟರ್‌ಗೆ. 96.32 ರೂಪಾಯಿ ಮತ್ತು ಡೀಸೆಲ್ 87.32 ರೂಪಾಯಿಗೆ ಏರಿದೆ.

“ಮಹಾರಾಷ್ಟ್ರದಲ್ಲಿ, ಅಮಿತಾಬ್ ಬಚ್ಚನ್ ಅಥವಾ ಅಕ್ಷಯ್ ಕುಮಾರ್ ಒಳಗೊಂಡ ಚಿತ್ರಗಳ ಚಿತ್ರೀಕರಣಕ್ಕೆ ನಾವು ಅವಕಾಶ ನೀಡುವುದಿಲ್ಲ. ಒಂದೋ ನೀವು ನರೇಂದ್ರ ಮೋದಿ ಸರ್ಕಾರದ ರಾಷ್ಟ್ರ ವಿರೋಧಿ ನೀತಿಗಳ ವಿರುದ್ಧ ಮಾತನಾಡಿ ಇಲ್ಲವಾದರೇ ನಿಮ್ಮ ಚಲನಚಿತ್ರಗಳ ಚಿತ್ರೀಕರಣವನ್ನು ಅನ್ನು ನಾವು ನಿಲ್ಲಿಸುತ್ತೇವೆ” ಎಂದು ಎಚ್ಚರಿಕೆ ನೀಡಿದ್ದಾರೆ.

ಮತ್ತೊಂದೆಡೆ, ರಾಜ್ಯದಲ್ಲಿ ಆಡಳಿತ ಪಕ್ಷ ಹೊರಡಿಸಿರುವ ಎಚ್ಚರಿಕೆ ಹಿನ್ನೆಲೆಯಲ್ಲಿ ಬಿಜೆಪಿ ಈ ನಟರಿಗೆ ಬೆಂಬಲ ನೀಡಿದೆ. ರಾಜ್ಯ ಬಿಜೆಪಿ ನಾಯಕ ಸುಧೀರ್ ಮುಂಗಂತಿವಾರ್ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ.

“ಕಾಂಗ್ರೆಸ್ ಆತ್ಮವು ಸರ್ವಾಧಿಕಾರವಾಗಿದ್ದು, ಅದು ಪ್ರಜಾಪ್ರಭುತ್ವದ ಮುಖವಾಡವನ್ನು ಧರಿಸಿತ್ತು. ಕಾಂಗ್ರೆಸ್ ಕಚೇರಿ ಅಕ್ಬರ್ ರಸ್ತೆಯಲ್ಲಿರುವುದರಿಂದ, ಅವರು ಅಕ್ಬರ್‌ನ ಹಾದಿಯಲ್ಲಿ ಮಾತ್ರ ನಡೆಯುತ್ತಾರೆ. ಅಮಿತಾಬ್ ಬಚ್ಚನ್ ಅವರ ಬೆದರಿಕೆಗಳ ಬಗ್ಗೆ ಚಿಂತಿಸಬೇಕಾಗಿಲ್ಲ. ಶೋಲೆ ಚಿತ್ರದಲ್ಲಿ ಗಬ್ಬರ್ ಸಿಂಗ್ ಅವರಿಂದ ಇದೇ ರೀತಿಯ ಬೆದರಿಕೆಗಳನ್ನು ಅವರು ಎದುರಿಸಿದ್ದರು” ಎಂದು ಮುಂಗಂತಿವಾರ್ ಹೇಳಿದ್ದಾರೆ.


ಇದನ್ನೂ ಓದಿ: ಪಂಜಾಬ್: ಬಟಿಂಡಾದಲ್ಲಿ 53 ವರ್ಷಗಳ ಬಳಿಕ ಮೇಯರ್ ಸ್ಥಾನ ಕಾಂಗ್ರೆಸ್‌ಗೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...