Homeಮುಖಪುಟ’ಅಮಿತಾಬ್, ಅಕ್ಷಯ್‌ಗೆ ಮೋದಿ ಸರ್ಕಾರದ ವಿರುದ್ಧ ಮಾತನಾಡಲು ಧೈರ್ಯವಿಲ್ಲವೇ?’

’ಅಮಿತಾಬ್, ಅಕ್ಷಯ್‌ಗೆ ಮೋದಿ ಸರ್ಕಾರದ ವಿರುದ್ಧ ಮಾತನಾಡಲು ಧೈರ್ಯವಿಲ್ಲವೇ?’

ಸದ್ಯ ಮುಂಬೈಯಲ್ಲಿ ಪೆಟ್ರೋಲ್‌ಗೆ ಲೀಟರ್‌ಗೆ. 96.32 ರೂಪಾಯಿ ಮತ್ತು ಡೀಸೆಲ್ 87.32 ರೂಪಾಯಿಗೆ ಏರಿದೆ.

- Advertisement -
- Advertisement -

ಪೆಟ್ರೋಲ್, ಡೀಸೆಲ್ ಬೆಲೆಗಳ ಏರಿಕೆ ಬಗ್ಗೆ ಕೇಂದ್ರ ಸರ್ಕಾರವನ್ನು ಒಂದು ಕಾಲದಲ್ಲಿ ಟೀಕಿಸಿದ್ದ ಸೆಲೆಬ್ರಿಟಿಗಳು, ಹಿಂದಿಗಿಂತಲೂ ಈಗ ದರ ಹೆಚ್ಚಾಗಿದ್ದರೂ ಮೌನ ವಹಿಸಿರುವವರ ವಿರುದ್ಧ ಮಹಾರಾಷ್ಟ್ರ ಕಾಂಗ್ರೆಸ್ ಗುರುವಾರ (ಫೆ.18) ಕಠಿಣ ನಿಲುವು ತೆಗೆದುಕೊಂಡಿದೆ.

ಅಮಿತಾಬ್ ಬಚ್ಚನ್ ಮತ್ತು ಅಕ್ಷಯ್ ಕುಮಾರ್ ಅವರಂತಹ ನಟರನ್ನು ಒಳಗೊಂಡ ಚಲನಚಿತ್ರಗಳ ಪ್ರದರ್ಶನ ಮತ್ತು ಚಲನಚಿತ್ರಗಳ ಚಿತ್ರೀಕರಣವನ್ನು ಮಹಾರಾಷ್ಟ್ರದಲ್ಲಿ ನಿಲ್ಲಿಸುವುದಾಗಿ ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ನಾನಾ ಪಟೋಲೆ ಎಚ್ಚರಿಕೆ ನೀಡಿದ್ದಾರೆ.

“ಮನಮೋಹನ್ ಸಿಂಗ್ ಅವಧಿಯಲ್ಲಿ ನಟ ಅಮಿತಾಬ್ ಬಚ್ಚನ್ ಮತ್ತು ಅಕ್ಷಯ್ ಕುಮಾರ್ ಅವರಂತಹ ಜನರು ಇಂಧನ ಬೆಲೆಗಳ ಬಗ್ಗೆ ಟ್ವೀಟ್ ಮಾಡುತ್ತಿದ್ದರು. ಈಗ ಹೆಚ್ಚುತ್ತಿರುವ ಇಂಧನ ಬೆಲೆಗಳು ಸಾಮಾನ್ಯ ಜನರನ್ನು ಹಿಂಸಿಸುತ್ತಿವೆ. ಆದರೆ ಇಂದು ಈ ನಟರೆಲ್ಲಾ ಮೌನವಾಗಿದ್ದಾರೆ. “ಸರ್ವಾಧಿಕಾರಿ ಮೋದಿ ಸರ್ಕಾರ”ದ ವಿರುದ್ಧ ಮಾತನಾಡಲು ಅವರಿಗೆ ಧೈರ್ಯವಿಲ್ಲವೇ?” ಎಂದು ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ನಾನಾ ಪಟೋಲೆ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ: ಸರ್ಕಾರದ ವಿರುದ್ದ ಎಳ್ಳು ನೀರು ಬಿಡುವ ಅಭಿಯಾನ

ಸದ್ಯ ಮುಂಬೈಯಲ್ಲಿ ಪೆಟ್ರೋಲ್‌ಗೆ ಲೀಟರ್‌ಗೆ. 96.32 ರೂಪಾಯಿ ಮತ್ತು ಡೀಸೆಲ್ 87.32 ರೂಪಾಯಿಗೆ ಏರಿದೆ.

“ಮಹಾರಾಷ್ಟ್ರದಲ್ಲಿ, ಅಮಿತಾಬ್ ಬಚ್ಚನ್ ಅಥವಾ ಅಕ್ಷಯ್ ಕುಮಾರ್ ಒಳಗೊಂಡ ಚಿತ್ರಗಳ ಚಿತ್ರೀಕರಣಕ್ಕೆ ನಾವು ಅವಕಾಶ ನೀಡುವುದಿಲ್ಲ. ಒಂದೋ ನೀವು ನರೇಂದ್ರ ಮೋದಿ ಸರ್ಕಾರದ ರಾಷ್ಟ್ರ ವಿರೋಧಿ ನೀತಿಗಳ ವಿರುದ್ಧ ಮಾತನಾಡಿ ಇಲ್ಲವಾದರೇ ನಿಮ್ಮ ಚಲನಚಿತ್ರಗಳ ಚಿತ್ರೀಕರಣವನ್ನು ಅನ್ನು ನಾವು ನಿಲ್ಲಿಸುತ್ತೇವೆ” ಎಂದು ಎಚ್ಚರಿಕೆ ನೀಡಿದ್ದಾರೆ.

ಮತ್ತೊಂದೆಡೆ, ರಾಜ್ಯದಲ್ಲಿ ಆಡಳಿತ ಪಕ್ಷ ಹೊರಡಿಸಿರುವ ಎಚ್ಚರಿಕೆ ಹಿನ್ನೆಲೆಯಲ್ಲಿ ಬಿಜೆಪಿ ಈ ನಟರಿಗೆ ಬೆಂಬಲ ನೀಡಿದೆ. ರಾಜ್ಯ ಬಿಜೆಪಿ ನಾಯಕ ಸುಧೀರ್ ಮುಂಗಂತಿವಾರ್ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ.

“ಕಾಂಗ್ರೆಸ್ ಆತ್ಮವು ಸರ್ವಾಧಿಕಾರವಾಗಿದ್ದು, ಅದು ಪ್ರಜಾಪ್ರಭುತ್ವದ ಮುಖವಾಡವನ್ನು ಧರಿಸಿತ್ತು. ಕಾಂಗ್ರೆಸ್ ಕಚೇರಿ ಅಕ್ಬರ್ ರಸ್ತೆಯಲ್ಲಿರುವುದರಿಂದ, ಅವರು ಅಕ್ಬರ್‌ನ ಹಾದಿಯಲ್ಲಿ ಮಾತ್ರ ನಡೆಯುತ್ತಾರೆ. ಅಮಿತಾಬ್ ಬಚ್ಚನ್ ಅವರ ಬೆದರಿಕೆಗಳ ಬಗ್ಗೆ ಚಿಂತಿಸಬೇಕಾಗಿಲ್ಲ. ಶೋಲೆ ಚಿತ್ರದಲ್ಲಿ ಗಬ್ಬರ್ ಸಿಂಗ್ ಅವರಿಂದ ಇದೇ ರೀತಿಯ ಬೆದರಿಕೆಗಳನ್ನು ಅವರು ಎದುರಿಸಿದ್ದರು” ಎಂದು ಮುಂಗಂತಿವಾರ್ ಹೇಳಿದ್ದಾರೆ.


ಇದನ್ನೂ ಓದಿ: ಪಂಜಾಬ್: ಬಟಿಂಡಾದಲ್ಲಿ 53 ವರ್ಷಗಳ ಬಳಿಕ ಮೇಯರ್ ಸ್ಥಾನ ಕಾಂಗ್ರೆಸ್‌ಗೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...