Homeಮುಖಪುಟಶಾಹೀನ್‌ಬಾಗ್‌ ಪ್ರತಿಭಟನಾಕಾರರ ಕುರಿತು ಅಮಿತ್‌ ಶಾ ಸುಳ್ಳು ಹೇಳಿದ್ದೇಕೆ?

ಶಾಹೀನ್‌ಬಾಗ್‌ ಪ್ರತಿಭಟನಾಕಾರರ ಕುರಿತು ಅಮಿತ್‌ ಶಾ ಸುಳ್ಳು ಹೇಳಿದ್ದೇಕೆ?

- Advertisement -
- Advertisement -

ಶಹೀನ್ ಬಾಗ್‌ನಲ್ಲಿ ಪ್ರತಿಭಟನಾಕಾರರು ಮಹಿಳೆಯರ ಮೇಲೆ ಅತ್ಯಾಚಾರ ಮಾಡುತ್ತಾರೆ ಎಂದು ಯಾವುದೇ ಬಿಜೆಪಿ ಮುಖಂಡರು ಹೇಳಿಲ್ಲ ಎಂದು ಅಮಿತ್ ಶಾ ಸುಳ್ಳು ಹೇಳಿಕೆ ನೀಡಿದ್ದಾರೆ.

ಫೆಬ್ರವರಿ 13 ರಂದು ಟೈಮ್ಸ್ ನೌ ಶೃಂಗಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ ಅವರನ್ನು ಪತ್ರಕರ್ತೆ ನವಿಕಾ ಕುಮಾರ್ ಸಂದರ್ಶನ ಮಾಡಿದರು. ಆಗ ಸಿಎಎ ಪರ ರ್‍ಯಾಲಿಗಳಲ್ಲಿ ಬಿಜೆಪಿ ನಾಯಕರು ಎತ್ತುವ ಪ್ರಚೋದನಕಾರಿ ಘೋಷಣೆಗಳಾದ ‘ದೇಶದ ದೇಶದ್ರೋಹಿಗಳನ್ನು ಹೊಡೆದುರುಳಿಸಬೇಕು’. ದೆಹಲಿ ಚುನಾವಣೆಯನ್ನು ‘ಇಂಡಿಯಾ ವರ್ಸಸ್ ಪಾಕಿಸ್ತಾನ್’ ಎಂದು ಕರೆಯಲಾಯಿತು. ಮೂರನೇಯದಾಗಿ ಶಾಹೀನ್ ಬಾಗ್ ಪ್ರತಿಭಟನಾಕಾರರು ನಿಮ್ಮ ಮನೆಗಳಿಗೆ ಪ್ರವೇಶಿಸುತ್ತಾರೆ ಮತ್ತು ಮಹಿಳೆಯರು, ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ ಮಾಡುತ್ತಾರೆ ಎಂಬುದಾಗಿ ಬಿಜೆಪಿ ಮುಖಂಡರು ಹೇಳಿಕೆ ಕೊಟ್ಟಿದ್ದು ಚುನಾವಣೆಯ ಫಲಿತಾಂಶದ ಮೇಲೆ ಪರಿಣಾಮ ಬೀರಿತೆ ಎಂದು ಪ್ರಶ್ನಿಸಿದರು.

ಮೊದಲ ಎರಡು ಹೇಳಿಕೆಗಳನ್ನು ನೀಡಲಾಗಿದೆ ಎಂದು ಅಮಿತ್‌ ಶಾ ಒಪ್ಪಿಕೊಂಡರು. ಆದರೆ ಅವರ ಪಕ್ಷದ ಸದಸ್ಯರು ಶಾಹೀನ್ ಬಾಗ್ ಪ್ರತಿಭಟನಾಕಾರರ ಬಗ್ಗೆ ‘ಅತ್ಯಾಚಾರ’ ಹೇಳಿಕೆ ನೀಡಿದ್ದಾರೆ ಎಂಬುದನ್ನು ನಿರಾಕರಿಸಿ, ಯಾವುದೇ ಬಿಜೆಪಿ ಮುಖಂಡರು  ಹಾಗೆ ಹೇಳಿಲ್ಲ ಎಂದು ಶಾ ಹೇಳಿದರು.

ಅಮಿತ್ ಶಾ ಏನು ಹೇಳಿದರು?
ಬಿಜೆಪಿ ತನ್ನ ನಾಯಕರು ಮಾಡಿದ ದ್ವೇಷದ ಹೇಳಿಕೆಗಳನ್ನು ಖಂಡಿಸುತ್ತದೆ ಮತ್ತು ಅವುಗಳನ್ನು ಅನುಮೋದಿಸುವುದಿಲ್ಲ ಎಂದರು. ಆಗಮ ಮಧ್ಯ ಪ್ರವೇಶಿಸಿದ ನವೀಕಾ ಕುಮಾರ್‌ “ಶಹೀನ್ ಬಾಗ್‌ನಲ್ಲಿನ ಪ್ರತಿಭಟನಾಕಾರರು ಜನರ ಮನೆಗಳಿಗೆ ನುಸುಳುವ ಮೂಲಕ ಮಹಿಳೆಯರು ಮತ್ತು ಹೆಣ್ಣುಮಕ್ಕಳನ್ನು ಅತ್ಯಾಚಾರ ಮಾಡುತ್ತಾರೆ… ಅಂತಹ ವಾಕ್ಯಗಳನ್ನು…” ನವೀಕಾ ಕುಮಾರ್ ತನ್ನ ಪ್ರಶ್ನೆಯನ್ನು ಮುಗಿಸುವ ಮೊದಲು, ಷಾ ಮಧ್ಯಪ್ರವೇಶಿಸಿ, “ಯಾರೂ ಅಂತಹ ಹೇಳಿಕೆಯನ್ನು ನೀಡಿಲ್ಲ” ಎಂದು ಅಮಿತ್‌ ಶಾ ಹೇಳಿದರು.

ಫ್ಯಾಕ್ಟ್‌ಚೆಕ್‌

ಇದನ್ನು ಪರಿಶೀಲಿಸಲು ನಾವು ಎಎನ್‌ಐ ಟ್ವಿಟ್ಟರ್‌ ಹ್ಯಾಂಡಲ್‌ನ ಆರ್ಕೈವ್‌ಗಳನ್ನು ಹುಡುಕಿದಾಗ ಬಿಜೆಪಿ ನಾಯಕ ಮತ್ತು ಸಂಸದ ಪರ್ವೇಶ್‌ ವರ್ಮಾ ಮಾಡಿದ ಭಾಷಣ ದೊರೆಯುತ್ತದೆ. 90 ಸೆಕೆಂಡ್‌ಗಳ ಆ ಭಾಷಣದಲ್ಲಿ ಅವರು “ಲಕ್ಷಾಂತರ ಜನರು ಶಾಹೀನ್ ಬಾಗ್‌ನಲ್ಲಿ ಸೇರುತ್ತಾರೆ.  ಅವರು ನಿಮ್ಮ ಮನೆಗಳಿಗೆ ಪ್ರವೇಶಿಸುತ್ತಾರೆ, ನಿಮ್ಮ ಸಹೋದರಿಯರು ಮತ್ತು ಹೆಣ್ಣುಮಕ್ಕಳನ್ನು ಅತ್ಯಾಚಾರ ಮಾಡುತ್ತಾರೆ, ಅವರನ್ನು ಕೊಲ್ಲುತ್ತಾರೆ. ಮೋದಿಜಿ ಮತ್ತು ಅಮಿತ್ ಶಾ ನಾಳೆ ನಿಮ್ಮನ್ನು ಉಳಿಸಲು ಬರುವುದಿಲ್ಲ… ಇಂದು ಸಮಯವಿದೆ ದೆಹಲಿಯ ಜನರು ಯೋಚಿಸಿ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ ಎಂದು” ಹೇಳಿರುವುದು ಸ್ಪಷ್ಟವಾಗಿದೆ.

ಆ ವಿಡಿಯೋ ನೋಡಿ..

ದೆಹಲಿ ವಿಧಾನಸಭಾ ಚುನಾವಣೆಗೆ ವಿಕಾಸ್ಪುರಿಯಲ್ಲಿ ಪ್ರಚಾರ ನಡೆಸುತ್ತಿದ್ದ ವೇಳೆ ಮಾತನಾಡಿದ ಅವರು “ದೆಹಲಿಯ ಶಹೀನ್ ಬಾಗ್‌ನಲ್ಲಿನ ಪ್ರತಿಭಟನಾಕಾರರನ್ನು ದೆಹಲಿಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಒಂದು ಗಂಟೆಯಲ್ಲಿ ತೆರವುಗೊಳ್ಳಲಾಗುವುದು ಎಂದು ಸಹ  ಘೋಷಿಸಿದ್ದರು.”

ಈ ವಿಡಿಯೋ ಇನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವಾಗಲೇ, ಗೃಹಮಂತ್ರಿ ಅಮಿತ್‌ ಶಾ ನಮ್ಮ ನಾಯಕರು ಹಾಗೆ ಹೇಳಿಲ್ಲ ಎಂದು ಸುಳ್ಳು ಹೇಳಿ ಸಿಕ್ಕಬಿದ್ದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಸಂವಿಧಾನಕ್ಕೆ, ದೇಶದ ಏಕತೆಗೆ, ಸಾರ್ವಭೌಮತ್ವಕ್ಕೆ ಮತ್ತು ದೇಶದ ಪ್ರಜೆಗಳಿಗೆ ವಿರುದ್ಧವಾದ ಕಾನೂನನ್ನು ಜಾರಿಗೆ ತಂದವರು ದೇಶದ್ರೋಹಿಗಳು. ಇಂತಹ ದೇಶದ್ರೋಹಿಗಳು ಮಾಡುವ ಕೆಲಸಗಳನ್ನು ನೋಡಿಕೊಂಡು ನ್ಯಾಯಾಂಗ ಯಾಕೆ ಸುಮ್ಮನಿದೆ ಅಂತ ಗೊತ್ತಾಗುತ್ತಾ ಇಲ್ಲ.

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...