Homeಮುಖಪುಟಶಾಹೀನ್‌ಬಾಗ್‌ ಪ್ರತಿಭಟನಾಕಾರರ ಕುರಿತು ಅಮಿತ್‌ ಶಾ ಸುಳ್ಳು ಹೇಳಿದ್ದೇಕೆ?

ಶಾಹೀನ್‌ಬಾಗ್‌ ಪ್ರತಿಭಟನಾಕಾರರ ಕುರಿತು ಅಮಿತ್‌ ಶಾ ಸುಳ್ಳು ಹೇಳಿದ್ದೇಕೆ?

- Advertisement -
- Advertisement -

ಶಹೀನ್ ಬಾಗ್‌ನಲ್ಲಿ ಪ್ರತಿಭಟನಾಕಾರರು ಮಹಿಳೆಯರ ಮೇಲೆ ಅತ್ಯಾಚಾರ ಮಾಡುತ್ತಾರೆ ಎಂದು ಯಾವುದೇ ಬಿಜೆಪಿ ಮುಖಂಡರು ಹೇಳಿಲ್ಲ ಎಂದು ಅಮಿತ್ ಶಾ ಸುಳ್ಳು ಹೇಳಿಕೆ ನೀಡಿದ್ದಾರೆ.

ಫೆಬ್ರವರಿ 13 ರಂದು ಟೈಮ್ಸ್ ನೌ ಶೃಂಗಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ ಅವರನ್ನು ಪತ್ರಕರ್ತೆ ನವಿಕಾ ಕುಮಾರ್ ಸಂದರ್ಶನ ಮಾಡಿದರು. ಆಗ ಸಿಎಎ ಪರ ರ್‍ಯಾಲಿಗಳಲ್ಲಿ ಬಿಜೆಪಿ ನಾಯಕರು ಎತ್ತುವ ಪ್ರಚೋದನಕಾರಿ ಘೋಷಣೆಗಳಾದ ‘ದೇಶದ ದೇಶದ್ರೋಹಿಗಳನ್ನು ಹೊಡೆದುರುಳಿಸಬೇಕು’. ದೆಹಲಿ ಚುನಾವಣೆಯನ್ನು ‘ಇಂಡಿಯಾ ವರ್ಸಸ್ ಪಾಕಿಸ್ತಾನ್’ ಎಂದು ಕರೆಯಲಾಯಿತು. ಮೂರನೇಯದಾಗಿ ಶಾಹೀನ್ ಬಾಗ್ ಪ್ರತಿಭಟನಾಕಾರರು ನಿಮ್ಮ ಮನೆಗಳಿಗೆ ಪ್ರವೇಶಿಸುತ್ತಾರೆ ಮತ್ತು ಮಹಿಳೆಯರು, ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ ಮಾಡುತ್ತಾರೆ ಎಂಬುದಾಗಿ ಬಿಜೆಪಿ ಮುಖಂಡರು ಹೇಳಿಕೆ ಕೊಟ್ಟಿದ್ದು ಚುನಾವಣೆಯ ಫಲಿತಾಂಶದ ಮೇಲೆ ಪರಿಣಾಮ ಬೀರಿತೆ ಎಂದು ಪ್ರಶ್ನಿಸಿದರು.

ಮೊದಲ ಎರಡು ಹೇಳಿಕೆಗಳನ್ನು ನೀಡಲಾಗಿದೆ ಎಂದು ಅಮಿತ್‌ ಶಾ ಒಪ್ಪಿಕೊಂಡರು. ಆದರೆ ಅವರ ಪಕ್ಷದ ಸದಸ್ಯರು ಶಾಹೀನ್ ಬಾಗ್ ಪ್ರತಿಭಟನಾಕಾರರ ಬಗ್ಗೆ ‘ಅತ್ಯಾಚಾರ’ ಹೇಳಿಕೆ ನೀಡಿದ್ದಾರೆ ಎಂಬುದನ್ನು ನಿರಾಕರಿಸಿ, ಯಾವುದೇ ಬಿಜೆಪಿ ಮುಖಂಡರು  ಹಾಗೆ ಹೇಳಿಲ್ಲ ಎಂದು ಶಾ ಹೇಳಿದರು.

ಅಮಿತ್ ಶಾ ಏನು ಹೇಳಿದರು?
ಬಿಜೆಪಿ ತನ್ನ ನಾಯಕರು ಮಾಡಿದ ದ್ವೇಷದ ಹೇಳಿಕೆಗಳನ್ನು ಖಂಡಿಸುತ್ತದೆ ಮತ್ತು ಅವುಗಳನ್ನು ಅನುಮೋದಿಸುವುದಿಲ್ಲ ಎಂದರು. ಆಗಮ ಮಧ್ಯ ಪ್ರವೇಶಿಸಿದ ನವೀಕಾ ಕುಮಾರ್‌ “ಶಹೀನ್ ಬಾಗ್‌ನಲ್ಲಿನ ಪ್ರತಿಭಟನಾಕಾರರು ಜನರ ಮನೆಗಳಿಗೆ ನುಸುಳುವ ಮೂಲಕ ಮಹಿಳೆಯರು ಮತ್ತು ಹೆಣ್ಣುಮಕ್ಕಳನ್ನು ಅತ್ಯಾಚಾರ ಮಾಡುತ್ತಾರೆ… ಅಂತಹ ವಾಕ್ಯಗಳನ್ನು…” ನವೀಕಾ ಕುಮಾರ್ ತನ್ನ ಪ್ರಶ್ನೆಯನ್ನು ಮುಗಿಸುವ ಮೊದಲು, ಷಾ ಮಧ್ಯಪ್ರವೇಶಿಸಿ, “ಯಾರೂ ಅಂತಹ ಹೇಳಿಕೆಯನ್ನು ನೀಡಿಲ್ಲ” ಎಂದು ಅಮಿತ್‌ ಶಾ ಹೇಳಿದರು.

ಫ್ಯಾಕ್ಟ್‌ಚೆಕ್‌

ಇದನ್ನು ಪರಿಶೀಲಿಸಲು ನಾವು ಎಎನ್‌ಐ ಟ್ವಿಟ್ಟರ್‌ ಹ್ಯಾಂಡಲ್‌ನ ಆರ್ಕೈವ್‌ಗಳನ್ನು ಹುಡುಕಿದಾಗ ಬಿಜೆಪಿ ನಾಯಕ ಮತ್ತು ಸಂಸದ ಪರ್ವೇಶ್‌ ವರ್ಮಾ ಮಾಡಿದ ಭಾಷಣ ದೊರೆಯುತ್ತದೆ. 90 ಸೆಕೆಂಡ್‌ಗಳ ಆ ಭಾಷಣದಲ್ಲಿ ಅವರು “ಲಕ್ಷಾಂತರ ಜನರು ಶಾಹೀನ್ ಬಾಗ್‌ನಲ್ಲಿ ಸೇರುತ್ತಾರೆ.  ಅವರು ನಿಮ್ಮ ಮನೆಗಳಿಗೆ ಪ್ರವೇಶಿಸುತ್ತಾರೆ, ನಿಮ್ಮ ಸಹೋದರಿಯರು ಮತ್ತು ಹೆಣ್ಣುಮಕ್ಕಳನ್ನು ಅತ್ಯಾಚಾರ ಮಾಡುತ್ತಾರೆ, ಅವರನ್ನು ಕೊಲ್ಲುತ್ತಾರೆ. ಮೋದಿಜಿ ಮತ್ತು ಅಮಿತ್ ಶಾ ನಾಳೆ ನಿಮ್ಮನ್ನು ಉಳಿಸಲು ಬರುವುದಿಲ್ಲ… ಇಂದು ಸಮಯವಿದೆ ದೆಹಲಿಯ ಜನರು ಯೋಚಿಸಿ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ ಎಂದು” ಹೇಳಿರುವುದು ಸ್ಪಷ್ಟವಾಗಿದೆ.

ಆ ವಿಡಿಯೋ ನೋಡಿ..

ದೆಹಲಿ ವಿಧಾನಸಭಾ ಚುನಾವಣೆಗೆ ವಿಕಾಸ್ಪುರಿಯಲ್ಲಿ ಪ್ರಚಾರ ನಡೆಸುತ್ತಿದ್ದ ವೇಳೆ ಮಾತನಾಡಿದ ಅವರು “ದೆಹಲಿಯ ಶಹೀನ್ ಬಾಗ್‌ನಲ್ಲಿನ ಪ್ರತಿಭಟನಾಕಾರರನ್ನು ದೆಹಲಿಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಒಂದು ಗಂಟೆಯಲ್ಲಿ ತೆರವುಗೊಳ್ಳಲಾಗುವುದು ಎಂದು ಸಹ  ಘೋಷಿಸಿದ್ದರು.”

ಈ ವಿಡಿಯೋ ಇನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವಾಗಲೇ, ಗೃಹಮಂತ್ರಿ ಅಮಿತ್‌ ಶಾ ನಮ್ಮ ನಾಯಕರು ಹಾಗೆ ಹೇಳಿಲ್ಲ ಎಂದು ಸುಳ್ಳು ಹೇಳಿ ಸಿಕ್ಕಬಿದ್ದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಸಂವಿಧಾನಕ್ಕೆ, ದೇಶದ ಏಕತೆಗೆ, ಸಾರ್ವಭೌಮತ್ವಕ್ಕೆ ಮತ್ತು ದೇಶದ ಪ್ರಜೆಗಳಿಗೆ ವಿರುದ್ಧವಾದ ಕಾನೂನನ್ನು ಜಾರಿಗೆ ತಂದವರು ದೇಶದ್ರೋಹಿಗಳು. ಇಂತಹ ದೇಶದ್ರೋಹಿಗಳು ಮಾಡುವ ಕೆಲಸಗಳನ್ನು ನೋಡಿಕೊಂಡು ನ್ಯಾಯಾಂಗ ಯಾಕೆ ಸುಮ್ಮನಿದೆ ಅಂತ ಗೊತ್ತಾಗುತ್ತಾ ಇಲ್ಲ.

LEAVE A REPLY

Please enter your comment!
Please enter your name here

- Advertisment -

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...