Homeಮುಖಪುಟಶಾಹೀನ್‌ಬಾಗ್‌ ಪ್ರತಿಭಟನಾಕಾರರ ಕುರಿತು ಅಮಿತ್‌ ಶಾ ಸುಳ್ಳು ಹೇಳಿದ್ದೇಕೆ?

ಶಾಹೀನ್‌ಬಾಗ್‌ ಪ್ರತಿಭಟನಾಕಾರರ ಕುರಿತು ಅಮಿತ್‌ ಶಾ ಸುಳ್ಳು ಹೇಳಿದ್ದೇಕೆ?

- Advertisement -
- Advertisement -

ಶಹೀನ್ ಬಾಗ್‌ನಲ್ಲಿ ಪ್ರತಿಭಟನಾಕಾರರು ಮಹಿಳೆಯರ ಮೇಲೆ ಅತ್ಯಾಚಾರ ಮಾಡುತ್ತಾರೆ ಎಂದು ಯಾವುದೇ ಬಿಜೆಪಿ ಮುಖಂಡರು ಹೇಳಿಲ್ಲ ಎಂದು ಅಮಿತ್ ಶಾ ಸುಳ್ಳು ಹೇಳಿಕೆ ನೀಡಿದ್ದಾರೆ.

ಫೆಬ್ರವರಿ 13 ರಂದು ಟೈಮ್ಸ್ ನೌ ಶೃಂಗಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ ಅವರನ್ನು ಪತ್ರಕರ್ತೆ ನವಿಕಾ ಕುಮಾರ್ ಸಂದರ್ಶನ ಮಾಡಿದರು. ಆಗ ಸಿಎಎ ಪರ ರ್‍ಯಾಲಿಗಳಲ್ಲಿ ಬಿಜೆಪಿ ನಾಯಕರು ಎತ್ತುವ ಪ್ರಚೋದನಕಾರಿ ಘೋಷಣೆಗಳಾದ ‘ದೇಶದ ದೇಶದ್ರೋಹಿಗಳನ್ನು ಹೊಡೆದುರುಳಿಸಬೇಕು’. ದೆಹಲಿ ಚುನಾವಣೆಯನ್ನು ‘ಇಂಡಿಯಾ ವರ್ಸಸ್ ಪಾಕಿಸ್ತಾನ್’ ಎಂದು ಕರೆಯಲಾಯಿತು. ಮೂರನೇಯದಾಗಿ ಶಾಹೀನ್ ಬಾಗ್ ಪ್ರತಿಭಟನಾಕಾರರು ನಿಮ್ಮ ಮನೆಗಳಿಗೆ ಪ್ರವೇಶಿಸುತ್ತಾರೆ ಮತ್ತು ಮಹಿಳೆಯರು, ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ ಮಾಡುತ್ತಾರೆ ಎಂಬುದಾಗಿ ಬಿಜೆಪಿ ಮುಖಂಡರು ಹೇಳಿಕೆ ಕೊಟ್ಟಿದ್ದು ಚುನಾವಣೆಯ ಫಲಿತಾಂಶದ ಮೇಲೆ ಪರಿಣಾಮ ಬೀರಿತೆ ಎಂದು ಪ್ರಶ್ನಿಸಿದರು.

ಮೊದಲ ಎರಡು ಹೇಳಿಕೆಗಳನ್ನು ನೀಡಲಾಗಿದೆ ಎಂದು ಅಮಿತ್‌ ಶಾ ಒಪ್ಪಿಕೊಂಡರು. ಆದರೆ ಅವರ ಪಕ್ಷದ ಸದಸ್ಯರು ಶಾಹೀನ್ ಬಾಗ್ ಪ್ರತಿಭಟನಾಕಾರರ ಬಗ್ಗೆ ‘ಅತ್ಯಾಚಾರ’ ಹೇಳಿಕೆ ನೀಡಿದ್ದಾರೆ ಎಂಬುದನ್ನು ನಿರಾಕರಿಸಿ, ಯಾವುದೇ ಬಿಜೆಪಿ ಮುಖಂಡರು  ಹಾಗೆ ಹೇಳಿಲ್ಲ ಎಂದು ಶಾ ಹೇಳಿದರು.

ಅಮಿತ್ ಶಾ ಏನು ಹೇಳಿದರು?
ಬಿಜೆಪಿ ತನ್ನ ನಾಯಕರು ಮಾಡಿದ ದ್ವೇಷದ ಹೇಳಿಕೆಗಳನ್ನು ಖಂಡಿಸುತ್ತದೆ ಮತ್ತು ಅವುಗಳನ್ನು ಅನುಮೋದಿಸುವುದಿಲ್ಲ ಎಂದರು. ಆಗಮ ಮಧ್ಯ ಪ್ರವೇಶಿಸಿದ ನವೀಕಾ ಕುಮಾರ್‌ “ಶಹೀನ್ ಬಾಗ್‌ನಲ್ಲಿನ ಪ್ರತಿಭಟನಾಕಾರರು ಜನರ ಮನೆಗಳಿಗೆ ನುಸುಳುವ ಮೂಲಕ ಮಹಿಳೆಯರು ಮತ್ತು ಹೆಣ್ಣುಮಕ್ಕಳನ್ನು ಅತ್ಯಾಚಾರ ಮಾಡುತ್ತಾರೆ… ಅಂತಹ ವಾಕ್ಯಗಳನ್ನು…” ನವೀಕಾ ಕುಮಾರ್ ತನ್ನ ಪ್ರಶ್ನೆಯನ್ನು ಮುಗಿಸುವ ಮೊದಲು, ಷಾ ಮಧ್ಯಪ್ರವೇಶಿಸಿ, “ಯಾರೂ ಅಂತಹ ಹೇಳಿಕೆಯನ್ನು ನೀಡಿಲ್ಲ” ಎಂದು ಅಮಿತ್‌ ಶಾ ಹೇಳಿದರು.

ಫ್ಯಾಕ್ಟ್‌ಚೆಕ್‌

ಇದನ್ನು ಪರಿಶೀಲಿಸಲು ನಾವು ಎಎನ್‌ಐ ಟ್ವಿಟ್ಟರ್‌ ಹ್ಯಾಂಡಲ್‌ನ ಆರ್ಕೈವ್‌ಗಳನ್ನು ಹುಡುಕಿದಾಗ ಬಿಜೆಪಿ ನಾಯಕ ಮತ್ತು ಸಂಸದ ಪರ್ವೇಶ್‌ ವರ್ಮಾ ಮಾಡಿದ ಭಾಷಣ ದೊರೆಯುತ್ತದೆ. 90 ಸೆಕೆಂಡ್‌ಗಳ ಆ ಭಾಷಣದಲ್ಲಿ ಅವರು “ಲಕ್ಷಾಂತರ ಜನರು ಶಾಹೀನ್ ಬಾಗ್‌ನಲ್ಲಿ ಸೇರುತ್ತಾರೆ.  ಅವರು ನಿಮ್ಮ ಮನೆಗಳಿಗೆ ಪ್ರವೇಶಿಸುತ್ತಾರೆ, ನಿಮ್ಮ ಸಹೋದರಿಯರು ಮತ್ತು ಹೆಣ್ಣುಮಕ್ಕಳನ್ನು ಅತ್ಯಾಚಾರ ಮಾಡುತ್ತಾರೆ, ಅವರನ್ನು ಕೊಲ್ಲುತ್ತಾರೆ. ಮೋದಿಜಿ ಮತ್ತು ಅಮಿತ್ ಶಾ ನಾಳೆ ನಿಮ್ಮನ್ನು ಉಳಿಸಲು ಬರುವುದಿಲ್ಲ… ಇಂದು ಸಮಯವಿದೆ ದೆಹಲಿಯ ಜನರು ಯೋಚಿಸಿ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ ಎಂದು” ಹೇಳಿರುವುದು ಸ್ಪಷ್ಟವಾಗಿದೆ.

ಆ ವಿಡಿಯೋ ನೋಡಿ..

ದೆಹಲಿ ವಿಧಾನಸಭಾ ಚುನಾವಣೆಗೆ ವಿಕಾಸ್ಪುರಿಯಲ್ಲಿ ಪ್ರಚಾರ ನಡೆಸುತ್ತಿದ್ದ ವೇಳೆ ಮಾತನಾಡಿದ ಅವರು “ದೆಹಲಿಯ ಶಹೀನ್ ಬಾಗ್‌ನಲ್ಲಿನ ಪ್ರತಿಭಟನಾಕಾರರನ್ನು ದೆಹಲಿಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಒಂದು ಗಂಟೆಯಲ್ಲಿ ತೆರವುಗೊಳ್ಳಲಾಗುವುದು ಎಂದು ಸಹ  ಘೋಷಿಸಿದ್ದರು.”

ಈ ವಿಡಿಯೋ ಇನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವಾಗಲೇ, ಗೃಹಮಂತ್ರಿ ಅಮಿತ್‌ ಶಾ ನಮ್ಮ ನಾಯಕರು ಹಾಗೆ ಹೇಳಿಲ್ಲ ಎಂದು ಸುಳ್ಳು ಹೇಳಿ ಸಿಕ್ಕಬಿದ್ದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಸಂವಿಧಾನಕ್ಕೆ, ದೇಶದ ಏಕತೆಗೆ, ಸಾರ್ವಭೌಮತ್ವಕ್ಕೆ ಮತ್ತು ದೇಶದ ಪ್ರಜೆಗಳಿಗೆ ವಿರುದ್ಧವಾದ ಕಾನೂನನ್ನು ಜಾರಿಗೆ ತಂದವರು ದೇಶದ್ರೋಹಿಗಳು. ಇಂತಹ ದೇಶದ್ರೋಹಿಗಳು ಮಾಡುವ ಕೆಲಸಗಳನ್ನು ನೋಡಿಕೊಂಡು ನ್ಯಾಯಾಂಗ ಯಾಕೆ ಸುಮ್ಮನಿದೆ ಅಂತ ಗೊತ್ತಾಗುತ್ತಾ ಇಲ್ಲ.

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...