Homeಮುಖಪುಟಶಾಹೀನ್‌ಬಾಗ್‌ ಪ್ರತಿಭಟನಾಕಾರರ ಕುರಿತು ಅಮಿತ್‌ ಶಾ ಸುಳ್ಳು ಹೇಳಿದ್ದೇಕೆ?

ಶಾಹೀನ್‌ಬಾಗ್‌ ಪ್ರತಿಭಟನಾಕಾರರ ಕುರಿತು ಅಮಿತ್‌ ಶಾ ಸುಳ್ಳು ಹೇಳಿದ್ದೇಕೆ?

- Advertisement -
- Advertisement -

ಶಹೀನ್ ಬಾಗ್‌ನಲ್ಲಿ ಪ್ರತಿಭಟನಾಕಾರರು ಮಹಿಳೆಯರ ಮೇಲೆ ಅತ್ಯಾಚಾರ ಮಾಡುತ್ತಾರೆ ಎಂದು ಯಾವುದೇ ಬಿಜೆಪಿ ಮುಖಂಡರು ಹೇಳಿಲ್ಲ ಎಂದು ಅಮಿತ್ ಶಾ ಸುಳ್ಳು ಹೇಳಿಕೆ ನೀಡಿದ್ದಾರೆ.

ಫೆಬ್ರವರಿ 13 ರಂದು ಟೈಮ್ಸ್ ನೌ ಶೃಂಗಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ ಅವರನ್ನು ಪತ್ರಕರ್ತೆ ನವಿಕಾ ಕುಮಾರ್ ಸಂದರ್ಶನ ಮಾಡಿದರು. ಆಗ ಸಿಎಎ ಪರ ರ್‍ಯಾಲಿಗಳಲ್ಲಿ ಬಿಜೆಪಿ ನಾಯಕರು ಎತ್ತುವ ಪ್ರಚೋದನಕಾರಿ ಘೋಷಣೆಗಳಾದ ‘ದೇಶದ ದೇಶದ್ರೋಹಿಗಳನ್ನು ಹೊಡೆದುರುಳಿಸಬೇಕು’. ದೆಹಲಿ ಚುನಾವಣೆಯನ್ನು ‘ಇಂಡಿಯಾ ವರ್ಸಸ್ ಪಾಕಿಸ್ತಾನ್’ ಎಂದು ಕರೆಯಲಾಯಿತು. ಮೂರನೇಯದಾಗಿ ಶಾಹೀನ್ ಬಾಗ್ ಪ್ರತಿಭಟನಾಕಾರರು ನಿಮ್ಮ ಮನೆಗಳಿಗೆ ಪ್ರವೇಶಿಸುತ್ತಾರೆ ಮತ್ತು ಮಹಿಳೆಯರು, ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ ಮಾಡುತ್ತಾರೆ ಎಂಬುದಾಗಿ ಬಿಜೆಪಿ ಮುಖಂಡರು ಹೇಳಿಕೆ ಕೊಟ್ಟಿದ್ದು ಚುನಾವಣೆಯ ಫಲಿತಾಂಶದ ಮೇಲೆ ಪರಿಣಾಮ ಬೀರಿತೆ ಎಂದು ಪ್ರಶ್ನಿಸಿದರು.

ಮೊದಲ ಎರಡು ಹೇಳಿಕೆಗಳನ್ನು ನೀಡಲಾಗಿದೆ ಎಂದು ಅಮಿತ್‌ ಶಾ ಒಪ್ಪಿಕೊಂಡರು. ಆದರೆ ಅವರ ಪಕ್ಷದ ಸದಸ್ಯರು ಶಾಹೀನ್ ಬಾಗ್ ಪ್ರತಿಭಟನಾಕಾರರ ಬಗ್ಗೆ ‘ಅತ್ಯಾಚಾರ’ ಹೇಳಿಕೆ ನೀಡಿದ್ದಾರೆ ಎಂಬುದನ್ನು ನಿರಾಕರಿಸಿ, ಯಾವುದೇ ಬಿಜೆಪಿ ಮುಖಂಡರು  ಹಾಗೆ ಹೇಳಿಲ್ಲ ಎಂದು ಶಾ ಹೇಳಿದರು.

ಅಮಿತ್ ಶಾ ಏನು ಹೇಳಿದರು?
ಬಿಜೆಪಿ ತನ್ನ ನಾಯಕರು ಮಾಡಿದ ದ್ವೇಷದ ಹೇಳಿಕೆಗಳನ್ನು ಖಂಡಿಸುತ್ತದೆ ಮತ್ತು ಅವುಗಳನ್ನು ಅನುಮೋದಿಸುವುದಿಲ್ಲ ಎಂದರು. ಆಗಮ ಮಧ್ಯ ಪ್ರವೇಶಿಸಿದ ನವೀಕಾ ಕುಮಾರ್‌ “ಶಹೀನ್ ಬಾಗ್‌ನಲ್ಲಿನ ಪ್ರತಿಭಟನಾಕಾರರು ಜನರ ಮನೆಗಳಿಗೆ ನುಸುಳುವ ಮೂಲಕ ಮಹಿಳೆಯರು ಮತ್ತು ಹೆಣ್ಣುಮಕ್ಕಳನ್ನು ಅತ್ಯಾಚಾರ ಮಾಡುತ್ತಾರೆ… ಅಂತಹ ವಾಕ್ಯಗಳನ್ನು…” ನವೀಕಾ ಕುಮಾರ್ ತನ್ನ ಪ್ರಶ್ನೆಯನ್ನು ಮುಗಿಸುವ ಮೊದಲು, ಷಾ ಮಧ್ಯಪ್ರವೇಶಿಸಿ, “ಯಾರೂ ಅಂತಹ ಹೇಳಿಕೆಯನ್ನು ನೀಡಿಲ್ಲ” ಎಂದು ಅಮಿತ್‌ ಶಾ ಹೇಳಿದರು.

ಫ್ಯಾಕ್ಟ್‌ಚೆಕ್‌

ಇದನ್ನು ಪರಿಶೀಲಿಸಲು ನಾವು ಎಎನ್‌ಐ ಟ್ವಿಟ್ಟರ್‌ ಹ್ಯಾಂಡಲ್‌ನ ಆರ್ಕೈವ್‌ಗಳನ್ನು ಹುಡುಕಿದಾಗ ಬಿಜೆಪಿ ನಾಯಕ ಮತ್ತು ಸಂಸದ ಪರ್ವೇಶ್‌ ವರ್ಮಾ ಮಾಡಿದ ಭಾಷಣ ದೊರೆಯುತ್ತದೆ. 90 ಸೆಕೆಂಡ್‌ಗಳ ಆ ಭಾಷಣದಲ್ಲಿ ಅವರು “ಲಕ್ಷಾಂತರ ಜನರು ಶಾಹೀನ್ ಬಾಗ್‌ನಲ್ಲಿ ಸೇರುತ್ತಾರೆ.  ಅವರು ನಿಮ್ಮ ಮನೆಗಳಿಗೆ ಪ್ರವೇಶಿಸುತ್ತಾರೆ, ನಿಮ್ಮ ಸಹೋದರಿಯರು ಮತ್ತು ಹೆಣ್ಣುಮಕ್ಕಳನ್ನು ಅತ್ಯಾಚಾರ ಮಾಡುತ್ತಾರೆ, ಅವರನ್ನು ಕೊಲ್ಲುತ್ತಾರೆ. ಮೋದಿಜಿ ಮತ್ತು ಅಮಿತ್ ಶಾ ನಾಳೆ ನಿಮ್ಮನ್ನು ಉಳಿಸಲು ಬರುವುದಿಲ್ಲ… ಇಂದು ಸಮಯವಿದೆ ದೆಹಲಿಯ ಜನರು ಯೋಚಿಸಿ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ ಎಂದು” ಹೇಳಿರುವುದು ಸ್ಪಷ್ಟವಾಗಿದೆ.

ಆ ವಿಡಿಯೋ ನೋಡಿ..

ದೆಹಲಿ ವಿಧಾನಸಭಾ ಚುನಾವಣೆಗೆ ವಿಕಾಸ್ಪುರಿಯಲ್ಲಿ ಪ್ರಚಾರ ನಡೆಸುತ್ತಿದ್ದ ವೇಳೆ ಮಾತನಾಡಿದ ಅವರು “ದೆಹಲಿಯ ಶಹೀನ್ ಬಾಗ್‌ನಲ್ಲಿನ ಪ್ರತಿಭಟನಾಕಾರರನ್ನು ದೆಹಲಿಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಒಂದು ಗಂಟೆಯಲ್ಲಿ ತೆರವುಗೊಳ್ಳಲಾಗುವುದು ಎಂದು ಸಹ  ಘೋಷಿಸಿದ್ದರು.”

ಈ ವಿಡಿಯೋ ಇನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವಾಗಲೇ, ಗೃಹಮಂತ್ರಿ ಅಮಿತ್‌ ಶಾ ನಮ್ಮ ನಾಯಕರು ಹಾಗೆ ಹೇಳಿಲ್ಲ ಎಂದು ಸುಳ್ಳು ಹೇಳಿ ಸಿಕ್ಕಬಿದ್ದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಸಂವಿಧಾನಕ್ಕೆ, ದೇಶದ ಏಕತೆಗೆ, ಸಾರ್ವಭೌಮತ್ವಕ್ಕೆ ಮತ್ತು ದೇಶದ ಪ್ರಜೆಗಳಿಗೆ ವಿರುದ್ಧವಾದ ಕಾನೂನನ್ನು ಜಾರಿಗೆ ತಂದವರು ದೇಶದ್ರೋಹಿಗಳು. ಇಂತಹ ದೇಶದ್ರೋಹಿಗಳು ಮಾಡುವ ಕೆಲಸಗಳನ್ನು ನೋಡಿಕೊಂಡು ನ್ಯಾಯಾಂಗ ಯಾಕೆ ಸುಮ್ಮನಿದೆ ಅಂತ ಗೊತ್ತಾಗುತ್ತಾ ಇಲ್ಲ.

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...