Homeಮುಖಪುಟಶಾಹೀನ್‌ಬಾಗ್‌ ಪ್ರತಿಭಟನಾಕಾರರ ಕುರಿತು ಅಮಿತ್‌ ಶಾ ಸುಳ್ಳು ಹೇಳಿದ್ದೇಕೆ?

ಶಾಹೀನ್‌ಬಾಗ್‌ ಪ್ರತಿಭಟನಾಕಾರರ ಕುರಿತು ಅಮಿತ್‌ ಶಾ ಸುಳ್ಳು ಹೇಳಿದ್ದೇಕೆ?

- Advertisement -
- Advertisement -

ಶಹೀನ್ ಬಾಗ್‌ನಲ್ಲಿ ಪ್ರತಿಭಟನಾಕಾರರು ಮಹಿಳೆಯರ ಮೇಲೆ ಅತ್ಯಾಚಾರ ಮಾಡುತ್ತಾರೆ ಎಂದು ಯಾವುದೇ ಬಿಜೆಪಿ ಮುಖಂಡರು ಹೇಳಿಲ್ಲ ಎಂದು ಅಮಿತ್ ಶಾ ಸುಳ್ಳು ಹೇಳಿಕೆ ನೀಡಿದ್ದಾರೆ.

ಫೆಬ್ರವರಿ 13 ರಂದು ಟೈಮ್ಸ್ ನೌ ಶೃಂಗಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ ಅವರನ್ನು ಪತ್ರಕರ್ತೆ ನವಿಕಾ ಕುಮಾರ್ ಸಂದರ್ಶನ ಮಾಡಿದರು. ಆಗ ಸಿಎಎ ಪರ ರ್‍ಯಾಲಿಗಳಲ್ಲಿ ಬಿಜೆಪಿ ನಾಯಕರು ಎತ್ತುವ ಪ್ರಚೋದನಕಾರಿ ಘೋಷಣೆಗಳಾದ ‘ದೇಶದ ದೇಶದ್ರೋಹಿಗಳನ್ನು ಹೊಡೆದುರುಳಿಸಬೇಕು’. ದೆಹಲಿ ಚುನಾವಣೆಯನ್ನು ‘ಇಂಡಿಯಾ ವರ್ಸಸ್ ಪಾಕಿಸ್ತಾನ್’ ಎಂದು ಕರೆಯಲಾಯಿತು. ಮೂರನೇಯದಾಗಿ ಶಾಹೀನ್ ಬಾಗ್ ಪ್ರತಿಭಟನಾಕಾರರು ನಿಮ್ಮ ಮನೆಗಳಿಗೆ ಪ್ರವೇಶಿಸುತ್ತಾರೆ ಮತ್ತು ಮಹಿಳೆಯರು, ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ ಮಾಡುತ್ತಾರೆ ಎಂಬುದಾಗಿ ಬಿಜೆಪಿ ಮುಖಂಡರು ಹೇಳಿಕೆ ಕೊಟ್ಟಿದ್ದು ಚುನಾವಣೆಯ ಫಲಿತಾಂಶದ ಮೇಲೆ ಪರಿಣಾಮ ಬೀರಿತೆ ಎಂದು ಪ್ರಶ್ನಿಸಿದರು.

ಮೊದಲ ಎರಡು ಹೇಳಿಕೆಗಳನ್ನು ನೀಡಲಾಗಿದೆ ಎಂದು ಅಮಿತ್‌ ಶಾ ಒಪ್ಪಿಕೊಂಡರು. ಆದರೆ ಅವರ ಪಕ್ಷದ ಸದಸ್ಯರು ಶಾಹೀನ್ ಬಾಗ್ ಪ್ರತಿಭಟನಾಕಾರರ ಬಗ್ಗೆ ‘ಅತ್ಯಾಚಾರ’ ಹೇಳಿಕೆ ನೀಡಿದ್ದಾರೆ ಎಂಬುದನ್ನು ನಿರಾಕರಿಸಿ, ಯಾವುದೇ ಬಿಜೆಪಿ ಮುಖಂಡರು  ಹಾಗೆ ಹೇಳಿಲ್ಲ ಎಂದು ಶಾ ಹೇಳಿದರು.

ಅಮಿತ್ ಶಾ ಏನು ಹೇಳಿದರು?
ಬಿಜೆಪಿ ತನ್ನ ನಾಯಕರು ಮಾಡಿದ ದ್ವೇಷದ ಹೇಳಿಕೆಗಳನ್ನು ಖಂಡಿಸುತ್ತದೆ ಮತ್ತು ಅವುಗಳನ್ನು ಅನುಮೋದಿಸುವುದಿಲ್ಲ ಎಂದರು. ಆಗಮ ಮಧ್ಯ ಪ್ರವೇಶಿಸಿದ ನವೀಕಾ ಕುಮಾರ್‌ “ಶಹೀನ್ ಬಾಗ್‌ನಲ್ಲಿನ ಪ್ರತಿಭಟನಾಕಾರರು ಜನರ ಮನೆಗಳಿಗೆ ನುಸುಳುವ ಮೂಲಕ ಮಹಿಳೆಯರು ಮತ್ತು ಹೆಣ್ಣುಮಕ್ಕಳನ್ನು ಅತ್ಯಾಚಾರ ಮಾಡುತ್ತಾರೆ… ಅಂತಹ ವಾಕ್ಯಗಳನ್ನು…” ನವೀಕಾ ಕುಮಾರ್ ತನ್ನ ಪ್ರಶ್ನೆಯನ್ನು ಮುಗಿಸುವ ಮೊದಲು, ಷಾ ಮಧ್ಯಪ್ರವೇಶಿಸಿ, “ಯಾರೂ ಅಂತಹ ಹೇಳಿಕೆಯನ್ನು ನೀಡಿಲ್ಲ” ಎಂದು ಅಮಿತ್‌ ಶಾ ಹೇಳಿದರು.

ಫ್ಯಾಕ್ಟ್‌ಚೆಕ್‌

ಇದನ್ನು ಪರಿಶೀಲಿಸಲು ನಾವು ಎಎನ್‌ಐ ಟ್ವಿಟ್ಟರ್‌ ಹ್ಯಾಂಡಲ್‌ನ ಆರ್ಕೈವ್‌ಗಳನ್ನು ಹುಡುಕಿದಾಗ ಬಿಜೆಪಿ ನಾಯಕ ಮತ್ತು ಸಂಸದ ಪರ್ವೇಶ್‌ ವರ್ಮಾ ಮಾಡಿದ ಭಾಷಣ ದೊರೆಯುತ್ತದೆ. 90 ಸೆಕೆಂಡ್‌ಗಳ ಆ ಭಾಷಣದಲ್ಲಿ ಅವರು “ಲಕ್ಷಾಂತರ ಜನರು ಶಾಹೀನ್ ಬಾಗ್‌ನಲ್ಲಿ ಸೇರುತ್ತಾರೆ.  ಅವರು ನಿಮ್ಮ ಮನೆಗಳಿಗೆ ಪ್ರವೇಶಿಸುತ್ತಾರೆ, ನಿಮ್ಮ ಸಹೋದರಿಯರು ಮತ್ತು ಹೆಣ್ಣುಮಕ್ಕಳನ್ನು ಅತ್ಯಾಚಾರ ಮಾಡುತ್ತಾರೆ, ಅವರನ್ನು ಕೊಲ್ಲುತ್ತಾರೆ. ಮೋದಿಜಿ ಮತ್ತು ಅಮಿತ್ ಶಾ ನಾಳೆ ನಿಮ್ಮನ್ನು ಉಳಿಸಲು ಬರುವುದಿಲ್ಲ… ಇಂದು ಸಮಯವಿದೆ ದೆಹಲಿಯ ಜನರು ಯೋಚಿಸಿ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ ಎಂದು” ಹೇಳಿರುವುದು ಸ್ಪಷ್ಟವಾಗಿದೆ.

ಆ ವಿಡಿಯೋ ನೋಡಿ..

ದೆಹಲಿ ವಿಧಾನಸಭಾ ಚುನಾವಣೆಗೆ ವಿಕಾಸ್ಪುರಿಯಲ್ಲಿ ಪ್ರಚಾರ ನಡೆಸುತ್ತಿದ್ದ ವೇಳೆ ಮಾತನಾಡಿದ ಅವರು “ದೆಹಲಿಯ ಶಹೀನ್ ಬಾಗ್‌ನಲ್ಲಿನ ಪ್ರತಿಭಟನಾಕಾರರನ್ನು ದೆಹಲಿಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಒಂದು ಗಂಟೆಯಲ್ಲಿ ತೆರವುಗೊಳ್ಳಲಾಗುವುದು ಎಂದು ಸಹ  ಘೋಷಿಸಿದ್ದರು.”

ಈ ವಿಡಿಯೋ ಇನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವಾಗಲೇ, ಗೃಹಮಂತ್ರಿ ಅಮಿತ್‌ ಶಾ ನಮ್ಮ ನಾಯಕರು ಹಾಗೆ ಹೇಳಿಲ್ಲ ಎಂದು ಸುಳ್ಳು ಹೇಳಿ ಸಿಕ್ಕಬಿದ್ದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಸಂವಿಧಾನಕ್ಕೆ, ದೇಶದ ಏಕತೆಗೆ, ಸಾರ್ವಭೌಮತ್ವಕ್ಕೆ ಮತ್ತು ದೇಶದ ಪ್ರಜೆಗಳಿಗೆ ವಿರುದ್ಧವಾದ ಕಾನೂನನ್ನು ಜಾರಿಗೆ ತಂದವರು ದೇಶದ್ರೋಹಿಗಳು. ಇಂತಹ ದೇಶದ್ರೋಹಿಗಳು ಮಾಡುವ ಕೆಲಸಗಳನ್ನು ನೋಡಿಕೊಂಡು ನ್ಯಾಯಾಂಗ ಯಾಕೆ ಸುಮ್ಮನಿದೆ ಅಂತ ಗೊತ್ತಾಗುತ್ತಾ ಇಲ್ಲ.

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...