Homeಮುಖಪುಟಶಾಹೀನ್‌ಬಾಗ್‌ ಪ್ರತಿಭಟನಾಕಾರರ ಕುರಿತು ಅಮಿತ್‌ ಶಾ ಸುಳ್ಳು ಹೇಳಿದ್ದೇಕೆ?

ಶಾಹೀನ್‌ಬಾಗ್‌ ಪ್ರತಿಭಟನಾಕಾರರ ಕುರಿತು ಅಮಿತ್‌ ಶಾ ಸುಳ್ಳು ಹೇಳಿದ್ದೇಕೆ?

- Advertisement -
- Advertisement -

ಶಹೀನ್ ಬಾಗ್‌ನಲ್ಲಿ ಪ್ರತಿಭಟನಾಕಾರರು ಮಹಿಳೆಯರ ಮೇಲೆ ಅತ್ಯಾಚಾರ ಮಾಡುತ್ತಾರೆ ಎಂದು ಯಾವುದೇ ಬಿಜೆಪಿ ಮುಖಂಡರು ಹೇಳಿಲ್ಲ ಎಂದು ಅಮಿತ್ ಶಾ ಸುಳ್ಳು ಹೇಳಿಕೆ ನೀಡಿದ್ದಾರೆ.

ಫೆಬ್ರವರಿ 13 ರಂದು ಟೈಮ್ಸ್ ನೌ ಶೃಂಗಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ ಅವರನ್ನು ಪತ್ರಕರ್ತೆ ನವಿಕಾ ಕುಮಾರ್ ಸಂದರ್ಶನ ಮಾಡಿದರು. ಆಗ ಸಿಎಎ ಪರ ರ್‍ಯಾಲಿಗಳಲ್ಲಿ ಬಿಜೆಪಿ ನಾಯಕರು ಎತ್ತುವ ಪ್ರಚೋದನಕಾರಿ ಘೋಷಣೆಗಳಾದ ‘ದೇಶದ ದೇಶದ್ರೋಹಿಗಳನ್ನು ಹೊಡೆದುರುಳಿಸಬೇಕು’. ದೆಹಲಿ ಚುನಾವಣೆಯನ್ನು ‘ಇಂಡಿಯಾ ವರ್ಸಸ್ ಪಾಕಿಸ್ತಾನ್’ ಎಂದು ಕರೆಯಲಾಯಿತು. ಮೂರನೇಯದಾಗಿ ಶಾಹೀನ್ ಬಾಗ್ ಪ್ರತಿಭಟನಾಕಾರರು ನಿಮ್ಮ ಮನೆಗಳಿಗೆ ಪ್ರವೇಶಿಸುತ್ತಾರೆ ಮತ್ತು ಮಹಿಳೆಯರು, ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ ಮಾಡುತ್ತಾರೆ ಎಂಬುದಾಗಿ ಬಿಜೆಪಿ ಮುಖಂಡರು ಹೇಳಿಕೆ ಕೊಟ್ಟಿದ್ದು ಚುನಾವಣೆಯ ಫಲಿತಾಂಶದ ಮೇಲೆ ಪರಿಣಾಮ ಬೀರಿತೆ ಎಂದು ಪ್ರಶ್ನಿಸಿದರು.

ಮೊದಲ ಎರಡು ಹೇಳಿಕೆಗಳನ್ನು ನೀಡಲಾಗಿದೆ ಎಂದು ಅಮಿತ್‌ ಶಾ ಒಪ್ಪಿಕೊಂಡರು. ಆದರೆ ಅವರ ಪಕ್ಷದ ಸದಸ್ಯರು ಶಾಹೀನ್ ಬಾಗ್ ಪ್ರತಿಭಟನಾಕಾರರ ಬಗ್ಗೆ ‘ಅತ್ಯಾಚಾರ’ ಹೇಳಿಕೆ ನೀಡಿದ್ದಾರೆ ಎಂಬುದನ್ನು ನಿರಾಕರಿಸಿ, ಯಾವುದೇ ಬಿಜೆಪಿ ಮುಖಂಡರು  ಹಾಗೆ ಹೇಳಿಲ್ಲ ಎಂದು ಶಾ ಹೇಳಿದರು.

ಅಮಿತ್ ಶಾ ಏನು ಹೇಳಿದರು?
ಬಿಜೆಪಿ ತನ್ನ ನಾಯಕರು ಮಾಡಿದ ದ್ವೇಷದ ಹೇಳಿಕೆಗಳನ್ನು ಖಂಡಿಸುತ್ತದೆ ಮತ್ತು ಅವುಗಳನ್ನು ಅನುಮೋದಿಸುವುದಿಲ್ಲ ಎಂದರು. ಆಗಮ ಮಧ್ಯ ಪ್ರವೇಶಿಸಿದ ನವೀಕಾ ಕುಮಾರ್‌ “ಶಹೀನ್ ಬಾಗ್‌ನಲ್ಲಿನ ಪ್ರತಿಭಟನಾಕಾರರು ಜನರ ಮನೆಗಳಿಗೆ ನುಸುಳುವ ಮೂಲಕ ಮಹಿಳೆಯರು ಮತ್ತು ಹೆಣ್ಣುಮಕ್ಕಳನ್ನು ಅತ್ಯಾಚಾರ ಮಾಡುತ್ತಾರೆ… ಅಂತಹ ವಾಕ್ಯಗಳನ್ನು…” ನವೀಕಾ ಕುಮಾರ್ ತನ್ನ ಪ್ರಶ್ನೆಯನ್ನು ಮುಗಿಸುವ ಮೊದಲು, ಷಾ ಮಧ್ಯಪ್ರವೇಶಿಸಿ, “ಯಾರೂ ಅಂತಹ ಹೇಳಿಕೆಯನ್ನು ನೀಡಿಲ್ಲ” ಎಂದು ಅಮಿತ್‌ ಶಾ ಹೇಳಿದರು.

ಫ್ಯಾಕ್ಟ್‌ಚೆಕ್‌

ಇದನ್ನು ಪರಿಶೀಲಿಸಲು ನಾವು ಎಎನ್‌ಐ ಟ್ವಿಟ್ಟರ್‌ ಹ್ಯಾಂಡಲ್‌ನ ಆರ್ಕೈವ್‌ಗಳನ್ನು ಹುಡುಕಿದಾಗ ಬಿಜೆಪಿ ನಾಯಕ ಮತ್ತು ಸಂಸದ ಪರ್ವೇಶ್‌ ವರ್ಮಾ ಮಾಡಿದ ಭಾಷಣ ದೊರೆಯುತ್ತದೆ. 90 ಸೆಕೆಂಡ್‌ಗಳ ಆ ಭಾಷಣದಲ್ಲಿ ಅವರು “ಲಕ್ಷಾಂತರ ಜನರು ಶಾಹೀನ್ ಬಾಗ್‌ನಲ್ಲಿ ಸೇರುತ್ತಾರೆ.  ಅವರು ನಿಮ್ಮ ಮನೆಗಳಿಗೆ ಪ್ರವೇಶಿಸುತ್ತಾರೆ, ನಿಮ್ಮ ಸಹೋದರಿಯರು ಮತ್ತು ಹೆಣ್ಣುಮಕ್ಕಳನ್ನು ಅತ್ಯಾಚಾರ ಮಾಡುತ್ತಾರೆ, ಅವರನ್ನು ಕೊಲ್ಲುತ್ತಾರೆ. ಮೋದಿಜಿ ಮತ್ತು ಅಮಿತ್ ಶಾ ನಾಳೆ ನಿಮ್ಮನ್ನು ಉಳಿಸಲು ಬರುವುದಿಲ್ಲ… ಇಂದು ಸಮಯವಿದೆ ದೆಹಲಿಯ ಜನರು ಯೋಚಿಸಿ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ ಎಂದು” ಹೇಳಿರುವುದು ಸ್ಪಷ್ಟವಾಗಿದೆ.

ಆ ವಿಡಿಯೋ ನೋಡಿ..

ದೆಹಲಿ ವಿಧಾನಸಭಾ ಚುನಾವಣೆಗೆ ವಿಕಾಸ್ಪುರಿಯಲ್ಲಿ ಪ್ರಚಾರ ನಡೆಸುತ್ತಿದ್ದ ವೇಳೆ ಮಾತನಾಡಿದ ಅವರು “ದೆಹಲಿಯ ಶಹೀನ್ ಬಾಗ್‌ನಲ್ಲಿನ ಪ್ರತಿಭಟನಾಕಾರರನ್ನು ದೆಹಲಿಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಒಂದು ಗಂಟೆಯಲ್ಲಿ ತೆರವುಗೊಳ್ಳಲಾಗುವುದು ಎಂದು ಸಹ  ಘೋಷಿಸಿದ್ದರು.”

ಈ ವಿಡಿಯೋ ಇನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವಾಗಲೇ, ಗೃಹಮಂತ್ರಿ ಅಮಿತ್‌ ಶಾ ನಮ್ಮ ನಾಯಕರು ಹಾಗೆ ಹೇಳಿಲ್ಲ ಎಂದು ಸುಳ್ಳು ಹೇಳಿ ಸಿಕ್ಕಬಿದ್ದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಸಂವಿಧಾನಕ್ಕೆ, ದೇಶದ ಏಕತೆಗೆ, ಸಾರ್ವಭೌಮತ್ವಕ್ಕೆ ಮತ್ತು ದೇಶದ ಪ್ರಜೆಗಳಿಗೆ ವಿರುದ್ಧವಾದ ಕಾನೂನನ್ನು ಜಾರಿಗೆ ತಂದವರು ದೇಶದ್ರೋಹಿಗಳು. ಇಂತಹ ದೇಶದ್ರೋಹಿಗಳು ಮಾಡುವ ಕೆಲಸಗಳನ್ನು ನೋಡಿಕೊಂಡು ನ್ಯಾಯಾಂಗ ಯಾಕೆ ಸುಮ್ಮನಿದೆ ಅಂತ ಗೊತ್ತಾಗುತ್ತಾ ಇಲ್ಲ.

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...