Homeಮುಖಪುಟಶಾಹೀನ್‌ಬಾಗ್‌ ಪ್ರತಿಭಟನಾಕಾರರ ಕುರಿತು ಅಮಿತ್‌ ಶಾ ಸುಳ್ಳು ಹೇಳಿದ್ದೇಕೆ?

ಶಾಹೀನ್‌ಬಾಗ್‌ ಪ್ರತಿಭಟನಾಕಾರರ ಕುರಿತು ಅಮಿತ್‌ ಶಾ ಸುಳ್ಳು ಹೇಳಿದ್ದೇಕೆ?

- Advertisement -
- Advertisement -

ಶಹೀನ್ ಬಾಗ್‌ನಲ್ಲಿ ಪ್ರತಿಭಟನಾಕಾರರು ಮಹಿಳೆಯರ ಮೇಲೆ ಅತ್ಯಾಚಾರ ಮಾಡುತ್ತಾರೆ ಎಂದು ಯಾವುದೇ ಬಿಜೆಪಿ ಮುಖಂಡರು ಹೇಳಿಲ್ಲ ಎಂದು ಅಮಿತ್ ಶಾ ಸುಳ್ಳು ಹೇಳಿಕೆ ನೀಡಿದ್ದಾರೆ.

ಫೆಬ್ರವರಿ 13 ರಂದು ಟೈಮ್ಸ್ ನೌ ಶೃಂಗಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ ಅವರನ್ನು ಪತ್ರಕರ್ತೆ ನವಿಕಾ ಕುಮಾರ್ ಸಂದರ್ಶನ ಮಾಡಿದರು. ಆಗ ಸಿಎಎ ಪರ ರ್‍ಯಾಲಿಗಳಲ್ಲಿ ಬಿಜೆಪಿ ನಾಯಕರು ಎತ್ತುವ ಪ್ರಚೋದನಕಾರಿ ಘೋಷಣೆಗಳಾದ ‘ದೇಶದ ದೇಶದ್ರೋಹಿಗಳನ್ನು ಹೊಡೆದುರುಳಿಸಬೇಕು’. ದೆಹಲಿ ಚುನಾವಣೆಯನ್ನು ‘ಇಂಡಿಯಾ ವರ್ಸಸ್ ಪಾಕಿಸ್ತಾನ್’ ಎಂದು ಕರೆಯಲಾಯಿತು. ಮೂರನೇಯದಾಗಿ ಶಾಹೀನ್ ಬಾಗ್ ಪ್ರತಿಭಟನಾಕಾರರು ನಿಮ್ಮ ಮನೆಗಳಿಗೆ ಪ್ರವೇಶಿಸುತ್ತಾರೆ ಮತ್ತು ಮಹಿಳೆಯರು, ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ ಮಾಡುತ್ತಾರೆ ಎಂಬುದಾಗಿ ಬಿಜೆಪಿ ಮುಖಂಡರು ಹೇಳಿಕೆ ಕೊಟ್ಟಿದ್ದು ಚುನಾವಣೆಯ ಫಲಿತಾಂಶದ ಮೇಲೆ ಪರಿಣಾಮ ಬೀರಿತೆ ಎಂದು ಪ್ರಶ್ನಿಸಿದರು.

ಮೊದಲ ಎರಡು ಹೇಳಿಕೆಗಳನ್ನು ನೀಡಲಾಗಿದೆ ಎಂದು ಅಮಿತ್‌ ಶಾ ಒಪ್ಪಿಕೊಂಡರು. ಆದರೆ ಅವರ ಪಕ್ಷದ ಸದಸ್ಯರು ಶಾಹೀನ್ ಬಾಗ್ ಪ್ರತಿಭಟನಾಕಾರರ ಬಗ್ಗೆ ‘ಅತ್ಯಾಚಾರ’ ಹೇಳಿಕೆ ನೀಡಿದ್ದಾರೆ ಎಂಬುದನ್ನು ನಿರಾಕರಿಸಿ, ಯಾವುದೇ ಬಿಜೆಪಿ ಮುಖಂಡರು  ಹಾಗೆ ಹೇಳಿಲ್ಲ ಎಂದು ಶಾ ಹೇಳಿದರು.

ಅಮಿತ್ ಶಾ ಏನು ಹೇಳಿದರು?
ಬಿಜೆಪಿ ತನ್ನ ನಾಯಕರು ಮಾಡಿದ ದ್ವೇಷದ ಹೇಳಿಕೆಗಳನ್ನು ಖಂಡಿಸುತ್ತದೆ ಮತ್ತು ಅವುಗಳನ್ನು ಅನುಮೋದಿಸುವುದಿಲ್ಲ ಎಂದರು. ಆಗಮ ಮಧ್ಯ ಪ್ರವೇಶಿಸಿದ ನವೀಕಾ ಕುಮಾರ್‌ “ಶಹೀನ್ ಬಾಗ್‌ನಲ್ಲಿನ ಪ್ರತಿಭಟನಾಕಾರರು ಜನರ ಮನೆಗಳಿಗೆ ನುಸುಳುವ ಮೂಲಕ ಮಹಿಳೆಯರು ಮತ್ತು ಹೆಣ್ಣುಮಕ್ಕಳನ್ನು ಅತ್ಯಾಚಾರ ಮಾಡುತ್ತಾರೆ… ಅಂತಹ ವಾಕ್ಯಗಳನ್ನು…” ನವೀಕಾ ಕುಮಾರ್ ತನ್ನ ಪ್ರಶ್ನೆಯನ್ನು ಮುಗಿಸುವ ಮೊದಲು, ಷಾ ಮಧ್ಯಪ್ರವೇಶಿಸಿ, “ಯಾರೂ ಅಂತಹ ಹೇಳಿಕೆಯನ್ನು ನೀಡಿಲ್ಲ” ಎಂದು ಅಮಿತ್‌ ಶಾ ಹೇಳಿದರು.

ಫ್ಯಾಕ್ಟ್‌ಚೆಕ್‌

ಇದನ್ನು ಪರಿಶೀಲಿಸಲು ನಾವು ಎಎನ್‌ಐ ಟ್ವಿಟ್ಟರ್‌ ಹ್ಯಾಂಡಲ್‌ನ ಆರ್ಕೈವ್‌ಗಳನ್ನು ಹುಡುಕಿದಾಗ ಬಿಜೆಪಿ ನಾಯಕ ಮತ್ತು ಸಂಸದ ಪರ್ವೇಶ್‌ ವರ್ಮಾ ಮಾಡಿದ ಭಾಷಣ ದೊರೆಯುತ್ತದೆ. 90 ಸೆಕೆಂಡ್‌ಗಳ ಆ ಭಾಷಣದಲ್ಲಿ ಅವರು “ಲಕ್ಷಾಂತರ ಜನರು ಶಾಹೀನ್ ಬಾಗ್‌ನಲ್ಲಿ ಸೇರುತ್ತಾರೆ.  ಅವರು ನಿಮ್ಮ ಮನೆಗಳಿಗೆ ಪ್ರವೇಶಿಸುತ್ತಾರೆ, ನಿಮ್ಮ ಸಹೋದರಿಯರು ಮತ್ತು ಹೆಣ್ಣುಮಕ್ಕಳನ್ನು ಅತ್ಯಾಚಾರ ಮಾಡುತ್ತಾರೆ, ಅವರನ್ನು ಕೊಲ್ಲುತ್ತಾರೆ. ಮೋದಿಜಿ ಮತ್ತು ಅಮಿತ್ ಶಾ ನಾಳೆ ನಿಮ್ಮನ್ನು ಉಳಿಸಲು ಬರುವುದಿಲ್ಲ… ಇಂದು ಸಮಯವಿದೆ ದೆಹಲಿಯ ಜನರು ಯೋಚಿಸಿ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ ಎಂದು” ಹೇಳಿರುವುದು ಸ್ಪಷ್ಟವಾಗಿದೆ.

ಆ ವಿಡಿಯೋ ನೋಡಿ..

ದೆಹಲಿ ವಿಧಾನಸಭಾ ಚುನಾವಣೆಗೆ ವಿಕಾಸ್ಪುರಿಯಲ್ಲಿ ಪ್ರಚಾರ ನಡೆಸುತ್ತಿದ್ದ ವೇಳೆ ಮಾತನಾಡಿದ ಅವರು “ದೆಹಲಿಯ ಶಹೀನ್ ಬಾಗ್‌ನಲ್ಲಿನ ಪ್ರತಿಭಟನಾಕಾರರನ್ನು ದೆಹಲಿಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಒಂದು ಗಂಟೆಯಲ್ಲಿ ತೆರವುಗೊಳ್ಳಲಾಗುವುದು ಎಂದು ಸಹ  ಘೋಷಿಸಿದ್ದರು.”

ಈ ವಿಡಿಯೋ ಇನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವಾಗಲೇ, ಗೃಹಮಂತ್ರಿ ಅಮಿತ್‌ ಶಾ ನಮ್ಮ ನಾಯಕರು ಹಾಗೆ ಹೇಳಿಲ್ಲ ಎಂದು ಸುಳ್ಳು ಹೇಳಿ ಸಿಕ್ಕಬಿದ್ದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಸಂವಿಧಾನಕ್ಕೆ, ದೇಶದ ಏಕತೆಗೆ, ಸಾರ್ವಭೌಮತ್ವಕ್ಕೆ ಮತ್ತು ದೇಶದ ಪ್ರಜೆಗಳಿಗೆ ವಿರುದ್ಧವಾದ ಕಾನೂನನ್ನು ಜಾರಿಗೆ ತಂದವರು ದೇಶದ್ರೋಹಿಗಳು. ಇಂತಹ ದೇಶದ್ರೋಹಿಗಳು ಮಾಡುವ ಕೆಲಸಗಳನ್ನು ನೋಡಿಕೊಂಡು ನ್ಯಾಯಾಂಗ ಯಾಕೆ ಸುಮ್ಮನಿದೆ ಅಂತ ಗೊತ್ತಾಗುತ್ತಾ ಇಲ್ಲ.

LEAVE A REPLY

Please enter your comment!
Please enter your name here

- Advertisment -

ಅಸ್ಸಾಂ : ಮತದಾನದ ಹಿಂದಿನ ದಿನ ಪಕ್ಷಕ್ಕೆ ರಾಜೀನಾಮೆ ನೀಡಿದ ಕಾಂಗ್ರೆಸ್ ಅಭ್ಯರ್ಥಿ!

ಅಸ್ಸಾಂ ವಿಧಾನಸಭೆ ಚುನಾವಣೆಗೆ ಕೇವಲ ಒಂದು ದಿನ ಬಾಕಿ ಇರುವಾಗ, ಉದಲ್ಗುರಿ (ಎಸ್‌ಟಿ) ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುರೇನ್ ದೈಮರಿ ಅವರು ಪಕ್ಷಕ್ಕೆ ರಾಜೀನಾಮೆ ನೀಡಿ ತಮ್ಮ ಉಮೇದುವಾರಿಕೆಯನ್ನು ಹಿಂಪಡೆದಿದ್ದಾರೆ ಎಂದು ವರದಿಯಾಗಿದೆ. ಪಕ್ಷದ ನಾಯಕತ್ವದಿಂದ...

ವಿಧಾನಸಭೆ ಚುನಾವಣೆ : ಅಸ್ಸಾಂ, ಕೇರಳ, ಪುದುಚೇರಿಯಲ್ಲಿ ಇಂದು ಮತದಾನ

ಅಸ್ಸಾಂ, ಕೇರಳ ಮತ್ತು ಪುದುಚೇರಿ ವಿಧಾನಸಭೆಯ ಚುನಾವಣೆಯ ಮತದಾನ ಇಂದು (ಏ.9, 2026) ಒಂದೇ ಹಂತದಲ್ಲಿ ನಡೆಯಲಿದೆ. ಈಗಾಗಲೇ ಮತದಾನ ಆರಂಭಗೊಂಡಿದೆ. ಅಸ್ಸಾಂನ 126 ಸದಸ್ಯ ಬಲದ ವಿಧಾನಸಭೆಗೆ ನಡೆಯಲಿರುವ ಚುನಾವಣೆಯು...

‘ಯುದ್ಧ ಮುಂದುವರಿಸಲು ಸಾಧ್ಯವಾಗದೆ ಅಮೆರಿಕ ಬಲವಂತವಾಗಿ ಕದನ ವಿರಾಮ ಘೋಷಿಸಿತು’: ಭಾರತದಲ್ಲಿ ಇರಾನ್ ಸುಪ್ರೀಂ ಲೀಡರ್ ಪ್ರತಿನಿಧಿ

ನವದೆಹಲಿ: ಸಂಘರ್ಷವನ್ನು ಮುುಂದುವರಿಸಲು ವಿಫಲವಾದ ನಂತರ ಅಮೆರಿಕವು ಇರಾನ್ ಜೊತೆ ಕದನ ವಿರಾಮ ಘೋಷಿಸಲು ಒತ್ತಾಯಿಸಲ್ಪಟ್ಟಿತು ಮತ್ತು ನಿರಂತರ ಹಗೆತನವು ವಾಷಿಂಗ್ಟನ್‌ಗೆ ಮತ್ತಷ್ಟು ಹಿನ್ನಡೆಗೆ ಕಾರಣವಾಗುತ್ತಿತ್ತು ಎಂದು ಇರಾನ್‌ನ ಸರ್ವೋಚ್ಚ ನಾಯಕನ ಭಾರತದಲ್ಲಿನ...

ಶಾರದಾ ಚಿಟ್ ಫಂಡ್ ಹಗರಣ: 13 ವರ್ಷಗಳ ನಂತರ ಪ್ರಮುಖ ಆರೋಪಿ ಸುದೀಪ್ತ ಸೇನ್ ಗೆ ಜಾಮೀನು ಮಂಜೂರು ಮಾಡಿದ ಕೊಲ್ಕತ್ತಾ ಹೈಕೋರ್ಟ್

ಕೊಲ್ಕತ್ತಾ ಹೈಕೋರ್ಟ್ ಬುಧವಾರ ಬಹುಕೋಟಿ ಶಾರದಾ ಚಿಟ್ ಫಂಡ್ ಹಗರಣದ ಪ್ರಮುಖ ಆರೋಪಿ ಸುದೀಪ್ತ ಸೇನ್ ಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದು, 13 ವರ್ಷಗಳ ನಂತರ ಜೈಲಿನಿಂದ ಬಿಡುಗಡೆಯಾಗಲು ದಾರಿ ಸುಗಮವಾಗಿದೆ. ಪಶ್ಚಿಮ...

ಇಂದೋರ್: ಪೊಲೀಸರಿಂದ ಹಣಕ್ಕಾಗಿ ಬೇಡಿಕೆ, ಹಲ್ಲೆ ಆರೋಪ; 25 ವರ್ಷದ ಟ್ಯಾಕ್ಸಿ ಚಾಲಕ ಆತ್ಮಹತ್ಯೆ: ಪೊಲೀಸ್ ಅಮಾನತು

ಇಂದೋರ್: ಪೊಲೀಸರ ಹಲ್ಲೆ ಮತ್ತು ಭ್ರಷ್ಟಾಚಾರವನ್ನು ಆರೋಪಿಸಿ ವೀಡಿಯೊ ರೆಕಾರ್ಡ್ ಮಾಡಿದ ನಂತರ 25 ವರ್ಷದ ಟ್ಯಾಕ್ಸಿ ಚಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದು, ಅಧಿಕಾರಿಗಳು ಸಬ್ ಇನ್ಸ್‌ಪೆಕ್ಟರ್‌ನನ್ನು ಅಮಾನತುಗೊಳಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ. ಅಭಿಷೇಕ್...

ಅಮೆರಿಕ ಕೋರ್ಟ್ ಮೆಟ್ಟಿಲೇರಿದ ಅದಾನಿ : ಎಸ್‌ಇಸಿ ವಂಚನೆ ಪ್ರಕರಣ ವಜಾಗೊಳಿಸುವಂತೆ ಮನವಿ

ಅದಾನಿ ಗ್ರೂಪ್‌ನ ಅಧ್ಯಕ್ಷ ಗೌತಮ್ ಅದಾನಿ ಮತ್ತು ಅವರ ಸೋದರಸಂಬಂಧಿ ಸಾಗರ್ ಅದಾನಿ ಅವರು ತಮ್ಮ ವಿರುದ್ಧದ ಭ್ರಷ್ಟಾಚಾರ ಮತ್ತು ವಂಚನೆ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಅಮೆರಿಕ ನ್ಯಾಯಾಲಯದ ಮೊರೆ ಹೋಗಿದ್ದಾರೆ ಎಂದು ವರದಿಯಾಗಿದೆ. ಅಮೆರಿಕದ ಸೆಕ್ಯುರಿಟೀಸ್ ಅಂಡ್ ಎಕ್ಸ್ಚೇಂಜ್...

ಜಮ್ಮು-ಕಾಶ್ಮೀರ: ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಆರೋಪ; ಇಬ್ಬರು ಸರ್ಕಾರಿ ನೌಕರರನ್ನು ವಜಾಗೊಳಿಸಿದ ಮನೋಜ್ ಸಿನ್ಹಾ

ಲಷ್ಕರ್-ಎ-ತೈಬಾ ಮತ್ತು ಹಿಜ್ಬುಲ್ ಮುಜಾಹಿದ್ದೀನ್ ಸೇರಿದಂತೆ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಬುಧವಾರ ಇಬ್ಬರು ಸರ್ಕಾರಿ ನೌಕರರನ್ನು ವಜಾಗೊಳಿಸಿದ್ದಾರೆ ಎಂದು...

ಭಾರಿ ಜನ ಬೆಂಬಲದ ನಡುವೆ ಭವಾನಿಪುರದಲ್ಲಿ ನಾಮಪತ್ರ ಸಲ್ಲಿಸಿದ ಮಮತಾ ಬ್ಯಾನರ್ಜಿ: ಶಕ್ತಿ ಪ್ರದರ್ಶನವಾಗಿ ಮಾರ್ಪಟ್ಟ ಮೆರವಣಿಗೆ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ತಮ್ಮ ಕಾಲಿಘಾಟ್ಕಾಲ್ ನಿವಾಸದಿಂದ ಹೊರಬಂದು ಭಬಾನಿಪುರ ವಿಧಾನಸಭಾ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಕಾಲ್ನಡಿಗೆಯಲ್ಲಿ ತೆರಳಿದರು, ಆ ಸಮಯದಲ್ಲಿ ಬೆಂಬಲಿಗರ ದೊಡ್ಡ ಗುಂಪೊಂದು ತೃಣಮೂಲ ಕಾಂಗ್ರೆಸ್...

‘ಜ್ಞಾನೇಶ್ ಕುಮಾರ್ ನಮಗೆ ‘ಗೆಟ್ ಲಾಸ್ಟ್’ ಅಂದ್ರು’ : ಮುಖ್ಯ ಚುನಾವಣಾ ಆಯುಕ್ತರೊಂದಿಗಿನ ಸಭೆ ಬಳಿಕ ಟಿಎಂಸಿ ನಾಯಕರಿಂದ ಆರೋಪ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರೊಂದಿಗೆ ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) ನಾಲ್ವರು ಸದಸ್ಯರ ನಿಯೋಗ ನಡೆಸಿದ ಸಭೆಯು ಬುಧವಾರ ಕಾವೇರಿದ ಚರ್ಚೆಗೆ ಸಾಕ್ಷಿಯಾಯಿತು. ಈ ವೇಳೆ ಚುನಾವಣಾ ಆಯುಕ್ತರು ನಮಗೆ...

ಅಸ್ಸಾಂ ಸಿಎಂ ಪತ್ನಿ ದೂರಿನ ಮೇರೆಗೆ ಪವನ್ ಖೇರಾ ವಿರುದ್ಧ ಮಾನನಷ್ಟ, ಕ್ರಿಮಿನಲ್ ಪಿತೂರಿ ಆರೋಪದಡಿ ಪ್ರಕರಣ ದಾಖಲು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ನೀಡಿದ ದೂರಿನ ಆಧಾರದ ಮೇಲೆ ಅಸ್ಸಾಂ ಪೊಲೀಸರು ಪವನ್ ಖೇರಾ ವಿರುದ್ಧ ಮಾನನಷ್ಟ, ನಕಲಿ ಮತ್ತು ಕ್ರಿಮಿನಲ್ ಪಿತೂರಿ ಸೇರಿದಂತೆ...