Homeಮುಖಪುಟ‘ಅಮ್ಮಚ್ಚಿ’ಯನ್ನು ಸಂತೋಷದಿಂದ ಕಳುಹಿಸಿಕೊಟ್ಟಿದ್ದೇವೆ, ತಪ್ಪೇನು?: ವೈರಲ್ ಚಿತ್ರದ ವಾಸ್ತವವಿದು!

‘ಅಮ್ಮಚ್ಚಿ’ಯನ್ನು ಸಂತೋಷದಿಂದ ಕಳುಹಿಸಿಕೊಟ್ಟಿದ್ದೇವೆ, ತಪ್ಪೇನು?: ವೈರಲ್ ಚಿತ್ರದ ವಾಸ್ತವವಿದು!

- Advertisement -
- Advertisement -

ಮೃತದೇಹವೊಂದರ ಮುಂದೆ ಕುಟುಂಬಸ್ಥರು ನಗುತ್ತಾ ಗ್ರೂಪ್ ಫೋಟೊ ಕ್ಲಿಕ್ಕಿಸಿರುವ ಚಿತ್ರವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಇದೀಗ ವೈರಲ್ ಆಗಿದೆ. ಮರಣ ಹೊಂದಿರುವ ಮನೆಯಲ್ಲಿ ಯಾವುದೆ ದುಃಖವಿಲ್ಲದೆ ಹೀಗೆ ನಗುತ್ತಾ ಫೋಟೊ ಕ್ಲಿಕ್ಕಿಸಿರುವ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಕೆಲವರು ಟೀಕಿಸಿದರೆ, ಇನ್ನು ಕೆಲವರು ಮೃತಪಟ್ಟವರನ್ನು ನಗುನಗುತ್ತಲೇ ಕಳುಹಿಸಿಕೊಡುವುದು ಕೂಡಾ ಸರಿಯಾದ ನಡೆ ಎಂದು ಕುಟುಂಬವನ್ನು ಬೆಂಬಲಿಸಿದ್ದಾರೆ.

ಕುಟುಂಬವೊಂದರ ಖಾಸಗಿ ಚಿತ್ರ ಸಾಮಾಜಿಕ ಮಾಧ್ಯಮಗಳಲ್ಲಿ ಹಲವಾರು ನಿರೂಪಣೆಯೊಂದಿಗೆ ಹರಿದಾಡಿದ್ದಕ್ಕೆ, ಕುಟುಂಬದ ಸದಸ್ಯರು ಬೇಸರ ವ್ಯಕ್ತಪಡಿಸಿ ಸಮಜಾಯಿಷಿ ನೀಡಿದ್ದಾರೆ. ನಮ್ಮ ‘ಅಮ್ಮಚ್ಚಿ(ಅಮ್ಮ)’ಯನ್ನು ಸಂತೋಷದಿಂದ ಕಳುಹಿಸಿಕೊಟ್ಟಿದ್ದೇವೆ, ಇದರಲ್ಲಿ ತಪ್ಪೇನಿದೆ ಎಂದು ಅವರು ಪ್ರಶ್ನಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಘಟನೆ ಏನು?

ಕೇರಳದ ಕೊಟ್ಟಾಯಂ ಜಿಲ್ಲೆಯ ಮಲ್ಲಪಲ್ಲಿ ಮೂಲದ ದಿವಂಗತ ರೆವರೆಂಡ್ ಪಿ.ಒ. ವರ್ಗೀಸ್ ಅವರ ಪತ್ನಿ, 95 ವರ್ಷದ ಮರಿಯಮ್ಮ ಅವರು ಇತ್ತೀಚೆಗೆ ಮೃತಪಟ್ಟಿದ್ದರು. ವೈರಲ್ ಚಿತ್ರದಲ್ಲಿ ಕಾಣುತ್ತಿರುವ ವ್ಯಕ್ತಿಗಳು ಅವರ ಕುಟುಂಬದ ಸದಸ್ಯರಾಗಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಎಂದು ಹಳೆಯ ಚಿತ್ರಗಳು ವೈರಲ್‌!

“ಮರಿಯಮ್ಮ ನನ್ನ ತಂದೆಯ ಅಣ್ಣನ ಹೆಂಡತಿ. ವ್ಯಕ್ತಿಯೊಬ್ಬರು ಸತ್ತರೆ ಸ್ವರ್ಗಕ್ಕೆ ಹೋಗುತ್ತಾರೆ ಎಂಬುವುದಾಗಿದೆ ಕ್ರಿಶ್ಚಿಯನ್ನರ ನಂಬಿಕೆ. ಮರಿಯಮ್ಮ ಎಂಬ ನಮ್ಮ ‘ಅಮ್ಮಚ್ಚಿ’ ಬದುಕಿದ್ದಾಗ ಉತ್ತಮ ರೀತಿಯ ಜೀವನ ನಡೆಸಿದ್ದಾರೆ. ಅಮ್ಮಚ್ಚಿ ಸ್ವರ್ಗಕ್ಕೆ ಹೋದ ಖುಷಿಯಾಗಿದೆ ಅಲ್ಲಿ ಎದ್ದು ಕಾಣುತ್ತಿದ್ದದ್ದು” ಎಂದು ಮೃತ ಮಹಿಳೆಯ ಕುಟುಂಬದ ಸದಸ್ಯ, ವೈದ್ಯರಾದ ಉಮ್ಮನ್ ಪಿ. ನೈನಾನ್‌ ಹೇಳಿದ್ದಾರೆ.

“ಹಿಂದಿನ ದಿನ ನಾಲ್ಕು ಗಂಟೆಗೆ ಶವವನ್ನು ಮನೆಗೆ ತರಲಾಯಿತು. ಮರುದಿನ ಮುಂಜಾನೆ 3 ಗಂಟೆ ಸುಮಾರಿಗೆ ಈ ಫೋಟೋ ತೆಗೆಯಲಾಗಿದೆ” ಎಂದು ಅವರು ಹೇಳಿದ್ದಾರೆ.

“ಅಲ್ಲಿಯವರೆಗೂ ಅಮ್ಮಚ್ಚಿಯ ಜೊತೆ ಮನೆಯವರೆಲ್ಲ ಒಂದೆಡೆ ಸೇರಿ, ಅವರಿಗಾಗಿ ಪ್ರಾರ್ಥಿಸಿದರು. ಮಕ್ಕಳು, ಮೊಮ್ಮಕ್ಕಳು ಹಾಗೂ ಕುಟುಂಬದ ಇತರ ಸದಸ್ಯರು ಅಮ್ಮಚ್ಚಿ ಬದುಕಿದ್ದಾಗಿನ ಅನುಭವಗಳನ್ನು ಹಂಚಿಕೊಂಡರು. ಎಲ್ಲರೂ ಸ್ವಲ್ಪ ಹೊತ್ತು ವಿಶ್ರಾಂತಿ ಪಡೆಯಲು ಹೊರಟಾಗ ತೆಗೆದ ಫೋಟೋ ಇದಾಗಿದೆ” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಅಧಿಕಾರದಲ್ಲಿದ್ದರೆ ರಸ್ತೆಗಿಳಿದು ಕಲ್ಲು ಹೊಡೆಯಬಹುದು: ಸಂಸದ ತೇಜಸ್ವಿ ಸೂರ್ಯ ಆಡಿಯೋ ವೈರಲ್

“ನಮ್ಮ ಕುಟುಂಬದ ಒಳಗೆ ಸೀಮಿತವಾಗಬೇಕಿದ್ದ ಈ ಖಾಸಗಿ ಚಿತ್ರ ಹೇಗೋ ಹೊರಬಿದ್ದಿದೆ. ನಂತರ ಅದು ವೈರಲ್ ಆಗಿದೆ. ಕೆಲವರು ಅದನ್ನು ಕೆಟ್ಟದಾಗಿ ನಿರೂಪಿಸಿ ಹರಡುತ್ತಿದ್ದಾರೆ. ಅಮ್ಮಚ್ಚಿಯ ಮರಣಾ ನಂತರದ ಜೀವನ ಆಶಾದಾಯಕವಾಗಿ ಇರುತ್ತದೆ ಎಂದು ನಾವು ನಂಬುತ್ತೇವೆ. ಈ ಕಾರಣಕ್ಕಾಗಿಯೆ ನಾವು ಅವರನ್ನು ಖುಷಿಯಿಂದ ಕಳುಹಿಸಿಕೊಟ್ಟಿದ್ದೇವೆ” ಎಂದು ಅವರು ಹೇಳಿದ್ದಾರೆ.

“ಅಮ್ಮಚ್ಚಿ ಕಳೆದ ಒಂದು ವರ್ಷದಿಂದ ಸಂಪೂರ್ಣವಾಗಿ ಹಾಸಿಗೆ ಹಿಡಿದಿದ್ದರು. ಅವರಿಗೆ 9 ಮಕ್ಕಳು. ಅವರಲ್ಲಿ ಒಬ್ಬರು ಈ ಹಿಂದೆಯೆ ತೀರಿಕೊಂಡಿದ್ದಾರೆ. ಉಳಿದ ಎಲ್ಲರೂ ಅವರನ್ನು ಚೆನ್ನಾಗಿ ನೋಡಿಕೊಂಡಿದ್ದಾರೆ. ಅವರನ್ನು ಉತ್ತಮ ರೀತಿಯಲ್ಲಿ ಸೇವೆ ಮಾಡಿದ್ದಾರೆ” ಎಂದು ಅವರು ಹೇಳಿದ್ದಾರೆ.

“ಇದರಲ್ಲಿ ಅಪಹಾಸ್ಯ ಮಾಡಲು ಏನಿದೆ? ಚಿತ್ರವನ್ನು ಬಳಸಿ ಕೆಟ್ಟದಾಗಿ ಪ್ರಚಾರ ಮಾಡುವವರ ಮನಸ್ಥಿತಿ ಇದರಲ್ಲಿ ಬಯಲಾಗಿದೆ. ಸತ್ತಾಗ ಮಾತ್ರ ಅಳಬೇಕು ಎನ್ನುವವರಿಗೆ ಏನು ಹೇಳಬೇಕು” ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ವೈರಲ್‌ ವಿಡಿಯೊದಲ್ಲಿ ಡಾನ್ಸ್‌ ಮಾಡುತ್ತಿರುವ ಮಗು ಶಿಕ್ಷಕನಿಂದ ಕೊಲೆಯಾದ ಇಂದ್ರ ಮೇಘ್ವಾಲ್‌ ಅಲ್ಲ

“ಕುಟುಂಬದ ಸದಸ್ಯನಾಗಿ ಒಂದು ಅಪೇಕ್ಷೆಯೇನೆಂದರೆ, ದಯವಿಟ್ಟು ಈ ಚಿತ್ರವನ್ನು ಮತ್ತಷ್ಟು ಹರಡಬೇಡಿ. ಇನ್ನೊಬ್ಬರನ್ನು ಗೇಲಿ ಮಾಡುವುದರಿಂದ ಅವರಿಗೆ ಸಿಗುವ ಖುಷಿಯಾದರೂ ಏನು? ನಮ್ಮನ್ನು ಅನೇಕರು ಬೆಂಬಲಿಸಿದ್ದಾರೆ ಎಂದು ತಿಳಿದು ತುಸು ನಿರಾಳವಾಗಿದ್ದೇವೆ” ಎಂದು ಹೇಳಿದ್ದಾರೆ.

ಕುಟುಂಬಸ್ಥರನ್ನು ಗೇಲಿ ಮಾಡುವವರಿಗೆ ಸಾಮಾಜಿಕ ಮಾಧ್ಯಮಗಳಲ್ಲಿ ಕೆಲವರು ಪಾಠವನ್ನು ಮಾಡಿದ್ದಾರೆ. ಮೃತಪಟ್ಟವರನ್ನು ಖುಷಿಯಿಂದ ಡ್ಯಾನ್ಸ್‌ ಮಾಡುತ್ತಾ ಕಳುಹಿಸಿಕೊಡುವ ಸಂಸ್ಕೃತಿ ತಮಿಳುನಾಡು, ಸೇರಿದಂತೆ ಕರ್ನಾಟಕದಲ್ಲಿ ಈ ಹಿಂದಿನಿಂದಲೂ ಇವೆ ಎಂದು ನೆನಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...