Homeಮುಖಪುಟ‘ಅಮ್ಮಚ್ಚಿ’ಯನ್ನು ಸಂತೋಷದಿಂದ ಕಳುಹಿಸಿಕೊಟ್ಟಿದ್ದೇವೆ, ತಪ್ಪೇನು?: ವೈರಲ್ ಚಿತ್ರದ ವಾಸ್ತವವಿದು!

‘ಅಮ್ಮಚ್ಚಿ’ಯನ್ನು ಸಂತೋಷದಿಂದ ಕಳುಹಿಸಿಕೊಟ್ಟಿದ್ದೇವೆ, ತಪ್ಪೇನು?: ವೈರಲ್ ಚಿತ್ರದ ವಾಸ್ತವವಿದು!

- Advertisement -
- Advertisement -

ಮೃತದೇಹವೊಂದರ ಮುಂದೆ ಕುಟುಂಬಸ್ಥರು ನಗುತ್ತಾ ಗ್ರೂಪ್ ಫೋಟೊ ಕ್ಲಿಕ್ಕಿಸಿರುವ ಚಿತ್ರವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಇದೀಗ ವೈರಲ್ ಆಗಿದೆ. ಮರಣ ಹೊಂದಿರುವ ಮನೆಯಲ್ಲಿ ಯಾವುದೆ ದುಃಖವಿಲ್ಲದೆ ಹೀಗೆ ನಗುತ್ತಾ ಫೋಟೊ ಕ್ಲಿಕ್ಕಿಸಿರುವ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಕೆಲವರು ಟೀಕಿಸಿದರೆ, ಇನ್ನು ಕೆಲವರು ಮೃತಪಟ್ಟವರನ್ನು ನಗುನಗುತ್ತಲೇ ಕಳುಹಿಸಿಕೊಡುವುದು ಕೂಡಾ ಸರಿಯಾದ ನಡೆ ಎಂದು ಕುಟುಂಬವನ್ನು ಬೆಂಬಲಿಸಿದ್ದಾರೆ.

ಕುಟುಂಬವೊಂದರ ಖಾಸಗಿ ಚಿತ್ರ ಸಾಮಾಜಿಕ ಮಾಧ್ಯಮಗಳಲ್ಲಿ ಹಲವಾರು ನಿರೂಪಣೆಯೊಂದಿಗೆ ಹರಿದಾಡಿದ್ದಕ್ಕೆ, ಕುಟುಂಬದ ಸದಸ್ಯರು ಬೇಸರ ವ್ಯಕ್ತಪಡಿಸಿ ಸಮಜಾಯಿಷಿ ನೀಡಿದ್ದಾರೆ. ನಮ್ಮ ‘ಅಮ್ಮಚ್ಚಿ(ಅಮ್ಮ)’ಯನ್ನು ಸಂತೋಷದಿಂದ ಕಳುಹಿಸಿಕೊಟ್ಟಿದ್ದೇವೆ, ಇದರಲ್ಲಿ ತಪ್ಪೇನಿದೆ ಎಂದು ಅವರು ಪ್ರಶ್ನಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಘಟನೆ ಏನು?

ಕೇರಳದ ಕೊಟ್ಟಾಯಂ ಜಿಲ್ಲೆಯ ಮಲ್ಲಪಲ್ಲಿ ಮೂಲದ ದಿವಂಗತ ರೆವರೆಂಡ್ ಪಿ.ಒ. ವರ್ಗೀಸ್ ಅವರ ಪತ್ನಿ, 95 ವರ್ಷದ ಮರಿಯಮ್ಮ ಅವರು ಇತ್ತೀಚೆಗೆ ಮೃತಪಟ್ಟಿದ್ದರು. ವೈರಲ್ ಚಿತ್ರದಲ್ಲಿ ಕಾಣುತ್ತಿರುವ ವ್ಯಕ್ತಿಗಳು ಅವರ ಕುಟುಂಬದ ಸದಸ್ಯರಾಗಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಎಂದು ಹಳೆಯ ಚಿತ್ರಗಳು ವೈರಲ್‌!

“ಮರಿಯಮ್ಮ ನನ್ನ ತಂದೆಯ ಅಣ್ಣನ ಹೆಂಡತಿ. ವ್ಯಕ್ತಿಯೊಬ್ಬರು ಸತ್ತರೆ ಸ್ವರ್ಗಕ್ಕೆ ಹೋಗುತ್ತಾರೆ ಎಂಬುವುದಾಗಿದೆ ಕ್ರಿಶ್ಚಿಯನ್ನರ ನಂಬಿಕೆ. ಮರಿಯಮ್ಮ ಎಂಬ ನಮ್ಮ ‘ಅಮ್ಮಚ್ಚಿ’ ಬದುಕಿದ್ದಾಗ ಉತ್ತಮ ರೀತಿಯ ಜೀವನ ನಡೆಸಿದ್ದಾರೆ. ಅಮ್ಮಚ್ಚಿ ಸ್ವರ್ಗಕ್ಕೆ ಹೋದ ಖುಷಿಯಾಗಿದೆ ಅಲ್ಲಿ ಎದ್ದು ಕಾಣುತ್ತಿದ್ದದ್ದು” ಎಂದು ಮೃತ ಮಹಿಳೆಯ ಕುಟುಂಬದ ಸದಸ್ಯ, ವೈದ್ಯರಾದ ಉಮ್ಮನ್ ಪಿ. ನೈನಾನ್‌ ಹೇಳಿದ್ದಾರೆ.

“ಹಿಂದಿನ ದಿನ ನಾಲ್ಕು ಗಂಟೆಗೆ ಶವವನ್ನು ಮನೆಗೆ ತರಲಾಯಿತು. ಮರುದಿನ ಮುಂಜಾನೆ 3 ಗಂಟೆ ಸುಮಾರಿಗೆ ಈ ಫೋಟೋ ತೆಗೆಯಲಾಗಿದೆ” ಎಂದು ಅವರು ಹೇಳಿದ್ದಾರೆ.

“ಅಲ್ಲಿಯವರೆಗೂ ಅಮ್ಮಚ್ಚಿಯ ಜೊತೆ ಮನೆಯವರೆಲ್ಲ ಒಂದೆಡೆ ಸೇರಿ, ಅವರಿಗಾಗಿ ಪ್ರಾರ್ಥಿಸಿದರು. ಮಕ್ಕಳು, ಮೊಮ್ಮಕ್ಕಳು ಹಾಗೂ ಕುಟುಂಬದ ಇತರ ಸದಸ್ಯರು ಅಮ್ಮಚ್ಚಿ ಬದುಕಿದ್ದಾಗಿನ ಅನುಭವಗಳನ್ನು ಹಂಚಿಕೊಂಡರು. ಎಲ್ಲರೂ ಸ್ವಲ್ಪ ಹೊತ್ತು ವಿಶ್ರಾಂತಿ ಪಡೆಯಲು ಹೊರಟಾಗ ತೆಗೆದ ಫೋಟೋ ಇದಾಗಿದೆ” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಅಧಿಕಾರದಲ್ಲಿದ್ದರೆ ರಸ್ತೆಗಿಳಿದು ಕಲ್ಲು ಹೊಡೆಯಬಹುದು: ಸಂಸದ ತೇಜಸ್ವಿ ಸೂರ್ಯ ಆಡಿಯೋ ವೈರಲ್

“ನಮ್ಮ ಕುಟುಂಬದ ಒಳಗೆ ಸೀಮಿತವಾಗಬೇಕಿದ್ದ ಈ ಖಾಸಗಿ ಚಿತ್ರ ಹೇಗೋ ಹೊರಬಿದ್ದಿದೆ. ನಂತರ ಅದು ವೈರಲ್ ಆಗಿದೆ. ಕೆಲವರು ಅದನ್ನು ಕೆಟ್ಟದಾಗಿ ನಿರೂಪಿಸಿ ಹರಡುತ್ತಿದ್ದಾರೆ. ಅಮ್ಮಚ್ಚಿಯ ಮರಣಾ ನಂತರದ ಜೀವನ ಆಶಾದಾಯಕವಾಗಿ ಇರುತ್ತದೆ ಎಂದು ನಾವು ನಂಬುತ್ತೇವೆ. ಈ ಕಾರಣಕ್ಕಾಗಿಯೆ ನಾವು ಅವರನ್ನು ಖುಷಿಯಿಂದ ಕಳುಹಿಸಿಕೊಟ್ಟಿದ್ದೇವೆ” ಎಂದು ಅವರು ಹೇಳಿದ್ದಾರೆ.

“ಅಮ್ಮಚ್ಚಿ ಕಳೆದ ಒಂದು ವರ್ಷದಿಂದ ಸಂಪೂರ್ಣವಾಗಿ ಹಾಸಿಗೆ ಹಿಡಿದಿದ್ದರು. ಅವರಿಗೆ 9 ಮಕ್ಕಳು. ಅವರಲ್ಲಿ ಒಬ್ಬರು ಈ ಹಿಂದೆಯೆ ತೀರಿಕೊಂಡಿದ್ದಾರೆ. ಉಳಿದ ಎಲ್ಲರೂ ಅವರನ್ನು ಚೆನ್ನಾಗಿ ನೋಡಿಕೊಂಡಿದ್ದಾರೆ. ಅವರನ್ನು ಉತ್ತಮ ರೀತಿಯಲ್ಲಿ ಸೇವೆ ಮಾಡಿದ್ದಾರೆ” ಎಂದು ಅವರು ಹೇಳಿದ್ದಾರೆ.

“ಇದರಲ್ಲಿ ಅಪಹಾಸ್ಯ ಮಾಡಲು ಏನಿದೆ? ಚಿತ್ರವನ್ನು ಬಳಸಿ ಕೆಟ್ಟದಾಗಿ ಪ್ರಚಾರ ಮಾಡುವವರ ಮನಸ್ಥಿತಿ ಇದರಲ್ಲಿ ಬಯಲಾಗಿದೆ. ಸತ್ತಾಗ ಮಾತ್ರ ಅಳಬೇಕು ಎನ್ನುವವರಿಗೆ ಏನು ಹೇಳಬೇಕು” ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ವೈರಲ್‌ ವಿಡಿಯೊದಲ್ಲಿ ಡಾನ್ಸ್‌ ಮಾಡುತ್ತಿರುವ ಮಗು ಶಿಕ್ಷಕನಿಂದ ಕೊಲೆಯಾದ ಇಂದ್ರ ಮೇಘ್ವಾಲ್‌ ಅಲ್ಲ

“ಕುಟುಂಬದ ಸದಸ್ಯನಾಗಿ ಒಂದು ಅಪೇಕ್ಷೆಯೇನೆಂದರೆ, ದಯವಿಟ್ಟು ಈ ಚಿತ್ರವನ್ನು ಮತ್ತಷ್ಟು ಹರಡಬೇಡಿ. ಇನ್ನೊಬ್ಬರನ್ನು ಗೇಲಿ ಮಾಡುವುದರಿಂದ ಅವರಿಗೆ ಸಿಗುವ ಖುಷಿಯಾದರೂ ಏನು? ನಮ್ಮನ್ನು ಅನೇಕರು ಬೆಂಬಲಿಸಿದ್ದಾರೆ ಎಂದು ತಿಳಿದು ತುಸು ನಿರಾಳವಾಗಿದ್ದೇವೆ” ಎಂದು ಹೇಳಿದ್ದಾರೆ.

ಕುಟುಂಬಸ್ಥರನ್ನು ಗೇಲಿ ಮಾಡುವವರಿಗೆ ಸಾಮಾಜಿಕ ಮಾಧ್ಯಮಗಳಲ್ಲಿ ಕೆಲವರು ಪಾಠವನ್ನು ಮಾಡಿದ್ದಾರೆ. ಮೃತಪಟ್ಟವರನ್ನು ಖುಷಿಯಿಂದ ಡ್ಯಾನ್ಸ್‌ ಮಾಡುತ್ತಾ ಕಳುಹಿಸಿಕೊಡುವ ಸಂಸ್ಕೃತಿ ತಮಿಳುನಾಡು, ಸೇರಿದಂತೆ ಕರ್ನಾಟಕದಲ್ಲಿ ಈ ಹಿಂದಿನಿಂದಲೂ ಇವೆ ಎಂದು ನೆನಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...