Homeಮುಖಪುಟ‘ಅಮ್ಮಚ್ಚಿ’ಯನ್ನು ಸಂತೋಷದಿಂದ ಕಳುಹಿಸಿಕೊಟ್ಟಿದ್ದೇವೆ, ತಪ್ಪೇನು?: ವೈರಲ್ ಚಿತ್ರದ ವಾಸ್ತವವಿದು!

‘ಅಮ್ಮಚ್ಚಿ’ಯನ್ನು ಸಂತೋಷದಿಂದ ಕಳುಹಿಸಿಕೊಟ್ಟಿದ್ದೇವೆ, ತಪ್ಪೇನು?: ವೈರಲ್ ಚಿತ್ರದ ವಾಸ್ತವವಿದು!

- Advertisement -
- Advertisement -

ಮೃತದೇಹವೊಂದರ ಮುಂದೆ ಕುಟುಂಬಸ್ಥರು ನಗುತ್ತಾ ಗ್ರೂಪ್ ಫೋಟೊ ಕ್ಲಿಕ್ಕಿಸಿರುವ ಚಿತ್ರವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಇದೀಗ ವೈರಲ್ ಆಗಿದೆ. ಮರಣ ಹೊಂದಿರುವ ಮನೆಯಲ್ಲಿ ಯಾವುದೆ ದುಃಖವಿಲ್ಲದೆ ಹೀಗೆ ನಗುತ್ತಾ ಫೋಟೊ ಕ್ಲಿಕ್ಕಿಸಿರುವ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಕೆಲವರು ಟೀಕಿಸಿದರೆ, ಇನ್ನು ಕೆಲವರು ಮೃತಪಟ್ಟವರನ್ನು ನಗುನಗುತ್ತಲೇ ಕಳುಹಿಸಿಕೊಡುವುದು ಕೂಡಾ ಸರಿಯಾದ ನಡೆ ಎಂದು ಕುಟುಂಬವನ್ನು ಬೆಂಬಲಿಸಿದ್ದಾರೆ.

ಕುಟುಂಬವೊಂದರ ಖಾಸಗಿ ಚಿತ್ರ ಸಾಮಾಜಿಕ ಮಾಧ್ಯಮಗಳಲ್ಲಿ ಹಲವಾರು ನಿರೂಪಣೆಯೊಂದಿಗೆ ಹರಿದಾಡಿದ್ದಕ್ಕೆ, ಕುಟುಂಬದ ಸದಸ್ಯರು ಬೇಸರ ವ್ಯಕ್ತಪಡಿಸಿ ಸಮಜಾಯಿಷಿ ನೀಡಿದ್ದಾರೆ. ನಮ್ಮ ‘ಅಮ್ಮಚ್ಚಿ(ಅಮ್ಮ)’ಯನ್ನು ಸಂತೋಷದಿಂದ ಕಳುಹಿಸಿಕೊಟ್ಟಿದ್ದೇವೆ, ಇದರಲ್ಲಿ ತಪ್ಪೇನಿದೆ ಎಂದು ಅವರು ಪ್ರಶ್ನಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಘಟನೆ ಏನು?

ಕೇರಳದ ಕೊಟ್ಟಾಯಂ ಜಿಲ್ಲೆಯ ಮಲ್ಲಪಲ್ಲಿ ಮೂಲದ ದಿವಂಗತ ರೆವರೆಂಡ್ ಪಿ.ಒ. ವರ್ಗೀಸ್ ಅವರ ಪತ್ನಿ, 95 ವರ್ಷದ ಮರಿಯಮ್ಮ ಅವರು ಇತ್ತೀಚೆಗೆ ಮೃತಪಟ್ಟಿದ್ದರು. ವೈರಲ್ ಚಿತ್ರದಲ್ಲಿ ಕಾಣುತ್ತಿರುವ ವ್ಯಕ್ತಿಗಳು ಅವರ ಕುಟುಂಬದ ಸದಸ್ಯರಾಗಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಎಂದು ಹಳೆಯ ಚಿತ್ರಗಳು ವೈರಲ್‌!

“ಮರಿಯಮ್ಮ ನನ್ನ ತಂದೆಯ ಅಣ್ಣನ ಹೆಂಡತಿ. ವ್ಯಕ್ತಿಯೊಬ್ಬರು ಸತ್ತರೆ ಸ್ವರ್ಗಕ್ಕೆ ಹೋಗುತ್ತಾರೆ ಎಂಬುವುದಾಗಿದೆ ಕ್ರಿಶ್ಚಿಯನ್ನರ ನಂಬಿಕೆ. ಮರಿಯಮ್ಮ ಎಂಬ ನಮ್ಮ ‘ಅಮ್ಮಚ್ಚಿ’ ಬದುಕಿದ್ದಾಗ ಉತ್ತಮ ರೀತಿಯ ಜೀವನ ನಡೆಸಿದ್ದಾರೆ. ಅಮ್ಮಚ್ಚಿ ಸ್ವರ್ಗಕ್ಕೆ ಹೋದ ಖುಷಿಯಾಗಿದೆ ಅಲ್ಲಿ ಎದ್ದು ಕಾಣುತ್ತಿದ್ದದ್ದು” ಎಂದು ಮೃತ ಮಹಿಳೆಯ ಕುಟುಂಬದ ಸದಸ್ಯ, ವೈದ್ಯರಾದ ಉಮ್ಮನ್ ಪಿ. ನೈನಾನ್‌ ಹೇಳಿದ್ದಾರೆ.

“ಹಿಂದಿನ ದಿನ ನಾಲ್ಕು ಗಂಟೆಗೆ ಶವವನ್ನು ಮನೆಗೆ ತರಲಾಯಿತು. ಮರುದಿನ ಮುಂಜಾನೆ 3 ಗಂಟೆ ಸುಮಾರಿಗೆ ಈ ಫೋಟೋ ತೆಗೆಯಲಾಗಿದೆ” ಎಂದು ಅವರು ಹೇಳಿದ್ದಾರೆ.

“ಅಲ್ಲಿಯವರೆಗೂ ಅಮ್ಮಚ್ಚಿಯ ಜೊತೆ ಮನೆಯವರೆಲ್ಲ ಒಂದೆಡೆ ಸೇರಿ, ಅವರಿಗಾಗಿ ಪ್ರಾರ್ಥಿಸಿದರು. ಮಕ್ಕಳು, ಮೊಮ್ಮಕ್ಕಳು ಹಾಗೂ ಕುಟುಂಬದ ಇತರ ಸದಸ್ಯರು ಅಮ್ಮಚ್ಚಿ ಬದುಕಿದ್ದಾಗಿನ ಅನುಭವಗಳನ್ನು ಹಂಚಿಕೊಂಡರು. ಎಲ್ಲರೂ ಸ್ವಲ್ಪ ಹೊತ್ತು ವಿಶ್ರಾಂತಿ ಪಡೆಯಲು ಹೊರಟಾಗ ತೆಗೆದ ಫೋಟೋ ಇದಾಗಿದೆ” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಅಧಿಕಾರದಲ್ಲಿದ್ದರೆ ರಸ್ತೆಗಿಳಿದು ಕಲ್ಲು ಹೊಡೆಯಬಹುದು: ಸಂಸದ ತೇಜಸ್ವಿ ಸೂರ್ಯ ಆಡಿಯೋ ವೈರಲ್

“ನಮ್ಮ ಕುಟುಂಬದ ಒಳಗೆ ಸೀಮಿತವಾಗಬೇಕಿದ್ದ ಈ ಖಾಸಗಿ ಚಿತ್ರ ಹೇಗೋ ಹೊರಬಿದ್ದಿದೆ. ನಂತರ ಅದು ವೈರಲ್ ಆಗಿದೆ. ಕೆಲವರು ಅದನ್ನು ಕೆಟ್ಟದಾಗಿ ನಿರೂಪಿಸಿ ಹರಡುತ್ತಿದ್ದಾರೆ. ಅಮ್ಮಚ್ಚಿಯ ಮರಣಾ ನಂತರದ ಜೀವನ ಆಶಾದಾಯಕವಾಗಿ ಇರುತ್ತದೆ ಎಂದು ನಾವು ನಂಬುತ್ತೇವೆ. ಈ ಕಾರಣಕ್ಕಾಗಿಯೆ ನಾವು ಅವರನ್ನು ಖುಷಿಯಿಂದ ಕಳುಹಿಸಿಕೊಟ್ಟಿದ್ದೇವೆ” ಎಂದು ಅವರು ಹೇಳಿದ್ದಾರೆ.

“ಅಮ್ಮಚ್ಚಿ ಕಳೆದ ಒಂದು ವರ್ಷದಿಂದ ಸಂಪೂರ್ಣವಾಗಿ ಹಾಸಿಗೆ ಹಿಡಿದಿದ್ದರು. ಅವರಿಗೆ 9 ಮಕ್ಕಳು. ಅವರಲ್ಲಿ ಒಬ್ಬರು ಈ ಹಿಂದೆಯೆ ತೀರಿಕೊಂಡಿದ್ದಾರೆ. ಉಳಿದ ಎಲ್ಲರೂ ಅವರನ್ನು ಚೆನ್ನಾಗಿ ನೋಡಿಕೊಂಡಿದ್ದಾರೆ. ಅವರನ್ನು ಉತ್ತಮ ರೀತಿಯಲ್ಲಿ ಸೇವೆ ಮಾಡಿದ್ದಾರೆ” ಎಂದು ಅವರು ಹೇಳಿದ್ದಾರೆ.

“ಇದರಲ್ಲಿ ಅಪಹಾಸ್ಯ ಮಾಡಲು ಏನಿದೆ? ಚಿತ್ರವನ್ನು ಬಳಸಿ ಕೆಟ್ಟದಾಗಿ ಪ್ರಚಾರ ಮಾಡುವವರ ಮನಸ್ಥಿತಿ ಇದರಲ್ಲಿ ಬಯಲಾಗಿದೆ. ಸತ್ತಾಗ ಮಾತ್ರ ಅಳಬೇಕು ಎನ್ನುವವರಿಗೆ ಏನು ಹೇಳಬೇಕು” ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ವೈರಲ್‌ ವಿಡಿಯೊದಲ್ಲಿ ಡಾನ್ಸ್‌ ಮಾಡುತ್ತಿರುವ ಮಗು ಶಿಕ್ಷಕನಿಂದ ಕೊಲೆಯಾದ ಇಂದ್ರ ಮೇಘ್ವಾಲ್‌ ಅಲ್ಲ

“ಕುಟುಂಬದ ಸದಸ್ಯನಾಗಿ ಒಂದು ಅಪೇಕ್ಷೆಯೇನೆಂದರೆ, ದಯವಿಟ್ಟು ಈ ಚಿತ್ರವನ್ನು ಮತ್ತಷ್ಟು ಹರಡಬೇಡಿ. ಇನ್ನೊಬ್ಬರನ್ನು ಗೇಲಿ ಮಾಡುವುದರಿಂದ ಅವರಿಗೆ ಸಿಗುವ ಖುಷಿಯಾದರೂ ಏನು? ನಮ್ಮನ್ನು ಅನೇಕರು ಬೆಂಬಲಿಸಿದ್ದಾರೆ ಎಂದು ತಿಳಿದು ತುಸು ನಿರಾಳವಾಗಿದ್ದೇವೆ” ಎಂದು ಹೇಳಿದ್ದಾರೆ.

ಕುಟುಂಬಸ್ಥರನ್ನು ಗೇಲಿ ಮಾಡುವವರಿಗೆ ಸಾಮಾಜಿಕ ಮಾಧ್ಯಮಗಳಲ್ಲಿ ಕೆಲವರು ಪಾಠವನ್ನು ಮಾಡಿದ್ದಾರೆ. ಮೃತಪಟ್ಟವರನ್ನು ಖುಷಿಯಿಂದ ಡ್ಯಾನ್ಸ್‌ ಮಾಡುತ್ತಾ ಕಳುಹಿಸಿಕೊಡುವ ಸಂಸ್ಕೃತಿ ತಮಿಳುನಾಡು, ಸೇರಿದಂತೆ ಕರ್ನಾಟಕದಲ್ಲಿ ಈ ಹಿಂದಿನಿಂದಲೂ ಇವೆ ಎಂದು ನೆನಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...