Homeಮುಖಪುಟ‘ಅಮ್ಮಚ್ಚಿ’ಯನ್ನು ಸಂತೋಷದಿಂದ ಕಳುಹಿಸಿಕೊಟ್ಟಿದ್ದೇವೆ, ತಪ್ಪೇನು?: ವೈರಲ್ ಚಿತ್ರದ ವಾಸ್ತವವಿದು!

‘ಅಮ್ಮಚ್ಚಿ’ಯನ್ನು ಸಂತೋಷದಿಂದ ಕಳುಹಿಸಿಕೊಟ್ಟಿದ್ದೇವೆ, ತಪ್ಪೇನು?: ವೈರಲ್ ಚಿತ್ರದ ವಾಸ್ತವವಿದು!

- Advertisement -
- Advertisement -

ಮೃತದೇಹವೊಂದರ ಮುಂದೆ ಕುಟುಂಬಸ್ಥರು ನಗುತ್ತಾ ಗ್ರೂಪ್ ಫೋಟೊ ಕ್ಲಿಕ್ಕಿಸಿರುವ ಚಿತ್ರವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಇದೀಗ ವೈರಲ್ ಆಗಿದೆ. ಮರಣ ಹೊಂದಿರುವ ಮನೆಯಲ್ಲಿ ಯಾವುದೆ ದುಃಖವಿಲ್ಲದೆ ಹೀಗೆ ನಗುತ್ತಾ ಫೋಟೊ ಕ್ಲಿಕ್ಕಿಸಿರುವ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಕೆಲವರು ಟೀಕಿಸಿದರೆ, ಇನ್ನು ಕೆಲವರು ಮೃತಪಟ್ಟವರನ್ನು ನಗುನಗುತ್ತಲೇ ಕಳುಹಿಸಿಕೊಡುವುದು ಕೂಡಾ ಸರಿಯಾದ ನಡೆ ಎಂದು ಕುಟುಂಬವನ್ನು ಬೆಂಬಲಿಸಿದ್ದಾರೆ.

ಕುಟುಂಬವೊಂದರ ಖಾಸಗಿ ಚಿತ್ರ ಸಾಮಾಜಿಕ ಮಾಧ್ಯಮಗಳಲ್ಲಿ ಹಲವಾರು ನಿರೂಪಣೆಯೊಂದಿಗೆ ಹರಿದಾಡಿದ್ದಕ್ಕೆ, ಕುಟುಂಬದ ಸದಸ್ಯರು ಬೇಸರ ವ್ಯಕ್ತಪಡಿಸಿ ಸಮಜಾಯಿಷಿ ನೀಡಿದ್ದಾರೆ. ನಮ್ಮ ‘ಅಮ್ಮಚ್ಚಿ(ಅಮ್ಮ)’ಯನ್ನು ಸಂತೋಷದಿಂದ ಕಳುಹಿಸಿಕೊಟ್ಟಿದ್ದೇವೆ, ಇದರಲ್ಲಿ ತಪ್ಪೇನಿದೆ ಎಂದು ಅವರು ಪ್ರಶ್ನಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಘಟನೆ ಏನು?

ಕೇರಳದ ಕೊಟ್ಟಾಯಂ ಜಿಲ್ಲೆಯ ಮಲ್ಲಪಲ್ಲಿ ಮೂಲದ ದಿವಂಗತ ರೆವರೆಂಡ್ ಪಿ.ಒ. ವರ್ಗೀಸ್ ಅವರ ಪತ್ನಿ, 95 ವರ್ಷದ ಮರಿಯಮ್ಮ ಅವರು ಇತ್ತೀಚೆಗೆ ಮೃತಪಟ್ಟಿದ್ದರು. ವೈರಲ್ ಚಿತ್ರದಲ್ಲಿ ಕಾಣುತ್ತಿರುವ ವ್ಯಕ್ತಿಗಳು ಅವರ ಕುಟುಂಬದ ಸದಸ್ಯರಾಗಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಎಂದು ಹಳೆಯ ಚಿತ್ರಗಳು ವೈರಲ್‌!

“ಮರಿಯಮ್ಮ ನನ್ನ ತಂದೆಯ ಅಣ್ಣನ ಹೆಂಡತಿ. ವ್ಯಕ್ತಿಯೊಬ್ಬರು ಸತ್ತರೆ ಸ್ವರ್ಗಕ್ಕೆ ಹೋಗುತ್ತಾರೆ ಎಂಬುವುದಾಗಿದೆ ಕ್ರಿಶ್ಚಿಯನ್ನರ ನಂಬಿಕೆ. ಮರಿಯಮ್ಮ ಎಂಬ ನಮ್ಮ ‘ಅಮ್ಮಚ್ಚಿ’ ಬದುಕಿದ್ದಾಗ ಉತ್ತಮ ರೀತಿಯ ಜೀವನ ನಡೆಸಿದ್ದಾರೆ. ಅಮ್ಮಚ್ಚಿ ಸ್ವರ್ಗಕ್ಕೆ ಹೋದ ಖುಷಿಯಾಗಿದೆ ಅಲ್ಲಿ ಎದ್ದು ಕಾಣುತ್ತಿದ್ದದ್ದು” ಎಂದು ಮೃತ ಮಹಿಳೆಯ ಕುಟುಂಬದ ಸದಸ್ಯ, ವೈದ್ಯರಾದ ಉಮ್ಮನ್ ಪಿ. ನೈನಾನ್‌ ಹೇಳಿದ್ದಾರೆ.

“ಹಿಂದಿನ ದಿನ ನಾಲ್ಕು ಗಂಟೆಗೆ ಶವವನ್ನು ಮನೆಗೆ ತರಲಾಯಿತು. ಮರುದಿನ ಮುಂಜಾನೆ 3 ಗಂಟೆ ಸುಮಾರಿಗೆ ಈ ಫೋಟೋ ತೆಗೆಯಲಾಗಿದೆ” ಎಂದು ಅವರು ಹೇಳಿದ್ದಾರೆ.

“ಅಲ್ಲಿಯವರೆಗೂ ಅಮ್ಮಚ್ಚಿಯ ಜೊತೆ ಮನೆಯವರೆಲ್ಲ ಒಂದೆಡೆ ಸೇರಿ, ಅವರಿಗಾಗಿ ಪ್ರಾರ್ಥಿಸಿದರು. ಮಕ್ಕಳು, ಮೊಮ್ಮಕ್ಕಳು ಹಾಗೂ ಕುಟುಂಬದ ಇತರ ಸದಸ್ಯರು ಅಮ್ಮಚ್ಚಿ ಬದುಕಿದ್ದಾಗಿನ ಅನುಭವಗಳನ್ನು ಹಂಚಿಕೊಂಡರು. ಎಲ್ಲರೂ ಸ್ವಲ್ಪ ಹೊತ್ತು ವಿಶ್ರಾಂತಿ ಪಡೆಯಲು ಹೊರಟಾಗ ತೆಗೆದ ಫೋಟೋ ಇದಾಗಿದೆ” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಅಧಿಕಾರದಲ್ಲಿದ್ದರೆ ರಸ್ತೆಗಿಳಿದು ಕಲ್ಲು ಹೊಡೆಯಬಹುದು: ಸಂಸದ ತೇಜಸ್ವಿ ಸೂರ್ಯ ಆಡಿಯೋ ವೈರಲ್

“ನಮ್ಮ ಕುಟುಂಬದ ಒಳಗೆ ಸೀಮಿತವಾಗಬೇಕಿದ್ದ ಈ ಖಾಸಗಿ ಚಿತ್ರ ಹೇಗೋ ಹೊರಬಿದ್ದಿದೆ. ನಂತರ ಅದು ವೈರಲ್ ಆಗಿದೆ. ಕೆಲವರು ಅದನ್ನು ಕೆಟ್ಟದಾಗಿ ನಿರೂಪಿಸಿ ಹರಡುತ್ತಿದ್ದಾರೆ. ಅಮ್ಮಚ್ಚಿಯ ಮರಣಾ ನಂತರದ ಜೀವನ ಆಶಾದಾಯಕವಾಗಿ ಇರುತ್ತದೆ ಎಂದು ನಾವು ನಂಬುತ್ತೇವೆ. ಈ ಕಾರಣಕ್ಕಾಗಿಯೆ ನಾವು ಅವರನ್ನು ಖುಷಿಯಿಂದ ಕಳುಹಿಸಿಕೊಟ್ಟಿದ್ದೇವೆ” ಎಂದು ಅವರು ಹೇಳಿದ್ದಾರೆ.

“ಅಮ್ಮಚ್ಚಿ ಕಳೆದ ಒಂದು ವರ್ಷದಿಂದ ಸಂಪೂರ್ಣವಾಗಿ ಹಾಸಿಗೆ ಹಿಡಿದಿದ್ದರು. ಅವರಿಗೆ 9 ಮಕ್ಕಳು. ಅವರಲ್ಲಿ ಒಬ್ಬರು ಈ ಹಿಂದೆಯೆ ತೀರಿಕೊಂಡಿದ್ದಾರೆ. ಉಳಿದ ಎಲ್ಲರೂ ಅವರನ್ನು ಚೆನ್ನಾಗಿ ನೋಡಿಕೊಂಡಿದ್ದಾರೆ. ಅವರನ್ನು ಉತ್ತಮ ರೀತಿಯಲ್ಲಿ ಸೇವೆ ಮಾಡಿದ್ದಾರೆ” ಎಂದು ಅವರು ಹೇಳಿದ್ದಾರೆ.

“ಇದರಲ್ಲಿ ಅಪಹಾಸ್ಯ ಮಾಡಲು ಏನಿದೆ? ಚಿತ್ರವನ್ನು ಬಳಸಿ ಕೆಟ್ಟದಾಗಿ ಪ್ರಚಾರ ಮಾಡುವವರ ಮನಸ್ಥಿತಿ ಇದರಲ್ಲಿ ಬಯಲಾಗಿದೆ. ಸತ್ತಾಗ ಮಾತ್ರ ಅಳಬೇಕು ಎನ್ನುವವರಿಗೆ ಏನು ಹೇಳಬೇಕು” ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ವೈರಲ್‌ ವಿಡಿಯೊದಲ್ಲಿ ಡಾನ್ಸ್‌ ಮಾಡುತ್ತಿರುವ ಮಗು ಶಿಕ್ಷಕನಿಂದ ಕೊಲೆಯಾದ ಇಂದ್ರ ಮೇಘ್ವಾಲ್‌ ಅಲ್ಲ

“ಕುಟುಂಬದ ಸದಸ್ಯನಾಗಿ ಒಂದು ಅಪೇಕ್ಷೆಯೇನೆಂದರೆ, ದಯವಿಟ್ಟು ಈ ಚಿತ್ರವನ್ನು ಮತ್ತಷ್ಟು ಹರಡಬೇಡಿ. ಇನ್ನೊಬ್ಬರನ್ನು ಗೇಲಿ ಮಾಡುವುದರಿಂದ ಅವರಿಗೆ ಸಿಗುವ ಖುಷಿಯಾದರೂ ಏನು? ನಮ್ಮನ್ನು ಅನೇಕರು ಬೆಂಬಲಿಸಿದ್ದಾರೆ ಎಂದು ತಿಳಿದು ತುಸು ನಿರಾಳವಾಗಿದ್ದೇವೆ” ಎಂದು ಹೇಳಿದ್ದಾರೆ.

ಕುಟುಂಬಸ್ಥರನ್ನು ಗೇಲಿ ಮಾಡುವವರಿಗೆ ಸಾಮಾಜಿಕ ಮಾಧ್ಯಮಗಳಲ್ಲಿ ಕೆಲವರು ಪಾಠವನ್ನು ಮಾಡಿದ್ದಾರೆ. ಮೃತಪಟ್ಟವರನ್ನು ಖುಷಿಯಿಂದ ಡ್ಯಾನ್ಸ್‌ ಮಾಡುತ್ತಾ ಕಳುಹಿಸಿಕೊಡುವ ಸಂಸ್ಕೃತಿ ತಮಿಳುನಾಡು, ಸೇರಿದಂತೆ ಕರ್ನಾಟಕದಲ್ಲಿ ಈ ಹಿಂದಿನಿಂದಲೂ ಇವೆ ಎಂದು ನೆನಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...