Homeಮುಖಪುಟ‘ಅಮ್ಮಚ್ಚಿ’ಯನ್ನು ಸಂತೋಷದಿಂದ ಕಳುಹಿಸಿಕೊಟ್ಟಿದ್ದೇವೆ, ತಪ್ಪೇನು?: ವೈರಲ್ ಚಿತ್ರದ ವಾಸ್ತವವಿದು!

‘ಅಮ್ಮಚ್ಚಿ’ಯನ್ನು ಸಂತೋಷದಿಂದ ಕಳುಹಿಸಿಕೊಟ್ಟಿದ್ದೇವೆ, ತಪ್ಪೇನು?: ವೈರಲ್ ಚಿತ್ರದ ವಾಸ್ತವವಿದು!

- Advertisement -
- Advertisement -

ಮೃತದೇಹವೊಂದರ ಮುಂದೆ ಕುಟುಂಬಸ್ಥರು ನಗುತ್ತಾ ಗ್ರೂಪ್ ಫೋಟೊ ಕ್ಲಿಕ್ಕಿಸಿರುವ ಚಿತ್ರವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಇದೀಗ ವೈರಲ್ ಆಗಿದೆ. ಮರಣ ಹೊಂದಿರುವ ಮನೆಯಲ್ಲಿ ಯಾವುದೆ ದುಃಖವಿಲ್ಲದೆ ಹೀಗೆ ನಗುತ್ತಾ ಫೋಟೊ ಕ್ಲಿಕ್ಕಿಸಿರುವ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಕೆಲವರು ಟೀಕಿಸಿದರೆ, ಇನ್ನು ಕೆಲವರು ಮೃತಪಟ್ಟವರನ್ನು ನಗುನಗುತ್ತಲೇ ಕಳುಹಿಸಿಕೊಡುವುದು ಕೂಡಾ ಸರಿಯಾದ ನಡೆ ಎಂದು ಕುಟುಂಬವನ್ನು ಬೆಂಬಲಿಸಿದ್ದಾರೆ.

ಕುಟುಂಬವೊಂದರ ಖಾಸಗಿ ಚಿತ್ರ ಸಾಮಾಜಿಕ ಮಾಧ್ಯಮಗಳಲ್ಲಿ ಹಲವಾರು ನಿರೂಪಣೆಯೊಂದಿಗೆ ಹರಿದಾಡಿದ್ದಕ್ಕೆ, ಕುಟುಂಬದ ಸದಸ್ಯರು ಬೇಸರ ವ್ಯಕ್ತಪಡಿಸಿ ಸಮಜಾಯಿಷಿ ನೀಡಿದ್ದಾರೆ. ನಮ್ಮ ‘ಅಮ್ಮಚ್ಚಿ(ಅಮ್ಮ)’ಯನ್ನು ಸಂತೋಷದಿಂದ ಕಳುಹಿಸಿಕೊಟ್ಟಿದ್ದೇವೆ, ಇದರಲ್ಲಿ ತಪ್ಪೇನಿದೆ ಎಂದು ಅವರು ಪ್ರಶ್ನಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಘಟನೆ ಏನು?

ಕೇರಳದ ಕೊಟ್ಟಾಯಂ ಜಿಲ್ಲೆಯ ಮಲ್ಲಪಲ್ಲಿ ಮೂಲದ ದಿವಂಗತ ರೆವರೆಂಡ್ ಪಿ.ಒ. ವರ್ಗೀಸ್ ಅವರ ಪತ್ನಿ, 95 ವರ್ಷದ ಮರಿಯಮ್ಮ ಅವರು ಇತ್ತೀಚೆಗೆ ಮೃತಪಟ್ಟಿದ್ದರು. ವೈರಲ್ ಚಿತ್ರದಲ್ಲಿ ಕಾಣುತ್ತಿರುವ ವ್ಯಕ್ತಿಗಳು ಅವರ ಕುಟುಂಬದ ಸದಸ್ಯರಾಗಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಎಂದು ಹಳೆಯ ಚಿತ್ರಗಳು ವೈರಲ್‌!

“ಮರಿಯಮ್ಮ ನನ್ನ ತಂದೆಯ ಅಣ್ಣನ ಹೆಂಡತಿ. ವ್ಯಕ್ತಿಯೊಬ್ಬರು ಸತ್ತರೆ ಸ್ವರ್ಗಕ್ಕೆ ಹೋಗುತ್ತಾರೆ ಎಂಬುವುದಾಗಿದೆ ಕ್ರಿಶ್ಚಿಯನ್ನರ ನಂಬಿಕೆ. ಮರಿಯಮ್ಮ ಎಂಬ ನಮ್ಮ ‘ಅಮ್ಮಚ್ಚಿ’ ಬದುಕಿದ್ದಾಗ ಉತ್ತಮ ರೀತಿಯ ಜೀವನ ನಡೆಸಿದ್ದಾರೆ. ಅಮ್ಮಚ್ಚಿ ಸ್ವರ್ಗಕ್ಕೆ ಹೋದ ಖುಷಿಯಾಗಿದೆ ಅಲ್ಲಿ ಎದ್ದು ಕಾಣುತ್ತಿದ್ದದ್ದು” ಎಂದು ಮೃತ ಮಹಿಳೆಯ ಕುಟುಂಬದ ಸದಸ್ಯ, ವೈದ್ಯರಾದ ಉಮ್ಮನ್ ಪಿ. ನೈನಾನ್‌ ಹೇಳಿದ್ದಾರೆ.

“ಹಿಂದಿನ ದಿನ ನಾಲ್ಕು ಗಂಟೆಗೆ ಶವವನ್ನು ಮನೆಗೆ ತರಲಾಯಿತು. ಮರುದಿನ ಮುಂಜಾನೆ 3 ಗಂಟೆ ಸುಮಾರಿಗೆ ಈ ಫೋಟೋ ತೆಗೆಯಲಾಗಿದೆ” ಎಂದು ಅವರು ಹೇಳಿದ್ದಾರೆ.

“ಅಲ್ಲಿಯವರೆಗೂ ಅಮ್ಮಚ್ಚಿಯ ಜೊತೆ ಮನೆಯವರೆಲ್ಲ ಒಂದೆಡೆ ಸೇರಿ, ಅವರಿಗಾಗಿ ಪ್ರಾರ್ಥಿಸಿದರು. ಮಕ್ಕಳು, ಮೊಮ್ಮಕ್ಕಳು ಹಾಗೂ ಕುಟುಂಬದ ಇತರ ಸದಸ್ಯರು ಅಮ್ಮಚ್ಚಿ ಬದುಕಿದ್ದಾಗಿನ ಅನುಭವಗಳನ್ನು ಹಂಚಿಕೊಂಡರು. ಎಲ್ಲರೂ ಸ್ವಲ್ಪ ಹೊತ್ತು ವಿಶ್ರಾಂತಿ ಪಡೆಯಲು ಹೊರಟಾಗ ತೆಗೆದ ಫೋಟೋ ಇದಾಗಿದೆ” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಅಧಿಕಾರದಲ್ಲಿದ್ದರೆ ರಸ್ತೆಗಿಳಿದು ಕಲ್ಲು ಹೊಡೆಯಬಹುದು: ಸಂಸದ ತೇಜಸ್ವಿ ಸೂರ್ಯ ಆಡಿಯೋ ವೈರಲ್

“ನಮ್ಮ ಕುಟುಂಬದ ಒಳಗೆ ಸೀಮಿತವಾಗಬೇಕಿದ್ದ ಈ ಖಾಸಗಿ ಚಿತ್ರ ಹೇಗೋ ಹೊರಬಿದ್ದಿದೆ. ನಂತರ ಅದು ವೈರಲ್ ಆಗಿದೆ. ಕೆಲವರು ಅದನ್ನು ಕೆಟ್ಟದಾಗಿ ನಿರೂಪಿಸಿ ಹರಡುತ್ತಿದ್ದಾರೆ. ಅಮ್ಮಚ್ಚಿಯ ಮರಣಾ ನಂತರದ ಜೀವನ ಆಶಾದಾಯಕವಾಗಿ ಇರುತ್ತದೆ ಎಂದು ನಾವು ನಂಬುತ್ತೇವೆ. ಈ ಕಾರಣಕ್ಕಾಗಿಯೆ ನಾವು ಅವರನ್ನು ಖುಷಿಯಿಂದ ಕಳುಹಿಸಿಕೊಟ್ಟಿದ್ದೇವೆ” ಎಂದು ಅವರು ಹೇಳಿದ್ದಾರೆ.

“ಅಮ್ಮಚ್ಚಿ ಕಳೆದ ಒಂದು ವರ್ಷದಿಂದ ಸಂಪೂರ್ಣವಾಗಿ ಹಾಸಿಗೆ ಹಿಡಿದಿದ್ದರು. ಅವರಿಗೆ 9 ಮಕ್ಕಳು. ಅವರಲ್ಲಿ ಒಬ್ಬರು ಈ ಹಿಂದೆಯೆ ತೀರಿಕೊಂಡಿದ್ದಾರೆ. ಉಳಿದ ಎಲ್ಲರೂ ಅವರನ್ನು ಚೆನ್ನಾಗಿ ನೋಡಿಕೊಂಡಿದ್ದಾರೆ. ಅವರನ್ನು ಉತ್ತಮ ರೀತಿಯಲ್ಲಿ ಸೇವೆ ಮಾಡಿದ್ದಾರೆ” ಎಂದು ಅವರು ಹೇಳಿದ್ದಾರೆ.

“ಇದರಲ್ಲಿ ಅಪಹಾಸ್ಯ ಮಾಡಲು ಏನಿದೆ? ಚಿತ್ರವನ್ನು ಬಳಸಿ ಕೆಟ್ಟದಾಗಿ ಪ್ರಚಾರ ಮಾಡುವವರ ಮನಸ್ಥಿತಿ ಇದರಲ್ಲಿ ಬಯಲಾಗಿದೆ. ಸತ್ತಾಗ ಮಾತ್ರ ಅಳಬೇಕು ಎನ್ನುವವರಿಗೆ ಏನು ಹೇಳಬೇಕು” ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ವೈರಲ್‌ ವಿಡಿಯೊದಲ್ಲಿ ಡಾನ್ಸ್‌ ಮಾಡುತ್ತಿರುವ ಮಗು ಶಿಕ್ಷಕನಿಂದ ಕೊಲೆಯಾದ ಇಂದ್ರ ಮೇಘ್ವಾಲ್‌ ಅಲ್ಲ

“ಕುಟುಂಬದ ಸದಸ್ಯನಾಗಿ ಒಂದು ಅಪೇಕ್ಷೆಯೇನೆಂದರೆ, ದಯವಿಟ್ಟು ಈ ಚಿತ್ರವನ್ನು ಮತ್ತಷ್ಟು ಹರಡಬೇಡಿ. ಇನ್ನೊಬ್ಬರನ್ನು ಗೇಲಿ ಮಾಡುವುದರಿಂದ ಅವರಿಗೆ ಸಿಗುವ ಖುಷಿಯಾದರೂ ಏನು? ನಮ್ಮನ್ನು ಅನೇಕರು ಬೆಂಬಲಿಸಿದ್ದಾರೆ ಎಂದು ತಿಳಿದು ತುಸು ನಿರಾಳವಾಗಿದ್ದೇವೆ” ಎಂದು ಹೇಳಿದ್ದಾರೆ.

ಕುಟುಂಬಸ್ಥರನ್ನು ಗೇಲಿ ಮಾಡುವವರಿಗೆ ಸಾಮಾಜಿಕ ಮಾಧ್ಯಮಗಳಲ್ಲಿ ಕೆಲವರು ಪಾಠವನ್ನು ಮಾಡಿದ್ದಾರೆ. ಮೃತಪಟ್ಟವರನ್ನು ಖುಷಿಯಿಂದ ಡ್ಯಾನ್ಸ್‌ ಮಾಡುತ್ತಾ ಕಳುಹಿಸಿಕೊಡುವ ಸಂಸ್ಕೃತಿ ತಮಿಳುನಾಡು, ಸೇರಿದಂತೆ ಕರ್ನಾಟಕದಲ್ಲಿ ಈ ಹಿಂದಿನಿಂದಲೂ ಇವೆ ಎಂದು ನೆನಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...