Homeಮುಖಪುಟ‘ಅಮ್ಮಚ್ಚಿ’ಯನ್ನು ಸಂತೋಷದಿಂದ ಕಳುಹಿಸಿಕೊಟ್ಟಿದ್ದೇವೆ, ತಪ್ಪೇನು?: ವೈರಲ್ ಚಿತ್ರದ ವಾಸ್ತವವಿದು!

‘ಅಮ್ಮಚ್ಚಿ’ಯನ್ನು ಸಂತೋಷದಿಂದ ಕಳುಹಿಸಿಕೊಟ್ಟಿದ್ದೇವೆ, ತಪ್ಪೇನು?: ವೈರಲ್ ಚಿತ್ರದ ವಾಸ್ತವವಿದು!

- Advertisement -
- Advertisement -

ಮೃತದೇಹವೊಂದರ ಮುಂದೆ ಕುಟುಂಬಸ್ಥರು ನಗುತ್ತಾ ಗ್ರೂಪ್ ಫೋಟೊ ಕ್ಲಿಕ್ಕಿಸಿರುವ ಚಿತ್ರವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಇದೀಗ ವೈರಲ್ ಆಗಿದೆ. ಮರಣ ಹೊಂದಿರುವ ಮನೆಯಲ್ಲಿ ಯಾವುದೆ ದುಃಖವಿಲ್ಲದೆ ಹೀಗೆ ನಗುತ್ತಾ ಫೋಟೊ ಕ್ಲಿಕ್ಕಿಸಿರುವ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಕೆಲವರು ಟೀಕಿಸಿದರೆ, ಇನ್ನು ಕೆಲವರು ಮೃತಪಟ್ಟವರನ್ನು ನಗುನಗುತ್ತಲೇ ಕಳುಹಿಸಿಕೊಡುವುದು ಕೂಡಾ ಸರಿಯಾದ ನಡೆ ಎಂದು ಕುಟುಂಬವನ್ನು ಬೆಂಬಲಿಸಿದ್ದಾರೆ.

ಕುಟುಂಬವೊಂದರ ಖಾಸಗಿ ಚಿತ್ರ ಸಾಮಾಜಿಕ ಮಾಧ್ಯಮಗಳಲ್ಲಿ ಹಲವಾರು ನಿರೂಪಣೆಯೊಂದಿಗೆ ಹರಿದಾಡಿದ್ದಕ್ಕೆ, ಕುಟುಂಬದ ಸದಸ್ಯರು ಬೇಸರ ವ್ಯಕ್ತಪಡಿಸಿ ಸಮಜಾಯಿಷಿ ನೀಡಿದ್ದಾರೆ. ನಮ್ಮ ‘ಅಮ್ಮಚ್ಚಿ(ಅಮ್ಮ)’ಯನ್ನು ಸಂತೋಷದಿಂದ ಕಳುಹಿಸಿಕೊಟ್ಟಿದ್ದೇವೆ, ಇದರಲ್ಲಿ ತಪ್ಪೇನಿದೆ ಎಂದು ಅವರು ಪ್ರಶ್ನಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಘಟನೆ ಏನು?

ಕೇರಳದ ಕೊಟ್ಟಾಯಂ ಜಿಲ್ಲೆಯ ಮಲ್ಲಪಲ್ಲಿ ಮೂಲದ ದಿವಂಗತ ರೆವರೆಂಡ್ ಪಿ.ಒ. ವರ್ಗೀಸ್ ಅವರ ಪತ್ನಿ, 95 ವರ್ಷದ ಮರಿಯಮ್ಮ ಅವರು ಇತ್ತೀಚೆಗೆ ಮೃತಪಟ್ಟಿದ್ದರು. ವೈರಲ್ ಚಿತ್ರದಲ್ಲಿ ಕಾಣುತ್ತಿರುವ ವ್ಯಕ್ತಿಗಳು ಅವರ ಕುಟುಂಬದ ಸದಸ್ಯರಾಗಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಎಂದು ಹಳೆಯ ಚಿತ್ರಗಳು ವೈರಲ್‌!

“ಮರಿಯಮ್ಮ ನನ್ನ ತಂದೆಯ ಅಣ್ಣನ ಹೆಂಡತಿ. ವ್ಯಕ್ತಿಯೊಬ್ಬರು ಸತ್ತರೆ ಸ್ವರ್ಗಕ್ಕೆ ಹೋಗುತ್ತಾರೆ ಎಂಬುವುದಾಗಿದೆ ಕ್ರಿಶ್ಚಿಯನ್ನರ ನಂಬಿಕೆ. ಮರಿಯಮ್ಮ ಎಂಬ ನಮ್ಮ ‘ಅಮ್ಮಚ್ಚಿ’ ಬದುಕಿದ್ದಾಗ ಉತ್ತಮ ರೀತಿಯ ಜೀವನ ನಡೆಸಿದ್ದಾರೆ. ಅಮ್ಮಚ್ಚಿ ಸ್ವರ್ಗಕ್ಕೆ ಹೋದ ಖುಷಿಯಾಗಿದೆ ಅಲ್ಲಿ ಎದ್ದು ಕಾಣುತ್ತಿದ್ದದ್ದು” ಎಂದು ಮೃತ ಮಹಿಳೆಯ ಕುಟುಂಬದ ಸದಸ್ಯ, ವೈದ್ಯರಾದ ಉಮ್ಮನ್ ಪಿ. ನೈನಾನ್‌ ಹೇಳಿದ್ದಾರೆ.

“ಹಿಂದಿನ ದಿನ ನಾಲ್ಕು ಗಂಟೆಗೆ ಶವವನ್ನು ಮನೆಗೆ ತರಲಾಯಿತು. ಮರುದಿನ ಮುಂಜಾನೆ 3 ಗಂಟೆ ಸುಮಾರಿಗೆ ಈ ಫೋಟೋ ತೆಗೆಯಲಾಗಿದೆ” ಎಂದು ಅವರು ಹೇಳಿದ್ದಾರೆ.

“ಅಲ್ಲಿಯವರೆಗೂ ಅಮ್ಮಚ್ಚಿಯ ಜೊತೆ ಮನೆಯವರೆಲ್ಲ ಒಂದೆಡೆ ಸೇರಿ, ಅವರಿಗಾಗಿ ಪ್ರಾರ್ಥಿಸಿದರು. ಮಕ್ಕಳು, ಮೊಮ್ಮಕ್ಕಳು ಹಾಗೂ ಕುಟುಂಬದ ಇತರ ಸದಸ್ಯರು ಅಮ್ಮಚ್ಚಿ ಬದುಕಿದ್ದಾಗಿನ ಅನುಭವಗಳನ್ನು ಹಂಚಿಕೊಂಡರು. ಎಲ್ಲರೂ ಸ್ವಲ್ಪ ಹೊತ್ತು ವಿಶ್ರಾಂತಿ ಪಡೆಯಲು ಹೊರಟಾಗ ತೆಗೆದ ಫೋಟೋ ಇದಾಗಿದೆ” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಅಧಿಕಾರದಲ್ಲಿದ್ದರೆ ರಸ್ತೆಗಿಳಿದು ಕಲ್ಲು ಹೊಡೆಯಬಹುದು: ಸಂಸದ ತೇಜಸ್ವಿ ಸೂರ್ಯ ಆಡಿಯೋ ವೈರಲ್

“ನಮ್ಮ ಕುಟುಂಬದ ಒಳಗೆ ಸೀಮಿತವಾಗಬೇಕಿದ್ದ ಈ ಖಾಸಗಿ ಚಿತ್ರ ಹೇಗೋ ಹೊರಬಿದ್ದಿದೆ. ನಂತರ ಅದು ವೈರಲ್ ಆಗಿದೆ. ಕೆಲವರು ಅದನ್ನು ಕೆಟ್ಟದಾಗಿ ನಿರೂಪಿಸಿ ಹರಡುತ್ತಿದ್ದಾರೆ. ಅಮ್ಮಚ್ಚಿಯ ಮರಣಾ ನಂತರದ ಜೀವನ ಆಶಾದಾಯಕವಾಗಿ ಇರುತ್ತದೆ ಎಂದು ನಾವು ನಂಬುತ್ತೇವೆ. ಈ ಕಾರಣಕ್ಕಾಗಿಯೆ ನಾವು ಅವರನ್ನು ಖುಷಿಯಿಂದ ಕಳುಹಿಸಿಕೊಟ್ಟಿದ್ದೇವೆ” ಎಂದು ಅವರು ಹೇಳಿದ್ದಾರೆ.

“ಅಮ್ಮಚ್ಚಿ ಕಳೆದ ಒಂದು ವರ್ಷದಿಂದ ಸಂಪೂರ್ಣವಾಗಿ ಹಾಸಿಗೆ ಹಿಡಿದಿದ್ದರು. ಅವರಿಗೆ 9 ಮಕ್ಕಳು. ಅವರಲ್ಲಿ ಒಬ್ಬರು ಈ ಹಿಂದೆಯೆ ತೀರಿಕೊಂಡಿದ್ದಾರೆ. ಉಳಿದ ಎಲ್ಲರೂ ಅವರನ್ನು ಚೆನ್ನಾಗಿ ನೋಡಿಕೊಂಡಿದ್ದಾರೆ. ಅವರನ್ನು ಉತ್ತಮ ರೀತಿಯಲ್ಲಿ ಸೇವೆ ಮಾಡಿದ್ದಾರೆ” ಎಂದು ಅವರು ಹೇಳಿದ್ದಾರೆ.

“ಇದರಲ್ಲಿ ಅಪಹಾಸ್ಯ ಮಾಡಲು ಏನಿದೆ? ಚಿತ್ರವನ್ನು ಬಳಸಿ ಕೆಟ್ಟದಾಗಿ ಪ್ರಚಾರ ಮಾಡುವವರ ಮನಸ್ಥಿತಿ ಇದರಲ್ಲಿ ಬಯಲಾಗಿದೆ. ಸತ್ತಾಗ ಮಾತ್ರ ಅಳಬೇಕು ಎನ್ನುವವರಿಗೆ ಏನು ಹೇಳಬೇಕು” ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ವೈರಲ್‌ ವಿಡಿಯೊದಲ್ಲಿ ಡಾನ್ಸ್‌ ಮಾಡುತ್ತಿರುವ ಮಗು ಶಿಕ್ಷಕನಿಂದ ಕೊಲೆಯಾದ ಇಂದ್ರ ಮೇಘ್ವಾಲ್‌ ಅಲ್ಲ

“ಕುಟುಂಬದ ಸದಸ್ಯನಾಗಿ ಒಂದು ಅಪೇಕ್ಷೆಯೇನೆಂದರೆ, ದಯವಿಟ್ಟು ಈ ಚಿತ್ರವನ್ನು ಮತ್ತಷ್ಟು ಹರಡಬೇಡಿ. ಇನ್ನೊಬ್ಬರನ್ನು ಗೇಲಿ ಮಾಡುವುದರಿಂದ ಅವರಿಗೆ ಸಿಗುವ ಖುಷಿಯಾದರೂ ಏನು? ನಮ್ಮನ್ನು ಅನೇಕರು ಬೆಂಬಲಿಸಿದ್ದಾರೆ ಎಂದು ತಿಳಿದು ತುಸು ನಿರಾಳವಾಗಿದ್ದೇವೆ” ಎಂದು ಹೇಳಿದ್ದಾರೆ.

ಕುಟುಂಬಸ್ಥರನ್ನು ಗೇಲಿ ಮಾಡುವವರಿಗೆ ಸಾಮಾಜಿಕ ಮಾಧ್ಯಮಗಳಲ್ಲಿ ಕೆಲವರು ಪಾಠವನ್ನು ಮಾಡಿದ್ದಾರೆ. ಮೃತಪಟ್ಟವರನ್ನು ಖುಷಿಯಿಂದ ಡ್ಯಾನ್ಸ್‌ ಮಾಡುತ್ತಾ ಕಳುಹಿಸಿಕೊಡುವ ಸಂಸ್ಕೃತಿ ತಮಿಳುನಾಡು, ಸೇರಿದಂತೆ ಕರ್ನಾಟಕದಲ್ಲಿ ಈ ಹಿಂದಿನಿಂದಲೂ ಇವೆ ಎಂದು ನೆನಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...