Homeಮುಖಪುಟ‘ಅಮ್ಮಚ್ಚಿ’ಯನ್ನು ಸಂತೋಷದಿಂದ ಕಳುಹಿಸಿಕೊಟ್ಟಿದ್ದೇವೆ, ತಪ್ಪೇನು?: ವೈರಲ್ ಚಿತ್ರದ ವಾಸ್ತವವಿದು!

‘ಅಮ್ಮಚ್ಚಿ’ಯನ್ನು ಸಂತೋಷದಿಂದ ಕಳುಹಿಸಿಕೊಟ್ಟಿದ್ದೇವೆ, ತಪ್ಪೇನು?: ವೈರಲ್ ಚಿತ್ರದ ವಾಸ್ತವವಿದು!

- Advertisement -
- Advertisement -

ಮೃತದೇಹವೊಂದರ ಮುಂದೆ ಕುಟುಂಬಸ್ಥರು ನಗುತ್ತಾ ಗ್ರೂಪ್ ಫೋಟೊ ಕ್ಲಿಕ್ಕಿಸಿರುವ ಚಿತ್ರವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಇದೀಗ ವೈರಲ್ ಆಗಿದೆ. ಮರಣ ಹೊಂದಿರುವ ಮನೆಯಲ್ಲಿ ಯಾವುದೆ ದುಃಖವಿಲ್ಲದೆ ಹೀಗೆ ನಗುತ್ತಾ ಫೋಟೊ ಕ್ಲಿಕ್ಕಿಸಿರುವ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಕೆಲವರು ಟೀಕಿಸಿದರೆ, ಇನ್ನು ಕೆಲವರು ಮೃತಪಟ್ಟವರನ್ನು ನಗುನಗುತ್ತಲೇ ಕಳುಹಿಸಿಕೊಡುವುದು ಕೂಡಾ ಸರಿಯಾದ ನಡೆ ಎಂದು ಕುಟುಂಬವನ್ನು ಬೆಂಬಲಿಸಿದ್ದಾರೆ.

ಕುಟುಂಬವೊಂದರ ಖಾಸಗಿ ಚಿತ್ರ ಸಾಮಾಜಿಕ ಮಾಧ್ಯಮಗಳಲ್ಲಿ ಹಲವಾರು ನಿರೂಪಣೆಯೊಂದಿಗೆ ಹರಿದಾಡಿದ್ದಕ್ಕೆ, ಕುಟುಂಬದ ಸದಸ್ಯರು ಬೇಸರ ವ್ಯಕ್ತಪಡಿಸಿ ಸಮಜಾಯಿಷಿ ನೀಡಿದ್ದಾರೆ. ನಮ್ಮ ‘ಅಮ್ಮಚ್ಚಿ(ಅಮ್ಮ)’ಯನ್ನು ಸಂತೋಷದಿಂದ ಕಳುಹಿಸಿಕೊಟ್ಟಿದ್ದೇವೆ, ಇದರಲ್ಲಿ ತಪ್ಪೇನಿದೆ ಎಂದು ಅವರು ಪ್ರಶ್ನಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಘಟನೆ ಏನು?

ಕೇರಳದ ಕೊಟ್ಟಾಯಂ ಜಿಲ್ಲೆಯ ಮಲ್ಲಪಲ್ಲಿ ಮೂಲದ ದಿವಂಗತ ರೆವರೆಂಡ್ ಪಿ.ಒ. ವರ್ಗೀಸ್ ಅವರ ಪತ್ನಿ, 95 ವರ್ಷದ ಮರಿಯಮ್ಮ ಅವರು ಇತ್ತೀಚೆಗೆ ಮೃತಪಟ್ಟಿದ್ದರು. ವೈರಲ್ ಚಿತ್ರದಲ್ಲಿ ಕಾಣುತ್ತಿರುವ ವ್ಯಕ್ತಿಗಳು ಅವರ ಕುಟುಂಬದ ಸದಸ್ಯರಾಗಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಎಂದು ಹಳೆಯ ಚಿತ್ರಗಳು ವೈರಲ್‌!

“ಮರಿಯಮ್ಮ ನನ್ನ ತಂದೆಯ ಅಣ್ಣನ ಹೆಂಡತಿ. ವ್ಯಕ್ತಿಯೊಬ್ಬರು ಸತ್ತರೆ ಸ್ವರ್ಗಕ್ಕೆ ಹೋಗುತ್ತಾರೆ ಎಂಬುವುದಾಗಿದೆ ಕ್ರಿಶ್ಚಿಯನ್ನರ ನಂಬಿಕೆ. ಮರಿಯಮ್ಮ ಎಂಬ ನಮ್ಮ ‘ಅಮ್ಮಚ್ಚಿ’ ಬದುಕಿದ್ದಾಗ ಉತ್ತಮ ರೀತಿಯ ಜೀವನ ನಡೆಸಿದ್ದಾರೆ. ಅಮ್ಮಚ್ಚಿ ಸ್ವರ್ಗಕ್ಕೆ ಹೋದ ಖುಷಿಯಾಗಿದೆ ಅಲ್ಲಿ ಎದ್ದು ಕಾಣುತ್ತಿದ್ದದ್ದು” ಎಂದು ಮೃತ ಮಹಿಳೆಯ ಕುಟುಂಬದ ಸದಸ್ಯ, ವೈದ್ಯರಾದ ಉಮ್ಮನ್ ಪಿ. ನೈನಾನ್‌ ಹೇಳಿದ್ದಾರೆ.

“ಹಿಂದಿನ ದಿನ ನಾಲ್ಕು ಗಂಟೆಗೆ ಶವವನ್ನು ಮನೆಗೆ ತರಲಾಯಿತು. ಮರುದಿನ ಮುಂಜಾನೆ 3 ಗಂಟೆ ಸುಮಾರಿಗೆ ಈ ಫೋಟೋ ತೆಗೆಯಲಾಗಿದೆ” ಎಂದು ಅವರು ಹೇಳಿದ್ದಾರೆ.

“ಅಲ್ಲಿಯವರೆಗೂ ಅಮ್ಮಚ್ಚಿಯ ಜೊತೆ ಮನೆಯವರೆಲ್ಲ ಒಂದೆಡೆ ಸೇರಿ, ಅವರಿಗಾಗಿ ಪ್ರಾರ್ಥಿಸಿದರು. ಮಕ್ಕಳು, ಮೊಮ್ಮಕ್ಕಳು ಹಾಗೂ ಕುಟುಂಬದ ಇತರ ಸದಸ್ಯರು ಅಮ್ಮಚ್ಚಿ ಬದುಕಿದ್ದಾಗಿನ ಅನುಭವಗಳನ್ನು ಹಂಚಿಕೊಂಡರು. ಎಲ್ಲರೂ ಸ್ವಲ್ಪ ಹೊತ್ತು ವಿಶ್ರಾಂತಿ ಪಡೆಯಲು ಹೊರಟಾಗ ತೆಗೆದ ಫೋಟೋ ಇದಾಗಿದೆ” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಅಧಿಕಾರದಲ್ಲಿದ್ದರೆ ರಸ್ತೆಗಿಳಿದು ಕಲ್ಲು ಹೊಡೆಯಬಹುದು: ಸಂಸದ ತೇಜಸ್ವಿ ಸೂರ್ಯ ಆಡಿಯೋ ವೈರಲ್

“ನಮ್ಮ ಕುಟುಂಬದ ಒಳಗೆ ಸೀಮಿತವಾಗಬೇಕಿದ್ದ ಈ ಖಾಸಗಿ ಚಿತ್ರ ಹೇಗೋ ಹೊರಬಿದ್ದಿದೆ. ನಂತರ ಅದು ವೈರಲ್ ಆಗಿದೆ. ಕೆಲವರು ಅದನ್ನು ಕೆಟ್ಟದಾಗಿ ನಿರೂಪಿಸಿ ಹರಡುತ್ತಿದ್ದಾರೆ. ಅಮ್ಮಚ್ಚಿಯ ಮರಣಾ ನಂತರದ ಜೀವನ ಆಶಾದಾಯಕವಾಗಿ ಇರುತ್ತದೆ ಎಂದು ನಾವು ನಂಬುತ್ತೇವೆ. ಈ ಕಾರಣಕ್ಕಾಗಿಯೆ ನಾವು ಅವರನ್ನು ಖುಷಿಯಿಂದ ಕಳುಹಿಸಿಕೊಟ್ಟಿದ್ದೇವೆ” ಎಂದು ಅವರು ಹೇಳಿದ್ದಾರೆ.

“ಅಮ್ಮಚ್ಚಿ ಕಳೆದ ಒಂದು ವರ್ಷದಿಂದ ಸಂಪೂರ್ಣವಾಗಿ ಹಾಸಿಗೆ ಹಿಡಿದಿದ್ದರು. ಅವರಿಗೆ 9 ಮಕ್ಕಳು. ಅವರಲ್ಲಿ ಒಬ್ಬರು ಈ ಹಿಂದೆಯೆ ತೀರಿಕೊಂಡಿದ್ದಾರೆ. ಉಳಿದ ಎಲ್ಲರೂ ಅವರನ್ನು ಚೆನ್ನಾಗಿ ನೋಡಿಕೊಂಡಿದ್ದಾರೆ. ಅವರನ್ನು ಉತ್ತಮ ರೀತಿಯಲ್ಲಿ ಸೇವೆ ಮಾಡಿದ್ದಾರೆ” ಎಂದು ಅವರು ಹೇಳಿದ್ದಾರೆ.

“ಇದರಲ್ಲಿ ಅಪಹಾಸ್ಯ ಮಾಡಲು ಏನಿದೆ? ಚಿತ್ರವನ್ನು ಬಳಸಿ ಕೆಟ್ಟದಾಗಿ ಪ್ರಚಾರ ಮಾಡುವವರ ಮನಸ್ಥಿತಿ ಇದರಲ್ಲಿ ಬಯಲಾಗಿದೆ. ಸತ್ತಾಗ ಮಾತ್ರ ಅಳಬೇಕು ಎನ್ನುವವರಿಗೆ ಏನು ಹೇಳಬೇಕು” ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ವೈರಲ್‌ ವಿಡಿಯೊದಲ್ಲಿ ಡಾನ್ಸ್‌ ಮಾಡುತ್ತಿರುವ ಮಗು ಶಿಕ್ಷಕನಿಂದ ಕೊಲೆಯಾದ ಇಂದ್ರ ಮೇಘ್ವಾಲ್‌ ಅಲ್ಲ

“ಕುಟುಂಬದ ಸದಸ್ಯನಾಗಿ ಒಂದು ಅಪೇಕ್ಷೆಯೇನೆಂದರೆ, ದಯವಿಟ್ಟು ಈ ಚಿತ್ರವನ್ನು ಮತ್ತಷ್ಟು ಹರಡಬೇಡಿ. ಇನ್ನೊಬ್ಬರನ್ನು ಗೇಲಿ ಮಾಡುವುದರಿಂದ ಅವರಿಗೆ ಸಿಗುವ ಖುಷಿಯಾದರೂ ಏನು? ನಮ್ಮನ್ನು ಅನೇಕರು ಬೆಂಬಲಿಸಿದ್ದಾರೆ ಎಂದು ತಿಳಿದು ತುಸು ನಿರಾಳವಾಗಿದ್ದೇವೆ” ಎಂದು ಹೇಳಿದ್ದಾರೆ.

ಕುಟುಂಬಸ್ಥರನ್ನು ಗೇಲಿ ಮಾಡುವವರಿಗೆ ಸಾಮಾಜಿಕ ಮಾಧ್ಯಮಗಳಲ್ಲಿ ಕೆಲವರು ಪಾಠವನ್ನು ಮಾಡಿದ್ದಾರೆ. ಮೃತಪಟ್ಟವರನ್ನು ಖುಷಿಯಿಂದ ಡ್ಯಾನ್ಸ್‌ ಮಾಡುತ್ತಾ ಕಳುಹಿಸಿಕೊಡುವ ಸಂಸ್ಕೃತಿ ತಮಿಳುನಾಡು, ಸೇರಿದಂತೆ ಕರ್ನಾಟಕದಲ್ಲಿ ಈ ಹಿಂದಿನಿಂದಲೂ ಇವೆ ಎಂದು ನೆನಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...