Homeಮುಖಪುಟ‘ಅಮ್ಮಚ್ಚಿ’ಯನ್ನು ಸಂತೋಷದಿಂದ ಕಳುಹಿಸಿಕೊಟ್ಟಿದ್ದೇವೆ, ತಪ್ಪೇನು?: ವೈರಲ್ ಚಿತ್ರದ ವಾಸ್ತವವಿದು!

‘ಅಮ್ಮಚ್ಚಿ’ಯನ್ನು ಸಂತೋಷದಿಂದ ಕಳುಹಿಸಿಕೊಟ್ಟಿದ್ದೇವೆ, ತಪ್ಪೇನು?: ವೈರಲ್ ಚಿತ್ರದ ವಾಸ್ತವವಿದು!

- Advertisement -
- Advertisement -

ಮೃತದೇಹವೊಂದರ ಮುಂದೆ ಕುಟುಂಬಸ್ಥರು ನಗುತ್ತಾ ಗ್ರೂಪ್ ಫೋಟೊ ಕ್ಲಿಕ್ಕಿಸಿರುವ ಚಿತ್ರವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಇದೀಗ ವೈರಲ್ ಆಗಿದೆ. ಮರಣ ಹೊಂದಿರುವ ಮನೆಯಲ್ಲಿ ಯಾವುದೆ ದುಃಖವಿಲ್ಲದೆ ಹೀಗೆ ನಗುತ್ತಾ ಫೋಟೊ ಕ್ಲಿಕ್ಕಿಸಿರುವ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಕೆಲವರು ಟೀಕಿಸಿದರೆ, ಇನ್ನು ಕೆಲವರು ಮೃತಪಟ್ಟವರನ್ನು ನಗುನಗುತ್ತಲೇ ಕಳುಹಿಸಿಕೊಡುವುದು ಕೂಡಾ ಸರಿಯಾದ ನಡೆ ಎಂದು ಕುಟುಂಬವನ್ನು ಬೆಂಬಲಿಸಿದ್ದಾರೆ.

ಕುಟುಂಬವೊಂದರ ಖಾಸಗಿ ಚಿತ್ರ ಸಾಮಾಜಿಕ ಮಾಧ್ಯಮಗಳಲ್ಲಿ ಹಲವಾರು ನಿರೂಪಣೆಯೊಂದಿಗೆ ಹರಿದಾಡಿದ್ದಕ್ಕೆ, ಕುಟುಂಬದ ಸದಸ್ಯರು ಬೇಸರ ವ್ಯಕ್ತಪಡಿಸಿ ಸಮಜಾಯಿಷಿ ನೀಡಿದ್ದಾರೆ. ನಮ್ಮ ‘ಅಮ್ಮಚ್ಚಿ(ಅಮ್ಮ)’ಯನ್ನು ಸಂತೋಷದಿಂದ ಕಳುಹಿಸಿಕೊಟ್ಟಿದ್ದೇವೆ, ಇದರಲ್ಲಿ ತಪ್ಪೇನಿದೆ ಎಂದು ಅವರು ಪ್ರಶ್ನಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಘಟನೆ ಏನು?

ಕೇರಳದ ಕೊಟ್ಟಾಯಂ ಜಿಲ್ಲೆಯ ಮಲ್ಲಪಲ್ಲಿ ಮೂಲದ ದಿವಂಗತ ರೆವರೆಂಡ್ ಪಿ.ಒ. ವರ್ಗೀಸ್ ಅವರ ಪತ್ನಿ, 95 ವರ್ಷದ ಮರಿಯಮ್ಮ ಅವರು ಇತ್ತೀಚೆಗೆ ಮೃತಪಟ್ಟಿದ್ದರು. ವೈರಲ್ ಚಿತ್ರದಲ್ಲಿ ಕಾಣುತ್ತಿರುವ ವ್ಯಕ್ತಿಗಳು ಅವರ ಕುಟುಂಬದ ಸದಸ್ಯರಾಗಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಎಂದು ಹಳೆಯ ಚಿತ್ರಗಳು ವೈರಲ್‌!

“ಮರಿಯಮ್ಮ ನನ್ನ ತಂದೆಯ ಅಣ್ಣನ ಹೆಂಡತಿ. ವ್ಯಕ್ತಿಯೊಬ್ಬರು ಸತ್ತರೆ ಸ್ವರ್ಗಕ್ಕೆ ಹೋಗುತ್ತಾರೆ ಎಂಬುವುದಾಗಿದೆ ಕ್ರಿಶ್ಚಿಯನ್ನರ ನಂಬಿಕೆ. ಮರಿಯಮ್ಮ ಎಂಬ ನಮ್ಮ ‘ಅಮ್ಮಚ್ಚಿ’ ಬದುಕಿದ್ದಾಗ ಉತ್ತಮ ರೀತಿಯ ಜೀವನ ನಡೆಸಿದ್ದಾರೆ. ಅಮ್ಮಚ್ಚಿ ಸ್ವರ್ಗಕ್ಕೆ ಹೋದ ಖುಷಿಯಾಗಿದೆ ಅಲ್ಲಿ ಎದ್ದು ಕಾಣುತ್ತಿದ್ದದ್ದು” ಎಂದು ಮೃತ ಮಹಿಳೆಯ ಕುಟುಂಬದ ಸದಸ್ಯ, ವೈದ್ಯರಾದ ಉಮ್ಮನ್ ಪಿ. ನೈನಾನ್‌ ಹೇಳಿದ್ದಾರೆ.

“ಹಿಂದಿನ ದಿನ ನಾಲ್ಕು ಗಂಟೆಗೆ ಶವವನ್ನು ಮನೆಗೆ ತರಲಾಯಿತು. ಮರುದಿನ ಮುಂಜಾನೆ 3 ಗಂಟೆ ಸುಮಾರಿಗೆ ಈ ಫೋಟೋ ತೆಗೆಯಲಾಗಿದೆ” ಎಂದು ಅವರು ಹೇಳಿದ್ದಾರೆ.

“ಅಲ್ಲಿಯವರೆಗೂ ಅಮ್ಮಚ್ಚಿಯ ಜೊತೆ ಮನೆಯವರೆಲ್ಲ ಒಂದೆಡೆ ಸೇರಿ, ಅವರಿಗಾಗಿ ಪ್ರಾರ್ಥಿಸಿದರು. ಮಕ್ಕಳು, ಮೊಮ್ಮಕ್ಕಳು ಹಾಗೂ ಕುಟುಂಬದ ಇತರ ಸದಸ್ಯರು ಅಮ್ಮಚ್ಚಿ ಬದುಕಿದ್ದಾಗಿನ ಅನುಭವಗಳನ್ನು ಹಂಚಿಕೊಂಡರು. ಎಲ್ಲರೂ ಸ್ವಲ್ಪ ಹೊತ್ತು ವಿಶ್ರಾಂತಿ ಪಡೆಯಲು ಹೊರಟಾಗ ತೆಗೆದ ಫೋಟೋ ಇದಾಗಿದೆ” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಅಧಿಕಾರದಲ್ಲಿದ್ದರೆ ರಸ್ತೆಗಿಳಿದು ಕಲ್ಲು ಹೊಡೆಯಬಹುದು: ಸಂಸದ ತೇಜಸ್ವಿ ಸೂರ್ಯ ಆಡಿಯೋ ವೈರಲ್

“ನಮ್ಮ ಕುಟುಂಬದ ಒಳಗೆ ಸೀಮಿತವಾಗಬೇಕಿದ್ದ ಈ ಖಾಸಗಿ ಚಿತ್ರ ಹೇಗೋ ಹೊರಬಿದ್ದಿದೆ. ನಂತರ ಅದು ವೈರಲ್ ಆಗಿದೆ. ಕೆಲವರು ಅದನ್ನು ಕೆಟ್ಟದಾಗಿ ನಿರೂಪಿಸಿ ಹರಡುತ್ತಿದ್ದಾರೆ. ಅಮ್ಮಚ್ಚಿಯ ಮರಣಾ ನಂತರದ ಜೀವನ ಆಶಾದಾಯಕವಾಗಿ ಇರುತ್ತದೆ ಎಂದು ನಾವು ನಂಬುತ್ತೇವೆ. ಈ ಕಾರಣಕ್ಕಾಗಿಯೆ ನಾವು ಅವರನ್ನು ಖುಷಿಯಿಂದ ಕಳುಹಿಸಿಕೊಟ್ಟಿದ್ದೇವೆ” ಎಂದು ಅವರು ಹೇಳಿದ್ದಾರೆ.

“ಅಮ್ಮಚ್ಚಿ ಕಳೆದ ಒಂದು ವರ್ಷದಿಂದ ಸಂಪೂರ್ಣವಾಗಿ ಹಾಸಿಗೆ ಹಿಡಿದಿದ್ದರು. ಅವರಿಗೆ 9 ಮಕ್ಕಳು. ಅವರಲ್ಲಿ ಒಬ್ಬರು ಈ ಹಿಂದೆಯೆ ತೀರಿಕೊಂಡಿದ್ದಾರೆ. ಉಳಿದ ಎಲ್ಲರೂ ಅವರನ್ನು ಚೆನ್ನಾಗಿ ನೋಡಿಕೊಂಡಿದ್ದಾರೆ. ಅವರನ್ನು ಉತ್ತಮ ರೀತಿಯಲ್ಲಿ ಸೇವೆ ಮಾಡಿದ್ದಾರೆ” ಎಂದು ಅವರು ಹೇಳಿದ್ದಾರೆ.

“ಇದರಲ್ಲಿ ಅಪಹಾಸ್ಯ ಮಾಡಲು ಏನಿದೆ? ಚಿತ್ರವನ್ನು ಬಳಸಿ ಕೆಟ್ಟದಾಗಿ ಪ್ರಚಾರ ಮಾಡುವವರ ಮನಸ್ಥಿತಿ ಇದರಲ್ಲಿ ಬಯಲಾಗಿದೆ. ಸತ್ತಾಗ ಮಾತ್ರ ಅಳಬೇಕು ಎನ್ನುವವರಿಗೆ ಏನು ಹೇಳಬೇಕು” ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ವೈರಲ್‌ ವಿಡಿಯೊದಲ್ಲಿ ಡಾನ್ಸ್‌ ಮಾಡುತ್ತಿರುವ ಮಗು ಶಿಕ್ಷಕನಿಂದ ಕೊಲೆಯಾದ ಇಂದ್ರ ಮೇಘ್ವಾಲ್‌ ಅಲ್ಲ

“ಕುಟುಂಬದ ಸದಸ್ಯನಾಗಿ ಒಂದು ಅಪೇಕ್ಷೆಯೇನೆಂದರೆ, ದಯವಿಟ್ಟು ಈ ಚಿತ್ರವನ್ನು ಮತ್ತಷ್ಟು ಹರಡಬೇಡಿ. ಇನ್ನೊಬ್ಬರನ್ನು ಗೇಲಿ ಮಾಡುವುದರಿಂದ ಅವರಿಗೆ ಸಿಗುವ ಖುಷಿಯಾದರೂ ಏನು? ನಮ್ಮನ್ನು ಅನೇಕರು ಬೆಂಬಲಿಸಿದ್ದಾರೆ ಎಂದು ತಿಳಿದು ತುಸು ನಿರಾಳವಾಗಿದ್ದೇವೆ” ಎಂದು ಹೇಳಿದ್ದಾರೆ.

ಕುಟುಂಬಸ್ಥರನ್ನು ಗೇಲಿ ಮಾಡುವವರಿಗೆ ಸಾಮಾಜಿಕ ಮಾಧ್ಯಮಗಳಲ್ಲಿ ಕೆಲವರು ಪಾಠವನ್ನು ಮಾಡಿದ್ದಾರೆ. ಮೃತಪಟ್ಟವರನ್ನು ಖುಷಿಯಿಂದ ಡ್ಯಾನ್ಸ್‌ ಮಾಡುತ್ತಾ ಕಳುಹಿಸಿಕೊಡುವ ಸಂಸ್ಕೃತಿ ತಮಿಳುನಾಡು, ಸೇರಿದಂತೆ ಕರ್ನಾಟಕದಲ್ಲಿ ಈ ಹಿಂದಿನಿಂದಲೂ ಇವೆ ಎಂದು ನೆನಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...