Homeಮುಖಪುಟಮುಸ್ಲಿಮರ ಮನೆ, ಪ್ರಾರ್ಥನಾ ಸ್ಥಳಗಳ 'ಕಾನೂನುಬಾಹಿರ ಧ್ವಂಸ'ವನ್ನು ತಕ್ಷಣ ನಿಲ್ಲಿಸಿ: ಅಮ್ನೆಸ್ಟಿ ಇಂಟರ್‌ನ್ಯಾಶನಲ್

ಮುಸ್ಲಿಮರ ಮನೆ, ಪ್ರಾರ್ಥನಾ ಸ್ಥಳಗಳ ‘ಕಾನೂನುಬಾಹಿರ ಧ್ವಂಸ’ವನ್ನು ತಕ್ಷಣ ನಿಲ್ಲಿಸಿ: ಅಮ್ನೆಸ್ಟಿ ಇಂಟರ್‌ನ್ಯಾಶನಲ್

- Advertisement -
- Advertisement -

ಮುಸ್ಲಿಮರ ಮನೆಗಳು, ವ್ಯಾಪಾರ ಕೇಂದ್ರಗಳು ಮತ್ತು ಪ್ರಾರ್ಥನಾ ಸ್ಥಳಗಳ ‘ಕಾನೂನುಬಾಹಿರ ಧ್ವಂಸ’ವನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಮಾನವ ಹಕ್ಕುಗಳ ಸಂಘಟನೆ ಅಮ್ನೆಸ್ಟಿ ಇಂಟರ್‌ನ್ಯಾಶನಲ್ ಭಾರತ ಸರಕಾರಕ್ಕೆ ಆಗ್ರಹಿಸಿದೆ.

ನೀವು ಮಾತನಾಡಿದರೆ, ನಿಮ್ಮ ಮನೆಯನ್ನು ಕೆಡವಲಾಗುತ್ತದೆ: ಭಾರತದಲ್ಲಿ ಬುಲ್ಡೋಜರ್ ಅನ್ಯಾಯ ಮತ್ತು ಹೊಣೆಗಾರಿಕೆಯನ್ನು ಬೆಳಕಿಗೆ ತರುವುದು ಹಾಗೂ ಭಾರತದಲ್ಲಿ ಬುಲ್ಡೋಜರ್ ಅನ್ಯಾಯದಲ್ಲಿ ಜೆಸಿಬಿ ಪಾತ್ರ ಮತ್ತು ಜವಾಬ್ದಾರಿ ಎನ್ನುವ ಎರಡು ವರದಿಗಳನ್ನು ಆಮ್ನೆಸ್ಟಿ ಪ್ರಕಟಿಸಿದೆ.

ಅಲ್ಪಸಂಖ್ಯಾತ ಸಮುದಾಯದ ವಿರುದ್ಧ ದ್ವೇಷದ ಪ್ರಚಾರದ ಭಾಗವಾಗಿ ಭಾರತದ ಕನಿಷ್ಠ 5 ರಾಜ್ಯಗಳಲ್ಲಿ ಮುಸ್ಲಿಂ ಸಮುದಾಯದ ವಿರುದ್ಧ ಜೆಸಿಬಿ, ಬುಲ್ಡೋಜರ್‌ಗಳನ್ನು ಬಳಸಲಾಗುತ್ತಿದೆ. ಕಾನೂನು ಬಾಹಿರವಾಗಿ ಜನರ ಮನೆಗಳ ಕೆಡವುದನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳನ್ನು ಆಗ್ರಹಿಸಿದ್ದು, ಬಲವಂತದ ಒಕ್ಕಲೆಬ್ಬಿಸುವುವಿಕೆಯಿಂದ ಯಾರನ್ನೂ ನಿರಾಶ್ರಿತರನ್ನಾಗಿ ಮಾಡಬಾರದು, ಈ ರೀತಿ ಕಾನೂನು ಬಾಹಿರವಾಗಿ ಧ್ವಂಸ ಮಾಡಿರುವ ಪ್ರಕರಣದಲ್ಲಿ ಸಂತ್ರಸ್ತ ಕುಟುಂಬಕ್ಕೆ ಸರಿಯಾದ ಪರಿಹಾರವನ್ನು ನೀಡಬೇಕು. ಈ ಕಾನೂನು ಉಲ್ಲಂಘನೆಗೆ ಕಾರಣರಾದವರನ್ನು ಜವಾಬ್ದಾರರನ್ನಾಗಿ ಮಾಡಬೇಕು ಎಂದು ಆಮ್ನೆಸ್ಟಿ ಆಗ್ರಹಿಸಿದೆ.

ರಾಜಕೀಯ ನಾಯಕರು ಮತ್ತು ಮಾಧ್ಯಮಗಳಿಂದ ‘ಬುಲ್ಡೋಜರ್ ನ್ಯಾಯ’ ಎಂದು ಬಿಂಬಿತವಾಗಿದೆ.  ಅಧಿಕಾರಿಗಳು ಮುಸ್ಲಿಂ ಸಮುದಾಯದ ಜನರ ಆಸ್ತಿಗಳನ್ನು ಕಾನೂನುಬಾಹಿರವಾಗಿ ಕೆಡವಿರುವುದು ಕ್ರೂರ ಮತ್ತು ಭಯಾನಕವಾಗಿದೆ. ಅಂತಹ ಸ್ಥಳಾಂತರ ಮತ್ತು ವಿಲೇವಾರಿಯು ಬಲವಾದ ಅನ್ಯಾಯವಾಗಿದೆ, ಕಾನೂನುಬಾಹಿರ ಮತ್ತು ತಾರತಮ್ಯವಾಗಿದೆ. ಇದರಿಂದ ಸಂತ್ರಸ್ತ ಕುಟುಂಬಗಳು ನಾಶವಾಗುತ್ತಿದೆ. ಇದನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಆಮ್ನೆಸ್ಟಿ ಇಂಟರ್‌ನ್ಯಾಶನಲ್‌ನ ಪ್ರಧಾನ ಕಾರ್ಯದರ್ಶಿ ಆಗ್ನೆಸ್ ಕ್ಯಾಲಮರ್ಡ್ ಹೇಳಿದ್ದಾರೆ.

ಇತ್ತೀಚಿನ ನಿದರ್ಶನದಲ್ಲಿ ದೆಹಲಿ ಅಭಿವೃದ್ಧಿ ಪ್ರಾಧಿಕಾರ (ಡಿಡಿಎ) ‘ಅಕ್ರಮ ಕಟ್ಟಡ’ ಎಂದು ಇತಿಹಾಸ ಪ್ರಸಿದ್ಧ ಅಖೂಂಡ್ಜಿ ಮಸೀದಿ ಮತ್ತು ಮದರಸಾವನ್ನು ಧ್ವಂಸಗೊಳಿಸಿದೆ. ಆದರೆ ASI ದಾಖಲೆಗಳು ಮಸೀದಿ 700ವರ್ಷಗಳಷ್ಟು ಹಳೆಯದು ಎನ್ನುವುದನ್ನು ಬಹಿರಂಗಗೊಳಿಸುತ್ತದೆ ಎಂಬುವುದನ್ನು ಅಮ್ನೆಸ್ಟಿ ಇಂಟರ್‌ನ್ಯಾಶನಲ್‌ ಹೇಳಿಕೆಯಲ್ಲಿ ಉಲ್ಲೇಖಿಸಿದೆ.

ಆಮ್ನೆಸ್ಟಿಯ ಸಂಶೋಧನಾ ವರದಿಯ ಪ್ರಕಾರ, ಏಪ್ರಿಲ್ ಮತ್ತು ಜೂನ್ 2022ರ ನಡುವೆ ಬಿಜೆಪಿ ಆಡಳಿತವಿರುವ ಅಸ್ಸಾಂ, ಗುಜರಾತ್, ಮಧ್ಯಪ್ರದೇಶ, ಉತ್ತರಪ್ರದೇಶ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ಆಡಳಿತದ ದೆಹಲಿ ರಾಜ್ಯ ಸೇರಿದಂತೆ ಐದು ರಾಜ್ಯಗಳಲ್ಲಿ ಅಧಿಕಾರಿಗಳು ಧ್ವಂಸ ಕಾರ್ಯಾಚರಣೆಗಳನ್ನು ನಡೆಸಿದ್ದಾರೆ.

128 ದಾಖಲಿತ ಪ್ರಕರಣಗಳಲ್ಲಿ 63 ಪ್ರಕರಣಗಳನ್ನು ಕೂಲಂಕಷವಾಗಿ ಪರಿಶೀಲಿಸಿದ ನಂತರ, ಪುರುಷರು, ಮಹಿಳೆಯರು, ಮಕ್ಕಳು ಮತ್ತು ವೃದ್ಧರು ಸೇರಿದಂತೆ ಕನಿಷ್ಠ 617 ಜನರು ನಿರಾಶ್ರಿತರಾಗಿದ್ದಾರೆ ಎಂದು ತನಿಖೆ ದೃಢಪಡಿಸುತ್ತದೆ. ಅಕ್ರಮ ನಿರ್ಮಾಣ ಮತ್ತು ಅತಿಕ್ರಮಣ ನೆಪದಲ್ಲಿ ಹೆಚ್ಚಿನ ಒತ್ತುವರಿ ತೆರವು ಮತ್ತು ಧ್ವಂಸ ಕಾರ್ಯಾಚರಣೆ ನಡೆದಿದೆ ಎಂದು ಅಮ್ನೆಸ್ಟಿ ಇಂಟರ್‌ನ್ಯಾಶನಲ್‌ ಕಂಡುಕೊಂಡಿದೆ.

ಇದನ್ನು ಓದಿ: “10 ಸಾಲ್‌ ಅನ್ಯಾಯ್‌ ಕಾಲ್”: ಮೋದಿ ಸರಕಾರದ ವಿರುದ್ಧ ಕಾಂಗ್ರೆಸ್‌ ಬಿಡುಗಡೆ ಮಾಡಿದ ‘ಕಪ್ಪುಪತ್ರ’ದಲ್ಲಿ ಏನಿದೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...