Homeಮುಖಪುಟಮುಸ್ಲಿಮರ ಮನೆ, ಪ್ರಾರ್ಥನಾ ಸ್ಥಳಗಳ 'ಕಾನೂನುಬಾಹಿರ ಧ್ವಂಸ'ವನ್ನು ತಕ್ಷಣ ನಿಲ್ಲಿಸಿ: ಅಮ್ನೆಸ್ಟಿ ಇಂಟರ್‌ನ್ಯಾಶನಲ್

ಮುಸ್ಲಿಮರ ಮನೆ, ಪ್ರಾರ್ಥನಾ ಸ್ಥಳಗಳ ‘ಕಾನೂನುಬಾಹಿರ ಧ್ವಂಸ’ವನ್ನು ತಕ್ಷಣ ನಿಲ್ಲಿಸಿ: ಅಮ್ನೆಸ್ಟಿ ಇಂಟರ್‌ನ್ಯಾಶನಲ್

- Advertisement -
- Advertisement -

ಮುಸ್ಲಿಮರ ಮನೆಗಳು, ವ್ಯಾಪಾರ ಕೇಂದ್ರಗಳು ಮತ್ತು ಪ್ರಾರ್ಥನಾ ಸ್ಥಳಗಳ ‘ಕಾನೂನುಬಾಹಿರ ಧ್ವಂಸ’ವನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಮಾನವ ಹಕ್ಕುಗಳ ಸಂಘಟನೆ ಅಮ್ನೆಸ್ಟಿ ಇಂಟರ್‌ನ್ಯಾಶನಲ್ ಭಾರತ ಸರಕಾರಕ್ಕೆ ಆಗ್ರಹಿಸಿದೆ.

ನೀವು ಮಾತನಾಡಿದರೆ, ನಿಮ್ಮ ಮನೆಯನ್ನು ಕೆಡವಲಾಗುತ್ತದೆ: ಭಾರತದಲ್ಲಿ ಬುಲ್ಡೋಜರ್ ಅನ್ಯಾಯ ಮತ್ತು ಹೊಣೆಗಾರಿಕೆಯನ್ನು ಬೆಳಕಿಗೆ ತರುವುದು ಹಾಗೂ ಭಾರತದಲ್ಲಿ ಬುಲ್ಡೋಜರ್ ಅನ್ಯಾಯದಲ್ಲಿ ಜೆಸಿಬಿ ಪಾತ್ರ ಮತ್ತು ಜವಾಬ್ದಾರಿ ಎನ್ನುವ ಎರಡು ವರದಿಗಳನ್ನು ಆಮ್ನೆಸ್ಟಿ ಪ್ರಕಟಿಸಿದೆ.

ಅಲ್ಪಸಂಖ್ಯಾತ ಸಮುದಾಯದ ವಿರುದ್ಧ ದ್ವೇಷದ ಪ್ರಚಾರದ ಭಾಗವಾಗಿ ಭಾರತದ ಕನಿಷ್ಠ 5 ರಾಜ್ಯಗಳಲ್ಲಿ ಮುಸ್ಲಿಂ ಸಮುದಾಯದ ವಿರುದ್ಧ ಜೆಸಿಬಿ, ಬುಲ್ಡೋಜರ್‌ಗಳನ್ನು ಬಳಸಲಾಗುತ್ತಿದೆ. ಕಾನೂನು ಬಾಹಿರವಾಗಿ ಜನರ ಮನೆಗಳ ಕೆಡವುದನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳನ್ನು ಆಗ್ರಹಿಸಿದ್ದು, ಬಲವಂತದ ಒಕ್ಕಲೆಬ್ಬಿಸುವುವಿಕೆಯಿಂದ ಯಾರನ್ನೂ ನಿರಾಶ್ರಿತರನ್ನಾಗಿ ಮಾಡಬಾರದು, ಈ ರೀತಿ ಕಾನೂನು ಬಾಹಿರವಾಗಿ ಧ್ವಂಸ ಮಾಡಿರುವ ಪ್ರಕರಣದಲ್ಲಿ ಸಂತ್ರಸ್ತ ಕುಟುಂಬಕ್ಕೆ ಸರಿಯಾದ ಪರಿಹಾರವನ್ನು ನೀಡಬೇಕು. ಈ ಕಾನೂನು ಉಲ್ಲಂಘನೆಗೆ ಕಾರಣರಾದವರನ್ನು ಜವಾಬ್ದಾರರನ್ನಾಗಿ ಮಾಡಬೇಕು ಎಂದು ಆಮ್ನೆಸ್ಟಿ ಆಗ್ರಹಿಸಿದೆ.

ರಾಜಕೀಯ ನಾಯಕರು ಮತ್ತು ಮಾಧ್ಯಮಗಳಿಂದ ‘ಬುಲ್ಡೋಜರ್ ನ್ಯಾಯ’ ಎಂದು ಬಿಂಬಿತವಾಗಿದೆ.  ಅಧಿಕಾರಿಗಳು ಮುಸ್ಲಿಂ ಸಮುದಾಯದ ಜನರ ಆಸ್ತಿಗಳನ್ನು ಕಾನೂನುಬಾಹಿರವಾಗಿ ಕೆಡವಿರುವುದು ಕ್ರೂರ ಮತ್ತು ಭಯಾನಕವಾಗಿದೆ. ಅಂತಹ ಸ್ಥಳಾಂತರ ಮತ್ತು ವಿಲೇವಾರಿಯು ಬಲವಾದ ಅನ್ಯಾಯವಾಗಿದೆ, ಕಾನೂನುಬಾಹಿರ ಮತ್ತು ತಾರತಮ್ಯವಾಗಿದೆ. ಇದರಿಂದ ಸಂತ್ರಸ್ತ ಕುಟುಂಬಗಳು ನಾಶವಾಗುತ್ತಿದೆ. ಇದನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಆಮ್ನೆಸ್ಟಿ ಇಂಟರ್‌ನ್ಯಾಶನಲ್‌ನ ಪ್ರಧಾನ ಕಾರ್ಯದರ್ಶಿ ಆಗ್ನೆಸ್ ಕ್ಯಾಲಮರ್ಡ್ ಹೇಳಿದ್ದಾರೆ.

ಇತ್ತೀಚಿನ ನಿದರ್ಶನದಲ್ಲಿ ದೆಹಲಿ ಅಭಿವೃದ್ಧಿ ಪ್ರಾಧಿಕಾರ (ಡಿಡಿಎ) ‘ಅಕ್ರಮ ಕಟ್ಟಡ’ ಎಂದು ಇತಿಹಾಸ ಪ್ರಸಿದ್ಧ ಅಖೂಂಡ್ಜಿ ಮಸೀದಿ ಮತ್ತು ಮದರಸಾವನ್ನು ಧ್ವಂಸಗೊಳಿಸಿದೆ. ಆದರೆ ASI ದಾಖಲೆಗಳು ಮಸೀದಿ 700ವರ್ಷಗಳಷ್ಟು ಹಳೆಯದು ಎನ್ನುವುದನ್ನು ಬಹಿರಂಗಗೊಳಿಸುತ್ತದೆ ಎಂಬುವುದನ್ನು ಅಮ್ನೆಸ್ಟಿ ಇಂಟರ್‌ನ್ಯಾಶನಲ್‌ ಹೇಳಿಕೆಯಲ್ಲಿ ಉಲ್ಲೇಖಿಸಿದೆ.

ಆಮ್ನೆಸ್ಟಿಯ ಸಂಶೋಧನಾ ವರದಿಯ ಪ್ರಕಾರ, ಏಪ್ರಿಲ್ ಮತ್ತು ಜೂನ್ 2022ರ ನಡುವೆ ಬಿಜೆಪಿ ಆಡಳಿತವಿರುವ ಅಸ್ಸಾಂ, ಗುಜರಾತ್, ಮಧ್ಯಪ್ರದೇಶ, ಉತ್ತರಪ್ರದೇಶ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ಆಡಳಿತದ ದೆಹಲಿ ರಾಜ್ಯ ಸೇರಿದಂತೆ ಐದು ರಾಜ್ಯಗಳಲ್ಲಿ ಅಧಿಕಾರಿಗಳು ಧ್ವಂಸ ಕಾರ್ಯಾಚರಣೆಗಳನ್ನು ನಡೆಸಿದ್ದಾರೆ.

128 ದಾಖಲಿತ ಪ್ರಕರಣಗಳಲ್ಲಿ 63 ಪ್ರಕರಣಗಳನ್ನು ಕೂಲಂಕಷವಾಗಿ ಪರಿಶೀಲಿಸಿದ ನಂತರ, ಪುರುಷರು, ಮಹಿಳೆಯರು, ಮಕ್ಕಳು ಮತ್ತು ವೃದ್ಧರು ಸೇರಿದಂತೆ ಕನಿಷ್ಠ 617 ಜನರು ನಿರಾಶ್ರಿತರಾಗಿದ್ದಾರೆ ಎಂದು ತನಿಖೆ ದೃಢಪಡಿಸುತ್ತದೆ. ಅಕ್ರಮ ನಿರ್ಮಾಣ ಮತ್ತು ಅತಿಕ್ರಮಣ ನೆಪದಲ್ಲಿ ಹೆಚ್ಚಿನ ಒತ್ತುವರಿ ತೆರವು ಮತ್ತು ಧ್ವಂಸ ಕಾರ್ಯಾಚರಣೆ ನಡೆದಿದೆ ಎಂದು ಅಮ್ನೆಸ್ಟಿ ಇಂಟರ್‌ನ್ಯಾಶನಲ್‌ ಕಂಡುಕೊಂಡಿದೆ.

ಇದನ್ನು ಓದಿ: “10 ಸಾಲ್‌ ಅನ್ಯಾಯ್‌ ಕಾಲ್”: ಮೋದಿ ಸರಕಾರದ ವಿರುದ್ಧ ಕಾಂಗ್ರೆಸ್‌ ಬಿಡುಗಡೆ ಮಾಡಿದ ‘ಕಪ್ಪುಪತ್ರ’ದಲ್ಲಿ ಏನಿದೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...