Homeಮುಖಪುಟಮುಸ್ಲಿಮರ ಮನೆ, ಪ್ರಾರ್ಥನಾ ಸ್ಥಳಗಳ 'ಕಾನೂನುಬಾಹಿರ ಧ್ವಂಸ'ವನ್ನು ತಕ್ಷಣ ನಿಲ್ಲಿಸಿ: ಅಮ್ನೆಸ್ಟಿ ಇಂಟರ್‌ನ್ಯಾಶನಲ್

ಮುಸ್ಲಿಮರ ಮನೆ, ಪ್ರಾರ್ಥನಾ ಸ್ಥಳಗಳ ‘ಕಾನೂನುಬಾಹಿರ ಧ್ವಂಸ’ವನ್ನು ತಕ್ಷಣ ನಿಲ್ಲಿಸಿ: ಅಮ್ನೆಸ್ಟಿ ಇಂಟರ್‌ನ್ಯಾಶನಲ್

- Advertisement -
- Advertisement -

ಮುಸ್ಲಿಮರ ಮನೆಗಳು, ವ್ಯಾಪಾರ ಕೇಂದ್ರಗಳು ಮತ್ತು ಪ್ರಾರ್ಥನಾ ಸ್ಥಳಗಳ ‘ಕಾನೂನುಬಾಹಿರ ಧ್ವಂಸ’ವನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಮಾನವ ಹಕ್ಕುಗಳ ಸಂಘಟನೆ ಅಮ್ನೆಸ್ಟಿ ಇಂಟರ್‌ನ್ಯಾಶನಲ್ ಭಾರತ ಸರಕಾರಕ್ಕೆ ಆಗ್ರಹಿಸಿದೆ.

ನೀವು ಮಾತನಾಡಿದರೆ, ನಿಮ್ಮ ಮನೆಯನ್ನು ಕೆಡವಲಾಗುತ್ತದೆ: ಭಾರತದಲ್ಲಿ ಬುಲ್ಡೋಜರ್ ಅನ್ಯಾಯ ಮತ್ತು ಹೊಣೆಗಾರಿಕೆಯನ್ನು ಬೆಳಕಿಗೆ ತರುವುದು ಹಾಗೂ ಭಾರತದಲ್ಲಿ ಬುಲ್ಡೋಜರ್ ಅನ್ಯಾಯದಲ್ಲಿ ಜೆಸಿಬಿ ಪಾತ್ರ ಮತ್ತು ಜವಾಬ್ದಾರಿ ಎನ್ನುವ ಎರಡು ವರದಿಗಳನ್ನು ಆಮ್ನೆಸ್ಟಿ ಪ್ರಕಟಿಸಿದೆ.

ಅಲ್ಪಸಂಖ್ಯಾತ ಸಮುದಾಯದ ವಿರುದ್ಧ ದ್ವೇಷದ ಪ್ರಚಾರದ ಭಾಗವಾಗಿ ಭಾರತದ ಕನಿಷ್ಠ 5 ರಾಜ್ಯಗಳಲ್ಲಿ ಮುಸ್ಲಿಂ ಸಮುದಾಯದ ವಿರುದ್ಧ ಜೆಸಿಬಿ, ಬುಲ್ಡೋಜರ್‌ಗಳನ್ನು ಬಳಸಲಾಗುತ್ತಿದೆ. ಕಾನೂನು ಬಾಹಿರವಾಗಿ ಜನರ ಮನೆಗಳ ಕೆಡವುದನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳನ್ನು ಆಗ್ರಹಿಸಿದ್ದು, ಬಲವಂತದ ಒಕ್ಕಲೆಬ್ಬಿಸುವುವಿಕೆಯಿಂದ ಯಾರನ್ನೂ ನಿರಾಶ್ರಿತರನ್ನಾಗಿ ಮಾಡಬಾರದು, ಈ ರೀತಿ ಕಾನೂನು ಬಾಹಿರವಾಗಿ ಧ್ವಂಸ ಮಾಡಿರುವ ಪ್ರಕರಣದಲ್ಲಿ ಸಂತ್ರಸ್ತ ಕುಟುಂಬಕ್ಕೆ ಸರಿಯಾದ ಪರಿಹಾರವನ್ನು ನೀಡಬೇಕು. ಈ ಕಾನೂನು ಉಲ್ಲಂಘನೆಗೆ ಕಾರಣರಾದವರನ್ನು ಜವಾಬ್ದಾರರನ್ನಾಗಿ ಮಾಡಬೇಕು ಎಂದು ಆಮ್ನೆಸ್ಟಿ ಆಗ್ರಹಿಸಿದೆ.

ರಾಜಕೀಯ ನಾಯಕರು ಮತ್ತು ಮಾಧ್ಯಮಗಳಿಂದ ‘ಬುಲ್ಡೋಜರ್ ನ್ಯಾಯ’ ಎಂದು ಬಿಂಬಿತವಾಗಿದೆ.  ಅಧಿಕಾರಿಗಳು ಮುಸ್ಲಿಂ ಸಮುದಾಯದ ಜನರ ಆಸ್ತಿಗಳನ್ನು ಕಾನೂನುಬಾಹಿರವಾಗಿ ಕೆಡವಿರುವುದು ಕ್ರೂರ ಮತ್ತು ಭಯಾನಕವಾಗಿದೆ. ಅಂತಹ ಸ್ಥಳಾಂತರ ಮತ್ತು ವಿಲೇವಾರಿಯು ಬಲವಾದ ಅನ್ಯಾಯವಾಗಿದೆ, ಕಾನೂನುಬಾಹಿರ ಮತ್ತು ತಾರತಮ್ಯವಾಗಿದೆ. ಇದರಿಂದ ಸಂತ್ರಸ್ತ ಕುಟುಂಬಗಳು ನಾಶವಾಗುತ್ತಿದೆ. ಇದನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಆಮ್ನೆಸ್ಟಿ ಇಂಟರ್‌ನ್ಯಾಶನಲ್‌ನ ಪ್ರಧಾನ ಕಾರ್ಯದರ್ಶಿ ಆಗ್ನೆಸ್ ಕ್ಯಾಲಮರ್ಡ್ ಹೇಳಿದ್ದಾರೆ.

ಇತ್ತೀಚಿನ ನಿದರ್ಶನದಲ್ಲಿ ದೆಹಲಿ ಅಭಿವೃದ್ಧಿ ಪ್ರಾಧಿಕಾರ (ಡಿಡಿಎ) ‘ಅಕ್ರಮ ಕಟ್ಟಡ’ ಎಂದು ಇತಿಹಾಸ ಪ್ರಸಿದ್ಧ ಅಖೂಂಡ್ಜಿ ಮಸೀದಿ ಮತ್ತು ಮದರಸಾವನ್ನು ಧ್ವಂಸಗೊಳಿಸಿದೆ. ಆದರೆ ASI ದಾಖಲೆಗಳು ಮಸೀದಿ 700ವರ್ಷಗಳಷ್ಟು ಹಳೆಯದು ಎನ್ನುವುದನ್ನು ಬಹಿರಂಗಗೊಳಿಸುತ್ತದೆ ಎಂಬುವುದನ್ನು ಅಮ್ನೆಸ್ಟಿ ಇಂಟರ್‌ನ್ಯಾಶನಲ್‌ ಹೇಳಿಕೆಯಲ್ಲಿ ಉಲ್ಲೇಖಿಸಿದೆ.

ಆಮ್ನೆಸ್ಟಿಯ ಸಂಶೋಧನಾ ವರದಿಯ ಪ್ರಕಾರ, ಏಪ್ರಿಲ್ ಮತ್ತು ಜೂನ್ 2022ರ ನಡುವೆ ಬಿಜೆಪಿ ಆಡಳಿತವಿರುವ ಅಸ್ಸಾಂ, ಗುಜರಾತ್, ಮಧ್ಯಪ್ರದೇಶ, ಉತ್ತರಪ್ರದೇಶ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ಆಡಳಿತದ ದೆಹಲಿ ರಾಜ್ಯ ಸೇರಿದಂತೆ ಐದು ರಾಜ್ಯಗಳಲ್ಲಿ ಅಧಿಕಾರಿಗಳು ಧ್ವಂಸ ಕಾರ್ಯಾಚರಣೆಗಳನ್ನು ನಡೆಸಿದ್ದಾರೆ.

128 ದಾಖಲಿತ ಪ್ರಕರಣಗಳಲ್ಲಿ 63 ಪ್ರಕರಣಗಳನ್ನು ಕೂಲಂಕಷವಾಗಿ ಪರಿಶೀಲಿಸಿದ ನಂತರ, ಪುರುಷರು, ಮಹಿಳೆಯರು, ಮಕ್ಕಳು ಮತ್ತು ವೃದ್ಧರು ಸೇರಿದಂತೆ ಕನಿಷ್ಠ 617 ಜನರು ನಿರಾಶ್ರಿತರಾಗಿದ್ದಾರೆ ಎಂದು ತನಿಖೆ ದೃಢಪಡಿಸುತ್ತದೆ. ಅಕ್ರಮ ನಿರ್ಮಾಣ ಮತ್ತು ಅತಿಕ್ರಮಣ ನೆಪದಲ್ಲಿ ಹೆಚ್ಚಿನ ಒತ್ತುವರಿ ತೆರವು ಮತ್ತು ಧ್ವಂಸ ಕಾರ್ಯಾಚರಣೆ ನಡೆದಿದೆ ಎಂದು ಅಮ್ನೆಸ್ಟಿ ಇಂಟರ್‌ನ್ಯಾಶನಲ್‌ ಕಂಡುಕೊಂಡಿದೆ.

ಇದನ್ನು ಓದಿ: “10 ಸಾಲ್‌ ಅನ್ಯಾಯ್‌ ಕಾಲ್”: ಮೋದಿ ಸರಕಾರದ ವಿರುದ್ಧ ಕಾಂಗ್ರೆಸ್‌ ಬಿಡುಗಡೆ ಮಾಡಿದ ‘ಕಪ್ಪುಪತ್ರ’ದಲ್ಲಿ ಏನಿದೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...