Homeಮುಖಪುಟಮಾನವಹಕ್ಕುಗಳ ರಕ್ಷಕ ಅಮ್ನೆಸ್ಟಿ ಸಂಸ್ಥೆಯ ಹಣ ಮುಟ್ಟುಗೋಲು: ಭಾರತ ಸರ್ಕಾರ ಕಿರುಕುಳ ನೀಡುತ್ತಿದೆ ಎಂದಿದ್ದ ಸಂಸ್ಥೆ

ಮಾನವಹಕ್ಕುಗಳ ರಕ್ಷಕ ಅಮ್ನೆಸ್ಟಿ ಸಂಸ್ಥೆಯ ಹಣ ಮುಟ್ಟುಗೋಲು: ಭಾರತ ಸರ್ಕಾರ ಕಿರುಕುಳ ನೀಡುತ್ತಿದೆ ಎಂದಿದ್ದ ಸಂಸ್ಥೆ

ದೆಹಲಿ ಗಲಭೆ ಮತ್ತು ಜಮ್ಮು ಕಾಶ್ಮೀರದಲ್ಲಿ ನಡೆದ ಗಂಭೀರ ಮಾನವ ಹಕ್ಕುಗಳ ಉಲ್ಲಂಘನೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಮತ್ತು ಭಾರತ ಸರ್ಕಾರದ ಹೊಣೆಗಾರಿಕೆಯನ್ನು ಪ್ರಶ್ನಿಸಿ, ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆಯನ್ನು ಕೋರಿದ್ದೆವು- ಅಮ್ನೆಸ್ಟಿ

- Advertisement -
- Advertisement -

ಅಕ್ರಮ ಹಣ ವರ್ಗಾವಣೆಯಾಗಿದೆ ಎಂದು ಆರೋಪಿಸಿ ಜಾಗತಿಕ ಮಾನವ ಹಕ್ಕುಗಳ ರಕ್ಷಕ ಸಂಸ್ಥೆ ಅಮ್ನೆಸ್ಟಿ ಇಂಟರ್‌ನ್ಯಾಷನಲ್ ಇಂಡಿಯಾದ ಸುಮಾರು 17.66 ಕೋಟಿ ರೂ.ಗಳ ಬ್ಯಾಂಕ್ ಠೇವಣೆಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಜಾರಿ ನಿರ್ದೇಶನಾಲಯ ಮಂಗಳವಾರ ಹೇಳಿದೆ.

ಅಮ್ನೆಸ್ಟಿ ಇಂಟರ್‌ನ್ಯಾಷನಲ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ (ಎಐಐಪಿಎಲ್)ಪಿಎಂಎಲ್‌ಎ ಹಾಗೂ ಇಂಡಿಯನ್ಸ್ ಫಾರ್ ಅಮ್ನೆಸ್ಟಿ ಇಂಟರ್‌ನ್ಯಾಷನಲ್ ಟ್ರಸ್ಟ್ (ಐಎಐಟಿ)ನ ಬ್ಯಾಂಕ್ ಖಾತೆಯನ್ನು ಪಿಎಂಎಲ್‌ಎ (ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ) ಅಡಿ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಜಾರಿ ನಿರ್ದೇಶನಾಲಯ ಹೇಳಿಕೆಯಲ್ಲಿ ತಿಳಿಸಿದೆ.

ಈ ಹಿಂದೆ ಖ್ಯಾತ ಮಾನವ ಹಕ್ಕುಗಳ ಸಂಸ್ಥೆ ಅಮ್ನೆಸ್ಟಿ ಇಂಟರ್‌ನ್ಯಾಷನಲ್ ಭಾರತದಲ್ಲಿನ ತನ್ನ ಕಾರ್ಯಾಚರಣೆ ಸ್ಥಗಿತಗೊಳಿಸುವುದಾಗಿ ಘೋಷಿಸಿತ್ತು. ತನ್ನ ವರದಿಗಳನ್ನು ಸಹಿಸದ ಸರ್ಕಾರ ನಿರಂತರವಾಗಿ ದುರುದ್ದೇಶಪೂರಿತ ದಾಳಿ ನಡೆಸುತ್ತಿರುವುದರಿಂದ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಅಮ್ನೆಸ್ಟಿ ಆರೋಪಿಸಿತ್ತು.

ಇದನ್ನೂ ಓದಿ: ಸರ್ಕಾರದ ದುರುದ್ದೇಶಪೂರಿತ ದಾಳಿ ಆರೋಪ: ಭಾರತದಲ್ಲಿ ಕಾರ್ಯಾಚರಣೆ ಸ್ಥಗಿತಗೊಳಿಸಲಿದೆ ಅಮ್ನೆಸ್ಟಿ ಇಂಟರ್‌ನ್ಯಾಷನಲ್

ಇತ್ತೀಚೆಗೆ ನಡೆದ ದೆಹಲಿ ಗಲಭೆ ಮತ್ತು ಕಾಶ್ಮೀರದ ಸ್ವಾಯುತ್ತ ಸ್ಥಾನಮಾನ ರದ್ದುಗೊಳಿಸಿದ ನಂತರ ಅಮ್ನೆಸ್ಟಿ ಈ ವಿಷಯಗಳಲ್ಲಿ ಗಂಭೀರ ಮಾನವ ಹಕ್ಕು ಉಲ್ಲಂಘನೆಯಾಗಿದೆ ಎಂದು ತನ್ನ ವರದಿಗಳನ್ನ ಬಿಡುಗಡೆಗೊಳಿಸಿತ್ತು. ಇದರ ಪರಿಣಾಮವಾಗಿ ಸರ್ಕಾರ ತನ್ನ ಮೇಲೆ ಮುಗಿಬಿದ್ದಿದೆ ಎಂದು ಅಮ್ನೆಸ್ಟಿ ಆರೋಪಿಸಿತ್ತು.

ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ (ಎಫ್‌ಸಿಆರ್‌ಎ)ಯ ನಿಯಮಗಳನ್ನು ಉಲ್ಲಂಘಿಸಲಾಗುತ್ತಿದೆ. ಕಾನೂನುಬಾಹಿರವಾಗಿ ವಿದೇಶಿ ದೇಣಿಗೆಗಳನ್ನು ಪಡೆಯಲಾಗಿದೆ ಎಂಬ ಆರೋಪದಡಿಯಲ್ಲಿ ಕೆಲವು ವರ್ಷಗಳಿಂದ ಭಾರತದ ಹಲವು ತನಿಖಾ ಸಂಸ್ಥೆಗಳು ಅಮ್ನೆಸ್ಟಿ ಇಂಟರ್‌ ನ್ಯಾಷನಲ್‌ ಅನ್ನು ತನಿಖೆಗೊಳಪಡಿಸಿದ್ದವು.

ಇದನ್ನೂ ಓದಿ: ಭಾರತ ಏಷ್ಯಾದಲ್ಲೇ ಅತ್ಯಂತ ಭ್ರಷ್ಟ ದೇಶ: ಸಮೀಕ್ಷಾ ವರದಿ

ಆದರೆ, ಸಂಸ್ಥೆಯು ತನ್ನ ಪತ್ರಿಕಾ ಹೇಳಿಕೆಯಲ್ಲಿ, “ಇದು ಆಧಾರ ರಹಿತ ಮತ್ತು ದುರುದ್ದೇಶ ಪ್ರೇರಿತ ಆರೋಪ. ಭಾರತ ಸರ್ಕಾರವು ಅಮ್ನೆಸ್ಟಿ ಇಂಟರ್‌ನ್ಯಾಷನಲ್ ಇಂಡಿಯಾದ ಬ್ಯಾಂಕ್ ಖಾತೆಗಳನ್ನು ತಡೆಹಿಡಿದಿದೆ. ಇದು ಸಂಸ್ಥೆಯ ಎಲ್ಲಾ ಕೆಲಸಗಳ ಮೇಲೆ ಪರಿಣಾಮ ಬೀರಿದೆ. ಭಾರತದಲ್ಲಿನ ಸಿಬ್ಬಂದಿಯನ್ನು ಕೆಲಸದಿಂದ ಕೈಬಿಟ್ಟು, ತನ್ನ ಎಲ್ಲಾ ಸಂಶೋಧನಾ ಕಾರ್ಯಗಳನ್ನು ನಿಲ್ಲಿಸುವಂತೆ ಒತ್ತಾಯಿಸಲಾಗಿದೆ. ಆದರೆ ನಾವು ಭಾರತೀಯ ಮತ್ತು ಅಂತರಾಷ್ಟ್ರೀಯ ಎಲ್ಲಾ ಕಾನೂನುಗಳನ್ನು ಪಾಲಿಸಿದ್ದೇವೆ” ಎಂದು ಹೇಳಿತ್ತು.

“ಕಳೆದ 2 ವರ್ಷಗಳಿಂದ ಅಮ್ನೆಸ್ಟಿ ಇಂಟರ್‌ನ್ಯಾಷನಲ್ ಇಂಡಿಯಾದ ಮೇಲೆ ನಿರಂತರವಾಗಿ ನಡೆಯುತ್ತಿರುವ ದಾಳಿ ಮತ್ತು ಇತ್ತೀಚೆಗೆ ಬ್ಯಾಂಕ್ ಖಾತೆಗಳನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಿರುವುದು ಆಕಸ್ಮಿಕವೇನಲ್ಲ. ಇತ್ತೀಚೆಗೆ ನಡೆದ ದೆಹಲಿ ಗಲಭೆ ಮತ್ತು ಜಮ್ಮು ಕಾಶ್ಮೀರದಲ್ಲಿ ನಡೆದ ಗಂಭೀರ ಮಾನವ ಹಕ್ಕುಗಳ ಉಲ್ಲಂಘನೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಮತ್ತು ಭಾರತ ಸರ್ಕಾರದ ಹೊಣೆಗಾರಿಕೆಯನ್ನು ಪ್ರಶ್ನಿಸಿ, ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆಯನ್ನು ಕೋರಿದ್ದಕ್ಕಾಗಿ, ಜಾರಿ ನಿರ್ದೇಶನಾಲಯ ಸೇರಿದಂತೆ ಇತರೆ ಸರ್ಕಾರಿ ಸಂಸ್ಥೆಗಳು ನಮಗೆ ಕಿರುಕುಳ ನೀಡುತ್ತಿವೆ” ಎಂದು ಅಮ್ನೆಸ್ಟಿ ಇಂಟರ್‌ನ್ಯಾಷನಲ್‌ನ ಕಾರ್ಯನಿರ್ವಾಹಕ ನಿರ್ದೇಶಕ ಅವಿನಾಶ್ ಹೇಳಿದ್ದರು.


ಇದನ್ನೂ ಓದಿ: ಭಾರತದ ಸಂಸ್ಕೃತಿಯೆಂದರೆ ಕೇವಲ ವೈದಿಕ ಸಂಸ್ಕೃತಿಯೇ?: ಭಾರತೀಯ ಸಂಸ್ಕೃತಿ ಅಧ್ಯಯನದ ಹಿಂದಿನ ಹುನ್ನಾರಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...