Homeಮುಖಪುಟಅಮ್ಫಾನ್ ಚಂಡಮಾರುತ: ಭಾರೀ ಮಳೆ - ಪರಿಹಾರ ಕಾರ್ಯಕ್ಕೆ NDRF ಪಡೆಗಳ ನಿಯೋಜನೆ

ಅಮ್ಫಾನ್ ಚಂಡಮಾರುತ: ಭಾರೀ ಮಳೆ – ಪರಿಹಾರ ಕಾರ್ಯಕ್ಕೆ NDRF ಪಡೆಗಳ ನಿಯೋಜನೆ

- Advertisement -
- Advertisement -

ಅಮ್ಫಾನ್ ಚಂಡಮಾರುತ ಪಶ್ಚಿಮ ಬಂಗಾಳ, ಒಡಿಶಾ ಮತ್ತು ಈಶಾನ್ಯ ರಾಜ್ಯಗಳ ಕರಾವಳಿ ತೀರಕ್ಕೆ ಅಪ್ಪಳಿಸಿರುವ ಹಿನ್ನೆಲೆಯಲ್ಲಿ ಪರಿಹಾರ ಕಾರ್ಯಗಳನ್ನು ಕೈಗೊಳ್ಳಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಗಳ 19 ತಂಡಗಳನ್ನು ನಿಯೋಜಿಸಲಾಗಿದೆ. ವ್ಯಾಪಕವಾಗಿ ಮಳೆ ಸುರಿಯುತ್ತಿದ್ದು ತಗ್ಗುಪ್ರದೇಶಗಳಿಗೆ ಭಾರೀ ಪ್ರಮಾಣದ ನೀರು ನುಗ್ಗಿ ಅವಾಂತರ ಸೃಷ್ಟಿಸಿದೆ.

ಚಂಡಮಾರುತದ ಹಿನ್ನೆಲೆಯಲ್ಲಿ ಈಶಾನ್ಯ ರಾಜ್ಯಗಳಿಗೆ ವಲಸೆ ಕಾರ್ಮಿಕರು ತೆರಳುತ್ತಿದ್ದ ಕೆಲವು ರೈಲುಗಳ ಮಾರ್ಗ ಬದಲಾಯಿಸಲಾಗಿದೆ. ಪಶ್ಚಿಮಬಂಗಾಳ ಮತ್ತು ಒಡಿಶಾಕ್ಕೆ ತೆರಳಬೇಕಾಗಿದ್ದ ಶ್ರಮಿಕ ವಿಶೇಷ ರೈಲುಗಳನ್ನು ಸರ್ಕಾರ ರದ್ದುಗೊಳಿಸಿದೆ.

ಬಿರುಗಾಳಿ ಸಹಿತ ಭಾರೀ ಮಳೆ ಸುರಿಯುತ್ತಿರುವುದರಿಂದ ವಿದ್ಯುತ್, ದೂರ ಸಂಪರ್ಕ ಕಂಬಗಳು ಧರೆಗುರುಳಿವೆ. ಸಾಕಷ್ಟು ಮರಗಳು ಬುಡಮೇಲಾಗಿವೆ. ಕೊಲ್ಕತ್ತಾದ ಕೆಲವು ಪ್ರದೇಶಗಳು ನೀರಿನಿಂದ ಜಲಾವೃತವಾಗಿವೆ.

ಬಂಗಾಳ ಕೊಲ್ಲಿಯಲ್ಲಿ 4 ರಿಂದ 5 ಮೀಟರ್ ಎತ್ತರದ ಬೃಹತ್ ಅಲೆಗಳು ಕರಾವಳಿ ತೀರವನ್ನು ಅಪ್ಪಳಿಸುತ್ತಿವೆ. ಭಾರೀ ಮಳೆಯೂ ಸುರಿಯುತ್ತಿದೆ. ಸಂಕಷ್ಟಕ್ಕೆ ಸಿಲುಕಿರುವ ಜನರನ್ನು ರಕ್ಷಿಸಲು ನಗರದಲ್ಲಿ 9 ಸಾವಿರ ಮಂದಿ ಪೊಲೀಸ್ ಅಧಿಕಾರಿಗಳನ್ನು ಸನ್ನದ್ದುಗೊಳಿಸಿದೆ.

ಕೊಲ್ಕತ್ತಾದಲ್ಲಿ ಖಾಲಿ ಇರುವ ಸರ್ಕಾರಿ ಶಾಲೆಗಳು ಮತ್ತು ಸಮುದಾಯ ಕೇಂದ್ರಗಳನ್ನು ಪರಿಹಾರ ಕೇಂದ್ರಗಳನ್ನಾಗಿ ಪರಿವರ್ತಿಸಲಾಗಿದೆ. ಚಂಡಮಾರುತಕ್ಕೆ ಸಿಲುಕಿರುವ ಜನರನ್ನು ಪರಿಹಾರ ಕೇಂದ್ರಗಳಲ್ಲಿಟ್ಟು ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿದೆ.

ಪಶ್ಚಿಮಬಂಗಾಳ ಮತ್ತು ಒಡಿಶಾದ ಕರಾವಳಿ ತೀರದಲ್ಲಿ ವಾಸವಿದ್ದ 3 ಲಕ್ಷ ಜರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗಿದೆ. ದಕ್ಷಿಣ 24 ಪಗರಣ, ಉತ್ತರ 24 ಪಗರಣ ಜಿಲ್ಲೆಗಳ ಪೂರ್ವ ಮತ್ತು ಪಶ್ಚಿಮ ಮಿಡ್ನಾಪುರದ ಜನರನ್ನು ಸ್ಥಳಾಂತರ ಮಾಡಿದೆ.

ಮುಖ್ಯಮಂತ್ರಿ ಮಮತ ಬ್ಯಾನರ್ಜಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಜನರು ಮನೆಯಲ್ಲೇ ಇರುವಂತೆ ಮನವಿ ಮಾಡಿದ್ದಾರೆ.

ಭಾರತೀಯ ನೌಕಾಪಡೆ ಪರಿಹಾರ ಕಾರ್ಯ ಕೈಗೊಳ್ಳಲು ತಂಡಗಳನ್ನು ಕೊಲ್ಕತ್ತಾ ಮತ್ತು ಒಡಿಶಾಕ್ಕೆ ಕಳಿಸಿದೆ. ಬಿರುಗಾಳಿ ಸಹಿತ ವ್ಯಾಪಕ ಮಳೆ ಸುರಿಯುತ್ತಿದ್ದು ರಕ್ಷಣಾ ಕಾರ್ಯಗಳು ಭರದಿಂದ ಸಾಗಿವೆ.

ಈ ಮಧ್ಯೆ ಬಾಂಗ್ಲಾದೇಶದ ಕರಾವಳಿ ತೀರವೂ ಅಮ್ಪಾನ್ ಚಂಡಮಾರುತಕ್ಕೆ ತುತ್ತಾಗಿದೆ. ಈವರೆಗೆ ಒಬ್ಬರು ಸಾವನಪ್ಪಿದ್ದಾರೆ. ಹೀಗಾಗಿ ಅಲ್ಲಿನ ಸರ್ಕಾರ 20 ಲಕ್ಷ ಜನರನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರ ಮಾಡಿದೆ ಎಂದು ವರದಿಗಳು ತಿಳಿಸಿವೆ.


ಓದಿ: ‘ಅಮ್ಫಾನ್’ ಚಂಡಮಾರುತ ಸೂಪರ್ ಸೈಕ್ಲೋನ್ ಆಗಲಿದೆ: ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...