Homeಮುಖಪುಟಅಮ್ಫಾನ್ ಚಂಡಮಾರುತ: ಭಾರೀ ಮಳೆ - ಪರಿಹಾರ ಕಾರ್ಯಕ್ಕೆ NDRF ಪಡೆಗಳ ನಿಯೋಜನೆ

ಅಮ್ಫಾನ್ ಚಂಡಮಾರುತ: ಭಾರೀ ಮಳೆ – ಪರಿಹಾರ ಕಾರ್ಯಕ್ಕೆ NDRF ಪಡೆಗಳ ನಿಯೋಜನೆ

- Advertisement -
- Advertisement -

ಅಮ್ಫಾನ್ ಚಂಡಮಾರುತ ಪಶ್ಚಿಮ ಬಂಗಾಳ, ಒಡಿಶಾ ಮತ್ತು ಈಶಾನ್ಯ ರಾಜ್ಯಗಳ ಕರಾವಳಿ ತೀರಕ್ಕೆ ಅಪ್ಪಳಿಸಿರುವ ಹಿನ್ನೆಲೆಯಲ್ಲಿ ಪರಿಹಾರ ಕಾರ್ಯಗಳನ್ನು ಕೈಗೊಳ್ಳಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಗಳ 19 ತಂಡಗಳನ್ನು ನಿಯೋಜಿಸಲಾಗಿದೆ. ವ್ಯಾಪಕವಾಗಿ ಮಳೆ ಸುರಿಯುತ್ತಿದ್ದು ತಗ್ಗುಪ್ರದೇಶಗಳಿಗೆ ಭಾರೀ ಪ್ರಮಾಣದ ನೀರು ನುಗ್ಗಿ ಅವಾಂತರ ಸೃಷ್ಟಿಸಿದೆ.

ಚಂಡಮಾರುತದ ಹಿನ್ನೆಲೆಯಲ್ಲಿ ಈಶಾನ್ಯ ರಾಜ್ಯಗಳಿಗೆ ವಲಸೆ ಕಾರ್ಮಿಕರು ತೆರಳುತ್ತಿದ್ದ ಕೆಲವು ರೈಲುಗಳ ಮಾರ್ಗ ಬದಲಾಯಿಸಲಾಗಿದೆ. ಪಶ್ಚಿಮಬಂಗಾಳ ಮತ್ತು ಒಡಿಶಾಕ್ಕೆ ತೆರಳಬೇಕಾಗಿದ್ದ ಶ್ರಮಿಕ ವಿಶೇಷ ರೈಲುಗಳನ್ನು ಸರ್ಕಾರ ರದ್ದುಗೊಳಿಸಿದೆ.

ಬಿರುಗಾಳಿ ಸಹಿತ ಭಾರೀ ಮಳೆ ಸುರಿಯುತ್ತಿರುವುದರಿಂದ ವಿದ್ಯುತ್, ದೂರ ಸಂಪರ್ಕ ಕಂಬಗಳು ಧರೆಗುರುಳಿವೆ. ಸಾಕಷ್ಟು ಮರಗಳು ಬುಡಮೇಲಾಗಿವೆ. ಕೊಲ್ಕತ್ತಾದ ಕೆಲವು ಪ್ರದೇಶಗಳು ನೀರಿನಿಂದ ಜಲಾವೃತವಾಗಿವೆ.

ಬಂಗಾಳ ಕೊಲ್ಲಿಯಲ್ಲಿ 4 ರಿಂದ 5 ಮೀಟರ್ ಎತ್ತರದ ಬೃಹತ್ ಅಲೆಗಳು ಕರಾವಳಿ ತೀರವನ್ನು ಅಪ್ಪಳಿಸುತ್ತಿವೆ. ಭಾರೀ ಮಳೆಯೂ ಸುರಿಯುತ್ತಿದೆ. ಸಂಕಷ್ಟಕ್ಕೆ ಸಿಲುಕಿರುವ ಜನರನ್ನು ರಕ್ಷಿಸಲು ನಗರದಲ್ಲಿ 9 ಸಾವಿರ ಮಂದಿ ಪೊಲೀಸ್ ಅಧಿಕಾರಿಗಳನ್ನು ಸನ್ನದ್ದುಗೊಳಿಸಿದೆ.

ಕೊಲ್ಕತ್ತಾದಲ್ಲಿ ಖಾಲಿ ಇರುವ ಸರ್ಕಾರಿ ಶಾಲೆಗಳು ಮತ್ತು ಸಮುದಾಯ ಕೇಂದ್ರಗಳನ್ನು ಪರಿಹಾರ ಕೇಂದ್ರಗಳನ್ನಾಗಿ ಪರಿವರ್ತಿಸಲಾಗಿದೆ. ಚಂಡಮಾರುತಕ್ಕೆ ಸಿಲುಕಿರುವ ಜನರನ್ನು ಪರಿಹಾರ ಕೇಂದ್ರಗಳಲ್ಲಿಟ್ಟು ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿದೆ.

ಪಶ್ಚಿಮಬಂಗಾಳ ಮತ್ತು ಒಡಿಶಾದ ಕರಾವಳಿ ತೀರದಲ್ಲಿ ವಾಸವಿದ್ದ 3 ಲಕ್ಷ ಜರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗಿದೆ. ದಕ್ಷಿಣ 24 ಪಗರಣ, ಉತ್ತರ 24 ಪಗರಣ ಜಿಲ್ಲೆಗಳ ಪೂರ್ವ ಮತ್ತು ಪಶ್ಚಿಮ ಮಿಡ್ನಾಪುರದ ಜನರನ್ನು ಸ್ಥಳಾಂತರ ಮಾಡಿದೆ.

ಮುಖ್ಯಮಂತ್ರಿ ಮಮತ ಬ್ಯಾನರ್ಜಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಜನರು ಮನೆಯಲ್ಲೇ ಇರುವಂತೆ ಮನವಿ ಮಾಡಿದ್ದಾರೆ.

ಭಾರತೀಯ ನೌಕಾಪಡೆ ಪರಿಹಾರ ಕಾರ್ಯ ಕೈಗೊಳ್ಳಲು ತಂಡಗಳನ್ನು ಕೊಲ್ಕತ್ತಾ ಮತ್ತು ಒಡಿಶಾಕ್ಕೆ ಕಳಿಸಿದೆ. ಬಿರುಗಾಳಿ ಸಹಿತ ವ್ಯಾಪಕ ಮಳೆ ಸುರಿಯುತ್ತಿದ್ದು ರಕ್ಷಣಾ ಕಾರ್ಯಗಳು ಭರದಿಂದ ಸಾಗಿವೆ.

ಈ ಮಧ್ಯೆ ಬಾಂಗ್ಲಾದೇಶದ ಕರಾವಳಿ ತೀರವೂ ಅಮ್ಪಾನ್ ಚಂಡಮಾರುತಕ್ಕೆ ತುತ್ತಾಗಿದೆ. ಈವರೆಗೆ ಒಬ್ಬರು ಸಾವನಪ್ಪಿದ್ದಾರೆ. ಹೀಗಾಗಿ ಅಲ್ಲಿನ ಸರ್ಕಾರ 20 ಲಕ್ಷ ಜನರನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರ ಮಾಡಿದೆ ಎಂದು ವರದಿಗಳು ತಿಳಿಸಿವೆ.


ಓದಿ: ‘ಅಮ್ಫಾನ್’ ಚಂಡಮಾರುತ ಸೂಪರ್ ಸೈಕ್ಲೋನ್ ಆಗಲಿದೆ: ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...