Homeಮುಖಪುಟಅಮ್ಫಾನ್ ಚಂಡಮಾರುತ: ಭಾರೀ ಮಳೆ - ಪರಿಹಾರ ಕಾರ್ಯಕ್ಕೆ NDRF ಪಡೆಗಳ ನಿಯೋಜನೆ

ಅಮ್ಫಾನ್ ಚಂಡಮಾರುತ: ಭಾರೀ ಮಳೆ – ಪರಿಹಾರ ಕಾರ್ಯಕ್ಕೆ NDRF ಪಡೆಗಳ ನಿಯೋಜನೆ

- Advertisement -
- Advertisement -

ಅಮ್ಫಾನ್ ಚಂಡಮಾರುತ ಪಶ್ಚಿಮ ಬಂಗಾಳ, ಒಡಿಶಾ ಮತ್ತು ಈಶಾನ್ಯ ರಾಜ್ಯಗಳ ಕರಾವಳಿ ತೀರಕ್ಕೆ ಅಪ್ಪಳಿಸಿರುವ ಹಿನ್ನೆಲೆಯಲ್ಲಿ ಪರಿಹಾರ ಕಾರ್ಯಗಳನ್ನು ಕೈಗೊಳ್ಳಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಗಳ 19 ತಂಡಗಳನ್ನು ನಿಯೋಜಿಸಲಾಗಿದೆ. ವ್ಯಾಪಕವಾಗಿ ಮಳೆ ಸುರಿಯುತ್ತಿದ್ದು ತಗ್ಗುಪ್ರದೇಶಗಳಿಗೆ ಭಾರೀ ಪ್ರಮಾಣದ ನೀರು ನುಗ್ಗಿ ಅವಾಂತರ ಸೃಷ್ಟಿಸಿದೆ.

ಚಂಡಮಾರುತದ ಹಿನ್ನೆಲೆಯಲ್ಲಿ ಈಶಾನ್ಯ ರಾಜ್ಯಗಳಿಗೆ ವಲಸೆ ಕಾರ್ಮಿಕರು ತೆರಳುತ್ತಿದ್ದ ಕೆಲವು ರೈಲುಗಳ ಮಾರ್ಗ ಬದಲಾಯಿಸಲಾಗಿದೆ. ಪಶ್ಚಿಮಬಂಗಾಳ ಮತ್ತು ಒಡಿಶಾಕ್ಕೆ ತೆರಳಬೇಕಾಗಿದ್ದ ಶ್ರಮಿಕ ವಿಶೇಷ ರೈಲುಗಳನ್ನು ಸರ್ಕಾರ ರದ್ದುಗೊಳಿಸಿದೆ.

ಬಿರುಗಾಳಿ ಸಹಿತ ಭಾರೀ ಮಳೆ ಸುರಿಯುತ್ತಿರುವುದರಿಂದ ವಿದ್ಯುತ್, ದೂರ ಸಂಪರ್ಕ ಕಂಬಗಳು ಧರೆಗುರುಳಿವೆ. ಸಾಕಷ್ಟು ಮರಗಳು ಬುಡಮೇಲಾಗಿವೆ. ಕೊಲ್ಕತ್ತಾದ ಕೆಲವು ಪ್ರದೇಶಗಳು ನೀರಿನಿಂದ ಜಲಾವೃತವಾಗಿವೆ.

ಬಂಗಾಳ ಕೊಲ್ಲಿಯಲ್ಲಿ 4 ರಿಂದ 5 ಮೀಟರ್ ಎತ್ತರದ ಬೃಹತ್ ಅಲೆಗಳು ಕರಾವಳಿ ತೀರವನ್ನು ಅಪ್ಪಳಿಸುತ್ತಿವೆ. ಭಾರೀ ಮಳೆಯೂ ಸುರಿಯುತ್ತಿದೆ. ಸಂಕಷ್ಟಕ್ಕೆ ಸಿಲುಕಿರುವ ಜನರನ್ನು ರಕ್ಷಿಸಲು ನಗರದಲ್ಲಿ 9 ಸಾವಿರ ಮಂದಿ ಪೊಲೀಸ್ ಅಧಿಕಾರಿಗಳನ್ನು ಸನ್ನದ್ದುಗೊಳಿಸಿದೆ.

ಕೊಲ್ಕತ್ತಾದಲ್ಲಿ ಖಾಲಿ ಇರುವ ಸರ್ಕಾರಿ ಶಾಲೆಗಳು ಮತ್ತು ಸಮುದಾಯ ಕೇಂದ್ರಗಳನ್ನು ಪರಿಹಾರ ಕೇಂದ್ರಗಳನ್ನಾಗಿ ಪರಿವರ್ತಿಸಲಾಗಿದೆ. ಚಂಡಮಾರುತಕ್ಕೆ ಸಿಲುಕಿರುವ ಜನರನ್ನು ಪರಿಹಾರ ಕೇಂದ್ರಗಳಲ್ಲಿಟ್ಟು ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿದೆ.

ಪಶ್ಚಿಮಬಂಗಾಳ ಮತ್ತು ಒಡಿಶಾದ ಕರಾವಳಿ ತೀರದಲ್ಲಿ ವಾಸವಿದ್ದ 3 ಲಕ್ಷ ಜರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗಿದೆ. ದಕ್ಷಿಣ 24 ಪಗರಣ, ಉತ್ತರ 24 ಪಗರಣ ಜಿಲ್ಲೆಗಳ ಪೂರ್ವ ಮತ್ತು ಪಶ್ಚಿಮ ಮಿಡ್ನಾಪುರದ ಜನರನ್ನು ಸ್ಥಳಾಂತರ ಮಾಡಿದೆ.

ಮುಖ್ಯಮಂತ್ರಿ ಮಮತ ಬ್ಯಾನರ್ಜಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಜನರು ಮನೆಯಲ್ಲೇ ಇರುವಂತೆ ಮನವಿ ಮಾಡಿದ್ದಾರೆ.

ಭಾರತೀಯ ನೌಕಾಪಡೆ ಪರಿಹಾರ ಕಾರ್ಯ ಕೈಗೊಳ್ಳಲು ತಂಡಗಳನ್ನು ಕೊಲ್ಕತ್ತಾ ಮತ್ತು ಒಡಿಶಾಕ್ಕೆ ಕಳಿಸಿದೆ. ಬಿರುಗಾಳಿ ಸಹಿತ ವ್ಯಾಪಕ ಮಳೆ ಸುರಿಯುತ್ತಿದ್ದು ರಕ್ಷಣಾ ಕಾರ್ಯಗಳು ಭರದಿಂದ ಸಾಗಿವೆ.

ಈ ಮಧ್ಯೆ ಬಾಂಗ್ಲಾದೇಶದ ಕರಾವಳಿ ತೀರವೂ ಅಮ್ಪಾನ್ ಚಂಡಮಾರುತಕ್ಕೆ ತುತ್ತಾಗಿದೆ. ಈವರೆಗೆ ಒಬ್ಬರು ಸಾವನಪ್ಪಿದ್ದಾರೆ. ಹೀಗಾಗಿ ಅಲ್ಲಿನ ಸರ್ಕಾರ 20 ಲಕ್ಷ ಜನರನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರ ಮಾಡಿದೆ ಎಂದು ವರದಿಗಳು ತಿಳಿಸಿವೆ.


ಓದಿ: ‘ಅಮ್ಫಾನ್’ ಚಂಡಮಾರುತ ಸೂಪರ್ ಸೈಕ್ಲೋನ್ ಆಗಲಿದೆ: ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...