Homeಮುಖಪುಟಲೋಕಸಭೆ ಚುನಾವಣೆ: ಪಂಜಾಬ್‌ನ ಎಲ್ಲಾ ಹಳ್ಳಿಗಳಲ್ಲಿ ಬಿಜೆಪಿ ವಿರುದ್ಧ ಅಭಿಯಾನ

ಲೋಕಸಭೆ ಚುನಾವಣೆ: ಪಂಜಾಬ್‌ನ ಎಲ್ಲಾ ಹಳ್ಳಿಗಳಲ್ಲಿ ಬಿಜೆಪಿ ವಿರುದ್ಧ ಅಭಿಯಾನ

- Advertisement -
- Advertisement -

ಪಂಜಾಬ್‌ನಲ್ಲಿ ಲೋಕಸಭೆ ಚುನಾವಣೆ ಹಿನ್ನೆಲೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದ ಬೆನ್ನಲ್ಲಿ, ಕಿಸಾನ್ ಮಜ್ದೂರ್ ಸಂಘರ್ಷ ಸಮಿತಿ (ಕೆಎಂಎಸ್‌ಸಿ) ಮತ್ತು ಸಂಯುಕ್ತ ಕಿಸಾನ್ ಮೋರ್ಚಾ ಪಂಜಾಬ್‌ನಾದ್ಯಂತ ಎಲ್ಲಾ ಗ್ರಾಮಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ವಿರುದ್ಧ ಅಭಿಯಾನವನ್ನು ಆರಂಭಿಸಿದೆ.

ಪಂಜಾಬ್‌ನ 13,000 ಹಳ್ಳಿಗಳ ನಿವಾಸಿಗಳಿಗೆ ಬಿಜೆಪಿ ಅಭ್ಯರ್ಥಿಗಳು ಪ್ರಚಾರಕ್ಕೆ ಬಂದರೆ ಅವರನ್ನು ಘೇರಾವ್ ಮಾಡಿ ಪ್ರಶ್ನಿಸುವಂತೆ ಮನವಿ ಮಾಡಿದ್ದೇವೆ. ನಮ್ಮ ಮಿತ್ರ ಪಕ್ಷಗಳು ದೇಶಾದ್ಯಂತ ಬಿಜೆಪಿ ವಿರುದ್ಧ ಪ್ರಚಾರ ನಡೆಸಲಿವೆ ಎಂದು ಕಿಸಾನ್ ಮಜ್ದೂರ್ ಸಂಘರ್ಷ ಸಮಿತಿಯ ಸರ್ವಾನ್ ಸಿಂಗ್ ಪಂಧೇರ್ ಹೇಳಿದ್ದಾರೆ.

ಹಲವಾರು ರೈತ ಸಂಘಗಳ ಸದಸ್ಯರು ಅಮೃತಸರದ ಚಬ್ಬಾ ಗ್ರಾಮದಿಂದ ಬಿಜೆಪಿ ವಿರೋಧಿ ಪ್ರಚಾರವನ್ನು ಪ್ರಾರಂಭಿಸಿದರು. ಇದಕ್ಕೂ ಮುನ್ನ ಸಂಗ್ರೂರ್ ಮತ್ತು ಬಟಿಂಡಾ ಜಿಲ್ಲೆಗಳ ಹಲವು ಗ್ರಾಮಗಳಲ್ಲಿ ರೈತರು ಬಿಜೆಪಿ ನಾಯಕರಿಗೆ ಪ್ರವೇಶಕ್ಕೆ ಅನುಮತಿಯಿಲ್ಲ ಎಂದು ಪೋಸ್ಟರ್‌ಗಳನ್ನು ಅಳವಡಿಸಿದ್ದರು. ಬಿಜೆಪಿಯನ್ನು ಬಯಲಿಗೆಳೆಯಿರಿ, ಬಿಜೆಪಿಯನ್ನು ವಿರೋಧಿಸಿ ಹಾಗೂ ಬಿಜೆಪಿಯನ್ನು ಶಿಕ್ಷಿಸಿ ಎಂದು ಪೋಸ್ಟರ್ ಹಾಗೂ ಭಿತ್ತಿ ಪತ್ರಗಳನ್ನು ಕೂಡ ಹಲವು ಹಳ್ಳಿಗಳಲ್ಲಿ ಅಂಟಿಸಲಾಗಿದೆ.

ಕೆಎಂಎಸ್‌ಸಿಯ ಸರ್ವಾನ್ ಸಿಂಗ್ ಪಂಧೇರ್, ಗುರ್ಬಚನ್ ಸಿಂಗ್ ಚಬ್ಬಾ ಮತ್ತು ಗುರ್ಲಾಲ್ ಸಿಂಗ್ ಮಾನ್ ಅವರು ಈ ಅಭಿಯಾನ ಪಂಜಾಬ್‌ನಲ್ಲಿ ಮಾತ್ರವಲ್ಲ, ಬಿಜೆಪಿ ಅಭ್ಯರ್ಥಿಗಳನ್ನು ದೇಶಾದ್ಯಂತ ಹಳ್ಳಿಗಳಿಗೆ ಪ್ರವೇಶಿಸಲು ಬಿಡುವುದಿಲ್ಲ ಎಂದು ಹೇಳಿದ್ದಾರೆ.

ಖಾನೌರಿ ಗಡಿಯಲ್ಲಿ ಹರ್ಯಾಣ ಪೊಲೀಸರೊಂದಿಗೆ ನಡೆದ ಘರ್ಷಣೆಯಲ್ಲಿ ಪ್ರಾಣ ಕಳೆದುಕೊಂಡ ಶುಭಕರನ್ ಸಿಂಗ್ ಅವರ ಫೋಟೋಗಳನ್ನು ಹೊಂದಿರುವ ಬ್ಯಾನರ್‌ಗಳನ್ನು ಮುದ್ರಿಸಲಾಗಿದೆ. ರೈತರನ್ನು ಒಗ್ಗೂಡಿಸಲು ರಾಜ್ಯದಲ್ಲಿ ಬಿರುಸಿನ ಪ್ರಚಾರ ನಡೆಸಲಾಗುವುದು. ಬಿಜೆಪಿ ಅಭ್ಯರ್ಥಿಗಳಿಗೆ ಕೇಳಲು ಪ್ರಶ್ನಾವಳಿಗಳನ್ನು ಸಿದ್ಧಪಡಿಸಲಾಗುವುದು ಮತ್ತು ಕರ ಪತ್ರಗಳನ್ನು ದೊಡ್ಡ ಪ್ರಮಾಣದಲ್ಲಿ ಮುದ್ರಿಸಲಾಗುವುದು ಎಂದು ತಿಳಿಸಿದ್ದಾರೆ.

ದೇಶದಾದ್ಯಂತ ಜಿಲ್ಲಾ ಮಟ್ಟದಲ್ಲಿ ಸಭೆಗಳನ್ನು ನಡೆಸಿ ಮೋದಿ ಸರಕಾರದ ಅಸಲಿಯತ್ತನ್ನು ಬಯಲಿಗೆಳೆಯಲು ಅಭಿಯಾನಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ರೈತ ಮುಖಂಡರು ತಿಳಿಸಿದ್ದಾರೆ.

ಗಡಿ ಸಂಘರ್ಷ ಸಮಿತಿ ಮತ್ತು ಜಮ್ಹೂರಿ ಕಿಸಾನ್ ಸಭಾದ ರೈತ ಮುಖಂಡರಾದ ರತ್ತನ್ ಸಿಂಗ್ ರಾಂಧವಾ ಮತ್ತು ಡಾ.ಸತ್ನಾಮ್ ಸಿಂಗ್ ಅಜ್ನಾಲಾ ಮಾತನಾಡಿ, ಗಡಿ ಭಾಗದ ರೈತರಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಕೇಂದ್ರವು ಪರಿಹರಿಸಲಿಲ್ಲ. ಎಲ್ಲಾ ರೈತ ಸಂಘಗಳು ಬಿಜೆಪಿ ನಾಯಕರನ್ನು ವಿರೋಧಿಸಲು ಮತ್ತು ಹಳ್ಳಿಗಳಲ್ಲಿ ಕಪ್ಪು ಬಾವುಟ ಪ್ರದರ್ಶಿಸಲು ಕರೆ ನೀಡಿವೆ. ಇಡೀ ಕೃಷಿ ಕ್ಷೇತ್ರವನ್ನು ಕಾರ್ಪೊರೇಟ್‌ಗಳಿಗೆ ಹಸ್ತಾಂತರಿಸಲು ಬಿಜೆಪಿ ಮುಂದಾಗಿದೆ. ಪ್ರತಿಭಟನಾ ನಿರತ ರೈತರ ಮೇಲೆ ಹಲ್ಲೆ ನಡೆಸಿ ಕಂಬಿಗಳ ಹಿಂದೆ ತಳ್ಳಲಾಗುತ್ತಿದೆ. ಇದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಹೇಳಿದ್ದಾರೆ.

ಇದನ್ನು ಓದಿ: ದೆಹಲಿ ಅಬಕಾರಿ ನೀತಿ ಪ್ರಕರಣ: ಕೆ. ಕವಿತಾ ಅವರ ಸಿಬಿಐ ವಿಚಾರಣೆಗೆ ಕೋರ್ಟ್ ಅನುಮತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಲಾಢ್ಯರ ಓಲೈಕೆಗಾಗಿ ಸಾಮಾಜಿಕ ನ್ಯಾಯದ ಸಮಾಧಿ..’; ಬಜೆಟ್‌ನಲ್ಲಿ ಅಲೆಮಾರಿ ಸಮುದಾಯಗಳಿಗೆ ಅನ್ಯಾಯ

'ಬಲಾಢ್ಯರ ಓಲೈಕೆಗಾಗಿ ಸಾಮಾಜಿಕ ನ್ಯಾಯದ ಸಮಾಧಿ ಮಾಡಲಾಗಿದೆ; ಬಜೆಟ್‌ನಲ್ಲಿ ಅಲೆಮಾರಿ ಸಮುದಾಯಗಳಿಗೆ ಅನ್ಯಾಯ ಮಾಡಲಾಗಿದೆ ಎಂದು 'ಕರ್ನಾಟಕ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾಒಕ್ಕೂಟ' ಸಿದ್ದರಾಮಯ್ಯ ಅವರ ಬಜೆಟ್‌ ಕುರಿತು ಅಸಮಾಧಾನ ಹೊರಹಾಕಿದೆ. ಈ ಕುರಿತು...

ಒಳಮೀಸಲಾತಿ ಇಲ್ಲದೇ ಉದ್ಯೋಗ ಭರ್ತಿಗೆ ವಿರೋಧ; ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ

ಒಳಮೀಸಲಾತಿ ಇಲ್ಲದೇ 56 ಸಾವಿರ ಉದ್ಯೋಗ ಭರ್ತಿಗೆ ಮುಂದಾಗಿರುವ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಒಳಮೀಸಲಾತಿ ಹೋರಾಟಗಾರರು ವಿರೋಧ ವ್ಯಕ್ತಪಡಿಸಿದ್ದು, ಇದೇ ತಿಂಗಳ 12 ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಗೆ ಕರೆ ಕೊಟ್ಟಿದ್ದಾರೆ. ಈ...

ನಾಸಿರ್–ಜುನೈದ್ ಕೊಲೆ ಪ್ರಕರಣ: ಜಾಮೀನಿನ ಮೇಲೆ ಹೊರಬಂದ ಹಿಂದುತ್ವ ಕಾರ್ಯಕರ್ತ ಮೋನು ಮಾನೇಸರ್ ಗೆ ಗುರುಗ್ರಾಮದಲ್ಲಿ ಭವ್ಯ ಸ್ವಾಗತ 

2023 ರಲ್ಲಿ ಹರಿಯಾಣದಲ್ಲಿ ಗೋರಕ್ಷಣೆ ಹೆಸರಿನಲ್ಲಿ ಇಬ್ಬರು ಮುಸ್ಲಿಂ ಪುರುಷರ ಹತ್ಯೆ ಪ್ರಕರಣದ ಆರೋಪಿಯಾಗಿರುವ ಹಿಂದುತ್ವ ಕಾರ್ಯಕರ್ತ ಮೋನು ಮಾನೇಸರ್ ಅವರಿಗೆ ರಾಜಸ್ಥಾನ ಹೈಕೋರ್ಟ್ ಜಾಮೀನು ನೀಡಿದ ನಂತರ ಶನಿವಾರ ಸಂಜೆ ಭರತ್‌ಪುರ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ನಾಯಕರನ್ನು ಗುರಿಯಾಗಿಸುವ ಇಸ್ರೇಲ್ ಬೆದರಿಕೆಗೆ ಚೀನಾ ವಿರೋಧ

ಇರಾನ್‌ನಲ್ಲಿ ಸರ್ವೋಚ್ಛ ನಾಯಕರಾಗಿ ಯಾರೇ ಆಯ್ಕೆಯಾದರು ಅವರು ನಮ್ಮ ಮುಂದಿನ ಗುರಿಯಾಗಿರುತ್ತಾರೆ ಎಂದು ಬೆದರಿಕೆ ಹಾಕಿದ್ದ ಇಸ್ರೇಲ್ ನಡೆಯನ್ನು ಚೀನಾ ಖಂಡಿಸಿದೆ. ಸದ್ಯ ಸರ್ವೋಚ್ಛ ನಾಯಕರಾಗಿ ನೇಮಕವಾಗಿರುವ ಅಲಿ ಖಮೇನಿ ಅವರ ಪುತ್ರ...

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಒತ್ತಾಯ : ಸಂಸತ್ ಆವರಣದಲ್ಲಿ ವಿಪಕ್ಷ ಸಂಸದರಿಂದ ಪ್ರತಿಭಟನೆ

ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಚರ್ಚೆಗೆ ಒತ್ತಾಯಿಸಿ ಮತ್ತು ಅದಕ್ಕೆ ಸಂಬಂಧಿಸಿದ ನಿರ್ಣಾಯಕ ವಿಷಯಗಳ ಬಗ್ಗೆ ಸರ್ಕಾರ ಮೌನ ವಹಿಸಿರುವುದನ್ನು ಖಂಡಿಸಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿಪಕ್ಷ ನಾಯಕ ರಾಹುಲ್...

ಇರಾನಿನ ತೈಲ ಸಂಗ್ರಹಾಗಾರಗಳ ಮೇಲೆ ಇಸ್ರೇಲ್ ದಾಳಿ; ಅಮೆರಿಕಾ ಅಸಮಾಧಾನಗೊಂಡಿರುವುದಾಗಿ ವರದಿ

ವಾಷಿಂಗ್ಟನ್, ಡಿಸಿ: ಇರಾನಿನ ಇಂಧನ ಮೂಲಸೌಕರ್ಯವನ್ನು ಗುರಿಯಾಗಿಸಿಕೊಂಡು ಇಸ್ರೇಲ್ ನಡೆಸಿದ ದೊಡ್ಡ ಪ್ರಮಾಣದ ವೈಮಾನಿಕ ದಾಳಿಯ ಬಗ್ಗೆ ಅಮೆರಿಕ ಮತ್ತು ಇಸ್ರೇಲ್ ನಡುವೆ ಭಿನ್ನಾಭಿಪ್ರಾಯ ಹೊರಹೊಮ್ಮಿದೆ ಎಂದು ವರದಿಯಾಗಿದೆ. ಅಮೆರಿಕದ ಅಧಿಕಾರಿಗಳು ಕಾರ್ಯಾಚರಣೆಯ...

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಪ್ರತಿಪಕ್ಷಗಳು ಪಟ್ಟು : ಲೋಕಸಭೆ ಕಲಾಪ ಮುಂದೂಡಿಕೆ

ಲೋಕಸಭೆಯ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರ (ಮಾ.9) ಭಾರೀ ಗದ್ದಲದೊಂದಿಗೆ ಆರಂಭಗೊಂಡಿತು. ಪಶ್ಚಿಮ ಏಷ್ಯಾದ ಪರಿಸ್ಥಿತಿಯ ಕುರಿತು ಚರ್ಚಿಸಲು ಆಗ್ರಹಿಸಿ ಪ್ರತಿಪಕ್ಷಗಳು ತೀವ್ರ ಪ್ರತಿಭಟನೆ ನಡೆಸಿದ ಹಿನ್ನೆಲೆ, ಸ್ಪೀಕರ್...

Parliament Budget Session | ಇಂಧನ ಭದ್ರತೆ ಕುರಿತು ಮಲ್ಲಿಕಾರ್ಜುನ ಖರ್ಗೆ ಪ್ರಸ್ತಾಪ : ರಾಜ್ಯಸಭೆಯಲ್ಲಿ ಗದ್ದಲ

ಸಂಸತ್ತಿನ 2026-27ನೇ ಸಾಲಿನ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರದಿಂದ (ಮಾ.9) ಪ್ರಾರಂಭಗೊಂಡಿವೆ. ಮೊದಲ ದಿನ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆ ಅವರು...

ಯುದ್ಧದ ನಡುವೆಯೇ ಇರಾನ್‌ನ ನೂತನ ಸರ್ವೋಚ್ಚ ನಾಯಕನಾಗಿ ಖಮೇನಿ ಪುತ್ರ ಮೊಜ್ತಬಾ ನೇಮಕ

ಇರಾನ್‌ನ ತಜ್ಞರ ಸಭೆಯು ಮೊಜ್ತಾಬಾ ಖಮೇನಿ ಅವರನ್ನು ಅವರ ತಂದೆ ಅಯತೊಲ್ಲಾ ಅಲಿ ಖಮೇನಿ ಅವರ ಸ್ಥಾನಕ್ಕೆ ದೇಶದ ಹೊಸ ಸರ್ವೋಚ್ಚ ನಾಯಕನನ್ನಾಗಿ ಘೋಷಿಸಿದೆ ಎಂದು ರಾಜ್ಯ ಮಾಧ್ಯಮ ಭಾನುವಾರ ವರದಿ ಮಾಡಿದೆ. "ತಜ್ಞರ...

‘ಮಧ್ಯಪ್ರಾಚ್ಯ ಉದ್ವಿಗ್ನತೆ’: ಸೌದಿ ವಸತಿ ಪ್ರದೇಶದ ಮೇಲಿನ ಕ್ಷಿಪಣಿ ದಾಳಿಯಲ್ಲಿ ಯಾವುದೇ ಭಾರತೀಯ ಸಾವನ್ನಪ್ಪಿಲ್ಲ; ರಿಯಾದ್‌ ರಾಯಭಾರ ಕಚೇರಿ

ಸೌದಿ ಅರೇಬಿಯಾದ ವಸತಿ ಸ್ಥಳದ ಮೇಲೆ ಭಾನುವಾರ ಶೆಲ್ ಬಿದ್ದ ಪರಿಣಾಮ ಯಾವುದೇ ಭಾರತೀಯ ಸಾವು ಸಂಭವಿಸಿಲ್ಲ ಎಂದು ರಿಯಾದ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ದೃಢಪಡಿಸಿದೆ. ಸೌದಿ ಅರೇಬಿಯಾದ ಅಲ್-ಖಾರ್ಜ್ ಗವರ್ನರೇಟ್‌ನಲ್ಲಿರುವ ವಸತಿ ಪ್ರದೇಶದಲ್ಲಿ...