Homeಮುಖಪುಟಲೋಕಸಭೆ ಚುನಾವಣೆ: ಪಂಜಾಬ್‌ನ ಎಲ್ಲಾ ಹಳ್ಳಿಗಳಲ್ಲಿ ಬಿಜೆಪಿ ವಿರುದ್ಧ ಅಭಿಯಾನ

ಲೋಕಸಭೆ ಚುನಾವಣೆ: ಪಂಜಾಬ್‌ನ ಎಲ್ಲಾ ಹಳ್ಳಿಗಳಲ್ಲಿ ಬಿಜೆಪಿ ವಿರುದ್ಧ ಅಭಿಯಾನ

- Advertisement -
- Advertisement -

ಪಂಜಾಬ್‌ನಲ್ಲಿ ಲೋಕಸಭೆ ಚುನಾವಣೆ ಹಿನ್ನೆಲೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದ ಬೆನ್ನಲ್ಲಿ, ಕಿಸಾನ್ ಮಜ್ದೂರ್ ಸಂಘರ್ಷ ಸಮಿತಿ (ಕೆಎಂಎಸ್‌ಸಿ) ಮತ್ತು ಸಂಯುಕ್ತ ಕಿಸಾನ್ ಮೋರ್ಚಾ ಪಂಜಾಬ್‌ನಾದ್ಯಂತ ಎಲ್ಲಾ ಗ್ರಾಮಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ವಿರುದ್ಧ ಅಭಿಯಾನವನ್ನು ಆರಂಭಿಸಿದೆ.

ಪಂಜಾಬ್‌ನ 13,000 ಹಳ್ಳಿಗಳ ನಿವಾಸಿಗಳಿಗೆ ಬಿಜೆಪಿ ಅಭ್ಯರ್ಥಿಗಳು ಪ್ರಚಾರಕ್ಕೆ ಬಂದರೆ ಅವರನ್ನು ಘೇರಾವ್ ಮಾಡಿ ಪ್ರಶ್ನಿಸುವಂತೆ ಮನವಿ ಮಾಡಿದ್ದೇವೆ. ನಮ್ಮ ಮಿತ್ರ ಪಕ್ಷಗಳು ದೇಶಾದ್ಯಂತ ಬಿಜೆಪಿ ವಿರುದ್ಧ ಪ್ರಚಾರ ನಡೆಸಲಿವೆ ಎಂದು ಕಿಸಾನ್ ಮಜ್ದೂರ್ ಸಂಘರ್ಷ ಸಮಿತಿಯ ಸರ್ವಾನ್ ಸಿಂಗ್ ಪಂಧೇರ್ ಹೇಳಿದ್ದಾರೆ.

ಹಲವಾರು ರೈತ ಸಂಘಗಳ ಸದಸ್ಯರು ಅಮೃತಸರದ ಚಬ್ಬಾ ಗ್ರಾಮದಿಂದ ಬಿಜೆಪಿ ವಿರೋಧಿ ಪ್ರಚಾರವನ್ನು ಪ್ರಾರಂಭಿಸಿದರು. ಇದಕ್ಕೂ ಮುನ್ನ ಸಂಗ್ರೂರ್ ಮತ್ತು ಬಟಿಂಡಾ ಜಿಲ್ಲೆಗಳ ಹಲವು ಗ್ರಾಮಗಳಲ್ಲಿ ರೈತರು ಬಿಜೆಪಿ ನಾಯಕರಿಗೆ ಪ್ರವೇಶಕ್ಕೆ ಅನುಮತಿಯಿಲ್ಲ ಎಂದು ಪೋಸ್ಟರ್‌ಗಳನ್ನು ಅಳವಡಿಸಿದ್ದರು. ಬಿಜೆಪಿಯನ್ನು ಬಯಲಿಗೆಳೆಯಿರಿ, ಬಿಜೆಪಿಯನ್ನು ವಿರೋಧಿಸಿ ಹಾಗೂ ಬಿಜೆಪಿಯನ್ನು ಶಿಕ್ಷಿಸಿ ಎಂದು ಪೋಸ್ಟರ್ ಹಾಗೂ ಭಿತ್ತಿ ಪತ್ರಗಳನ್ನು ಕೂಡ ಹಲವು ಹಳ್ಳಿಗಳಲ್ಲಿ ಅಂಟಿಸಲಾಗಿದೆ.

ಕೆಎಂಎಸ್‌ಸಿಯ ಸರ್ವಾನ್ ಸಿಂಗ್ ಪಂಧೇರ್, ಗುರ್ಬಚನ್ ಸಿಂಗ್ ಚಬ್ಬಾ ಮತ್ತು ಗುರ್ಲಾಲ್ ಸಿಂಗ್ ಮಾನ್ ಅವರು ಈ ಅಭಿಯಾನ ಪಂಜಾಬ್‌ನಲ್ಲಿ ಮಾತ್ರವಲ್ಲ, ಬಿಜೆಪಿ ಅಭ್ಯರ್ಥಿಗಳನ್ನು ದೇಶಾದ್ಯಂತ ಹಳ್ಳಿಗಳಿಗೆ ಪ್ರವೇಶಿಸಲು ಬಿಡುವುದಿಲ್ಲ ಎಂದು ಹೇಳಿದ್ದಾರೆ.

ಖಾನೌರಿ ಗಡಿಯಲ್ಲಿ ಹರ್ಯಾಣ ಪೊಲೀಸರೊಂದಿಗೆ ನಡೆದ ಘರ್ಷಣೆಯಲ್ಲಿ ಪ್ರಾಣ ಕಳೆದುಕೊಂಡ ಶುಭಕರನ್ ಸಿಂಗ್ ಅವರ ಫೋಟೋಗಳನ್ನು ಹೊಂದಿರುವ ಬ್ಯಾನರ್‌ಗಳನ್ನು ಮುದ್ರಿಸಲಾಗಿದೆ. ರೈತರನ್ನು ಒಗ್ಗೂಡಿಸಲು ರಾಜ್ಯದಲ್ಲಿ ಬಿರುಸಿನ ಪ್ರಚಾರ ನಡೆಸಲಾಗುವುದು. ಬಿಜೆಪಿ ಅಭ್ಯರ್ಥಿಗಳಿಗೆ ಕೇಳಲು ಪ್ರಶ್ನಾವಳಿಗಳನ್ನು ಸಿದ್ಧಪಡಿಸಲಾಗುವುದು ಮತ್ತು ಕರ ಪತ್ರಗಳನ್ನು ದೊಡ್ಡ ಪ್ರಮಾಣದಲ್ಲಿ ಮುದ್ರಿಸಲಾಗುವುದು ಎಂದು ತಿಳಿಸಿದ್ದಾರೆ.

ದೇಶದಾದ್ಯಂತ ಜಿಲ್ಲಾ ಮಟ್ಟದಲ್ಲಿ ಸಭೆಗಳನ್ನು ನಡೆಸಿ ಮೋದಿ ಸರಕಾರದ ಅಸಲಿಯತ್ತನ್ನು ಬಯಲಿಗೆಳೆಯಲು ಅಭಿಯಾನಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ರೈತ ಮುಖಂಡರು ತಿಳಿಸಿದ್ದಾರೆ.

ಗಡಿ ಸಂಘರ್ಷ ಸಮಿತಿ ಮತ್ತು ಜಮ್ಹೂರಿ ಕಿಸಾನ್ ಸಭಾದ ರೈತ ಮುಖಂಡರಾದ ರತ್ತನ್ ಸಿಂಗ್ ರಾಂಧವಾ ಮತ್ತು ಡಾ.ಸತ್ನಾಮ್ ಸಿಂಗ್ ಅಜ್ನಾಲಾ ಮಾತನಾಡಿ, ಗಡಿ ಭಾಗದ ರೈತರಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಕೇಂದ್ರವು ಪರಿಹರಿಸಲಿಲ್ಲ. ಎಲ್ಲಾ ರೈತ ಸಂಘಗಳು ಬಿಜೆಪಿ ನಾಯಕರನ್ನು ವಿರೋಧಿಸಲು ಮತ್ತು ಹಳ್ಳಿಗಳಲ್ಲಿ ಕಪ್ಪು ಬಾವುಟ ಪ್ರದರ್ಶಿಸಲು ಕರೆ ನೀಡಿವೆ. ಇಡೀ ಕೃಷಿ ಕ್ಷೇತ್ರವನ್ನು ಕಾರ್ಪೊರೇಟ್‌ಗಳಿಗೆ ಹಸ್ತಾಂತರಿಸಲು ಬಿಜೆಪಿ ಮುಂದಾಗಿದೆ. ಪ್ರತಿಭಟನಾ ನಿರತ ರೈತರ ಮೇಲೆ ಹಲ್ಲೆ ನಡೆಸಿ ಕಂಬಿಗಳ ಹಿಂದೆ ತಳ್ಳಲಾಗುತ್ತಿದೆ. ಇದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಹೇಳಿದ್ದಾರೆ.

ಇದನ್ನು ಓದಿ: ದೆಹಲಿ ಅಬಕಾರಿ ನೀತಿ ಪ್ರಕರಣ: ಕೆ. ಕವಿತಾ ಅವರ ಸಿಬಿಐ ವಿಚಾರಣೆಗೆ ಕೋರ್ಟ್ ಅನುಮತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...