Homeಮುಖಪುಟಅಮೃತಾ ರಕ್ಷಿದಿಯವರ ಐದು ಪುಸ್ತಕಗಳ ಗುಚ್ಛ ಅಮೃತಯಾನ...

ಅಮೃತಾ ರಕ್ಷಿದಿಯವರ ಐದು ಪುಸ್ತಕಗಳ ಗುಚ್ಛ ಅಮೃತಯಾನ…

ಒಂಟಿ ಮನೆಯ ಪುಟಾಣಿ, ಪುಟ್ಟ ಮಗುವಿನ ಶಾಲಾ ದಿನಗಳು, ತನ್ನೊಳಗಿನ ಪ್ರಪಂಚ, ಕನಸುಗಳ ಲೋಕದಲ್ಲಿ ಮತ್ತು ಅಂತರಂಗದ ಪಯಣ. ಈ ಪುಸ್ತಕಗಳು ಏನನ್ನು ಹೇಳುತ್ತವೆ ಎಂದು ಶೀರ್ಷಿಕೆಗಳು ನೇರವಾಗಿಯೇ ಧ್ವನಿಸುತ್ತವೆ.

- Advertisement -
- Advertisement -

ಪುಟಕಿಟ್ಟ ಪುಟಗಳು

  • ಯೋಗೇಶ್‌ ಮಾಸ್ಟರ್‌

‍“ನಾವು ಹೈಟೆಕ್ ಯುಗದಲ್ಲಿದ್ದೇವೆ. ಇಷ್ಟೊಂದು ಮುಂದುವರಿದಿದ್ದೇವೆ. ಹಳ್ಳಿಹಳ್ಳಿಗೂ ಸ್ಮಾರ್ಟ್‌ ಫೋನ್‌ಗಳು ಬಂದಿವೆ” ಎಂದು ತನ್ನ ಮಾತನ್ನು ಪ್ರಾರಂಭಿಸುವ ಲೇಖಕಿ ಎತ್ತುವ ಪ್ರಶ್ನೆ ಎಂದರೆ ಮಾನಸಿಕ ಖಾಯಿಲೆಯಿಂದ ನರಳುತ್ತಿರುವವರನ್ನು ಸಮಾಜ ಹೇಗೆ ನೋಡುತ್ತದೆ ಎಂದು. ಮಾನಸಿಕ ಖಾಯಿಲೆ ಇರುವವರೊಂದಿಗೆ ಯಾವ ರೀತಿ ವರ್ತಿಸಬೇಕು, ಅವರನ್ನು ಹೇಗೆ ನೋಡಬೇಕು ಎಂಬ ಅರಿವು ನಮ್ಮ ಸಮಾಜಕ್ಕಿಲ್ಲ ಎಂಬುದು ಲೇಖಕಿಯ ಕೊರಗು ಮತ್ತು ಅದು ನಿಜವೂ ಕೂಡ. ಸ್ಥೂಲವಾಗಿ ಕಾಣುವ ದೈಹಿಕ ಅಸಮರ್ಥತೆಯನ್ನು ಗುರುತಿಸಲು ಸಾಧ್ಯ ಮತ್ತು ಸಿಗುವಂತಹ ಪ್ರೋತ್ಸಾಹದಿಂದ ಅವರಿಗೆ ಆತ್ಮವಿಶ್ವಾಸವನ್ನು ಗಳಿಸಿಕೊಳ್ಳಲೂ ಸಾಧ್ಯ. ಆದರೆ ಮಾನಸಿಕ ಸಮಸ್ಯೆ ಇರುವವರು ಹಾಗೆ ಆತ್ಮವಿಶ್ವಾಸವನ್ನು ಗಳಿಸಿಕೊಂಡು ಜೀವನ್ಮುಖಿಯಾಗಿ ಹೋರಾಡಬೇಕೆಂದರೆ ಗುಣಮುಖವಾಗುವ ಲಕ್ಷಣಗಳನ್ನು ತೋರಬೇಕು ಎಂದು ಅಮೃತಾ ರಕ್ಷಿದಿ ಹೇಳುವ ಕಾರಣವೇನೆಂದರೆ ತಾನೇ ಸ್ವತಃ ಪಾರಾನಾಯ್ಡ್ ಸ್ಕೀಜೋಫ್ರೇನಿಯಾದಿಂದ ಬಳಲಿದ್ದ ಅನುಭವಗಳು.

ಅಮೃತಯಾನ ಐದು ಪುಸ್ತಕಗಳ ಗುಚ್ಛ. ಒಂಟಿ ಮನೆಯ ಪುಟಾಣಿ, ಪುಟ್ಟ ಮಗುವಿನ ಶಾಲಾ ದಿನಗಳು, ತನ್ನೊಳಗಿನ ಪ್ರಪಂಚ, ಕನಸುಗಳ ಲೋಕದಲ್ಲಿ ಮತ್ತು ಅಂತರಂಗದ ಪಯಣ. ಈ ಪುಸ್ತಕಗಳು ಏನನ್ನು ಹೇಳುತ್ತವೆ ಎಂದು ಶೀರ್ಷಿಕೆಗಳು ನೇರವಾಗಿಯೇ ಧ್ವನಿಸುತ್ತವೆ.

ನಮ್ಮ ಮನೆಯ ಅಥವಾ ನೆರೆಮನೆಯ ಹೆಣ್ಣುಮಗುವೊಂದು ನಮ್ಮೊಡನೆ ಕುಳಿತುಕೊಂಡು ಆಪ್ತವಾಗಿ ತನ್ನ ಅನುಭವಗಳನ್ನು, ಕನಸುಗಳನ್ನು, ತನ್ನ ಬಾಧೆಗಳನ್ನು ಹಂಚಿಕೊಂಡಷ್ಟು ಸಹಜವಾದ ಬರವಣಿಗೆ. ಈ ಲೇಖಕಿ ಚಿತ್ರಕಲಾವಿದೆಯೂ ಆಗಿರುವ ಛಾಯೆಯನ್ನು ತನ್ನ ಬರಹದಲ್ಲಿ ಓದುಗರಿಗೆ ಚಿತ್ರಣವನ್ನು ಕಟ್ಟಿಕೊಡುವುದು ಬರಹವನ್ನು ಆಪ್ತವಾಗಿಸುತ್ತದೆ, ನಮ್ಮನ್ನೂ ಆ ಕಾಲಕ್ಕೆ, ದೇಶಕ್ಕೆ, ಸಂಗತಿಗಳಿಗೆ ಕರೆದೊಯ್ಯುತ್ತದೆ.

ರಕ್ಷಿದಿಯಲ್ಲಿರುವ ತಮ್ಮ ಮನೆ, ಪರಿಸರ, ಅದರ ವಿವರಣೆಗಳೆಲ್ಲವೂ ತೆರೆದುಕೊಳ್ಳುತ್ತಾ ಬರಿಯ ಚಿತ್ರಗಳನ್ನು ಮಾತ್ರವಲ್ಲದೇ ಗಾಳಿಗಂಧವನ್ನು ಉಸಿರಾಡುವಂತೆ ಮಾಡುತ್ತದೆ. ತನ್ನ ಅಪ್ಪ, ಅಮ್ಮ, ಅಣ್ಣಯ್ಯ, ಅಜ್ಜಿ, ಅಜ್ಜಯ್ಯನ ಜೊತೆ ಜೊತೆಗೆ ಇತರ ಸಹಜೀವಿಗಳನ್ನು ಪರಿಚಯಿಸುವಾಗ ಅವರ ವ್ಯಕ್ತಿತ್ವದ ಪರಿಚಯವು ಸ್ಥೂಲವಾಗಿರದೇ ಭಾವುಕವಾಗಿಯೂ ಮತ್ತು ಪದರಗಳಾಚೆ ನೋಡಿದರೆ ಮಾನಸಿಕ ವ್ಯಕ್ತಿತ್ವಗಳನ್ನೂ ಸೂಚಿಸಿರುವುದನ್ನು ಕಾಣಬಹುದು. ಸಣ್ಣದು ಎನಿಸಬಹುದಾದ ಸಂಗತಿಗಳೆಲ್ಲವೂ ಮನನಕ್ಕೆ ಒಳಗಾಗಿ, ಚಿಂತನದಲ್ಲಿ ಎರಕ ಹೊಯ್ದು ಸೂಕ್ಷ್ಮ ಸಂವೇದನೆಯಲ್ಲಿ ಅಚ್ಚುಹೊಯ್ದಂತೆ ಮನದೊಳಗೆ ಪ್ರವೇಶಿಸುತ್ತದೆ. ಅಮೃತಾ ತನ್ನನ್ನು ತಾನು ಸಾಕ್ಷೀಕರಿಸಿಕೊಳ್ಳುವಂತೆ ಸಂಗತಿಗಳನ್ನು ವಿವರಿಸಿರುವುದು ಅನನ್ಯ.

ತಾನು ಕೇಳಿದ ಕತೆಗಳು, ತಾನು ಹಾದು ಹೋಗಬೇಕಾದ ಸಾಂಸ್ಕೃತಿಕ ಸಂಗತಿಗಳನ್ನು ಬರಿದೇ ಸಾಕ್ಷೀಕರಿಸುವುದಕ್ಕಿಂತ ಅದನ್ನು ದಾಖಲು ಮಾಡುವಾಗ ವಹಿಸಿರುವ ಎಚ್ಚರದಲ್ಲಿ ಸಾಹಿತ್ಯದ ತಂತ್ರಗಾರಿಕೆಯ ಬಗ್ಗೆ ಹೊಂದಿರುವ ಪರಿಣತಿಯು ಬೆರಗುಗೊಳಿಸುತ್ತದೆ. ಆ ಬೆರಗಿನ ಕಾರಣವೇ ಪ್ರಾಮಾಣಿಕ ನಿವೇದನೆ.

ಅಮೃತಾ ತನ್ನ ತಂದೆಯ ದೆಸೆಯಿಂದ ದೊರಕಿದ ಸಾಹಿತ್ಯದ ಮತ್ತು ಸಾಂಸ್ಕೃತಿಕ ಪರಿಸರವನ್ನು ಉಸಿರಾಡಿರುವುದರ ಉಲ್ಲೇಖಗಳು ಸಾಧಾರಣವಲ್ಲ. ತನಗೆ ಲಭ್ಯವಾದ ಓದು, ಚಿತ್ರಕಲೆಯ ಅಭ್ಯಾಸ, ಸಾಹಿತಿ, ರಂಗಕರ್ಮಿಗಳು ಮತ್ತು ನಿರ್ದೇಶಕರೊಡನೆ ಒಡನಾಟ, ರಂಗಭೂಮಿಯ ಅನುಭವ; ಹೀಗೆ ಎಲ್ಲವನ್ನೂ ಪ್ರಸ್ತುತಪಡಿಸುವ ಆ ಬಗೆಯಲ್ಲಿ ಓದುಗರನ್ನೂ ಜೊತೆಗಿರಿಸಿಕೊಂಡು ಒಂದು ಪಕ್ಕದಲ್ಲಿ ಕೂರಿಸಿಕೊಂಡೋ ಅಥವಾ ಕಿಟಕಿಯಲ್ಲಿ ನಿಂತು ನೋಡಿಕೊಂಡಿರುವ ಹಾಗೆ ಮಾಡಿರುವುದು ಸಾಹಿತ್ಯದ ತಂತ್ರಗಾರಿಕೆ ಎನ್ನುವುದಕ್ಕಿಂತ ಅಮೃತಾ ದೃಷ್ಟಿಯಲ್ಲಿದ್ದ ಸರಳ ಮತ್ತು ಪ್ರಾಮಾಣಿಕ ಧೋರಣೆ ಇರಬಹುದು ಎಂದು ಭಾಸವಾಗುತ್ತದೆ.

ತನ್ನ ಅನುಭವಗಳ ಸೌಂದರ್ಯವನ್ನು ಕಣ್ಣಿಗೆ ಕಟ್ಟಿಕೊಟ್ಟಹಾಗೆ, ತನಗೆ ಬರುತ್ತಿದ್ದ ಕೋಪವನ್ನು, ಅವರಿವರ ಟೀಕೆ ಮತ್ತು ರಗಳೆಗಳು ತಂದೊಡ್ಡುತ್ತಿದ್ದ ಉಪದ್ರವಗಳನ್ನೂ ಹೇಳುತ್ತಲೇ, ಅವರ ಮಾನಸಿಕ ಸ್ಥಿತಿಗಳನ್ನು, ವರ್ತನೆಗಳ ಪ್ರತಿವರ್ತನೆಗಳ ಸೂಕ್ಷ್ಮತೆಗಳನ್ನು ವಿವೇಚಿಸುವರು.

ಭ್ರಮೆ ಮತ್ತು ನಿಜಗಳ ನಡುವಿನ ಸಲ್ಲಾಪ ಮತ್ತು ಸಂಘರ್ಷಗಳು, ಮೂರ್ತ ಮತ್ತು ಅಮೂರ್ತಗಳನ್ನು ಕಾಣುವ ಪ್ರತಿಮೆಗಳಲ್ಲೇ ಎರಕ ಹುಯ್ಯುವಂತಹ ಮನಶಾಸ್ತ್ರೀಯ ದೃಷ್ಟಿಕೋನಗಳು, ಹೊರಗಿನ ಮತ್ತು ಒಳಗಿನ ತಾಕಲಾಟದಲ್ಲಿ ಡೋಲಾಯಮಾನವಾದ ಭಾವನೆಗಳ ಭಿತ್ತಿಗಳು; ಎಲ್ಲವೂ ತನ್ನ ತಾನು ಸಾಕ್ಷೀಕರಿಸಿಕೊಂಡಿರುವ ಒಂದು ಮಹತ್ವದ ದಾಖಲೆ ಈ ಅಮೃತಯಾನ.

ಅಮೃತ ತಾನೇ ಹೇಳಿರುವಂತೆ ಮಾನಸಿಕ ಸಮಸ್ಯೆಯಿಂದ ಬಳಲುತ್ತಿರುವವರನ್ನು ಅರಿಯುವ ಮತ್ತು ಉಪಚರಿಸುವ ಬಗೆಯನ್ನು ಸ್ಪಷ್ಟೀಕರಿಸಿಕೊಂಡಿಲ್ಲದ ಸ್ಥಿತಿ ನಮ್ಮ ಭಾರತದಲ್ಲಿದೆ. ಅದಕ್ಕೆಂದು ಇರುವ ವೈಜ್ಞಾನಿಕ ಮತ್ತು ವೈದ್ಯಕೀಯ ಸೌಲಭ್ಯವು ಇರುವ ಸಮಸ್ಯೆಗಳ ಗಾತ್ರದ ಮುಂದೆ ಬಹಳ ಪುಟ್ಟ ಕಣವಾಗಿದೆ. ಅಮೃತಾಳ ಬರಹ ಹಲವು ರೀತಿಗಳಲ್ಲಿ ಕಣ್ಣು ತೆರೆಸುವಂತದ್ದು.

ಬರಿಯ ತನ್ನ ನಲಿವಿನ ಪ್ರದರ್ಶನ ಮತ್ತು ನೋವಿನ ನಿವೇದನೆಯ ದಾಖಲೆಯಾಗಿರದೇ ಆಕೆಯದಂತಹ ಹಲವು ಬದುಕುಗಳ ಮತ್ತು ಜೀವಿಗಳ ಕಡೆಗೆ ಗಮನ ನೀಡಲು ಕೈತೋರುವಂತಿದೆ.

ಅಮೃತಾ ಈಗ ನಮ್ಮೊಡನಿಲ್ಲ. ಅವಳೇ ಹೇಳಿರುವಂತೆ,

“1992ರಲ್ಲಿ ಅಮೃತಾ ಎಂಬ ಕಾಲಯಾನಿ ನಮ್ಮ ಉದರದ ಮೂಲಕ ಭೂಸ್ಪರ್ಶವನ್ನು ಮಾಡಿದಳು. ಅವಳ ಇಪ್ಪತ್ತೈದು ವರ್ಷಗಳ ಸುದೀರ್ಘ ಕಥಾನಕವನ್ನು ಈಗ ನಿಮ್ಮ ಮುಂದಿಟ್ಟಿದ್ದಾಳೆ”. ಪುಸ್ತಕ ಬಿಡುಗಡೆಯ ಸಿದ್ಧತೆಯಾಗುತ್ತಿದ್ದಂತೆ, ಅವಳ ಬದುಕಿನ ಆದ್ಯತೆಯೇ ಬದಲಾಗುತ್ತ ಹೋಯಿತು. ಅವಳ ಕೊನೆಯ ಚಿತ್ರವೂ ಅಪೂರ್ಣ. ಗೆಳೆಯರೊಬ್ಬರ ಮಾತಿನಂತೆ “ಅಪೂರ್ಣತೆಯಲ್ಲಿಯೇ ಆಕೆಯ ಇರುವಿಕೆಯನ್ನು ಕಾಣುವ ಅವಕಾಶವನ್ನು ಉಳಿಸಿ ಹೋಗಿದ್ದಾಳೆ.”

ಆದರೆ ಟೇಬಲ್ಲಿನ ಮೇಲೆ ಸದಾ ಕಾಣುವಂತೆ ಕುಳಿತಿರುವ ಅಮೃತಾಯಾನ ಬರಿಯ ಪುಸ್ತಕಗಳಾಗಿರದೆ ಕೈಗೆಟುಕಿದವರನ್ನೆಲ್ಲಾ ತನ್ನೂರನ್ನು, ಮನೆಯನ್ನು, ಚಟುವಟಿಕೆಗಳನ್ನು, ಆಪ್ತರನ್ನು ತೋರಲು ಕರೆದುಕೊಂಡು ಹೋಗುತ್ತಿರುತ್ತಾಳೆ. ತನ್ನ ಅಂತರಂಗದ ಕದವನ್ನು ತೆರೆದು ತೋರುವ ನೆಪದಲ್ಲಿ ನಮ್ಮಂತರಂಗವನ್ನೂ ಇಣುಕಿ ನೋಡಿಕೊಳ್ಳುವಂತೆ ಮಾಡುತ್ತಾಳೆ. ತುಟಿಯ ಮೇಲೆ ನಗು ತರುತ್ತಾಳೆ. ಕಂಗಳಲ್ಲಿ ಕಂಬನಿ ತರಿಸುತ್ತಾಳೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...