Homeಮುಖಪುಟಅಮೃತಾ ರಕ್ಷಿದಿಯವರ ಐದು ಪುಸ್ತಕಗಳ ಗುಚ್ಛ ಅಮೃತಯಾನ...

ಅಮೃತಾ ರಕ್ಷಿದಿಯವರ ಐದು ಪುಸ್ತಕಗಳ ಗುಚ್ಛ ಅಮೃತಯಾನ…

ಒಂಟಿ ಮನೆಯ ಪುಟಾಣಿ, ಪುಟ್ಟ ಮಗುವಿನ ಶಾಲಾ ದಿನಗಳು, ತನ್ನೊಳಗಿನ ಪ್ರಪಂಚ, ಕನಸುಗಳ ಲೋಕದಲ್ಲಿ ಮತ್ತು ಅಂತರಂಗದ ಪಯಣ. ಈ ಪುಸ್ತಕಗಳು ಏನನ್ನು ಹೇಳುತ್ತವೆ ಎಂದು ಶೀರ್ಷಿಕೆಗಳು ನೇರವಾಗಿಯೇ ಧ್ವನಿಸುತ್ತವೆ.

- Advertisement -
- Advertisement -

ಪುಟಕಿಟ್ಟ ಪುಟಗಳು

  • ಯೋಗೇಶ್‌ ಮಾಸ್ಟರ್‌

‍“ನಾವು ಹೈಟೆಕ್ ಯುಗದಲ್ಲಿದ್ದೇವೆ. ಇಷ್ಟೊಂದು ಮುಂದುವರಿದಿದ್ದೇವೆ. ಹಳ್ಳಿಹಳ್ಳಿಗೂ ಸ್ಮಾರ್ಟ್‌ ಫೋನ್‌ಗಳು ಬಂದಿವೆ” ಎಂದು ತನ್ನ ಮಾತನ್ನು ಪ್ರಾರಂಭಿಸುವ ಲೇಖಕಿ ಎತ್ತುವ ಪ್ರಶ್ನೆ ಎಂದರೆ ಮಾನಸಿಕ ಖಾಯಿಲೆಯಿಂದ ನರಳುತ್ತಿರುವವರನ್ನು ಸಮಾಜ ಹೇಗೆ ನೋಡುತ್ತದೆ ಎಂದು. ಮಾನಸಿಕ ಖಾಯಿಲೆ ಇರುವವರೊಂದಿಗೆ ಯಾವ ರೀತಿ ವರ್ತಿಸಬೇಕು, ಅವರನ್ನು ಹೇಗೆ ನೋಡಬೇಕು ಎಂಬ ಅರಿವು ನಮ್ಮ ಸಮಾಜಕ್ಕಿಲ್ಲ ಎಂಬುದು ಲೇಖಕಿಯ ಕೊರಗು ಮತ್ತು ಅದು ನಿಜವೂ ಕೂಡ. ಸ್ಥೂಲವಾಗಿ ಕಾಣುವ ದೈಹಿಕ ಅಸಮರ್ಥತೆಯನ್ನು ಗುರುತಿಸಲು ಸಾಧ್ಯ ಮತ್ತು ಸಿಗುವಂತಹ ಪ್ರೋತ್ಸಾಹದಿಂದ ಅವರಿಗೆ ಆತ್ಮವಿಶ್ವಾಸವನ್ನು ಗಳಿಸಿಕೊಳ್ಳಲೂ ಸಾಧ್ಯ. ಆದರೆ ಮಾನಸಿಕ ಸಮಸ್ಯೆ ಇರುವವರು ಹಾಗೆ ಆತ್ಮವಿಶ್ವಾಸವನ್ನು ಗಳಿಸಿಕೊಂಡು ಜೀವನ್ಮುಖಿಯಾಗಿ ಹೋರಾಡಬೇಕೆಂದರೆ ಗುಣಮುಖವಾಗುವ ಲಕ್ಷಣಗಳನ್ನು ತೋರಬೇಕು ಎಂದು ಅಮೃತಾ ರಕ್ಷಿದಿ ಹೇಳುವ ಕಾರಣವೇನೆಂದರೆ ತಾನೇ ಸ್ವತಃ ಪಾರಾನಾಯ್ಡ್ ಸ್ಕೀಜೋಫ್ರೇನಿಯಾದಿಂದ ಬಳಲಿದ್ದ ಅನುಭವಗಳು.

ಅಮೃತಯಾನ ಐದು ಪುಸ್ತಕಗಳ ಗುಚ್ಛ. ಒಂಟಿ ಮನೆಯ ಪುಟಾಣಿ, ಪುಟ್ಟ ಮಗುವಿನ ಶಾಲಾ ದಿನಗಳು, ತನ್ನೊಳಗಿನ ಪ್ರಪಂಚ, ಕನಸುಗಳ ಲೋಕದಲ್ಲಿ ಮತ್ತು ಅಂತರಂಗದ ಪಯಣ. ಈ ಪುಸ್ತಕಗಳು ಏನನ್ನು ಹೇಳುತ್ತವೆ ಎಂದು ಶೀರ್ಷಿಕೆಗಳು ನೇರವಾಗಿಯೇ ಧ್ವನಿಸುತ್ತವೆ.

ನಮ್ಮ ಮನೆಯ ಅಥವಾ ನೆರೆಮನೆಯ ಹೆಣ್ಣುಮಗುವೊಂದು ನಮ್ಮೊಡನೆ ಕುಳಿತುಕೊಂಡು ಆಪ್ತವಾಗಿ ತನ್ನ ಅನುಭವಗಳನ್ನು, ಕನಸುಗಳನ್ನು, ತನ್ನ ಬಾಧೆಗಳನ್ನು ಹಂಚಿಕೊಂಡಷ್ಟು ಸಹಜವಾದ ಬರವಣಿಗೆ. ಈ ಲೇಖಕಿ ಚಿತ್ರಕಲಾವಿದೆಯೂ ಆಗಿರುವ ಛಾಯೆಯನ್ನು ತನ್ನ ಬರಹದಲ್ಲಿ ಓದುಗರಿಗೆ ಚಿತ್ರಣವನ್ನು ಕಟ್ಟಿಕೊಡುವುದು ಬರಹವನ್ನು ಆಪ್ತವಾಗಿಸುತ್ತದೆ, ನಮ್ಮನ್ನೂ ಆ ಕಾಲಕ್ಕೆ, ದೇಶಕ್ಕೆ, ಸಂಗತಿಗಳಿಗೆ ಕರೆದೊಯ್ಯುತ್ತದೆ.

ರಕ್ಷಿದಿಯಲ್ಲಿರುವ ತಮ್ಮ ಮನೆ, ಪರಿಸರ, ಅದರ ವಿವರಣೆಗಳೆಲ್ಲವೂ ತೆರೆದುಕೊಳ್ಳುತ್ತಾ ಬರಿಯ ಚಿತ್ರಗಳನ್ನು ಮಾತ್ರವಲ್ಲದೇ ಗಾಳಿಗಂಧವನ್ನು ಉಸಿರಾಡುವಂತೆ ಮಾಡುತ್ತದೆ. ತನ್ನ ಅಪ್ಪ, ಅಮ್ಮ, ಅಣ್ಣಯ್ಯ, ಅಜ್ಜಿ, ಅಜ್ಜಯ್ಯನ ಜೊತೆ ಜೊತೆಗೆ ಇತರ ಸಹಜೀವಿಗಳನ್ನು ಪರಿಚಯಿಸುವಾಗ ಅವರ ವ್ಯಕ್ತಿತ್ವದ ಪರಿಚಯವು ಸ್ಥೂಲವಾಗಿರದೇ ಭಾವುಕವಾಗಿಯೂ ಮತ್ತು ಪದರಗಳಾಚೆ ನೋಡಿದರೆ ಮಾನಸಿಕ ವ್ಯಕ್ತಿತ್ವಗಳನ್ನೂ ಸೂಚಿಸಿರುವುದನ್ನು ಕಾಣಬಹುದು. ಸಣ್ಣದು ಎನಿಸಬಹುದಾದ ಸಂಗತಿಗಳೆಲ್ಲವೂ ಮನನಕ್ಕೆ ಒಳಗಾಗಿ, ಚಿಂತನದಲ್ಲಿ ಎರಕ ಹೊಯ್ದು ಸೂಕ್ಷ್ಮ ಸಂವೇದನೆಯಲ್ಲಿ ಅಚ್ಚುಹೊಯ್ದಂತೆ ಮನದೊಳಗೆ ಪ್ರವೇಶಿಸುತ್ತದೆ. ಅಮೃತಾ ತನ್ನನ್ನು ತಾನು ಸಾಕ್ಷೀಕರಿಸಿಕೊಳ್ಳುವಂತೆ ಸಂಗತಿಗಳನ್ನು ವಿವರಿಸಿರುವುದು ಅನನ್ಯ.

ತಾನು ಕೇಳಿದ ಕತೆಗಳು, ತಾನು ಹಾದು ಹೋಗಬೇಕಾದ ಸಾಂಸ್ಕೃತಿಕ ಸಂಗತಿಗಳನ್ನು ಬರಿದೇ ಸಾಕ್ಷೀಕರಿಸುವುದಕ್ಕಿಂತ ಅದನ್ನು ದಾಖಲು ಮಾಡುವಾಗ ವಹಿಸಿರುವ ಎಚ್ಚರದಲ್ಲಿ ಸಾಹಿತ್ಯದ ತಂತ್ರಗಾರಿಕೆಯ ಬಗ್ಗೆ ಹೊಂದಿರುವ ಪರಿಣತಿಯು ಬೆರಗುಗೊಳಿಸುತ್ತದೆ. ಆ ಬೆರಗಿನ ಕಾರಣವೇ ಪ್ರಾಮಾಣಿಕ ನಿವೇದನೆ.

ಅಮೃತಾ ತನ್ನ ತಂದೆಯ ದೆಸೆಯಿಂದ ದೊರಕಿದ ಸಾಹಿತ್ಯದ ಮತ್ತು ಸಾಂಸ್ಕೃತಿಕ ಪರಿಸರವನ್ನು ಉಸಿರಾಡಿರುವುದರ ಉಲ್ಲೇಖಗಳು ಸಾಧಾರಣವಲ್ಲ. ತನಗೆ ಲಭ್ಯವಾದ ಓದು, ಚಿತ್ರಕಲೆಯ ಅಭ್ಯಾಸ, ಸಾಹಿತಿ, ರಂಗಕರ್ಮಿಗಳು ಮತ್ತು ನಿರ್ದೇಶಕರೊಡನೆ ಒಡನಾಟ, ರಂಗಭೂಮಿಯ ಅನುಭವ; ಹೀಗೆ ಎಲ್ಲವನ್ನೂ ಪ್ರಸ್ತುತಪಡಿಸುವ ಆ ಬಗೆಯಲ್ಲಿ ಓದುಗರನ್ನೂ ಜೊತೆಗಿರಿಸಿಕೊಂಡು ಒಂದು ಪಕ್ಕದಲ್ಲಿ ಕೂರಿಸಿಕೊಂಡೋ ಅಥವಾ ಕಿಟಕಿಯಲ್ಲಿ ನಿಂತು ನೋಡಿಕೊಂಡಿರುವ ಹಾಗೆ ಮಾಡಿರುವುದು ಸಾಹಿತ್ಯದ ತಂತ್ರಗಾರಿಕೆ ಎನ್ನುವುದಕ್ಕಿಂತ ಅಮೃತಾ ದೃಷ್ಟಿಯಲ್ಲಿದ್ದ ಸರಳ ಮತ್ತು ಪ್ರಾಮಾಣಿಕ ಧೋರಣೆ ಇರಬಹುದು ಎಂದು ಭಾಸವಾಗುತ್ತದೆ.

ತನ್ನ ಅನುಭವಗಳ ಸೌಂದರ್ಯವನ್ನು ಕಣ್ಣಿಗೆ ಕಟ್ಟಿಕೊಟ್ಟಹಾಗೆ, ತನಗೆ ಬರುತ್ತಿದ್ದ ಕೋಪವನ್ನು, ಅವರಿವರ ಟೀಕೆ ಮತ್ತು ರಗಳೆಗಳು ತಂದೊಡ್ಡುತ್ತಿದ್ದ ಉಪದ್ರವಗಳನ್ನೂ ಹೇಳುತ್ತಲೇ, ಅವರ ಮಾನಸಿಕ ಸ್ಥಿತಿಗಳನ್ನು, ವರ್ತನೆಗಳ ಪ್ರತಿವರ್ತನೆಗಳ ಸೂಕ್ಷ್ಮತೆಗಳನ್ನು ವಿವೇಚಿಸುವರು.

ಭ್ರಮೆ ಮತ್ತು ನಿಜಗಳ ನಡುವಿನ ಸಲ್ಲಾಪ ಮತ್ತು ಸಂಘರ್ಷಗಳು, ಮೂರ್ತ ಮತ್ತು ಅಮೂರ್ತಗಳನ್ನು ಕಾಣುವ ಪ್ರತಿಮೆಗಳಲ್ಲೇ ಎರಕ ಹುಯ್ಯುವಂತಹ ಮನಶಾಸ್ತ್ರೀಯ ದೃಷ್ಟಿಕೋನಗಳು, ಹೊರಗಿನ ಮತ್ತು ಒಳಗಿನ ತಾಕಲಾಟದಲ್ಲಿ ಡೋಲಾಯಮಾನವಾದ ಭಾವನೆಗಳ ಭಿತ್ತಿಗಳು; ಎಲ್ಲವೂ ತನ್ನ ತಾನು ಸಾಕ್ಷೀಕರಿಸಿಕೊಂಡಿರುವ ಒಂದು ಮಹತ್ವದ ದಾಖಲೆ ಈ ಅಮೃತಯಾನ.

ಅಮೃತ ತಾನೇ ಹೇಳಿರುವಂತೆ ಮಾನಸಿಕ ಸಮಸ್ಯೆಯಿಂದ ಬಳಲುತ್ತಿರುವವರನ್ನು ಅರಿಯುವ ಮತ್ತು ಉಪಚರಿಸುವ ಬಗೆಯನ್ನು ಸ್ಪಷ್ಟೀಕರಿಸಿಕೊಂಡಿಲ್ಲದ ಸ್ಥಿತಿ ನಮ್ಮ ಭಾರತದಲ್ಲಿದೆ. ಅದಕ್ಕೆಂದು ಇರುವ ವೈಜ್ಞಾನಿಕ ಮತ್ತು ವೈದ್ಯಕೀಯ ಸೌಲಭ್ಯವು ಇರುವ ಸಮಸ್ಯೆಗಳ ಗಾತ್ರದ ಮುಂದೆ ಬಹಳ ಪುಟ್ಟ ಕಣವಾಗಿದೆ. ಅಮೃತಾಳ ಬರಹ ಹಲವು ರೀತಿಗಳಲ್ಲಿ ಕಣ್ಣು ತೆರೆಸುವಂತದ್ದು.

ಬರಿಯ ತನ್ನ ನಲಿವಿನ ಪ್ರದರ್ಶನ ಮತ್ತು ನೋವಿನ ನಿವೇದನೆಯ ದಾಖಲೆಯಾಗಿರದೇ ಆಕೆಯದಂತಹ ಹಲವು ಬದುಕುಗಳ ಮತ್ತು ಜೀವಿಗಳ ಕಡೆಗೆ ಗಮನ ನೀಡಲು ಕೈತೋರುವಂತಿದೆ.

ಅಮೃತಾ ಈಗ ನಮ್ಮೊಡನಿಲ್ಲ. ಅವಳೇ ಹೇಳಿರುವಂತೆ,

“1992ರಲ್ಲಿ ಅಮೃತಾ ಎಂಬ ಕಾಲಯಾನಿ ನಮ್ಮ ಉದರದ ಮೂಲಕ ಭೂಸ್ಪರ್ಶವನ್ನು ಮಾಡಿದಳು. ಅವಳ ಇಪ್ಪತ್ತೈದು ವರ್ಷಗಳ ಸುದೀರ್ಘ ಕಥಾನಕವನ್ನು ಈಗ ನಿಮ್ಮ ಮುಂದಿಟ್ಟಿದ್ದಾಳೆ”. ಪುಸ್ತಕ ಬಿಡುಗಡೆಯ ಸಿದ್ಧತೆಯಾಗುತ್ತಿದ್ದಂತೆ, ಅವಳ ಬದುಕಿನ ಆದ್ಯತೆಯೇ ಬದಲಾಗುತ್ತ ಹೋಯಿತು. ಅವಳ ಕೊನೆಯ ಚಿತ್ರವೂ ಅಪೂರ್ಣ. ಗೆಳೆಯರೊಬ್ಬರ ಮಾತಿನಂತೆ “ಅಪೂರ್ಣತೆಯಲ್ಲಿಯೇ ಆಕೆಯ ಇರುವಿಕೆಯನ್ನು ಕಾಣುವ ಅವಕಾಶವನ್ನು ಉಳಿಸಿ ಹೋಗಿದ್ದಾಳೆ.”

ಆದರೆ ಟೇಬಲ್ಲಿನ ಮೇಲೆ ಸದಾ ಕಾಣುವಂತೆ ಕುಳಿತಿರುವ ಅಮೃತಾಯಾನ ಬರಿಯ ಪುಸ್ತಕಗಳಾಗಿರದೆ ಕೈಗೆಟುಕಿದವರನ್ನೆಲ್ಲಾ ತನ್ನೂರನ್ನು, ಮನೆಯನ್ನು, ಚಟುವಟಿಕೆಗಳನ್ನು, ಆಪ್ತರನ್ನು ತೋರಲು ಕರೆದುಕೊಂಡು ಹೋಗುತ್ತಿರುತ್ತಾಳೆ. ತನ್ನ ಅಂತರಂಗದ ಕದವನ್ನು ತೆರೆದು ತೋರುವ ನೆಪದಲ್ಲಿ ನಮ್ಮಂತರಂಗವನ್ನೂ ಇಣುಕಿ ನೋಡಿಕೊಳ್ಳುವಂತೆ ಮಾಡುತ್ತಾಳೆ. ತುಟಿಯ ಮೇಲೆ ನಗು ತರುತ್ತಾಳೆ. ಕಂಗಳಲ್ಲಿ ಕಂಬನಿ ತರಿಸುತ್ತಾಳೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...