Homeಮುಖಪುಟಅಲಿಗಢ ಮುಸ್ಲಿಂ ವಿವಿ 'ಅಲ್ಪಸಂಖ್ಯಾತ ಸ್ಥಾನಮಾನ' ಯಾರು ಸ್ಥಾಪಿಸಿದರು ಎಂಬುದರ ಮೇಲೆ ನಿರ್ಧರಿಸಲಾಗುತ್ತದೆ : ಸುಪ್ರೀಂ...

ಅಲಿಗಢ ಮುಸ್ಲಿಂ ವಿವಿ ‘ಅಲ್ಪಸಂಖ್ಯಾತ ಸ್ಥಾನಮಾನ’ ಯಾರು ಸ್ಥಾಪಿಸಿದರು ಎಂಬುದರ ಮೇಲೆ ನಿರ್ಧರಿಸಲಾಗುತ್ತದೆ : ಸುಪ್ರೀಂ ಕೋರ್ಟ್

- Advertisement -
- Advertisement -

ಅಲಿಗಢ ಮುಸ್ಲಿಂ ವಿಶ್ವ ವಿದ್ಯಾನಿಲಯ (ಎಎಂಯು)ದ ಅಲ್ಪಸಂಖ್ಯಾತ ಸ್ಥಾನಮಾನಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ನ ಏಳು ನ್ಯಾಯಾಧೀಶರ ಪೀಠ ಇಂದು (ನ.8) 4:3 ಬಹುಮತದ ತೀರ್ಪು ನೀಡಿದ್ದು, 1967ರ ಅಝೀಝ್ ಬಾಷಾ vs ಯೂನಿಯನ್ ಆಫ್ ಇಂಡಿಯಾದ ತೀರ್ಪನ್ನು ರದ್ದುಗೊಳಿಸಿದೆ.

ಎಎಂಯು ‘ಅಲ್ಪಸಂಖ್ಯಾತ ಸ್ಥಾನಮಾನ’ ಅದನ್ನು ಯಾರು ಸ್ಥಾಪಿಸಿದರು ಎಂಬುವುದರ ಮೇಲೆ ನಿರ್ಧರಿಸಲಾಗುತ್ತದೆ ಎಂದು ಹೇಳಿದೆ.

ವಿಶ್ವ ವಿದ್ಯಾನಿಲಯವನ್ನು ಸ್ಥಾಪಿಸಿದವರು ಯಾರು ಮತ್ತು ಅದರ ಹಿಂದಿನ ಕರ್ತೃ ಯಾರು ಎಂಬುವುದನ್ನು ನ್ಯಾಯಾಲಯವು ಪರಿಶೀಲಿಸಬೇಕು. ಪರಿಶೀಲನೆಯಲ್ಲಿ ಅಲ್ಪಸಂಖ್ಯಾತ ಸಮುದಾಯ ಸ್ಥಾಪಿಸಿರುವುದು ಬಯಲಾದರೆ, ಸಂಸ್ಥೆಯು 30ನೇ ವಿಧಿಯ ಪ್ರಕಾರ ಅಲ್ಪಸಂಖ್ಯಾತ ಸ್ಥಾನಮಾನವನ್ನು ಪಡೆಯಬಹುದು ಎಂದು ಸುಪ್ರೀಂಕೋರ್ಟ್ ಸ್ಪಷ್ಟಪಡಿಸಿದೆ.

ಎಎಂಯು ಕಾನೂನಿನಿಂದ ರಚಿಸಲ್ಪಟ್ಟಿರುವುದರಿಂದ ಅಲ್ಪಸಂಖ್ಯಾತ ಸ್ಥಾನಮಾನವನ್ನು ಪಡೆಯಲು ಸಾಧ್ಯವಿಲ್ಲ ಎಂದು 1967ರ ಅಝೀಝ್ ಬಾಷಾ vs ಯೂನಿಯನ್ ಆಫ್ ಇಂಡಿಯಾ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್ ಹೇಳಿತ್ತು. ಅದನ್ನು ಈಗ ತಳ್ಳಿಹಾಕಿದೆ.

ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ, ಜೆ.ಬಿ. ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರ ಪರವಾಗಿ ಬಹುಮತದ ತೀರ್ಪು ಬರೆದಿರುವ ಸಿಜೆಐ ಚಂದ್ರಚೂಡ್ ಅವರು, ಅಝೀಝ್ ಬಾಷಾ vsಯೂನಿಯನ್ ಆಫ್ ಇಂಡಿಯಾ ಪ್ರಕರಣದ ತೀರ್ಪನ್ನು ತಳ್ಳಿ ಹಾಕಿದೆ. ಆದರೆ, ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್, ದೀಪಂಕರ್ ದತ್ತಾ ಮತ್ತು ಎಸ್‌ಸಿ ಶರ್ಮಾ ಅವರು ಭಿನ್ನಾ ತೀರ್ಪುಗಳನ್ನು ಬರೆದಿದ್ದಾರೆ.

ಎಎಂಯು ಅಲ್ಪಸಂಖ್ಯಾತ ಸಂಸ್ಥೆಯೇ? ಎಂಬ ವಿಷಯವನ್ನು ನಿರ್ಧರಿಸಲು ಸಾಮಾನ್ಯ ಪೀಠಕ್ಕೆ ಅವಕಾಶ ನೀಡಲಾಗಿದೆ. ಈ ತೀರ್ಪಿನ ಪ್ರಕಾರ, ಎಂಎಂಯು ಅಲ್ಪಸಂಖ್ಯಾತ ಸ್ಥಾನಮಾನದ ಮೌಲ್ಯಮಾಪನ ಮಾಡಲು ಮತ್ತು 2006ರ ಅಲಹಾಬಾದ್ ಹೈಕೋರ್ಟ್ ತೀರ್ಪನ್ನು ಮರುಮೌಲ್ಯಮಾಪನ ಮಾಡಲು ಮುಖ್ಯ ನ್ಯಾಯಾಧೀಶರು ಹೊಸ ಪೀಠವನ್ನು ರಚಿಸಲಿದ್ದಾರೆ.

ಎಎಂಯು ಕೇಂದ್ರೀಯ ಕಾನೂನು ಮೂಲಕ ಸ್ಥಾಪಿತಗೊಂಡಿರುವುದರಿಂದ, ಅದನ್ನು ಅಲ್ಪಸಂಖ್ಯಾತರ ಸಂಸ್ಥೆ ಎಂದು ಪರಿಗಣಿಸಲಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್‌ನ ಐವರು ನ್ಯಾಯಾಧೀಶರ ಪೀಠವು 1967ರಲ್ಲಿ ತೀರ್ಪು ನೀಡಿತ್ತು. 1981ರಲ್ಲಿ ಸಾಂವಿಧಾನಿಕ ತಿದ್ದುಪಡಿ ಮೂಲಕ ಅಂದಿನ ಕೇಂದ್ರ ಸರ್ಕಾರ ಎಎಂಯುಗೆ ‘ಅಲ್ಪಸಂಖ್ಯಾತ’ ಸ್ಥಾನಮಾನ ನೀಡಿತ್ತು. ಅಲಹಾಬಾದ್ ಹೈಕೋರ್ಟ್ ಈ ಸ್ಥಾನಮಾನವನ್ನು ರದ್ದುಪಡಿಸಿ 2006ರಲ್ಲಿ ಆದೇಶ ಹೊರಡಿಸಿತ್ತು. ಈ ಆದೇಶವನ್ನು ಯುಪಿಎ ಸರ್ಕಾರವು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿತ್ತು.

ಇದನ್ನೂ ಓದಿ : ರಾಜಿ ಮಾಡಿಕೊಂಡ ಕಾರಣಕ್ಕೆ ಲೈಂಗಿಕ ಕಿರುಕುಳ ಪ್ರಕರಣ ರದ್ದಾಗದು : ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...