Homeಮುಖಪುಟತಮಿಳುನಾಡಿನಲ್ಲಿ ಹಾಲು ಸಂಗ್ರಹಣೆ ಮಾಡದಂತೆ ಅಮುಲ್‌ಗೆ ನಿರ್ದೇಶನ ನೀಡಬೇಕು: ಅಮಿತ್ ಶಾಗೆ ಸ್ಟಾಲಿನ್ ಪತ್ರ

ತಮಿಳುನಾಡಿನಲ್ಲಿ ಹಾಲು ಸಂಗ್ರಹಣೆ ಮಾಡದಂತೆ ಅಮುಲ್‌ಗೆ ನಿರ್ದೇಶನ ನೀಡಬೇಕು: ಅಮಿತ್ ಶಾಗೆ ಸ್ಟಾಲಿನ್ ಪತ್ರ

- Advertisement -
- Advertisement -

ಗುಜರಾತ್ ಮೂಲದ ಡೈರಿ ಅಮುಲ್‌ಗೆ ತಮಿಳುನಾಡಿನಲ್ಲಿ ರಾಜ್ಯದಲ್ಲಿ ಹಾಲು ಸಂಗ್ರಹಣೆ ಮಾಡದಂತೆ ತಕ್ಷಣದಿಂದ ಜಾರಿಗೆ ಬರುವಂತೆ ನಿರ್ದೇಶನ ನೀಡಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಒತ್ತಾಯಿಸಿ ಪತ್ರ ಬರೆದಿದ್ದಾರೆ.

ಕರ್ನಾಟಕ ರಾಜ್ಯ ಚುನಾವಣಾ ಪೂರ್ವದಲ್ಲಿ ಸಹಕಾರ ಸಚಿವರಾಗಿರುವ ಅಮಿತ್ ಶಾ ಅವರು, ಹಾಲು ಸಹಕಾರ ಸಂಘಗಳ ಸಹಯೋಗದ ಬಗ್ಗೆ ಮಾತನಾಡಿದ್ದರು. ಅದಕ್ಕೆ ಕಾಂಗ್ರೆಸ್‌ನವರು ಕರ್ನಾಟಕದ ಹಾಲು ಸಹಕಾರಿ ಸಂಸ್ಥೆಯಾದ ನಂದಿನಿಯನ್ನು “ಕತ್ತು ಹಿಸುಕಲು” ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದರು. ಇದಾದ ಬಳಿಕ ಇದೀಗ ತಮಿಳುನಾಡು ಸಿಎಂ ಸ್ಟಾಲಿನ್ ಅವರು ಈ ವಿಚಾರವಾಗಿ ಮಾತನಾಡಿದ್ದಾರೆ.

ಈ ಬಗ್ಗೆ ಅಮಿತ್ ಶಾ ಅವರಿಗೆ ಪತ್ರ ಬರೆದಿರುವ ಸ್ಟಾಲಿನ್, ”ತಮಿಳುನಾಡು ಹಾಲಿನ ಶೆಡ್ ಪ್ರದೇಶದಲ್ಲಿ ಕೈರಾ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ (ಅಮುಲ್) ಹಾಲು ಸಂಗ್ರಹಣೆಯಿಂದ ಸಮಸ್ಯೆಗಳ ಉದ್ಭವಿಸುತ್ತವೆ” ಬಗ್ಗೆ ತಿಳಿಸಿದ್ದಾರೆ.

”ಇತ್ತೀಚಿಗೆ ಅಮುಲ್ ತನ್ನ ಬಹು-ರಾಜ್ಯ ಸಹಕಾರಿ ಪರವಾನಗಿಯನ್ನು ಕೃಷ್ಣಗಿರಿ ಜಿಲ್ಲೆಯಲ್ಲಿ ಶೀತಲೀಕರಣ ಕೇಂದ್ರಗಳು ಹಾಗೂ ಸಂಸ್ಕರಣಾ ಘಟಕವನ್ನು ಸ್ಥಾಪಿಸಲು ಬಳಸಿಕೊಂಡಿರುವುದು ರಾಜ್ಯ ಸರಕಾರದ ಗಮನಕ್ಕೆ ಬಂದಿದೆ” ಎಂದು ಸ್ಟಾಲಿನ್ ಹೇಳಿದ್ದಾರೆ.

ಅಲ್ಲದೆ, ”ತಮಿಳುನಾಡಿನ ಕೃಷ್ಣಗಿರಿ, ಧರ್ಮಪುರಿ, ವೆಲ್ಲೂರು, ರಾಣಿಪೇಟ್, ತಿರುಪತ್ತೂರ್, ಕಾಂಚೀಪುರಂ ಹಾಗೂ ತಿರುವಳ್ಳೂರು ಜಿಲ್ಲೆಗಳಲ್ಲಿ ಎಫ್‌ಪಿಒಗಳು ಹಾಗೂ ಸ್ವಸಹಾಯ ಸಂಘಗಳ ಮೂಲಕ ಹಾಲನ್ನು ಸಂಗ್ರಹಿಸಲು ಅಮುಲ್ ಯೋಜಿಸಿದೆ” ಎಂದು ನಮಗೆ ತಿಳಿದಿದೆ ಎಂದಿದ್ದಾರೆ.

”ಭಾರತದಲ್ಲಿ ಸಹಕಾರಿ ಸಂಸ್ಥೆಗಳು ಪರಸ್ಪರರ ಹಾಲಿನ ಶೆಡ್ ಪ್ರದೇಶವನ್ನು ಉಲ್ಲಂಘಿಸದೆ ಅಭಿವೃದ್ಧಿ ಹೊಂದಲು ಅವಕಾಶ ನೀಡುವುದು ರೂಢಿಯಾಗಿದೆ. ಈ ರೀತಿ ಹಾಲು ಸಂಗ್ರಹಣೆಯು ‘ಆಪರೇಷನ್ ವೈಟ್ ಫಡ್’ನ ಮನೋಭಾವಕ್ಕೆ ವಿರುದ್ಧವಾಗಿದೆ ಹಾಗೂ ಚಾಲ್ತಿಯಲ್ಲಿರುವ ಹಾಲಿನ ಕೊರತೆಯ ಸನ್ನಿವೇಶದಲ್ಲಿ ಗ್ರಾಹಕರಿಗೆ ಸಮಸ್ಯೆಗಳನ್ನು ಉಲ್ಬಣಗೊಳಿಸುತ್ತದೆ” ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿ: ಎಂಎಫ್‌ ಮುಳುಗಿಸುವ ಹುನ್ನಾರ: ಅಮುಲ್ ಆಗಮನಕ್ಕೆ ಕಾಂಗ್ರೆಸ್, ಜೆಡಿಎಸ್ ವಿರೋಧ

”ಅಮುಲ್‌ನ ಈ ಕಾರ್ಯವು ಆವಿನ್‌ನ (ಟಿಎನ್ ಕೋ- ಆಪರೇಟಿವ್ ಹಾಲು ಉತ್ಪಾದಕರ ಫೆಡರೇಶನ್) ಹಾಲಿನ ಶೆಡ್ ಪ್ರದೇಶವನ್ನು ಉಲ್ಲಂಘಿಸುತ್ತದೆ. ಇದು ದಶಕಗಳಿಂದ ನಿಜವಾದ ಸಹಕಾರ ಮನೋಭಾವದಿಂದ ಪೋಷಿಸಲ್ಪಟ್ಟಿದೆ. ಅಮುಲ್‌ನ ಈ ಕ್ರಮವು ಹಾಲು ಮತ್ತು ಹಾಲಿನ ಉತ್ಪನ್ನಗಳ ಸಂಗ್ರಹಣೆ ಮತ್ತು ಮಾರಾಟದಲ್ಲಿ ತೊಡಗಿರುವ ಸಹಕಾರಿಗಳ ನಡುವೆ ಅನಾರೋಗ್ಯಕರ ಸ್ಪರ್ಧೆಯನ್ನು ಸೃಷ್ಟಿಸುತ್ತದೆ” ಎಂದು ಸ್ಟಾಲಿನ್ ಪತ್ರದಲ್ಲಿ ಬರೆದಿದ್ದಾರೆ.

”ತಮಿಳುನಾಡು ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಲಿಮಿಟೆಡ್ ಮತ್ತು ರಾಜ್ಯ ಸರ್ಕಾರದ ಒಡೆತನದ ಆವಿನ್ ಸಹಕಾರಿ ಅಡಿಯಲ್ಲಿ ಗ್ರಾಮೀಣ ಹಾಲು ಉತ್ಪಾದಕರು ಮತ್ತು ಗ್ರಾಹಕರ ಅನುಕೂಲಕ್ಕಾಗಿ 9,673 ಹಾಲು ಉತ್ಪಾದಕರ ಸಹಕಾರ ಸಂಘಗಳು ಕಾರ್ಯನಿರ್ವಹಿಸುತ್ತಿವೆ” ಎಂದು ಅವರು ಹೇಳಿದ್ದಾರೆ.

”ಅವರು ಸುಮಾರು 4.5 ಲಕ್ಷ ಸುರಿಯುವ ಸದಸ್ಯರಿಂದ 35 LLPD ಹಾಲನ್ನು ಸಂಗ್ರಹಿಸುತ್ತಾರೆ” ಎಂದು ಸ್ಟಾಲಿನ್ ಹೇಳಿದರು. ಈ ವ್ಯವಸ್ಥೆಯಲ್ಲಿ ಹಾಲು ಉತ್ಪಾದಕರಿಗೆ ವರ್ಷವಿಡೀ ಲಾಭದಾಯಕ ಮತ್ತು ಏಕರೂಪದ ಬೆಲೆಗಳ ಭರವಸೆ ಇದೆ” ಎಂದು ಅವರು ಹೇಳಿದ್ದಾರೆ

”ಆವಿನ್ ಜಾನುವಾರು ಆಹಾರ, ಮೇವು, ಖನಿಜ ಮಿಶ್ರಣ, ಪ್ರಾಣಿಗಳ ಆರೋಗ್ಯ ರಕ್ಷಣೆ ಮತ್ತು ಹಾಲು ಉತ್ಪಾದಕರ ಪ್ರಾಣಿಗಳಿಗೆ ತಳಿ ಸೇವೆಗಳನ್ನು ಒದಗಿಸುತ್ತದೆ ಎಂದು ಸ್ಟಾಲಿನ್ ಬರೆದಿದ್ದಾರೆ. ಇದಲ್ಲದೆ, ಇದು ನಮ್ಮ ದೇಶದಲ್ಲಿ ಕಡಿಮೆ ಬೆಲೆಯಲ್ಲಿ ಗ್ರಾಹಕರಿಗೆ ಗುಣಮಟ್ಟದ ಹಾಲು ಮತ್ತು ಹಾಲಿನ ಉತ್ಪನ್ನಗಳ ಪೂರೈಕೆ ಮಾಡುತ್ತದೆ. ಹೀಗಾಗಿ, ಗ್ರಾಮೀಣ ಹಾಲು ಉತ್ಪಾದಕರ ಜೀವನೋಪಾಯವನ್ನು ಸುಧಾರಿಸುವಲ್ಲಿ ಮತ್ತು ಗ್ರಾಹಕರ ಪೌಷ್ಟಿಕಾಂಶದ ಅಗತ್ಯವನ್ನು ಪೂರೈಸುವಲ್ಲಿ ಆವಿನ್ ಪ್ರಮುಖ ಪಾತ್ರ ವಹಿಸುತ್ತದೆ” ಎಂದು ಸ್ಟಾಲಿನ್ ಅವರು ಶಾ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...