Homeಮುಖಪುಟತಮಿಳುನಾಡಿನಲ್ಲಿ ಹಾಲು ಸಂಗ್ರಹಣೆ ಮಾಡದಂತೆ ಅಮುಲ್‌ಗೆ ನಿರ್ದೇಶನ ನೀಡಬೇಕು: ಅಮಿತ್ ಶಾಗೆ ಸ್ಟಾಲಿನ್ ಪತ್ರ

ತಮಿಳುನಾಡಿನಲ್ಲಿ ಹಾಲು ಸಂಗ್ರಹಣೆ ಮಾಡದಂತೆ ಅಮುಲ್‌ಗೆ ನಿರ್ದೇಶನ ನೀಡಬೇಕು: ಅಮಿತ್ ಶಾಗೆ ಸ್ಟಾಲಿನ್ ಪತ್ರ

- Advertisement -
- Advertisement -

ಗುಜರಾತ್ ಮೂಲದ ಡೈರಿ ಅಮುಲ್‌ಗೆ ತಮಿಳುನಾಡಿನಲ್ಲಿ ರಾಜ್ಯದಲ್ಲಿ ಹಾಲು ಸಂಗ್ರಹಣೆ ಮಾಡದಂತೆ ತಕ್ಷಣದಿಂದ ಜಾರಿಗೆ ಬರುವಂತೆ ನಿರ್ದೇಶನ ನೀಡಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಒತ್ತಾಯಿಸಿ ಪತ್ರ ಬರೆದಿದ್ದಾರೆ.

ಕರ್ನಾಟಕ ರಾಜ್ಯ ಚುನಾವಣಾ ಪೂರ್ವದಲ್ಲಿ ಸಹಕಾರ ಸಚಿವರಾಗಿರುವ ಅಮಿತ್ ಶಾ ಅವರು, ಹಾಲು ಸಹಕಾರ ಸಂಘಗಳ ಸಹಯೋಗದ ಬಗ್ಗೆ ಮಾತನಾಡಿದ್ದರು. ಅದಕ್ಕೆ ಕಾಂಗ್ರೆಸ್‌ನವರು ಕರ್ನಾಟಕದ ಹಾಲು ಸಹಕಾರಿ ಸಂಸ್ಥೆಯಾದ ನಂದಿನಿಯನ್ನು “ಕತ್ತು ಹಿಸುಕಲು” ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದರು. ಇದಾದ ಬಳಿಕ ಇದೀಗ ತಮಿಳುನಾಡು ಸಿಎಂ ಸ್ಟಾಲಿನ್ ಅವರು ಈ ವಿಚಾರವಾಗಿ ಮಾತನಾಡಿದ್ದಾರೆ.

ಈ ಬಗ್ಗೆ ಅಮಿತ್ ಶಾ ಅವರಿಗೆ ಪತ್ರ ಬರೆದಿರುವ ಸ್ಟಾಲಿನ್, ”ತಮಿಳುನಾಡು ಹಾಲಿನ ಶೆಡ್ ಪ್ರದೇಶದಲ್ಲಿ ಕೈರಾ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ (ಅಮುಲ್) ಹಾಲು ಸಂಗ್ರಹಣೆಯಿಂದ ಸಮಸ್ಯೆಗಳ ಉದ್ಭವಿಸುತ್ತವೆ” ಬಗ್ಗೆ ತಿಳಿಸಿದ್ದಾರೆ.

”ಇತ್ತೀಚಿಗೆ ಅಮುಲ್ ತನ್ನ ಬಹು-ರಾಜ್ಯ ಸಹಕಾರಿ ಪರವಾನಗಿಯನ್ನು ಕೃಷ್ಣಗಿರಿ ಜಿಲ್ಲೆಯಲ್ಲಿ ಶೀತಲೀಕರಣ ಕೇಂದ್ರಗಳು ಹಾಗೂ ಸಂಸ್ಕರಣಾ ಘಟಕವನ್ನು ಸ್ಥಾಪಿಸಲು ಬಳಸಿಕೊಂಡಿರುವುದು ರಾಜ್ಯ ಸರಕಾರದ ಗಮನಕ್ಕೆ ಬಂದಿದೆ” ಎಂದು ಸ್ಟಾಲಿನ್ ಹೇಳಿದ್ದಾರೆ.

ಅಲ್ಲದೆ, ”ತಮಿಳುನಾಡಿನ ಕೃಷ್ಣಗಿರಿ, ಧರ್ಮಪುರಿ, ವೆಲ್ಲೂರು, ರಾಣಿಪೇಟ್, ತಿರುಪತ್ತೂರ್, ಕಾಂಚೀಪುರಂ ಹಾಗೂ ತಿರುವಳ್ಳೂರು ಜಿಲ್ಲೆಗಳಲ್ಲಿ ಎಫ್‌ಪಿಒಗಳು ಹಾಗೂ ಸ್ವಸಹಾಯ ಸಂಘಗಳ ಮೂಲಕ ಹಾಲನ್ನು ಸಂಗ್ರಹಿಸಲು ಅಮುಲ್ ಯೋಜಿಸಿದೆ” ಎಂದು ನಮಗೆ ತಿಳಿದಿದೆ ಎಂದಿದ್ದಾರೆ.

”ಭಾರತದಲ್ಲಿ ಸಹಕಾರಿ ಸಂಸ್ಥೆಗಳು ಪರಸ್ಪರರ ಹಾಲಿನ ಶೆಡ್ ಪ್ರದೇಶವನ್ನು ಉಲ್ಲಂಘಿಸದೆ ಅಭಿವೃದ್ಧಿ ಹೊಂದಲು ಅವಕಾಶ ನೀಡುವುದು ರೂಢಿಯಾಗಿದೆ. ಈ ರೀತಿ ಹಾಲು ಸಂಗ್ರಹಣೆಯು ‘ಆಪರೇಷನ್ ವೈಟ್ ಫಡ್’ನ ಮನೋಭಾವಕ್ಕೆ ವಿರುದ್ಧವಾಗಿದೆ ಹಾಗೂ ಚಾಲ್ತಿಯಲ್ಲಿರುವ ಹಾಲಿನ ಕೊರತೆಯ ಸನ್ನಿವೇಶದಲ್ಲಿ ಗ್ರಾಹಕರಿಗೆ ಸಮಸ್ಯೆಗಳನ್ನು ಉಲ್ಬಣಗೊಳಿಸುತ್ತದೆ” ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿ: ಎಂಎಫ್‌ ಮುಳುಗಿಸುವ ಹುನ್ನಾರ: ಅಮುಲ್ ಆಗಮನಕ್ಕೆ ಕಾಂಗ್ರೆಸ್, ಜೆಡಿಎಸ್ ವಿರೋಧ

”ಅಮುಲ್‌ನ ಈ ಕಾರ್ಯವು ಆವಿನ್‌ನ (ಟಿಎನ್ ಕೋ- ಆಪರೇಟಿವ್ ಹಾಲು ಉತ್ಪಾದಕರ ಫೆಡರೇಶನ್) ಹಾಲಿನ ಶೆಡ್ ಪ್ರದೇಶವನ್ನು ಉಲ್ಲಂಘಿಸುತ್ತದೆ. ಇದು ದಶಕಗಳಿಂದ ನಿಜವಾದ ಸಹಕಾರ ಮನೋಭಾವದಿಂದ ಪೋಷಿಸಲ್ಪಟ್ಟಿದೆ. ಅಮುಲ್‌ನ ಈ ಕ್ರಮವು ಹಾಲು ಮತ್ತು ಹಾಲಿನ ಉತ್ಪನ್ನಗಳ ಸಂಗ್ರಹಣೆ ಮತ್ತು ಮಾರಾಟದಲ್ಲಿ ತೊಡಗಿರುವ ಸಹಕಾರಿಗಳ ನಡುವೆ ಅನಾರೋಗ್ಯಕರ ಸ್ಪರ್ಧೆಯನ್ನು ಸೃಷ್ಟಿಸುತ್ತದೆ” ಎಂದು ಸ್ಟಾಲಿನ್ ಪತ್ರದಲ್ಲಿ ಬರೆದಿದ್ದಾರೆ.

”ತಮಿಳುನಾಡು ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಲಿಮಿಟೆಡ್ ಮತ್ತು ರಾಜ್ಯ ಸರ್ಕಾರದ ಒಡೆತನದ ಆವಿನ್ ಸಹಕಾರಿ ಅಡಿಯಲ್ಲಿ ಗ್ರಾಮೀಣ ಹಾಲು ಉತ್ಪಾದಕರು ಮತ್ತು ಗ್ರಾಹಕರ ಅನುಕೂಲಕ್ಕಾಗಿ 9,673 ಹಾಲು ಉತ್ಪಾದಕರ ಸಹಕಾರ ಸಂಘಗಳು ಕಾರ್ಯನಿರ್ವಹಿಸುತ್ತಿವೆ” ಎಂದು ಅವರು ಹೇಳಿದ್ದಾರೆ.

”ಅವರು ಸುಮಾರು 4.5 ಲಕ್ಷ ಸುರಿಯುವ ಸದಸ್ಯರಿಂದ 35 LLPD ಹಾಲನ್ನು ಸಂಗ್ರಹಿಸುತ್ತಾರೆ” ಎಂದು ಸ್ಟಾಲಿನ್ ಹೇಳಿದರು. ಈ ವ್ಯವಸ್ಥೆಯಲ್ಲಿ ಹಾಲು ಉತ್ಪಾದಕರಿಗೆ ವರ್ಷವಿಡೀ ಲಾಭದಾಯಕ ಮತ್ತು ಏಕರೂಪದ ಬೆಲೆಗಳ ಭರವಸೆ ಇದೆ” ಎಂದು ಅವರು ಹೇಳಿದ್ದಾರೆ

”ಆವಿನ್ ಜಾನುವಾರು ಆಹಾರ, ಮೇವು, ಖನಿಜ ಮಿಶ್ರಣ, ಪ್ರಾಣಿಗಳ ಆರೋಗ್ಯ ರಕ್ಷಣೆ ಮತ್ತು ಹಾಲು ಉತ್ಪಾದಕರ ಪ್ರಾಣಿಗಳಿಗೆ ತಳಿ ಸೇವೆಗಳನ್ನು ಒದಗಿಸುತ್ತದೆ ಎಂದು ಸ್ಟಾಲಿನ್ ಬರೆದಿದ್ದಾರೆ. ಇದಲ್ಲದೆ, ಇದು ನಮ್ಮ ದೇಶದಲ್ಲಿ ಕಡಿಮೆ ಬೆಲೆಯಲ್ಲಿ ಗ್ರಾಹಕರಿಗೆ ಗುಣಮಟ್ಟದ ಹಾಲು ಮತ್ತು ಹಾಲಿನ ಉತ್ಪನ್ನಗಳ ಪೂರೈಕೆ ಮಾಡುತ್ತದೆ. ಹೀಗಾಗಿ, ಗ್ರಾಮೀಣ ಹಾಲು ಉತ್ಪಾದಕರ ಜೀವನೋಪಾಯವನ್ನು ಸುಧಾರಿಸುವಲ್ಲಿ ಮತ್ತು ಗ್ರಾಹಕರ ಪೌಷ್ಟಿಕಾಂಶದ ಅಗತ್ಯವನ್ನು ಪೂರೈಸುವಲ್ಲಿ ಆವಿನ್ ಪ್ರಮುಖ ಪಾತ್ರ ವಹಿಸುತ್ತದೆ” ಎಂದು ಸ್ಟಾಲಿನ್ ಅವರು ಶಾ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...