Homeಮುಖಪುಟಸೋಂಕು ನಿಗ್ರಹಕ್ಕೆ ತಮಿಳುನಾಡಿನಲ್ಲಿ ಸರ್ವಪಕ್ಷ ಸಮಿತಿ: ಕರ್ನಾಟಕದಲ್ಲೂ ಸಾಧ್ಯವಿದೆ, ಕೇಂದ್ರದಲ್ಲಿ ಬಿಲ್‌ಕುಲ್ ಇಲ್ಲ!

ಸೋಂಕು ನಿಗ್ರಹಕ್ಕೆ ತಮಿಳುನಾಡಿನಲ್ಲಿ ಸರ್ವಪಕ್ಷ ಸಮಿತಿ: ಕರ್ನಾಟಕದಲ್ಲೂ ಸಾಧ್ಯವಿದೆ, ಕೇಂದ್ರದಲ್ಲಿ ಬಿಲ್‌ಕುಲ್ ಇಲ್ಲ!

ದಶಕಗಳಿಂದ ಜಿದ್ದಾಜಿದ್ದಿ ನಡೆಸಿದ ಎರಡು ದ್ರಾವಿಡ ಪಕ್ಷಗಳ ನಡುವೆ ಕೋವಿಡ್ ನಿರ್ವಹಣೆ ವಿಷಯದಲ್ಲಿ ಆ ಹಮ್ಮು ಕಳಚಬಹುದಾದರೆ, ಕರ್ನಾಟಕದಲ್ಲೂ ಅದು ಸುಲಭಕ್ಕೆ ಸಾಧ್ಯವಿದೆ. ಕೇಂದ್ರದಲ್ಲಿ ಸದ್ಯದ ಸ್ಥಿತಿ ನೋಡಿದರೆ ಅದು ಅಸಾಧ್ಯ.

- Advertisement -
- Advertisement -

ಎರಡು ಅವಧಿಗಳ ನಂತರ ಈಗ ಮತ್ತೆ ಅಧಿಕಾರಕ್ಕೆ ಬಂದಿರುವ ಡಿಎಂಕೆಯ ಮುಖ್ಯಮಂತ್ರಿ ಸ್ಟಾಲಿನ್ ಅಲ್ಲೀಗ ಕೋವಿಡ್ ನಿರ್ವಹಣೆಗೆ 13 ಪಕ್ಷಗಳ ಸದಸ್ಯರ ಸರ್ವಪಕ್ಷ ಸಮಿತಿ ರಚಿಸಿದ್ದಾರೆ. ಪ್ರತಿ ವಾರಕ್ಕೊಮ್ಮೆ ಈ ಸಮಿತಿ ಸಭೆ ಸೇರಿ ಕೋವಿಡ್ ನಿರ್ವಹಣೆಯ ಪರಿಶೀಲನೆ ನಡೆಸಿ, ಮುಂದಿನ ಕ್ರಮಗಳ ಬಗ್ಗೆ ಚರ್ಚಿಸಲಿದೆ.
ಜಯಲಲಿತಾ, ಕರುಣಾನಿಧಿ ಕಾಲದಲ್ಲಿ ಸದನದಲ್ಲೇ ಬಡಿದಾಟವಾಗಿದ್ದವು. ಡಿಎಂಕೆ ಶಾಸಕನೊಬ್ಬ ಜಯಲಲಿತಾರ ಸೀರೆಯನ್ನೂ ಜಗ್ಗಿದ್ದ. ಜಯಲಲಿತಾ ಮತ್ತು ಕರುಣಾನಿಧಿ ಒಬ್ಬರನ್ನೊಬ್ಬರು ಜೈಲಿಗೆ ಕಳಿಸುವ ಬಗ್ಗೆಯೇ ತಂತ್ರ ಹೆಣೆಯುತ್ತಿದ್ದರು.

ಆದರೆ, ಕಾಲ ಸ್ಟಾಲಿನ್ ಅವರನ್ನು ಹೆಚ್ಚು ಪಕ್ವಗೊಳಿಸಿದಂತೆ ಅಥವಾ ಸ್ಪಷ್ಟ ಬಹುಮತ ಕೊಟ್ಟ ರಾಜ್ಯದ ಜನತೆಯನ್ನು ಕೋವಿಡ್‌ನಿಂದ ಕಾಪಾಡುವ ತುಮುಲವಿದ್ದಂತೆ ಕಾಣುತ್ತಿದೆ. ಎರಡು ಅವಧಿಯವರೆಗೆ ವಿಪಕ್ಷ ನಾಯಕನ ಸ್ಥಾನದಲ್ಲಿ ಕುಳಿತಿದ್ದು ವಾಸ್ತವ ಅರಿಯಲು ಸಾಧ್ಯವಾಗಿದೆ.

ಇದನ್ನೂ ಓದಿ: ಇಸ್ರೇಲ್‌ನ ಬಯೋತ್ಪಾದನೆ ಮುಗಿಯದ ರಕ್ತಚರಿತ್ರೆ: ಬಿ ಶ್ರೀಪಾದ್ ಭಟ್

ಕೇರಳದಲ್ಲಿ ಕೋವಿಡ್ ಒಂದನೇ ಅಲೆಯ ಸಮಯದಿಂದಲೂ ಅಲ್ಲಿನ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೂಡ ವಿಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡೇ ಕೆಲಸ ಮಾಡುತ್ತ ಬಂದಿದ್ದಾರೆ.

ಅಂತಹ ಜಿದ್ದಾಜಿದ್ದಿಯಿಲ್ಲದ ಕರ್ನಾಟಕದಲ್ಲೂ ಇದು ಸಾಧ್ಯವಾಗಬೇಕಿತ್ತು. ಇಲ್ಲಿ ಸಿದ್ದರಾಮಯ್ಯರ ಅನುಭವ, ಕುಮಾರಸ್ವಾಮಿ ಹೊಂದಾಣಿಕೆ ಎಲ್ಲವೂ ಇವೆ ಮತ್ತು ತಮಿಳುನಾಡಿನಂತೆ ಇಲ್ಲೇನೂ ಹಲವು ಪಕ್ಷಗಳಿಲ್ಲ. ಸಿದ್ದರಾಮಯ್ಯ, ಕುಮಾರಸ್ವಾಮಿ, ಎಚ್.ಕೆ. ಪಾಟೀಲ್, ರಮೇಶ್‌ಕುಮಾರ್ ಕೃಷ್ಣ ಬೈರೆಗೌಡ…ಅಷ್ಟೇಕೆ ಕೆಂದ್ರ ಬಿಜೆಪಿಯಿಂದ ಸಾಕಷ್ಟು ದುರುದ್ದೇಶದ ಕಿರುಕುಳ ಅನುಭವಿಸಿದ ಡಿ.ಕೆ. ಶಿವಕುಮಾರ್ ಕೂಡ ಸರ್ಕಾರದೊಡನೆ ಸಹಕರಿಸುತ್ತಿದ್ದರು.

ಸಿಪಿಐ, ಸಿಪಿಎಂ, ರೈತಸಂಘ ಎಲ್ಲವನ್ನೂ ಒಳಗೊಂಡ ಸಮಿತಿ ಮಾಡಬಹುದಿತ್ತು. ಇದಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಒಪ್ಪಬಹುದಾದರೂ, ಕೂಗುಮಾರಿಗಳಂತಿರುವ ಸಂಘ ಮೂಲದ ಬಿಜೆಪಿ ಶಾಸಕರು ಮತ್ತು ರಾಜಕೀಯ ನಾಯಕರು ಇದಕ್ಕೆ ಅಡ್ಡಿ ಮಾಡುತ್ತಿದ್ದರು. ಬಿ.ಎಲ್ ಸಂತೋಷ್ ಪಡೆಯ ಕಾರಣಕ್ಕೇ ಇಂತದ್ದೆಲ್ಲ ಇಲ್ಲಿ ಅಸಾಧ್ಯ. ಬಸವರಾಜ ಬೊಮ್ಮಾಯಿ, ಗೋವಿಂದ ಕಾರಜೋಳ ಮುಂತಾದವರು ಸಹಜವಾಗಿಯೇ ಈ ನಡೆ ಸ್ವಾಗತಿಸುತ್ತಿದ್ದರು.

ಇದನ್ನೂ ಓದಿ: ಜನಾಕ್ರೋಶದ ಸ್ಫೋಟ: ರಾಜ್ಯಾದ್ಯಂತ ಮನೆಗಳಲ್ಲಿಯೇ ಭುಗಿಲೆದ್ದ ಪ್ರತಿಭಟನೆಗಳು

ಆದರೆ ಈಗೇನಾಗುತ್ತಿದೆ ನೋಡಿ. ಸರ್ಕಾರಕ್ಕೆ ಸಲಹೆ ರೂಪದಲ್ಲಿ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ಎಚ್.ಕೆ. ಪಾಟೀಲ, ಕುಮಾರಸ್ವಾಮಿ ಹೇಳಿಕೆ ನೀಡಿದರೆ, ಅದನ್ನು ಸ್ವಾಗತಿಸುವ ಬದಕು ಬಿಜೆಪಿಯ ಕೆಲವರು ಕೊಂಕು ಹೇಳಿಕೆಗಳನ್ನು ಕೊಡುತ್ತಾರೆ.

ಇಲ್ಲಿ ಇನ್ನೊಂದು ಕಾರಣವಿದೆ. ದೇಶದ ಕಾಂಗ್ರೆಸ್ ನಾಯಕರ ಪೈಕಿ ಮೋದಿಯ ಆಡಳಿತವನ್ನು ಯಾವ ಮುಲಾಜೂ ಇಲ್ಲದೇ ಕಟುವಾಗಿ ಟೀಕಿಸುತ್ತ ಬಂದ ಸಿದ್ದರಾಮಯ್ಯರು ಇಲ್ಲಿನ ಸಂಘಪರಿವಾರದ ಶಾಸಕರಿಗೆ ಇಷ್ಟವಾಗುವುದು ಕಷ್ಟ.

ಕೇಂದ್ರದಲ್ಲಿ ಸರ್ವಾಧಿಕಾರ!

ಕೇಂದ್ರ ಸರ್ಕಾರ ಕೋವಿಡ್ ಮೊದಲ ಸಂದರ್ಭದಲ್ಲೇ ಸರ್ವಪಕ್ಷ ಸಮಿತಿ ಮಾಡಿ ಸಲಹೆಗಳನ್ನು ಕೇಳಿದ್ದರೆ, ತಜ್ಞರ ವೈಜ್ಞಾನಿಕ ನೆಲೆಗಟ್ಟಿನ ಸಲಹೆಗಳಿಗೆ ಮಾನ್ಯತೆ ನೀಡಿದ್ದರೆ ಕೋವಿಡ್ ಎರಡನೆ ಅಲೆ ಈ ಮಟ್ಟದ ವಿಕೋಪಕ್ಕೆ ಹೋಗುತ್ತಿರಲಿಲ್ಲ.

ಇದನ್ನೂ ಓದಿ: #SaveLakshadweep-ಬಿಜೆಪಿಯ ದ್ವೇಷ ರಾಜಕೀಯಕ್ಕೆ ಹೊಸ ಬಲಿ; ಲಕ್ಷದ್ವೀಪದಲ್ಲಿ ಏನಾಗುತ್ತಿದೆ?

ಆದರೆ ಅಲ್ಲಿರುವುದು ಸರ್ವಾಧಿಕಾರ. ಎಲ್ಲವನ್ನೂ ಪ್ರಧಾನಿ ಮೋದಿ, ಅಮಿತ್ ಶಾ ಮತ್ತು ಪ್ರಧಾನಿ ಸುತ್ತಲಿನ ಭಟ್ಟಂಗಿ ಅಧಿಕಾರಿಗಳೇ ನಿರ್ಣಯ ಮಾಡುವುದರಿಂದ ಅಲ್ಲಿ ಸರ್ವಪಕ್ಷ ಸಮಿತಿ ಅಸಾಧ್ಯದ ಮಾತೇ. ರಾಹುಲ್ ಗಾಂಧಿ ಮೊದಲ ಅಲೆ ಸಂದರ್ಭದಲ್ಲಿ, ಯಾವ ಹಮ್ಮೂ ಇಲ್ಲದೇ ವಿವಿಧ ತಜ್ಞರ ಜೊತೆ ಚರ್ಚಿಸಿ ಗ್ರಾಫ್‌ಗಳ ಮೂಲಕ ಮುಂದಿನ ಅಪಾಯವನ್ನು ವಿವರಿಸುತ್ತ ಬಂದಾಗ, ಬಿಜೆಪಿಯ ಹಲವು ನಾಯಕರು ಮತ್ತು ಐಟಿಸೆಲ್ ಪಡ್ಡೆಗಳು ಅವರನ್ನು ಗೇಲಿ ಮಾಡುತ್ತ ಬಂದಿದ್ದವು.

ರಾಹುಲ್ ವ್ಯಕ್ತಪಡಿಸಿದ ಆತಂಕ ನಿಜವಾಗುತ್ತ ಬಂತು. ರಾಹುಲ್ ಗಾಂಧಿ ನೀಡುತ್ತಿದ್ದುದು ತಜ್ಞರ ಜೊತೆ ಚರ್ಚಿಸಿ ನೀಡುತ್ತಿದ್ದ ಸಲಹೆಗಳಾಗಿದ್ದವು. ಅಲ್ಲಿ ಎನ್‌ಡಿಎ ಮಿತ್ರ ಪಕ್ಷಗಳ ಮಾತಿಗೇ ಬೆಲೆಯಿಲ್ಲ, ಇನ್ನು ಸರ್ವಪಕ್ಷ ಸಮಿತಿ ಕನಸಿನ ಮಾತೇ ಸರಿ.

ಇದನ್ನೂ ಓದಿ: ಟೂಲ್‌ಕಿಟ್-ಟ್ವೀಟ್ ಪ್ರಕರಣ: ಟ್ವಿಟರ್ ಕಚೇರಿಗೆ ಹೋದ ಪೊಲೀಸರು, ಯಾರೂ ಸಿಗದೆ ವಾಪಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...