Homeಮುಖಪುಟಸೋಂಕು ನಿಗ್ರಹಕ್ಕೆ ತಮಿಳುನಾಡಿನಲ್ಲಿ ಸರ್ವಪಕ್ಷ ಸಮಿತಿ: ಕರ್ನಾಟಕದಲ್ಲೂ ಸಾಧ್ಯವಿದೆ, ಕೇಂದ್ರದಲ್ಲಿ ಬಿಲ್‌ಕುಲ್ ಇಲ್ಲ!

ಸೋಂಕು ನಿಗ್ರಹಕ್ಕೆ ತಮಿಳುನಾಡಿನಲ್ಲಿ ಸರ್ವಪಕ್ಷ ಸಮಿತಿ: ಕರ್ನಾಟಕದಲ್ಲೂ ಸಾಧ್ಯವಿದೆ, ಕೇಂದ್ರದಲ್ಲಿ ಬಿಲ್‌ಕುಲ್ ಇಲ್ಲ!

ದಶಕಗಳಿಂದ ಜಿದ್ದಾಜಿದ್ದಿ ನಡೆಸಿದ ಎರಡು ದ್ರಾವಿಡ ಪಕ್ಷಗಳ ನಡುವೆ ಕೋವಿಡ್ ನಿರ್ವಹಣೆ ವಿಷಯದಲ್ಲಿ ಆ ಹಮ್ಮು ಕಳಚಬಹುದಾದರೆ, ಕರ್ನಾಟಕದಲ್ಲೂ ಅದು ಸುಲಭಕ್ಕೆ ಸಾಧ್ಯವಿದೆ. ಕೇಂದ್ರದಲ್ಲಿ ಸದ್ಯದ ಸ್ಥಿತಿ ನೋಡಿದರೆ ಅದು ಅಸಾಧ್ಯ.

- Advertisement -
- Advertisement -

ಎರಡು ಅವಧಿಗಳ ನಂತರ ಈಗ ಮತ್ತೆ ಅಧಿಕಾರಕ್ಕೆ ಬಂದಿರುವ ಡಿಎಂಕೆಯ ಮುಖ್ಯಮಂತ್ರಿ ಸ್ಟಾಲಿನ್ ಅಲ್ಲೀಗ ಕೋವಿಡ್ ನಿರ್ವಹಣೆಗೆ 13 ಪಕ್ಷಗಳ ಸದಸ್ಯರ ಸರ್ವಪಕ್ಷ ಸಮಿತಿ ರಚಿಸಿದ್ದಾರೆ. ಪ್ರತಿ ವಾರಕ್ಕೊಮ್ಮೆ ಈ ಸಮಿತಿ ಸಭೆ ಸೇರಿ ಕೋವಿಡ್ ನಿರ್ವಹಣೆಯ ಪರಿಶೀಲನೆ ನಡೆಸಿ, ಮುಂದಿನ ಕ್ರಮಗಳ ಬಗ್ಗೆ ಚರ್ಚಿಸಲಿದೆ.
ಜಯಲಲಿತಾ, ಕರುಣಾನಿಧಿ ಕಾಲದಲ್ಲಿ ಸದನದಲ್ಲೇ ಬಡಿದಾಟವಾಗಿದ್ದವು. ಡಿಎಂಕೆ ಶಾಸಕನೊಬ್ಬ ಜಯಲಲಿತಾರ ಸೀರೆಯನ್ನೂ ಜಗ್ಗಿದ್ದ. ಜಯಲಲಿತಾ ಮತ್ತು ಕರುಣಾನಿಧಿ ಒಬ್ಬರನ್ನೊಬ್ಬರು ಜೈಲಿಗೆ ಕಳಿಸುವ ಬಗ್ಗೆಯೇ ತಂತ್ರ ಹೆಣೆಯುತ್ತಿದ್ದರು.

ಆದರೆ, ಕಾಲ ಸ್ಟಾಲಿನ್ ಅವರನ್ನು ಹೆಚ್ಚು ಪಕ್ವಗೊಳಿಸಿದಂತೆ ಅಥವಾ ಸ್ಪಷ್ಟ ಬಹುಮತ ಕೊಟ್ಟ ರಾಜ್ಯದ ಜನತೆಯನ್ನು ಕೋವಿಡ್‌ನಿಂದ ಕಾಪಾಡುವ ತುಮುಲವಿದ್ದಂತೆ ಕಾಣುತ್ತಿದೆ. ಎರಡು ಅವಧಿಯವರೆಗೆ ವಿಪಕ್ಷ ನಾಯಕನ ಸ್ಥಾನದಲ್ಲಿ ಕುಳಿತಿದ್ದು ವಾಸ್ತವ ಅರಿಯಲು ಸಾಧ್ಯವಾಗಿದೆ.

ಇದನ್ನೂ ಓದಿ: ಇಸ್ರೇಲ್‌ನ ಬಯೋತ್ಪಾದನೆ ಮುಗಿಯದ ರಕ್ತಚರಿತ್ರೆ: ಬಿ ಶ್ರೀಪಾದ್ ಭಟ್

ಕೇರಳದಲ್ಲಿ ಕೋವಿಡ್ ಒಂದನೇ ಅಲೆಯ ಸಮಯದಿಂದಲೂ ಅಲ್ಲಿನ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೂಡ ವಿಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡೇ ಕೆಲಸ ಮಾಡುತ್ತ ಬಂದಿದ್ದಾರೆ.

ಅಂತಹ ಜಿದ್ದಾಜಿದ್ದಿಯಿಲ್ಲದ ಕರ್ನಾಟಕದಲ್ಲೂ ಇದು ಸಾಧ್ಯವಾಗಬೇಕಿತ್ತು. ಇಲ್ಲಿ ಸಿದ್ದರಾಮಯ್ಯರ ಅನುಭವ, ಕುಮಾರಸ್ವಾಮಿ ಹೊಂದಾಣಿಕೆ ಎಲ್ಲವೂ ಇವೆ ಮತ್ತು ತಮಿಳುನಾಡಿನಂತೆ ಇಲ್ಲೇನೂ ಹಲವು ಪಕ್ಷಗಳಿಲ್ಲ. ಸಿದ್ದರಾಮಯ್ಯ, ಕುಮಾರಸ್ವಾಮಿ, ಎಚ್.ಕೆ. ಪಾಟೀಲ್, ರಮೇಶ್‌ಕುಮಾರ್ ಕೃಷ್ಣ ಬೈರೆಗೌಡ…ಅಷ್ಟೇಕೆ ಕೆಂದ್ರ ಬಿಜೆಪಿಯಿಂದ ಸಾಕಷ್ಟು ದುರುದ್ದೇಶದ ಕಿರುಕುಳ ಅನುಭವಿಸಿದ ಡಿ.ಕೆ. ಶಿವಕುಮಾರ್ ಕೂಡ ಸರ್ಕಾರದೊಡನೆ ಸಹಕರಿಸುತ್ತಿದ್ದರು.

ಸಿಪಿಐ, ಸಿಪಿಎಂ, ರೈತಸಂಘ ಎಲ್ಲವನ್ನೂ ಒಳಗೊಂಡ ಸಮಿತಿ ಮಾಡಬಹುದಿತ್ತು. ಇದಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಒಪ್ಪಬಹುದಾದರೂ, ಕೂಗುಮಾರಿಗಳಂತಿರುವ ಸಂಘ ಮೂಲದ ಬಿಜೆಪಿ ಶಾಸಕರು ಮತ್ತು ರಾಜಕೀಯ ನಾಯಕರು ಇದಕ್ಕೆ ಅಡ್ಡಿ ಮಾಡುತ್ತಿದ್ದರು. ಬಿ.ಎಲ್ ಸಂತೋಷ್ ಪಡೆಯ ಕಾರಣಕ್ಕೇ ಇಂತದ್ದೆಲ್ಲ ಇಲ್ಲಿ ಅಸಾಧ್ಯ. ಬಸವರಾಜ ಬೊಮ್ಮಾಯಿ, ಗೋವಿಂದ ಕಾರಜೋಳ ಮುಂತಾದವರು ಸಹಜವಾಗಿಯೇ ಈ ನಡೆ ಸ್ವಾಗತಿಸುತ್ತಿದ್ದರು.

ಇದನ್ನೂ ಓದಿ: ಜನಾಕ್ರೋಶದ ಸ್ಫೋಟ: ರಾಜ್ಯಾದ್ಯಂತ ಮನೆಗಳಲ್ಲಿಯೇ ಭುಗಿಲೆದ್ದ ಪ್ರತಿಭಟನೆಗಳು

ಆದರೆ ಈಗೇನಾಗುತ್ತಿದೆ ನೋಡಿ. ಸರ್ಕಾರಕ್ಕೆ ಸಲಹೆ ರೂಪದಲ್ಲಿ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ಎಚ್.ಕೆ. ಪಾಟೀಲ, ಕುಮಾರಸ್ವಾಮಿ ಹೇಳಿಕೆ ನೀಡಿದರೆ, ಅದನ್ನು ಸ್ವಾಗತಿಸುವ ಬದಕು ಬಿಜೆಪಿಯ ಕೆಲವರು ಕೊಂಕು ಹೇಳಿಕೆಗಳನ್ನು ಕೊಡುತ್ತಾರೆ.

ಇಲ್ಲಿ ಇನ್ನೊಂದು ಕಾರಣವಿದೆ. ದೇಶದ ಕಾಂಗ್ರೆಸ್ ನಾಯಕರ ಪೈಕಿ ಮೋದಿಯ ಆಡಳಿತವನ್ನು ಯಾವ ಮುಲಾಜೂ ಇಲ್ಲದೇ ಕಟುವಾಗಿ ಟೀಕಿಸುತ್ತ ಬಂದ ಸಿದ್ದರಾಮಯ್ಯರು ಇಲ್ಲಿನ ಸಂಘಪರಿವಾರದ ಶಾಸಕರಿಗೆ ಇಷ್ಟವಾಗುವುದು ಕಷ್ಟ.

ಕೇಂದ್ರದಲ್ಲಿ ಸರ್ವಾಧಿಕಾರ!

ಕೇಂದ್ರ ಸರ್ಕಾರ ಕೋವಿಡ್ ಮೊದಲ ಸಂದರ್ಭದಲ್ಲೇ ಸರ್ವಪಕ್ಷ ಸಮಿತಿ ಮಾಡಿ ಸಲಹೆಗಳನ್ನು ಕೇಳಿದ್ದರೆ, ತಜ್ಞರ ವೈಜ್ಞಾನಿಕ ನೆಲೆಗಟ್ಟಿನ ಸಲಹೆಗಳಿಗೆ ಮಾನ್ಯತೆ ನೀಡಿದ್ದರೆ ಕೋವಿಡ್ ಎರಡನೆ ಅಲೆ ಈ ಮಟ್ಟದ ವಿಕೋಪಕ್ಕೆ ಹೋಗುತ್ತಿರಲಿಲ್ಲ.

ಇದನ್ನೂ ಓದಿ: #SaveLakshadweep-ಬಿಜೆಪಿಯ ದ್ವೇಷ ರಾಜಕೀಯಕ್ಕೆ ಹೊಸ ಬಲಿ; ಲಕ್ಷದ್ವೀಪದಲ್ಲಿ ಏನಾಗುತ್ತಿದೆ?

ಆದರೆ ಅಲ್ಲಿರುವುದು ಸರ್ವಾಧಿಕಾರ. ಎಲ್ಲವನ್ನೂ ಪ್ರಧಾನಿ ಮೋದಿ, ಅಮಿತ್ ಶಾ ಮತ್ತು ಪ್ರಧಾನಿ ಸುತ್ತಲಿನ ಭಟ್ಟಂಗಿ ಅಧಿಕಾರಿಗಳೇ ನಿರ್ಣಯ ಮಾಡುವುದರಿಂದ ಅಲ್ಲಿ ಸರ್ವಪಕ್ಷ ಸಮಿತಿ ಅಸಾಧ್ಯದ ಮಾತೇ. ರಾಹುಲ್ ಗಾಂಧಿ ಮೊದಲ ಅಲೆ ಸಂದರ್ಭದಲ್ಲಿ, ಯಾವ ಹಮ್ಮೂ ಇಲ್ಲದೇ ವಿವಿಧ ತಜ್ಞರ ಜೊತೆ ಚರ್ಚಿಸಿ ಗ್ರಾಫ್‌ಗಳ ಮೂಲಕ ಮುಂದಿನ ಅಪಾಯವನ್ನು ವಿವರಿಸುತ್ತ ಬಂದಾಗ, ಬಿಜೆಪಿಯ ಹಲವು ನಾಯಕರು ಮತ್ತು ಐಟಿಸೆಲ್ ಪಡ್ಡೆಗಳು ಅವರನ್ನು ಗೇಲಿ ಮಾಡುತ್ತ ಬಂದಿದ್ದವು.

ರಾಹುಲ್ ವ್ಯಕ್ತಪಡಿಸಿದ ಆತಂಕ ನಿಜವಾಗುತ್ತ ಬಂತು. ರಾಹುಲ್ ಗಾಂಧಿ ನೀಡುತ್ತಿದ್ದುದು ತಜ್ಞರ ಜೊತೆ ಚರ್ಚಿಸಿ ನೀಡುತ್ತಿದ್ದ ಸಲಹೆಗಳಾಗಿದ್ದವು. ಅಲ್ಲಿ ಎನ್‌ಡಿಎ ಮಿತ್ರ ಪಕ್ಷಗಳ ಮಾತಿಗೇ ಬೆಲೆಯಿಲ್ಲ, ಇನ್ನು ಸರ್ವಪಕ್ಷ ಸಮಿತಿ ಕನಸಿನ ಮಾತೇ ಸರಿ.

ಇದನ್ನೂ ಓದಿ: ಟೂಲ್‌ಕಿಟ್-ಟ್ವೀಟ್ ಪ್ರಕರಣ: ಟ್ವಿಟರ್ ಕಚೇರಿಗೆ ಹೋದ ಪೊಲೀಸರು, ಯಾರೂ ಸಿಗದೆ ವಾಪಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...