Homeಮುಖಪುಟಸೋಂಕು ನಿಗ್ರಹಕ್ಕೆ ತಮಿಳುನಾಡಿನಲ್ಲಿ ಸರ್ವಪಕ್ಷ ಸಮಿತಿ: ಕರ್ನಾಟಕದಲ್ಲೂ ಸಾಧ್ಯವಿದೆ, ಕೇಂದ್ರದಲ್ಲಿ ಬಿಲ್‌ಕುಲ್ ಇಲ್ಲ!

ಸೋಂಕು ನಿಗ್ರಹಕ್ಕೆ ತಮಿಳುನಾಡಿನಲ್ಲಿ ಸರ್ವಪಕ್ಷ ಸಮಿತಿ: ಕರ್ನಾಟಕದಲ್ಲೂ ಸಾಧ್ಯವಿದೆ, ಕೇಂದ್ರದಲ್ಲಿ ಬಿಲ್‌ಕುಲ್ ಇಲ್ಲ!

ದಶಕಗಳಿಂದ ಜಿದ್ದಾಜಿದ್ದಿ ನಡೆಸಿದ ಎರಡು ದ್ರಾವಿಡ ಪಕ್ಷಗಳ ನಡುವೆ ಕೋವಿಡ್ ನಿರ್ವಹಣೆ ವಿಷಯದಲ್ಲಿ ಆ ಹಮ್ಮು ಕಳಚಬಹುದಾದರೆ, ಕರ್ನಾಟಕದಲ್ಲೂ ಅದು ಸುಲಭಕ್ಕೆ ಸಾಧ್ಯವಿದೆ. ಕೇಂದ್ರದಲ್ಲಿ ಸದ್ಯದ ಸ್ಥಿತಿ ನೋಡಿದರೆ ಅದು ಅಸಾಧ್ಯ.

- Advertisement -
- Advertisement -

ಎರಡು ಅವಧಿಗಳ ನಂತರ ಈಗ ಮತ್ತೆ ಅಧಿಕಾರಕ್ಕೆ ಬಂದಿರುವ ಡಿಎಂಕೆಯ ಮುಖ್ಯಮಂತ್ರಿ ಸ್ಟಾಲಿನ್ ಅಲ್ಲೀಗ ಕೋವಿಡ್ ನಿರ್ವಹಣೆಗೆ 13 ಪಕ್ಷಗಳ ಸದಸ್ಯರ ಸರ್ವಪಕ್ಷ ಸಮಿತಿ ರಚಿಸಿದ್ದಾರೆ. ಪ್ರತಿ ವಾರಕ್ಕೊಮ್ಮೆ ಈ ಸಮಿತಿ ಸಭೆ ಸೇರಿ ಕೋವಿಡ್ ನಿರ್ವಹಣೆಯ ಪರಿಶೀಲನೆ ನಡೆಸಿ, ಮುಂದಿನ ಕ್ರಮಗಳ ಬಗ್ಗೆ ಚರ್ಚಿಸಲಿದೆ.
ಜಯಲಲಿತಾ, ಕರುಣಾನಿಧಿ ಕಾಲದಲ್ಲಿ ಸದನದಲ್ಲೇ ಬಡಿದಾಟವಾಗಿದ್ದವು. ಡಿಎಂಕೆ ಶಾಸಕನೊಬ್ಬ ಜಯಲಲಿತಾರ ಸೀರೆಯನ್ನೂ ಜಗ್ಗಿದ್ದ. ಜಯಲಲಿತಾ ಮತ್ತು ಕರುಣಾನಿಧಿ ಒಬ್ಬರನ್ನೊಬ್ಬರು ಜೈಲಿಗೆ ಕಳಿಸುವ ಬಗ್ಗೆಯೇ ತಂತ್ರ ಹೆಣೆಯುತ್ತಿದ್ದರು.

ಆದರೆ, ಕಾಲ ಸ್ಟಾಲಿನ್ ಅವರನ್ನು ಹೆಚ್ಚು ಪಕ್ವಗೊಳಿಸಿದಂತೆ ಅಥವಾ ಸ್ಪಷ್ಟ ಬಹುಮತ ಕೊಟ್ಟ ರಾಜ್ಯದ ಜನತೆಯನ್ನು ಕೋವಿಡ್‌ನಿಂದ ಕಾಪಾಡುವ ತುಮುಲವಿದ್ದಂತೆ ಕಾಣುತ್ತಿದೆ. ಎರಡು ಅವಧಿಯವರೆಗೆ ವಿಪಕ್ಷ ನಾಯಕನ ಸ್ಥಾನದಲ್ಲಿ ಕುಳಿತಿದ್ದು ವಾಸ್ತವ ಅರಿಯಲು ಸಾಧ್ಯವಾಗಿದೆ.

ಇದನ್ನೂ ಓದಿ: ಇಸ್ರೇಲ್‌ನ ಬಯೋತ್ಪಾದನೆ ಮುಗಿಯದ ರಕ್ತಚರಿತ್ರೆ: ಬಿ ಶ್ರೀಪಾದ್ ಭಟ್

ಕೇರಳದಲ್ಲಿ ಕೋವಿಡ್ ಒಂದನೇ ಅಲೆಯ ಸಮಯದಿಂದಲೂ ಅಲ್ಲಿನ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೂಡ ವಿಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡೇ ಕೆಲಸ ಮಾಡುತ್ತ ಬಂದಿದ್ದಾರೆ.

ಅಂತಹ ಜಿದ್ದಾಜಿದ್ದಿಯಿಲ್ಲದ ಕರ್ನಾಟಕದಲ್ಲೂ ಇದು ಸಾಧ್ಯವಾಗಬೇಕಿತ್ತು. ಇಲ್ಲಿ ಸಿದ್ದರಾಮಯ್ಯರ ಅನುಭವ, ಕುಮಾರಸ್ವಾಮಿ ಹೊಂದಾಣಿಕೆ ಎಲ್ಲವೂ ಇವೆ ಮತ್ತು ತಮಿಳುನಾಡಿನಂತೆ ಇಲ್ಲೇನೂ ಹಲವು ಪಕ್ಷಗಳಿಲ್ಲ. ಸಿದ್ದರಾಮಯ್ಯ, ಕುಮಾರಸ್ವಾಮಿ, ಎಚ್.ಕೆ. ಪಾಟೀಲ್, ರಮೇಶ್‌ಕುಮಾರ್ ಕೃಷ್ಣ ಬೈರೆಗೌಡ…ಅಷ್ಟೇಕೆ ಕೆಂದ್ರ ಬಿಜೆಪಿಯಿಂದ ಸಾಕಷ್ಟು ದುರುದ್ದೇಶದ ಕಿರುಕುಳ ಅನುಭವಿಸಿದ ಡಿ.ಕೆ. ಶಿವಕುಮಾರ್ ಕೂಡ ಸರ್ಕಾರದೊಡನೆ ಸಹಕರಿಸುತ್ತಿದ್ದರು.

ಸಿಪಿಐ, ಸಿಪಿಎಂ, ರೈತಸಂಘ ಎಲ್ಲವನ್ನೂ ಒಳಗೊಂಡ ಸಮಿತಿ ಮಾಡಬಹುದಿತ್ತು. ಇದಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಒಪ್ಪಬಹುದಾದರೂ, ಕೂಗುಮಾರಿಗಳಂತಿರುವ ಸಂಘ ಮೂಲದ ಬಿಜೆಪಿ ಶಾಸಕರು ಮತ್ತು ರಾಜಕೀಯ ನಾಯಕರು ಇದಕ್ಕೆ ಅಡ್ಡಿ ಮಾಡುತ್ತಿದ್ದರು. ಬಿ.ಎಲ್ ಸಂತೋಷ್ ಪಡೆಯ ಕಾರಣಕ್ಕೇ ಇಂತದ್ದೆಲ್ಲ ಇಲ್ಲಿ ಅಸಾಧ್ಯ. ಬಸವರಾಜ ಬೊಮ್ಮಾಯಿ, ಗೋವಿಂದ ಕಾರಜೋಳ ಮುಂತಾದವರು ಸಹಜವಾಗಿಯೇ ಈ ನಡೆ ಸ್ವಾಗತಿಸುತ್ತಿದ್ದರು.

ಇದನ್ನೂ ಓದಿ: ಜನಾಕ್ರೋಶದ ಸ್ಫೋಟ: ರಾಜ್ಯಾದ್ಯಂತ ಮನೆಗಳಲ್ಲಿಯೇ ಭುಗಿಲೆದ್ದ ಪ್ರತಿಭಟನೆಗಳು

ಆದರೆ ಈಗೇನಾಗುತ್ತಿದೆ ನೋಡಿ. ಸರ್ಕಾರಕ್ಕೆ ಸಲಹೆ ರೂಪದಲ್ಲಿ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ಎಚ್.ಕೆ. ಪಾಟೀಲ, ಕುಮಾರಸ್ವಾಮಿ ಹೇಳಿಕೆ ನೀಡಿದರೆ, ಅದನ್ನು ಸ್ವಾಗತಿಸುವ ಬದಕು ಬಿಜೆಪಿಯ ಕೆಲವರು ಕೊಂಕು ಹೇಳಿಕೆಗಳನ್ನು ಕೊಡುತ್ತಾರೆ.

ಇಲ್ಲಿ ಇನ್ನೊಂದು ಕಾರಣವಿದೆ. ದೇಶದ ಕಾಂಗ್ರೆಸ್ ನಾಯಕರ ಪೈಕಿ ಮೋದಿಯ ಆಡಳಿತವನ್ನು ಯಾವ ಮುಲಾಜೂ ಇಲ್ಲದೇ ಕಟುವಾಗಿ ಟೀಕಿಸುತ್ತ ಬಂದ ಸಿದ್ದರಾಮಯ್ಯರು ಇಲ್ಲಿನ ಸಂಘಪರಿವಾರದ ಶಾಸಕರಿಗೆ ಇಷ್ಟವಾಗುವುದು ಕಷ್ಟ.

ಕೇಂದ್ರದಲ್ಲಿ ಸರ್ವಾಧಿಕಾರ!

ಕೇಂದ್ರ ಸರ್ಕಾರ ಕೋವಿಡ್ ಮೊದಲ ಸಂದರ್ಭದಲ್ಲೇ ಸರ್ವಪಕ್ಷ ಸಮಿತಿ ಮಾಡಿ ಸಲಹೆಗಳನ್ನು ಕೇಳಿದ್ದರೆ, ತಜ್ಞರ ವೈಜ್ಞಾನಿಕ ನೆಲೆಗಟ್ಟಿನ ಸಲಹೆಗಳಿಗೆ ಮಾನ್ಯತೆ ನೀಡಿದ್ದರೆ ಕೋವಿಡ್ ಎರಡನೆ ಅಲೆ ಈ ಮಟ್ಟದ ವಿಕೋಪಕ್ಕೆ ಹೋಗುತ್ತಿರಲಿಲ್ಲ.

ಇದನ್ನೂ ಓದಿ: #SaveLakshadweep-ಬಿಜೆಪಿಯ ದ್ವೇಷ ರಾಜಕೀಯಕ್ಕೆ ಹೊಸ ಬಲಿ; ಲಕ್ಷದ್ವೀಪದಲ್ಲಿ ಏನಾಗುತ್ತಿದೆ?

ಆದರೆ ಅಲ್ಲಿರುವುದು ಸರ್ವಾಧಿಕಾರ. ಎಲ್ಲವನ್ನೂ ಪ್ರಧಾನಿ ಮೋದಿ, ಅಮಿತ್ ಶಾ ಮತ್ತು ಪ್ರಧಾನಿ ಸುತ್ತಲಿನ ಭಟ್ಟಂಗಿ ಅಧಿಕಾರಿಗಳೇ ನಿರ್ಣಯ ಮಾಡುವುದರಿಂದ ಅಲ್ಲಿ ಸರ್ವಪಕ್ಷ ಸಮಿತಿ ಅಸಾಧ್ಯದ ಮಾತೇ. ರಾಹುಲ್ ಗಾಂಧಿ ಮೊದಲ ಅಲೆ ಸಂದರ್ಭದಲ್ಲಿ, ಯಾವ ಹಮ್ಮೂ ಇಲ್ಲದೇ ವಿವಿಧ ತಜ್ಞರ ಜೊತೆ ಚರ್ಚಿಸಿ ಗ್ರಾಫ್‌ಗಳ ಮೂಲಕ ಮುಂದಿನ ಅಪಾಯವನ್ನು ವಿವರಿಸುತ್ತ ಬಂದಾಗ, ಬಿಜೆಪಿಯ ಹಲವು ನಾಯಕರು ಮತ್ತು ಐಟಿಸೆಲ್ ಪಡ್ಡೆಗಳು ಅವರನ್ನು ಗೇಲಿ ಮಾಡುತ್ತ ಬಂದಿದ್ದವು.

ರಾಹುಲ್ ವ್ಯಕ್ತಪಡಿಸಿದ ಆತಂಕ ನಿಜವಾಗುತ್ತ ಬಂತು. ರಾಹುಲ್ ಗಾಂಧಿ ನೀಡುತ್ತಿದ್ದುದು ತಜ್ಞರ ಜೊತೆ ಚರ್ಚಿಸಿ ನೀಡುತ್ತಿದ್ದ ಸಲಹೆಗಳಾಗಿದ್ದವು. ಅಲ್ಲಿ ಎನ್‌ಡಿಎ ಮಿತ್ರ ಪಕ್ಷಗಳ ಮಾತಿಗೇ ಬೆಲೆಯಿಲ್ಲ, ಇನ್ನು ಸರ್ವಪಕ್ಷ ಸಮಿತಿ ಕನಸಿನ ಮಾತೇ ಸರಿ.

ಇದನ್ನೂ ಓದಿ: ಟೂಲ್‌ಕಿಟ್-ಟ್ವೀಟ್ ಪ್ರಕರಣ: ಟ್ವಿಟರ್ ಕಚೇರಿಗೆ ಹೋದ ಪೊಲೀಸರು, ಯಾರೂ ಸಿಗದೆ ವಾಪಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...